Homeಅಂತರಾಷ್ಟ್ರೀಯBlack Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

- Advertisement -
- Advertisement -

ಬುಧವಾರ ಶಸ್ತ್ರಸಜ್ಜಿತ ಮತ್ತು ಉದ್ರಿಕ್ತ ಟ್ರಂಪ್ ಬೆಂಬಲಿಗರು (ಬಹುತೇಕರು ಬಿಳಿಯರೇ) ಯು.ಎಸ್ ಕ್ಯಾಪಿಟಲ್ ಮೇಲೆ ಮುತ್ತಿಗೆ ಹಾಕಿ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಬದಲಿಸಲು ಹವಣಿಸಿದರು. ಈ ಕುರಿತು ಮಾತಾಡಿರುವ ಹಲವು ರಾಜಕೀಯ ನಾಯಕರು ಮತ್ತು ಕಾರ್ಯಕರ್ತರು, ಈ ಸಂದರ್ಭದಲ್ಲಿನ ಪೊಲೀಸರ ಮೃದು ವರ್ತನೆ ಮತ್ತು ಕಳೆದ ವರ್ಷ ನಡೆದ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ತೋರಿದ ದೌರ್ಜನ್ಯವನ್ನು ಉಲ್ಲೇಖಿಸಿ, ಪೊಲೀಸರ ಪಕ್ಷಪಾತಿ ಕ್ರಮವನ್ನು ಖಂಡಿಸಿದ್ದಾರೆ.

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

‘ನನಗೆ ಇದನ್ನು ಯಾರೂ ಹೇಳಬೇಕಿಲ್ಲ. ನಿನ್ನೆ ಪ್ರತಿಭಟಿಸಿದವರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಕೊಲೆಗಡುಕರ ಗುಂಪಿನ ಬದಲು, ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರಾಗಿದ್ದರೆ ಅವರನ್ನು ಬೇರೆ ರೀತಿಯಲ್ಲೇ ಟ್ರೀಟ್ ಮಾಡಲಾಗುತ್ತಿತ್ತು. ಇದು ಸತ್ಯ ಎಂಬುದು ನಮ್ಮೆಲ್ಲರಿಗೂ ಗೊತ್ತು. ಇದು ಒಪ್ಪಿತವಲ್ಲ, ಸಂಪೂರ್ಣ ಒಪ್ಪಿತವಲ್ಲ…’ ಎಂದು ಬೈಡನ್ ಟ್ವೀಟ್ ಮಾಡಿದ್ದಾರೆ.

‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರನ್ನು ಕೊಲೆಗಡುಕರು ಎಂದೇ ಕರೆಯುತ್ತಿದ್ದ ಟ್ರಂಪ್, ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದವರ ಪರ ಮಾತನಾಡುತ್ತ, ‘ದೀರ್ಘ ಸಮಯದಿಂದ ಕೆಟ್ಟದಾಗಿ ಟ್ರೀಟ್ ಮಾಡಲ್ಪಟ್ಟ ಇವರೆಲ್ಲ ಮಹಾನ್ ದೇಶಭಕ್ತರು ಎಂದು ಶ್ಲಾಘಿಸಿದ್ದಾರೆ.

ಮುತ್ತಿಗೆಯ ವಿಡಿಯೋ ಮತ್ತು ಫೋಟೊಗಳು ಹೊರ ಬರುತ್ತಿದ್ದಂತೆ, ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ನಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು, ಬುಧವಾರ ಪೊಲೀಸರು ತೋರಿದ ಮೃದು ಧೋರಣೆಯನ್ನು ಉಲ್ಲೇಖಿಸಿ, ‘ಇದು ಅಮೆರಿಕದ ಅಸಮಾನ ನ್ಯಾಯ ವ್ಯವಸ್ಥೆಯ ಸ್ಪಷ್ಟ ಅಭಿವ್ಯಕ್ತಿಯಾಗಿದೆ ಎಂದು ಟೀಕಿಸಿದರು.

ಕಳೆದ ವರ್ಷ ಮಿನ್ನಿಪೊಲಿಸ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಕಪ್ಪು ವರ್ಣದ ಜಾರ್ಜ್ ಫ್ಲಾಯ್ಡ್ ಎಂಬ ವ್ಯಕ್ತಿಯನ್ನು ಮೊಣಕಾಲಿನಿಂದ ಕತ್ತು ಹಿಸುಕಿ ಕೊಂದ ನಂತರ ಅಮೆರಿಕದಲ್ಲಿ ಜನಾಂಗೀಯ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆ ನಡೆದವು. ಆ ಪ್ರತಿಭಟನೆಗಳಿಗೆ ಕಠಿಣವಾಗಿ ಸ್ಪಂದಿಸಿದ ಅಧ್ಯಕ್ಷ ಟ್ರಂಪ್, ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ‘ನ್ಯಾಷನಲ್ ಗಾರ್ಡ್ ಟ್ರೂಪ್’ಗಳನ್ನು ನಿಯೋಜಿಸಿದ್ದರು.

ಮೊನ್ನೆ ಜನವರಿ 6ರಂದು ಟ್ರಂಪ್‌ನ ಸಾವಿರಾರು ಬೆಂಬಲಿಗರು, ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸಲು ಐತಿಹಾಸಿಕ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದರು. ಕಾನೂನು ಜಾರಿ ಅಧಿಕಾರಿಗಳಿದ್ದರೂ, ಅವರು ಕಟ್ಟಡದ ಮೆಟ್ಟಿಲುಗಳನ್ನು ಏರಿದರು, ಪೊಲೀಸ್ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದರು ಮತ್ತು ಕಟ್ಟಡದ ಹೊರಭಾಗದ ಗೋಡೆಯನ್ನು ಏರಿದರು.

ಕಳೆದ ವರ್ಷದ ಜೂನ್‌ನಲ್ಲಿ ವಾಷಿಂಗ್ಟನ್ ಡಿಸಿಯ ಲೆಫಾಯತ್ತೆ ಪಾರ್ಕ್ ಬಳಿ ವರ್ಣಭೇದ ನೀತಿ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ನ್ಯಾಷನಲ್ ಗಾರ್ಡ್ ಟ್ರೂಪ್‌ನವರು ಕ್ರೂರವಾಗಿ ದಾಳಿ ನಡೆಸಿದ್ದರು. ಒಂದು ಫೋಟೊ ಕಾರ್ಯಕ್ರಮಕ್ಕಾಗಿ ಅಂದು ಟ್ರಂಪ್ ವೈಟ್‌ಹೌಸ್‌ನಿಂದ ಈ ಪಾರ್ಕ್ ಮಾರ್ಗವಾಗಿ ಚರ್ಚ್ ಒಂದಕ್ಕೆ ಹೋಗುತ್ತಿದ್ದ ಕಾರಣಕ್ಕಾಗಿ, ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದರು.

ಆದರೆ ಮೊನ್ನೆ ಬುಧವಾರ ಟ್ರಂಪ್ ಬೆಂಬಲಿಗರಿಂದ ಅವ್ಯವಸ್ಥೆ ಉಂಟಾದ ಕೂಡಲೇ, ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಲು ಸಭೆ ಸೇರಿದ್ದ ಶಾಸಕರನ್ನು (ಲಾ ಮೇಕರ್ಸ್) ಆವರಣದಿಂದ ಸ್ಥಳಾಂತರಿಸಲಾಯಿತು. ಉದ್ರಿಕ್ತ ಗಲಭೆಕೋರರು ಅವರ ಕಚೇರಿಗಳನ್ನು ಧ್ವಂಸಗೊಳಿಸಿದರು.

ಕಳೆದ ವರ್ಷ ಜೂನ್‌ನಲ್ಲಿ ಕಪ್ಪು ವರ್ಣೀಯರು ಪೊಲೀಸ್ ದೌರ್ಜನ್ಯ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ, ನ್ಯಾಷನಲ್ ಗಾರ್ಡ್ ಸದಸ್ಯರು ಲಿಂಕನ್ ಸ್ಮಾರಕದ ಸುತ್ತ ಸಾಲಾಗಿ ನಿಂತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್ ಆಗಿತ್ತು.

ಕಳೆದ ವರ್ಷ ಕಾನೂನು ಜಾರಿ ಮಾಡುವ ಅಧಿಕಾರಿಗಳು, ವರ್ಣಭೇದ ನೀತಿ ವಿರೋದಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಟಿಯರ್ ಗ್ಯಾಸ್ ಮತ್ತು ರಬ್ಬರ್ ಬುಲೆಟ್‌ಗಳನ್ನು ಪ್ರಯೋಗಿಸಿದ್ದರು. ಅವರ ಆ ಕ್ರೌರ್ಯತೆಗೆ ಜಗತ್ತಿನಾದ್ಯಂತ ಮಾನವ ಹಕ್ಕು ಹೋರಾಟಗಾರರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಮೊನ್ನೆ ಮುತ್ತಿಗೆ ಹಾಕಿದ ದಂಗೆಕೋರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದರಾದರೂ, ಕಾನೂನು ಜಾರಿ ಅಧಿಕಾರಿಗಳು ದಂಗೆಕೋರರೊಂದಿಗೆ ಶಾಂತವಾಗಿ, ಮೃದುವಾಗಿ ಮಾತನಾಡಿದರು. ಕಾನೂನು ಜಾರಿ ಅಧಿಕಾರಿಗಳು ಗಾಯಗೊಂಡ ಟ್ರಂಪ್ ಬೆಂಬಲಿಗರ ಆರೈಕೆ ಮಾಡುವ ಫೋಟೊ, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಕೆರಳಿಸಿದೆ. ಕಳೆದ ವರ್ಷ ಗಾಯಗೊಂಡ ತಮ್ಮ ಸದಸ್ಯರಿಗೆ ಇಂತಹ ಆರೈಕೆ ಸಿಗದೇ ಇದ್ದುದನ್ನು ಅವರು ಈಗ ಪ್ರಶ್ನಿಸುತ್ತಿದ್ದಾರೆ.

ಕಳೆದ ವರ್ಷ ಜನಾಂಗೀಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಬಂಧಿಲಾಗಿತ್ತು. ಪೊಲೀಸ್ ಅಂಕಿಸಂಖ್ಯೆ ಪ್ರಕಾರ, 2020 ಮೇ 30 ಮತ್ತು ಜೂನ್ 2ರ ನಡುವೆ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ 427 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು.

ಆದರೆ ಬುಧವಾರ ಗಲಭೆಕೋರರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಪ್ರಕರಣದಲ್ಲಿ ಕೇವಲ 53 ಜನರನ್ನು ಬಂಧಿಲಾಗಿದೆ.

ಕೃಪೆ: –ರಹೇಲ್ ಫಿಲಿಪೋಸ್ (ಇಂಡಿಯನ್ ಎಕ್ಸ್ ಪ್ರೆಸ್)

ಅನುವಾದ: ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...