Homeಅಂತರಾಷ್ಟ್ರೀಯBlack Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

- Advertisement -
- Advertisement -

ಬುಧವಾರ ಶಸ್ತ್ರಸಜ್ಜಿತ ಮತ್ತು ಉದ್ರಿಕ್ತ ಟ್ರಂಪ್ ಬೆಂಬಲಿಗರು (ಬಹುತೇಕರು ಬಿಳಿಯರೇ) ಯು.ಎಸ್ ಕ್ಯಾಪಿಟಲ್ ಮೇಲೆ ಮುತ್ತಿಗೆ ಹಾಕಿ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಬದಲಿಸಲು ಹವಣಿಸಿದರು. ಈ ಕುರಿತು ಮಾತಾಡಿರುವ ಹಲವು ರಾಜಕೀಯ ನಾಯಕರು ಮತ್ತು ಕಾರ್ಯಕರ್ತರು, ಈ ಸಂದರ್ಭದಲ್ಲಿನ ಪೊಲೀಸರ ಮೃದು ವರ್ತನೆ ಮತ್ತು ಕಳೆದ ವರ್ಷ ನಡೆದ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ತೋರಿದ ದೌರ್ಜನ್ಯವನ್ನು ಉಲ್ಲೇಖಿಸಿ, ಪೊಲೀಸರ ಪಕ್ಷಪಾತಿ ಕ್ರಮವನ್ನು ಖಂಡಿಸಿದ್ದಾರೆ.

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

‘ನನಗೆ ಇದನ್ನು ಯಾರೂ ಹೇಳಬೇಕಿಲ್ಲ. ನಿನ್ನೆ ಪ್ರತಿಭಟಿಸಿದವರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಕೊಲೆಗಡುಕರ ಗುಂಪಿನ ಬದಲು, ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರಾಗಿದ್ದರೆ ಅವರನ್ನು ಬೇರೆ ರೀತಿಯಲ್ಲೇ ಟ್ರೀಟ್ ಮಾಡಲಾಗುತ್ತಿತ್ತು. ಇದು ಸತ್ಯ ಎಂಬುದು ನಮ್ಮೆಲ್ಲರಿಗೂ ಗೊತ್ತು. ಇದು ಒಪ್ಪಿತವಲ್ಲ, ಸಂಪೂರ್ಣ ಒಪ್ಪಿತವಲ್ಲ…’ ಎಂದು ಬೈಡನ್ ಟ್ವೀಟ್ ಮಾಡಿದ್ದಾರೆ.

‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರನ್ನು ಕೊಲೆಗಡುಕರು ಎಂದೇ ಕರೆಯುತ್ತಿದ್ದ ಟ್ರಂಪ್, ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದವರ ಪರ ಮಾತನಾಡುತ್ತ, ‘ದೀರ್ಘ ಸಮಯದಿಂದ ಕೆಟ್ಟದಾಗಿ ಟ್ರೀಟ್ ಮಾಡಲ್ಪಟ್ಟ ಇವರೆಲ್ಲ ಮಹಾನ್ ದೇಶಭಕ್ತರು ಎಂದು ಶ್ಲಾಘಿಸಿದ್ದಾರೆ.

ಮುತ್ತಿಗೆಯ ವಿಡಿಯೋ ಮತ್ತು ಫೋಟೊಗಳು ಹೊರ ಬರುತ್ತಿದ್ದಂತೆ, ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ನಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು, ಬುಧವಾರ ಪೊಲೀಸರು ತೋರಿದ ಮೃದು ಧೋರಣೆಯನ್ನು ಉಲ್ಲೇಖಿಸಿ, ‘ಇದು ಅಮೆರಿಕದ ಅಸಮಾನ ನ್ಯಾಯ ವ್ಯವಸ್ಥೆಯ ಸ್ಪಷ್ಟ ಅಭಿವ್ಯಕ್ತಿಯಾಗಿದೆ ಎಂದು ಟೀಕಿಸಿದರು.

ಕಳೆದ ವರ್ಷ ಮಿನ್ನಿಪೊಲಿಸ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಕಪ್ಪು ವರ್ಣದ ಜಾರ್ಜ್ ಫ್ಲಾಯ್ಡ್ ಎಂಬ ವ್ಯಕ್ತಿಯನ್ನು ಮೊಣಕಾಲಿನಿಂದ ಕತ್ತು ಹಿಸುಕಿ ಕೊಂದ ನಂತರ ಅಮೆರಿಕದಲ್ಲಿ ಜನಾಂಗೀಯ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆ ನಡೆದವು. ಆ ಪ್ರತಿಭಟನೆಗಳಿಗೆ ಕಠಿಣವಾಗಿ ಸ್ಪಂದಿಸಿದ ಅಧ್ಯಕ್ಷ ಟ್ರಂಪ್, ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ‘ನ್ಯಾಷನಲ್ ಗಾರ್ಡ್ ಟ್ರೂಪ್’ಗಳನ್ನು ನಿಯೋಜಿಸಿದ್ದರು.

ಮೊನ್ನೆ ಜನವರಿ 6ರಂದು ಟ್ರಂಪ್‌ನ ಸಾವಿರಾರು ಬೆಂಬಲಿಗರು, ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸಲು ಐತಿಹಾಸಿಕ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದರು. ಕಾನೂನು ಜಾರಿ ಅಧಿಕಾರಿಗಳಿದ್ದರೂ, ಅವರು ಕಟ್ಟಡದ ಮೆಟ್ಟಿಲುಗಳನ್ನು ಏರಿದರು, ಪೊಲೀಸ್ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದರು ಮತ್ತು ಕಟ್ಟಡದ ಹೊರಭಾಗದ ಗೋಡೆಯನ್ನು ಏರಿದರು.

ಕಳೆದ ವರ್ಷದ ಜೂನ್‌ನಲ್ಲಿ ವಾಷಿಂಗ್ಟನ್ ಡಿಸಿಯ ಲೆಫಾಯತ್ತೆ ಪಾರ್ಕ್ ಬಳಿ ವರ್ಣಭೇದ ನೀತಿ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ನ್ಯಾಷನಲ್ ಗಾರ್ಡ್ ಟ್ರೂಪ್‌ನವರು ಕ್ರೂರವಾಗಿ ದಾಳಿ ನಡೆಸಿದ್ದರು. ಒಂದು ಫೋಟೊ ಕಾರ್ಯಕ್ರಮಕ್ಕಾಗಿ ಅಂದು ಟ್ರಂಪ್ ವೈಟ್‌ಹೌಸ್‌ನಿಂದ ಈ ಪಾರ್ಕ್ ಮಾರ್ಗವಾಗಿ ಚರ್ಚ್ ಒಂದಕ್ಕೆ ಹೋಗುತ್ತಿದ್ದ ಕಾರಣಕ್ಕಾಗಿ, ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದರು.

ಆದರೆ ಮೊನ್ನೆ ಬುಧವಾರ ಟ್ರಂಪ್ ಬೆಂಬಲಿಗರಿಂದ ಅವ್ಯವಸ್ಥೆ ಉಂಟಾದ ಕೂಡಲೇ, ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಲು ಸಭೆ ಸೇರಿದ್ದ ಶಾಸಕರನ್ನು (ಲಾ ಮೇಕರ್ಸ್) ಆವರಣದಿಂದ ಸ್ಥಳಾಂತರಿಸಲಾಯಿತು. ಉದ್ರಿಕ್ತ ಗಲಭೆಕೋರರು ಅವರ ಕಚೇರಿಗಳನ್ನು ಧ್ವಂಸಗೊಳಿಸಿದರು.

ಕಳೆದ ವರ್ಷ ಜೂನ್‌ನಲ್ಲಿ ಕಪ್ಪು ವರ್ಣೀಯರು ಪೊಲೀಸ್ ದೌರ್ಜನ್ಯ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ, ನ್ಯಾಷನಲ್ ಗಾರ್ಡ್ ಸದಸ್ಯರು ಲಿಂಕನ್ ಸ್ಮಾರಕದ ಸುತ್ತ ಸಾಲಾಗಿ ನಿಂತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್ ಆಗಿತ್ತು.

ಕಳೆದ ವರ್ಷ ಕಾನೂನು ಜಾರಿ ಮಾಡುವ ಅಧಿಕಾರಿಗಳು, ವರ್ಣಭೇದ ನೀತಿ ವಿರೋದಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಟಿಯರ್ ಗ್ಯಾಸ್ ಮತ್ತು ರಬ್ಬರ್ ಬುಲೆಟ್‌ಗಳನ್ನು ಪ್ರಯೋಗಿಸಿದ್ದರು. ಅವರ ಆ ಕ್ರೌರ್ಯತೆಗೆ ಜಗತ್ತಿನಾದ್ಯಂತ ಮಾನವ ಹಕ್ಕು ಹೋರಾಟಗಾರರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಮೊನ್ನೆ ಮುತ್ತಿಗೆ ಹಾಕಿದ ದಂಗೆಕೋರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದರಾದರೂ, ಕಾನೂನು ಜಾರಿ ಅಧಿಕಾರಿಗಳು ದಂಗೆಕೋರರೊಂದಿಗೆ ಶಾಂತವಾಗಿ, ಮೃದುವಾಗಿ ಮಾತನಾಡಿದರು. ಕಾನೂನು ಜಾರಿ ಅಧಿಕಾರಿಗಳು ಗಾಯಗೊಂಡ ಟ್ರಂಪ್ ಬೆಂಬಲಿಗರ ಆರೈಕೆ ಮಾಡುವ ಫೋಟೊ, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಕೆರಳಿಸಿದೆ. ಕಳೆದ ವರ್ಷ ಗಾಯಗೊಂಡ ತಮ್ಮ ಸದಸ್ಯರಿಗೆ ಇಂತಹ ಆರೈಕೆ ಸಿಗದೇ ಇದ್ದುದನ್ನು ಅವರು ಈಗ ಪ್ರಶ್ನಿಸುತ್ತಿದ್ದಾರೆ.

ಕಳೆದ ವರ್ಷ ಜನಾಂಗೀಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಬಂಧಿಲಾಗಿತ್ತು. ಪೊಲೀಸ್ ಅಂಕಿಸಂಖ್ಯೆ ಪ್ರಕಾರ, 2020 ಮೇ 30 ಮತ್ತು ಜೂನ್ 2ರ ನಡುವೆ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ 427 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು.

ಆದರೆ ಬುಧವಾರ ಗಲಭೆಕೋರರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಪ್ರಕರಣದಲ್ಲಿ ಕೇವಲ 53 ಜನರನ್ನು ಬಂಧಿಲಾಗಿದೆ.

ಕೃಪೆ: –ರಹೇಲ್ ಫಿಲಿಪೋಸ್ (ಇಂಡಿಯನ್ ಎಕ್ಸ್ ಪ್ರೆಸ್)

ಅನುವಾದ: ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...