Homeಅಂತರಾಷ್ಟ್ರೀಯBlack Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

- Advertisement -
- Advertisement -

ಬುಧವಾರ ಶಸ್ತ್ರಸಜ್ಜಿತ ಮತ್ತು ಉದ್ರಿಕ್ತ ಟ್ರಂಪ್ ಬೆಂಬಲಿಗರು (ಬಹುತೇಕರು ಬಿಳಿಯರೇ) ಯು.ಎಸ್ ಕ್ಯಾಪಿಟಲ್ ಮೇಲೆ ಮುತ್ತಿಗೆ ಹಾಕಿ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಬದಲಿಸಲು ಹವಣಿಸಿದರು. ಈ ಕುರಿತು ಮಾತಾಡಿರುವ ಹಲವು ರಾಜಕೀಯ ನಾಯಕರು ಮತ್ತು ಕಾರ್ಯಕರ್ತರು, ಈ ಸಂದರ್ಭದಲ್ಲಿನ ಪೊಲೀಸರ ಮೃದು ವರ್ತನೆ ಮತ್ತು ಕಳೆದ ವರ್ಷ ನಡೆದ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ತೋರಿದ ದೌರ್ಜನ್ಯವನ್ನು ಉಲ್ಲೇಖಿಸಿ, ಪೊಲೀಸರ ಪಕ್ಷಪಾತಿ ಕ್ರಮವನ್ನು ಖಂಡಿಸಿದ್ದಾರೆ.

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

‘ನನಗೆ ಇದನ್ನು ಯಾರೂ ಹೇಳಬೇಕಿಲ್ಲ. ನಿನ್ನೆ ಪ್ರತಿಭಟಿಸಿದವರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಕೊಲೆಗಡುಕರ ಗುಂಪಿನ ಬದಲು, ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರಾಗಿದ್ದರೆ ಅವರನ್ನು ಬೇರೆ ರೀತಿಯಲ್ಲೇ ಟ್ರೀಟ್ ಮಾಡಲಾಗುತ್ತಿತ್ತು. ಇದು ಸತ್ಯ ಎಂಬುದು ನಮ್ಮೆಲ್ಲರಿಗೂ ಗೊತ್ತು. ಇದು ಒಪ್ಪಿತವಲ್ಲ, ಸಂಪೂರ್ಣ ಒಪ್ಪಿತವಲ್ಲ…’ ಎಂದು ಬೈಡನ್ ಟ್ವೀಟ್ ಮಾಡಿದ್ದಾರೆ.

‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರನ್ನು ಕೊಲೆಗಡುಕರು ಎಂದೇ ಕರೆಯುತ್ತಿದ್ದ ಟ್ರಂಪ್, ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದವರ ಪರ ಮಾತನಾಡುತ್ತ, ‘ದೀರ್ಘ ಸಮಯದಿಂದ ಕೆಟ್ಟದಾಗಿ ಟ್ರೀಟ್ ಮಾಡಲ್ಪಟ್ಟ ಇವರೆಲ್ಲ ಮಹಾನ್ ದೇಶಭಕ್ತರು ಎಂದು ಶ್ಲಾಘಿಸಿದ್ದಾರೆ.

ಮುತ್ತಿಗೆಯ ವಿಡಿಯೋ ಮತ್ತು ಫೋಟೊಗಳು ಹೊರ ಬರುತ್ತಿದ್ದಂತೆ, ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ನಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು, ಬುಧವಾರ ಪೊಲೀಸರು ತೋರಿದ ಮೃದು ಧೋರಣೆಯನ್ನು ಉಲ್ಲೇಖಿಸಿ, ‘ಇದು ಅಮೆರಿಕದ ಅಸಮಾನ ನ್ಯಾಯ ವ್ಯವಸ್ಥೆಯ ಸ್ಪಷ್ಟ ಅಭಿವ್ಯಕ್ತಿಯಾಗಿದೆ ಎಂದು ಟೀಕಿಸಿದರು.

ಕಳೆದ ವರ್ಷ ಮಿನ್ನಿಪೊಲಿಸ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಕಪ್ಪು ವರ್ಣದ ಜಾರ್ಜ್ ಫ್ಲಾಯ್ಡ್ ಎಂಬ ವ್ಯಕ್ತಿಯನ್ನು ಮೊಣಕಾಲಿನಿಂದ ಕತ್ತು ಹಿಸುಕಿ ಕೊಂದ ನಂತರ ಅಮೆರಿಕದಲ್ಲಿ ಜನಾಂಗೀಯ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆ ನಡೆದವು. ಆ ಪ್ರತಿಭಟನೆಗಳಿಗೆ ಕಠಿಣವಾಗಿ ಸ್ಪಂದಿಸಿದ ಅಧ್ಯಕ್ಷ ಟ್ರಂಪ್, ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ‘ನ್ಯಾಷನಲ್ ಗಾರ್ಡ್ ಟ್ರೂಪ್’ಗಳನ್ನು ನಿಯೋಜಿಸಿದ್ದರು.

ಮೊನ್ನೆ ಜನವರಿ 6ರಂದು ಟ್ರಂಪ್‌ನ ಸಾವಿರಾರು ಬೆಂಬಲಿಗರು, ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸಲು ಐತಿಹಾಸಿಕ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದರು. ಕಾನೂನು ಜಾರಿ ಅಧಿಕಾರಿಗಳಿದ್ದರೂ, ಅವರು ಕಟ್ಟಡದ ಮೆಟ್ಟಿಲುಗಳನ್ನು ಏರಿದರು, ಪೊಲೀಸ್ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದರು ಮತ್ತು ಕಟ್ಟಡದ ಹೊರಭಾಗದ ಗೋಡೆಯನ್ನು ಏರಿದರು.

ಕಳೆದ ವರ್ಷದ ಜೂನ್‌ನಲ್ಲಿ ವಾಷಿಂಗ್ಟನ್ ಡಿಸಿಯ ಲೆಫಾಯತ್ತೆ ಪಾರ್ಕ್ ಬಳಿ ವರ್ಣಭೇದ ನೀತಿ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ನ್ಯಾಷನಲ್ ಗಾರ್ಡ್ ಟ್ರೂಪ್‌ನವರು ಕ್ರೂರವಾಗಿ ದಾಳಿ ನಡೆಸಿದ್ದರು. ಒಂದು ಫೋಟೊ ಕಾರ್ಯಕ್ರಮಕ್ಕಾಗಿ ಅಂದು ಟ್ರಂಪ್ ವೈಟ್‌ಹೌಸ್‌ನಿಂದ ಈ ಪಾರ್ಕ್ ಮಾರ್ಗವಾಗಿ ಚರ್ಚ್ ಒಂದಕ್ಕೆ ಹೋಗುತ್ತಿದ್ದ ಕಾರಣಕ್ಕಾಗಿ, ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದರು.

ಆದರೆ ಮೊನ್ನೆ ಬುಧವಾರ ಟ್ರಂಪ್ ಬೆಂಬಲಿಗರಿಂದ ಅವ್ಯವಸ್ಥೆ ಉಂಟಾದ ಕೂಡಲೇ, ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಲು ಸಭೆ ಸೇರಿದ್ದ ಶಾಸಕರನ್ನು (ಲಾ ಮೇಕರ್ಸ್) ಆವರಣದಿಂದ ಸ್ಥಳಾಂತರಿಸಲಾಯಿತು. ಉದ್ರಿಕ್ತ ಗಲಭೆಕೋರರು ಅವರ ಕಚೇರಿಗಳನ್ನು ಧ್ವಂಸಗೊಳಿಸಿದರು.

ಕಳೆದ ವರ್ಷ ಜೂನ್‌ನಲ್ಲಿ ಕಪ್ಪು ವರ್ಣೀಯರು ಪೊಲೀಸ್ ದೌರ್ಜನ್ಯ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ, ನ್ಯಾಷನಲ್ ಗಾರ್ಡ್ ಸದಸ್ಯರು ಲಿಂಕನ್ ಸ್ಮಾರಕದ ಸುತ್ತ ಸಾಲಾಗಿ ನಿಂತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್ ಆಗಿತ್ತು.

ಕಳೆದ ವರ್ಷ ಕಾನೂನು ಜಾರಿ ಮಾಡುವ ಅಧಿಕಾರಿಗಳು, ವರ್ಣಭೇದ ನೀತಿ ವಿರೋದಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಟಿಯರ್ ಗ್ಯಾಸ್ ಮತ್ತು ರಬ್ಬರ್ ಬುಲೆಟ್‌ಗಳನ್ನು ಪ್ರಯೋಗಿಸಿದ್ದರು. ಅವರ ಆ ಕ್ರೌರ್ಯತೆಗೆ ಜಗತ್ತಿನಾದ್ಯಂತ ಮಾನವ ಹಕ್ಕು ಹೋರಾಟಗಾರರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಮೊನ್ನೆ ಮುತ್ತಿಗೆ ಹಾಕಿದ ದಂಗೆಕೋರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದರಾದರೂ, ಕಾನೂನು ಜಾರಿ ಅಧಿಕಾರಿಗಳು ದಂಗೆಕೋರರೊಂದಿಗೆ ಶಾಂತವಾಗಿ, ಮೃದುವಾಗಿ ಮಾತನಾಡಿದರು. ಕಾನೂನು ಜಾರಿ ಅಧಿಕಾರಿಗಳು ಗಾಯಗೊಂಡ ಟ್ರಂಪ್ ಬೆಂಬಲಿಗರ ಆರೈಕೆ ಮಾಡುವ ಫೋಟೊ, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಕೆರಳಿಸಿದೆ. ಕಳೆದ ವರ್ಷ ಗಾಯಗೊಂಡ ತಮ್ಮ ಸದಸ್ಯರಿಗೆ ಇಂತಹ ಆರೈಕೆ ಸಿಗದೇ ಇದ್ದುದನ್ನು ಅವರು ಈಗ ಪ್ರಶ್ನಿಸುತ್ತಿದ್ದಾರೆ.

ಕಳೆದ ವರ್ಷ ಜನಾಂಗೀಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಬಂಧಿಲಾಗಿತ್ತು. ಪೊಲೀಸ್ ಅಂಕಿಸಂಖ್ಯೆ ಪ್ರಕಾರ, 2020 ಮೇ 30 ಮತ್ತು ಜೂನ್ 2ರ ನಡುವೆ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ 427 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು.

ಆದರೆ ಬುಧವಾರ ಗಲಭೆಕೋರರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಪ್ರಕರಣದಲ್ಲಿ ಕೇವಲ 53 ಜನರನ್ನು ಬಂಧಿಲಾಗಿದೆ.

ಕೃಪೆ: –ರಹೇಲ್ ಫಿಲಿಪೋಸ್ (ಇಂಡಿಯನ್ ಎಕ್ಸ್ ಪ್ರೆಸ್)

ಅನುವಾದ: ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...