HomeUncategorized‘Black Lives Matters' ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದಾರೆ. ಕ್ರೀಡಾಂಗಣದ ಹೊರಗೆ ಭಾರತದ ಆಟಗಾರರು ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ ಎಂದಾಗ ಕ್ರೀಡಾಂಗಣದ ಒಳಗಿದ್ದ ರೋಹಿತ್ ಶರ್ಮ ಹಾಗೂ ಕೆ.ಎಲ್‌.ರಾಹುಲ್‌‌ ಮಂಡಿಯೂರಿದರು. ಪಾಕ್‌ ಆಟಗಾರರು ಎದೆಯ ಮೇಲೆ ಕೈಯಿಟ್ಟು ಗೌರವ ಸೂಚಿಸಿದರು.

ಪಂದ್ಯದ ನಂತರ ಈ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, “Black Lives Matters ಚಳಿವಳಿಗೆ ಬೆಂಬಲ ಸೂಚಿಸುವ ಈ ನಿರ್ಧಾರವು ನಮ್ಮ ಮ್ಯಾನೇಜ್‌ಮೆಂಟ್ ಕಡೆಯಿಂದ ಬಂದಿತ್ತು. ಅದಕ್ಕೆ ನಾವು ಒಪ್ಪಿದ ನಂತರ ಪಾಕ್ ತಂಡ ಸಹ ಬೆಂಬಲಿಸುವುದಾಗಿ ತಿಳಿಸಿತು. ಈ ರೀತಿಯಾಗಿ ಗೌರವ ಸಲ್ಲಿಸಿದೆವು” ಎಂದಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಆಫ್ರಿಕನ್‌-ಅಮೆರಿಕನ್‌ ಪ್ರಜೆ, ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್‌ ಅವರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಡೆರೇಕ್‌ ಚೌವಿನ್‌ ಜನಾಂಗೀಯ ನಿಂದನೆ ಮಾಡಿ ಕೊಲೆ ಮಾಡಿದ್ದರು. ಮಂಡಿಯಿಂದ ಪ್ಲಾಯ್ಡ್ ಅವರ ಕತ್ತು ಹಿಸುಕಿ ಕೊಂದ ವಿಡಿಯೋ ವೈರಲ್ ಆಗಿತ್ತು. ಆಗ ಇಡೀ ವಿಶ್ವವೇ ಕಪ್ಪು ವರ್ಣಿಯರ ಪರ ನಿಂತು, ಆ ಕೊಲೆಯನ್ನು ಖಂಡಿಸಿತ್ತು. ಅಲ್ಲಿಂದ ಪಶ್ಚಾತಾಪದ ರೀತಿಯಲ್ಲಿ ಮಂಡಿಯೂರಿ ಕ್ಷಮೆ ಕೋರುವ, ಕಪ್ಪು ಜನರ ಪರ ನಿಲ್ಲುವ ಪದ್ಧತಿ ಜಾಲ್ತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡವು ಮಂಡಿಯೂರಿದ್ದು, ಪ್ರಪಂಚದ ಗಮನ ಸೆಳೆದಿದೆ. ಬಹಳಷ್ಟು ಜನ ಈ ಪ್ರಯತ್ನವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆದರೆ ಬೆಂಬಲದ ಜೊತೆಗೆ ಭಾರತದ ತಂಡದ ಈ ಕ್ರಮಕ್ಕೆ ಟೀಕೆ ಸಹ ಕೇಳಿಬಂದಿದೆ. ಬೇರೆ ದೇಶದಲ್ಲಿನ ಜನಾಂಗೀಯ ತಾರತಮ್ಯವನ್ನು ಖಂಡಿಸುವ ಭಾರತೀಯ ಕ್ರಿಕೆಟ್ ತಂಡ ತಮ್ಮದೇ ದೇಶದಲ್ಲಿ ಇಂದು ದಲಿತರ ಮೇಲೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ತಾರತಮ್ಯಕ್ಕೆ ಕುರುಡಾಗಿದೆ. ಇದು ಅವರ ಹಿಪೋಕ್ರಸಿಯ (ಆಷಾಢಭೂತಿತನ) ಭಾಗವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

“ಕಪ್ಪು ವರ್ಣಿಯರ ಮೇಲಿನ ಬಿಳಿ ವರ್ಣಿಯರ (ಜನಾಂಗೀಯ) ದಾಳಿಯನ್ನು ಖಂಡಿಸಿ, ಜಗತ್ತಿನಾದ್ಯಂತ ನಡೆಯುತ್ತಿರುವ #BlackLivesMatter ಚಳವಳಿಗೆ ನಿನ್ನೆ ಭಾರತ ತಂಡ ಮಂಡಿಯೂರಿ ಬೆಂಬಲ ಸೂಚಿಸಿದ್ದು ತುಂಬಾ ಮೆಚ್ಚುವ ನಡೆಯಾಗಿದೆ. ಇದೇ ರೀತಿ ಭಾರತದಲ್ಲಿ ಜಾತಿಯ ಕಾರಣಕ್ಕಾಗಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳನ್ನು ಖಂಡಿಸಿ ದೇಶದಾದ್ಯಂತ ನಡೆಯುವ #DalitLivesMatter ಚಳವಳಿಯನ್ನು ಬೆಂಬಲಿಸಬೇಕೆಂದು ನಮ್ಮ ಭಾರತ ತಂಡವನ್ನು ವಿನಂತಿಸಿಕೊಳ್ಳುತ್ತೇನೆ” ಎಂದು ದಲಿತ ಲೇಖಕ ಪ್ರಜ್ವಲ್ ಶಶಿ ತಗಡೂರು ಅವರು ಎಫ್‌ಬಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮಲ್ಲಿಯೇ ದಲಿತರ ಮೇಲೆ, ಮುಸ್ಲಿಮರ ಮೇಲೆ, ಕೆಳಜಾತಿಯ ಹೆಂಗಸರ ಮೇಲೆ, ಮುಗ್ಧ ದಲಿತ ಪುಟ್ಟ ಹೆಣ್ಮಕ್ಕಳ ಮೇಲೆ ಆ ಪಾಟಿ ಅತ್ಯಾಚಾರ, ಕ್ರೌರ್ಯ, ಚಿತ್ರಹಿಂಸೆ, ಅವಮಾನ, ಮಾಬ್ ಲಿಂಚಿಂಗ್ ನಡೆಯುತ್ತಲೇ ಇರುವಾಗ ಇವರು ಎಲ್ಲಿ ಹೋಗಿದ್ದರು? ಆಗ ಇವರ ಮಂಡಿಗೆ ಏನಾಗಿರುತ್ತದೆ? ನಿಮ್ಮಂತ ಡಬಲ್ ಸ್ಟಾಂಡರ್ಡ್ ಸ್ವಾರ್ಥಿಗಳ ಸಪೋರ್ಟ್ ಕಪ್ಪು ಜನರಿಗೆ ಖಂಡಿತಾ ಬೇಡ…!” ಎಂದು ಆ ಶ್ರೀ ಕ ಪೋಸ್ಟ್‌ ಮಾಡಿದ್ದಾರೆ.

ಇದು ಹಿಪೋಕ್ರಸಿಯ ಪರಮಾವಧಿ ಎಂದು ನೆಟ್ಟಿಗರು ಟೀಕಿಸಿ‌ದ್ದಾರೆ. ಕವಯತ್ರಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ, “ಇದು ಭಾರತದ ಕ್ರಿಕೆಟರ್‌ಗಳ ಹಿಪೋಕ್ರಸಿ. ಇವರು ಒಮ್ಮೆಯೂ #ದಲಿತ್‌ ಲೈವ್ಸ್‌ ಮ್ಯಾಟರ್ಸ್, #ಮುಸ್ಲಿಂಲಿವ್ಸ್‌ಮ್ಯಾಟರ್ಸ್, #ಫಾರ್‍ಮರ್ಸ್‌‌ಲಿವ್ಸ್‌‌ಮ್ಯಾಟರ್ಸ್ ಎನ್ನಲಿಲ್ಲ” ಎಂದು ಆಕ್ಷೇಪ ಎತ್ತಿದ್ದಾರೆ.

“ಲಿಂಚಿಂಗ್‌ ನಡೆದಾಗ ನೀವು ಪ್ರತಿಕ್ರಿಯಿಸಲಿಲ್ಲ. ಹತ್ಯಾಕಾಂಡದ ಸಮಯದಲ್ಲಿ ನೀವು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ರೈತರನ್ನು ಕೊಂದಾಗ ಮಾತನಾಡಲಿಲ್ಲ, ಬೆಲೆ ಏರಿಕೆಯನ್ನು ಅಸಹಜವಾಗಿ ಏರಿಕೆ ಮಾಡಿದಾಗ ನೀವು ಮಾತನಾಡಲಿಲ್ಲ. ಈಗ ನಿಮಗೆ ಬ್ಲಾಕ್‌ಲಿವ್ಸ್‌ಮ್ಯಾಟರ್ಸ್ ಬೇಕೆ?” ಎಂದು ಸಂಗಮೇಶ್‌ ಎಂಬವರು ಪ್ರಶ್ನಿಸಿದ್ದಾರೆ.


 ಇದನ್ನೂ ಓದಿರಿ: ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...