Homeಅಂತರಾಷ್ಟ್ರೀಯBlack Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

- Advertisement -
- Advertisement -

ಬುಧವಾರ ಶಸ್ತ್ರಸಜ್ಜಿತ ಮತ್ತು ಉದ್ರಿಕ್ತ ಟ್ರಂಪ್ ಬೆಂಬಲಿಗರು (ಬಹುತೇಕರು ಬಿಳಿಯರೇ) ಯು.ಎಸ್ ಕ್ಯಾಪಿಟಲ್ ಮೇಲೆ ಮುತ್ತಿಗೆ ಹಾಕಿ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಬದಲಿಸಲು ಹವಣಿಸಿದರು. ಈ ಕುರಿತು ಮಾತಾಡಿರುವ ಹಲವು ರಾಜಕೀಯ ನಾಯಕರು ಮತ್ತು ಕಾರ್ಯಕರ್ತರು, ಈ ಸಂದರ್ಭದಲ್ಲಿನ ಪೊಲೀಸರ ಮೃದು ವರ್ತನೆ ಮತ್ತು ಕಳೆದ ವರ್ಷ ನಡೆದ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ತೋರಿದ ದೌರ್ಜನ್ಯವನ್ನು ಉಲ್ಲೇಖಿಸಿ, ಪೊಲೀಸರ ಪಕ್ಷಪಾತಿ ಕ್ರಮವನ್ನು ಖಂಡಿಸಿದ್ದಾರೆ.

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

‘ನನಗೆ ಇದನ್ನು ಯಾರೂ ಹೇಳಬೇಕಿಲ್ಲ. ನಿನ್ನೆ ಪ್ರತಿಭಟಿಸಿದವರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಕೊಲೆಗಡುಕರ ಗುಂಪಿನ ಬದಲು, ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರಾಗಿದ್ದರೆ ಅವರನ್ನು ಬೇರೆ ರೀತಿಯಲ್ಲೇ ಟ್ರೀಟ್ ಮಾಡಲಾಗುತ್ತಿತ್ತು. ಇದು ಸತ್ಯ ಎಂಬುದು ನಮ್ಮೆಲ್ಲರಿಗೂ ಗೊತ್ತು. ಇದು ಒಪ್ಪಿತವಲ್ಲ, ಸಂಪೂರ್ಣ ಒಪ್ಪಿತವಲ್ಲ…’ ಎಂದು ಬೈಡನ್ ಟ್ವೀಟ್ ಮಾಡಿದ್ದಾರೆ.

‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರನ್ನು ಕೊಲೆಗಡುಕರು ಎಂದೇ ಕರೆಯುತ್ತಿದ್ದ ಟ್ರಂಪ್, ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದವರ ಪರ ಮಾತನಾಡುತ್ತ, ‘ದೀರ್ಘ ಸಮಯದಿಂದ ಕೆಟ್ಟದಾಗಿ ಟ್ರೀಟ್ ಮಾಡಲ್ಪಟ್ಟ ಇವರೆಲ್ಲ ಮಹಾನ್ ದೇಶಭಕ್ತರು ಎಂದು ಶ್ಲಾಘಿಸಿದ್ದಾರೆ.

ಮುತ್ತಿಗೆಯ ವಿಡಿಯೋ ಮತ್ತು ಫೋಟೊಗಳು ಹೊರ ಬರುತ್ತಿದ್ದಂತೆ, ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ನಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು, ಬುಧವಾರ ಪೊಲೀಸರು ತೋರಿದ ಮೃದು ಧೋರಣೆಯನ್ನು ಉಲ್ಲೇಖಿಸಿ, ‘ಇದು ಅಮೆರಿಕದ ಅಸಮಾನ ನ್ಯಾಯ ವ್ಯವಸ್ಥೆಯ ಸ್ಪಷ್ಟ ಅಭಿವ್ಯಕ್ತಿಯಾಗಿದೆ ಎಂದು ಟೀಕಿಸಿದರು.

ಕಳೆದ ವರ್ಷ ಮಿನ್ನಿಪೊಲಿಸ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಕಪ್ಪು ವರ್ಣದ ಜಾರ್ಜ್ ಫ್ಲಾಯ್ಡ್ ಎಂಬ ವ್ಯಕ್ತಿಯನ್ನು ಮೊಣಕಾಲಿನಿಂದ ಕತ್ತು ಹಿಸುಕಿ ಕೊಂದ ನಂತರ ಅಮೆರಿಕದಲ್ಲಿ ಜನಾಂಗೀಯ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆ ನಡೆದವು. ಆ ಪ್ರತಿಭಟನೆಗಳಿಗೆ ಕಠಿಣವಾಗಿ ಸ್ಪಂದಿಸಿದ ಅಧ್ಯಕ್ಷ ಟ್ರಂಪ್, ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ‘ನ್ಯಾಷನಲ್ ಗಾರ್ಡ್ ಟ್ರೂಪ್’ಗಳನ್ನು ನಿಯೋಜಿಸಿದ್ದರು.

ಮೊನ್ನೆ ಜನವರಿ 6ರಂದು ಟ್ರಂಪ್‌ನ ಸಾವಿರಾರು ಬೆಂಬಲಿಗರು, ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸಲು ಐತಿಹಾಸಿಕ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದರು. ಕಾನೂನು ಜಾರಿ ಅಧಿಕಾರಿಗಳಿದ್ದರೂ, ಅವರು ಕಟ್ಟಡದ ಮೆಟ್ಟಿಲುಗಳನ್ನು ಏರಿದರು, ಪೊಲೀಸ್ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದರು ಮತ್ತು ಕಟ್ಟಡದ ಹೊರಭಾಗದ ಗೋಡೆಯನ್ನು ಏರಿದರು.

ಕಳೆದ ವರ್ಷದ ಜೂನ್‌ನಲ್ಲಿ ವಾಷಿಂಗ್ಟನ್ ಡಿಸಿಯ ಲೆಫಾಯತ್ತೆ ಪಾರ್ಕ್ ಬಳಿ ವರ್ಣಭೇದ ನೀತಿ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ನ್ಯಾಷನಲ್ ಗಾರ್ಡ್ ಟ್ರೂಪ್‌ನವರು ಕ್ರೂರವಾಗಿ ದಾಳಿ ನಡೆಸಿದ್ದರು. ಒಂದು ಫೋಟೊ ಕಾರ್ಯಕ್ರಮಕ್ಕಾಗಿ ಅಂದು ಟ್ರಂಪ್ ವೈಟ್‌ಹೌಸ್‌ನಿಂದ ಈ ಪಾರ್ಕ್ ಮಾರ್ಗವಾಗಿ ಚರ್ಚ್ ಒಂದಕ್ಕೆ ಹೋಗುತ್ತಿದ್ದ ಕಾರಣಕ್ಕಾಗಿ, ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದರು.

ಆದರೆ ಮೊನ್ನೆ ಬುಧವಾರ ಟ್ರಂಪ್ ಬೆಂಬಲಿಗರಿಂದ ಅವ್ಯವಸ್ಥೆ ಉಂಟಾದ ಕೂಡಲೇ, ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಲು ಸಭೆ ಸೇರಿದ್ದ ಶಾಸಕರನ್ನು (ಲಾ ಮೇಕರ್ಸ್) ಆವರಣದಿಂದ ಸ್ಥಳಾಂತರಿಸಲಾಯಿತು. ಉದ್ರಿಕ್ತ ಗಲಭೆಕೋರರು ಅವರ ಕಚೇರಿಗಳನ್ನು ಧ್ವಂಸಗೊಳಿಸಿದರು.

ಕಳೆದ ವರ್ಷ ಜೂನ್‌ನಲ್ಲಿ ಕಪ್ಪು ವರ್ಣೀಯರು ಪೊಲೀಸ್ ದೌರ್ಜನ್ಯ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ, ನ್ಯಾಷನಲ್ ಗಾರ್ಡ್ ಸದಸ್ಯರು ಲಿಂಕನ್ ಸ್ಮಾರಕದ ಸುತ್ತ ಸಾಲಾಗಿ ನಿಂತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್ ಆಗಿತ್ತು.

ಕಳೆದ ವರ್ಷ ಕಾನೂನು ಜಾರಿ ಮಾಡುವ ಅಧಿಕಾರಿಗಳು, ವರ್ಣಭೇದ ನೀತಿ ವಿರೋದಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಟಿಯರ್ ಗ್ಯಾಸ್ ಮತ್ತು ರಬ್ಬರ್ ಬುಲೆಟ್‌ಗಳನ್ನು ಪ್ರಯೋಗಿಸಿದ್ದರು. ಅವರ ಆ ಕ್ರೌರ್ಯತೆಗೆ ಜಗತ್ತಿನಾದ್ಯಂತ ಮಾನವ ಹಕ್ಕು ಹೋರಾಟಗಾರರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಮೊನ್ನೆ ಮುತ್ತಿಗೆ ಹಾಕಿದ ದಂಗೆಕೋರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದರಾದರೂ, ಕಾನೂನು ಜಾರಿ ಅಧಿಕಾರಿಗಳು ದಂಗೆಕೋರರೊಂದಿಗೆ ಶಾಂತವಾಗಿ, ಮೃದುವಾಗಿ ಮಾತನಾಡಿದರು. ಕಾನೂನು ಜಾರಿ ಅಧಿಕಾರಿಗಳು ಗಾಯಗೊಂಡ ಟ್ರಂಪ್ ಬೆಂಬಲಿಗರ ಆರೈಕೆ ಮಾಡುವ ಫೋಟೊ, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಕೆರಳಿಸಿದೆ. ಕಳೆದ ವರ್ಷ ಗಾಯಗೊಂಡ ತಮ್ಮ ಸದಸ್ಯರಿಗೆ ಇಂತಹ ಆರೈಕೆ ಸಿಗದೇ ಇದ್ದುದನ್ನು ಅವರು ಈಗ ಪ್ರಶ್ನಿಸುತ್ತಿದ್ದಾರೆ.

ಕಳೆದ ವರ್ಷ ಜನಾಂಗೀಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಬಂಧಿಲಾಗಿತ್ತು. ಪೊಲೀಸ್ ಅಂಕಿಸಂಖ್ಯೆ ಪ್ರಕಾರ, 2020 ಮೇ 30 ಮತ್ತು ಜೂನ್ 2ರ ನಡುವೆ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ 427 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು.

ಆದರೆ ಬುಧವಾರ ಗಲಭೆಕೋರರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಪ್ರಕರಣದಲ್ಲಿ ಕೇವಲ 53 ಜನರನ್ನು ಬಂಧಿಲಾಗಿದೆ.

ಕೃಪೆ: –ರಹೇಲ್ ಫಿಲಿಪೋಸ್ (ಇಂಡಿಯನ್ ಎಕ್ಸ್ ಪ್ರೆಸ್)

ಅನುವಾದ: ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...