Homeಅಂತರಾಷ್ಟ್ರೀಯBlack Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

- Advertisement -
- Advertisement -

ಬುಧವಾರ ಶಸ್ತ್ರಸಜ್ಜಿತ ಮತ್ತು ಉದ್ರಿಕ್ತ ಟ್ರಂಪ್ ಬೆಂಬಲಿಗರು (ಬಹುತೇಕರು ಬಿಳಿಯರೇ) ಯು.ಎಸ್ ಕ್ಯಾಪಿಟಲ್ ಮೇಲೆ ಮುತ್ತಿಗೆ ಹಾಕಿ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಬದಲಿಸಲು ಹವಣಿಸಿದರು. ಈ ಕುರಿತು ಮಾತಾಡಿರುವ ಹಲವು ರಾಜಕೀಯ ನಾಯಕರು ಮತ್ತು ಕಾರ್ಯಕರ್ತರು, ಈ ಸಂದರ್ಭದಲ್ಲಿನ ಪೊಲೀಸರ ಮೃದು ವರ್ತನೆ ಮತ್ತು ಕಳೆದ ವರ್ಷ ನಡೆದ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ತೋರಿದ ದೌರ್ಜನ್ಯವನ್ನು ಉಲ್ಲೇಖಿಸಿ, ಪೊಲೀಸರ ಪಕ್ಷಪಾತಿ ಕ್ರಮವನ್ನು ಖಂಡಿಸಿದ್ದಾರೆ.

ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಮೆರಿಕದ ಚುನಾಯಿತ-ಅಧ್ಯಕ್ಷ ಜೊ ಬೈಡೆನ್, ಕ್ಯಾಪಿಟಲ್ ಮುತ್ತಿಗೆಯನ್ನು ಖಂಡಿಸಿದ್ದು, ಕಾನೂನು ಜಾರಿ ಮಾಡುವ ಅಧಿಕಾರಿಗಳ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಂಡಿದ್ದಾರೆ.

‘ನನಗೆ ಇದನ್ನು ಯಾರೂ ಹೇಳಬೇಕಿಲ್ಲ. ನಿನ್ನೆ ಪ್ರತಿಭಟಿಸಿದವರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಕೊಲೆಗಡುಕರ ಗುಂಪಿನ ಬದಲು, ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರಾಗಿದ್ದರೆ ಅವರನ್ನು ಬೇರೆ ರೀತಿಯಲ್ಲೇ ಟ್ರೀಟ್ ಮಾಡಲಾಗುತ್ತಿತ್ತು. ಇದು ಸತ್ಯ ಎಂಬುದು ನಮ್ಮೆಲ್ಲರಿಗೂ ಗೊತ್ತು. ಇದು ಒಪ್ಪಿತವಲ್ಲ, ಸಂಪೂರ್ಣ ಒಪ್ಪಿತವಲ್ಲ…’ ಎಂದು ಬೈಡನ್ ಟ್ವೀಟ್ ಮಾಡಿದ್ದಾರೆ.

‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಪ್ರತಿಭಟನಾಕಾರರನ್ನು ಕೊಲೆಗಡುಕರು ಎಂದೇ ಕರೆಯುತ್ತಿದ್ದ ಟ್ರಂಪ್, ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದವರ ಪರ ಮಾತನಾಡುತ್ತ, ‘ದೀರ್ಘ ಸಮಯದಿಂದ ಕೆಟ್ಟದಾಗಿ ಟ್ರೀಟ್ ಮಾಡಲ್ಪಟ್ಟ ಇವರೆಲ್ಲ ಮಹಾನ್ ದೇಶಭಕ್ತರು ಎಂದು ಶ್ಲಾಘಿಸಿದ್ದಾರೆ.

ಮುತ್ತಿಗೆಯ ವಿಡಿಯೋ ಮತ್ತು ಫೋಟೊಗಳು ಹೊರ ಬರುತ್ತಿದ್ದಂತೆ, ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ನಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು, ಬುಧವಾರ ಪೊಲೀಸರು ತೋರಿದ ಮೃದು ಧೋರಣೆಯನ್ನು ಉಲ್ಲೇಖಿಸಿ, ‘ಇದು ಅಮೆರಿಕದ ಅಸಮಾನ ನ್ಯಾಯ ವ್ಯವಸ್ಥೆಯ ಸ್ಪಷ್ಟ ಅಭಿವ್ಯಕ್ತಿಯಾಗಿದೆ ಎಂದು ಟೀಕಿಸಿದರು.

ಕಳೆದ ವರ್ಷ ಮಿನ್ನಿಪೊಲಿಸ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಕಪ್ಪು ವರ್ಣದ ಜಾರ್ಜ್ ಫ್ಲಾಯ್ಡ್ ಎಂಬ ವ್ಯಕ್ತಿಯನ್ನು ಮೊಣಕಾಲಿನಿಂದ ಕತ್ತು ಹಿಸುಕಿ ಕೊಂದ ನಂತರ ಅಮೆರಿಕದಲ್ಲಿ ಜನಾಂಗೀಯ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆ ನಡೆದವು. ಆ ಪ್ರತಿಭಟನೆಗಳಿಗೆ ಕಠಿಣವಾಗಿ ಸ್ಪಂದಿಸಿದ ಅಧ್ಯಕ್ಷ ಟ್ರಂಪ್, ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ‘ನ್ಯಾಷನಲ್ ಗಾರ್ಡ್ ಟ್ರೂಪ್’ಗಳನ್ನು ನಿಯೋಜಿಸಿದ್ದರು.

ಮೊನ್ನೆ ಜನವರಿ 6ರಂದು ಟ್ರಂಪ್‌ನ ಸಾವಿರಾರು ಬೆಂಬಲಿಗರು, ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸಲು ಐತಿಹಾಸಿಕ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದರು. ಕಾನೂನು ಜಾರಿ ಅಧಿಕಾರಿಗಳಿದ್ದರೂ, ಅವರು ಕಟ್ಟಡದ ಮೆಟ್ಟಿಲುಗಳನ್ನು ಏರಿದರು, ಪೊಲೀಸ್ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದರು ಮತ್ತು ಕಟ್ಟಡದ ಹೊರಭಾಗದ ಗೋಡೆಯನ್ನು ಏರಿದರು.

ಕಳೆದ ವರ್ಷದ ಜೂನ್‌ನಲ್ಲಿ ವಾಷಿಂಗ್ಟನ್ ಡಿಸಿಯ ಲೆಫಾಯತ್ತೆ ಪಾರ್ಕ್ ಬಳಿ ವರ್ಣಭೇದ ನೀತಿ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ನ್ಯಾಷನಲ್ ಗಾರ್ಡ್ ಟ್ರೂಪ್‌ನವರು ಕ್ರೂರವಾಗಿ ದಾಳಿ ನಡೆಸಿದ್ದರು. ಒಂದು ಫೋಟೊ ಕಾರ್ಯಕ್ರಮಕ್ಕಾಗಿ ಅಂದು ಟ್ರಂಪ್ ವೈಟ್‌ಹೌಸ್‌ನಿಂದ ಈ ಪಾರ್ಕ್ ಮಾರ್ಗವಾಗಿ ಚರ್ಚ್ ಒಂದಕ್ಕೆ ಹೋಗುತ್ತಿದ್ದ ಕಾರಣಕ್ಕಾಗಿ, ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದರು.

ಆದರೆ ಮೊನ್ನೆ ಬುಧವಾರ ಟ್ರಂಪ್ ಬೆಂಬಲಿಗರಿಂದ ಅವ್ಯವಸ್ಥೆ ಉಂಟಾದ ಕೂಡಲೇ, ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಲು ಸಭೆ ಸೇರಿದ್ದ ಶಾಸಕರನ್ನು (ಲಾ ಮೇಕರ್ಸ್) ಆವರಣದಿಂದ ಸ್ಥಳಾಂತರಿಸಲಾಯಿತು. ಉದ್ರಿಕ್ತ ಗಲಭೆಕೋರರು ಅವರ ಕಚೇರಿಗಳನ್ನು ಧ್ವಂಸಗೊಳಿಸಿದರು.

ಕಳೆದ ವರ್ಷ ಜೂನ್‌ನಲ್ಲಿ ಕಪ್ಪು ವರ್ಣೀಯರು ಪೊಲೀಸ್ ದೌರ್ಜನ್ಯ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ, ನ್ಯಾಷನಲ್ ಗಾರ್ಡ್ ಸದಸ್ಯರು ಲಿಂಕನ್ ಸ್ಮಾರಕದ ಸುತ್ತ ಸಾಲಾಗಿ ನಿಂತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್ ಆಗಿತ್ತು.

ಕಳೆದ ವರ್ಷ ಕಾನೂನು ಜಾರಿ ಮಾಡುವ ಅಧಿಕಾರಿಗಳು, ವರ್ಣಭೇದ ನೀತಿ ವಿರೋದಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಟಿಯರ್ ಗ್ಯಾಸ್ ಮತ್ತು ರಬ್ಬರ್ ಬುಲೆಟ್‌ಗಳನ್ನು ಪ್ರಯೋಗಿಸಿದ್ದರು. ಅವರ ಆ ಕ್ರೌರ್ಯತೆಗೆ ಜಗತ್ತಿನಾದ್ಯಂತ ಮಾನವ ಹಕ್ಕು ಹೋರಾಟಗಾರರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಮೊನ್ನೆ ಮುತ್ತಿಗೆ ಹಾಕಿದ ದಂಗೆಕೋರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದರಾದರೂ, ಕಾನೂನು ಜಾರಿ ಅಧಿಕಾರಿಗಳು ದಂಗೆಕೋರರೊಂದಿಗೆ ಶಾಂತವಾಗಿ, ಮೃದುವಾಗಿ ಮಾತನಾಡಿದರು. ಕಾನೂನು ಜಾರಿ ಅಧಿಕಾರಿಗಳು ಗಾಯಗೊಂಡ ಟ್ರಂಪ್ ಬೆಂಬಲಿಗರ ಆರೈಕೆ ಮಾಡುವ ಫೋಟೊ, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಕೆರಳಿಸಿದೆ. ಕಳೆದ ವರ್ಷ ಗಾಯಗೊಂಡ ತಮ್ಮ ಸದಸ್ಯರಿಗೆ ಇಂತಹ ಆರೈಕೆ ಸಿಗದೇ ಇದ್ದುದನ್ನು ಅವರು ಈಗ ಪ್ರಶ್ನಿಸುತ್ತಿದ್ದಾರೆ.

ಕಳೆದ ವರ್ಷ ಜನಾಂಗೀಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ ಸದಸ್ಯರನ್ನು ಬಂಧಿಲಾಗಿತ್ತು. ಪೊಲೀಸ್ ಅಂಕಿಸಂಖ್ಯೆ ಪ್ರಕಾರ, 2020 ಮೇ 30 ಮತ್ತು ಜೂನ್ 2ರ ನಡುವೆ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಸಂಘಟನೆಯ 427 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು.

ಆದರೆ ಬುಧವಾರ ಗಲಭೆಕೋರರು ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಪ್ರಕರಣದಲ್ಲಿ ಕೇವಲ 53 ಜನರನ್ನು ಬಂಧಿಲಾಗಿದೆ.

ಕೃಪೆ: –ರಹೇಲ್ ಫಿಲಿಪೋಸ್ (ಇಂಡಿಯನ್ ಎಕ್ಸ್ ಪ್ರೆಸ್)

ಅನುವಾದ: ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....