HomeUncategorized‘Black Lives Matters' ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದಾರೆ. ಕ್ರೀಡಾಂಗಣದ ಹೊರಗೆ ಭಾರತದ ಆಟಗಾರರು ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ ಎಂದಾಗ ಕ್ರೀಡಾಂಗಣದ ಒಳಗಿದ್ದ ರೋಹಿತ್ ಶರ್ಮ ಹಾಗೂ ಕೆ.ಎಲ್‌.ರಾಹುಲ್‌‌ ಮಂಡಿಯೂರಿದರು. ಪಾಕ್‌ ಆಟಗಾರರು ಎದೆಯ ಮೇಲೆ ಕೈಯಿಟ್ಟು ಗೌರವ ಸೂಚಿಸಿದರು.

ಪಂದ್ಯದ ನಂತರ ಈ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, “Black Lives Matters ಚಳಿವಳಿಗೆ ಬೆಂಬಲ ಸೂಚಿಸುವ ಈ ನಿರ್ಧಾರವು ನಮ್ಮ ಮ್ಯಾನೇಜ್‌ಮೆಂಟ್ ಕಡೆಯಿಂದ ಬಂದಿತ್ತು. ಅದಕ್ಕೆ ನಾವು ಒಪ್ಪಿದ ನಂತರ ಪಾಕ್ ತಂಡ ಸಹ ಬೆಂಬಲಿಸುವುದಾಗಿ ತಿಳಿಸಿತು. ಈ ರೀತಿಯಾಗಿ ಗೌರವ ಸಲ್ಲಿಸಿದೆವು” ಎಂದಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಆಫ್ರಿಕನ್‌-ಅಮೆರಿಕನ್‌ ಪ್ರಜೆ, ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್‌ ಅವರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಡೆರೇಕ್‌ ಚೌವಿನ್‌ ಜನಾಂಗೀಯ ನಿಂದನೆ ಮಾಡಿ ಕೊಲೆ ಮಾಡಿದ್ದರು. ಮಂಡಿಯಿಂದ ಪ್ಲಾಯ್ಡ್ ಅವರ ಕತ್ತು ಹಿಸುಕಿ ಕೊಂದ ವಿಡಿಯೋ ವೈರಲ್ ಆಗಿತ್ತು. ಆಗ ಇಡೀ ವಿಶ್ವವೇ ಕಪ್ಪು ವರ್ಣಿಯರ ಪರ ನಿಂತು, ಆ ಕೊಲೆಯನ್ನು ಖಂಡಿಸಿತ್ತು. ಅಲ್ಲಿಂದ ಪಶ್ಚಾತಾಪದ ರೀತಿಯಲ್ಲಿ ಮಂಡಿಯೂರಿ ಕ್ಷಮೆ ಕೋರುವ, ಕಪ್ಪು ಜನರ ಪರ ನಿಲ್ಲುವ ಪದ್ಧತಿ ಜಾಲ್ತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡವು ಮಂಡಿಯೂರಿದ್ದು, ಪ್ರಪಂಚದ ಗಮನ ಸೆಳೆದಿದೆ. ಬಹಳಷ್ಟು ಜನ ಈ ಪ್ರಯತ್ನವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆದರೆ ಬೆಂಬಲದ ಜೊತೆಗೆ ಭಾರತದ ತಂಡದ ಈ ಕ್ರಮಕ್ಕೆ ಟೀಕೆ ಸಹ ಕೇಳಿಬಂದಿದೆ. ಬೇರೆ ದೇಶದಲ್ಲಿನ ಜನಾಂಗೀಯ ತಾರತಮ್ಯವನ್ನು ಖಂಡಿಸುವ ಭಾರತೀಯ ಕ್ರಿಕೆಟ್ ತಂಡ ತಮ್ಮದೇ ದೇಶದಲ್ಲಿ ಇಂದು ದಲಿತರ ಮೇಲೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ತಾರತಮ್ಯಕ್ಕೆ ಕುರುಡಾಗಿದೆ. ಇದು ಅವರ ಹಿಪೋಕ್ರಸಿಯ (ಆಷಾಢಭೂತಿತನ) ಭಾಗವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

“ಕಪ್ಪು ವರ್ಣಿಯರ ಮೇಲಿನ ಬಿಳಿ ವರ್ಣಿಯರ (ಜನಾಂಗೀಯ) ದಾಳಿಯನ್ನು ಖಂಡಿಸಿ, ಜಗತ್ತಿನಾದ್ಯಂತ ನಡೆಯುತ್ತಿರುವ #BlackLivesMatter ಚಳವಳಿಗೆ ನಿನ್ನೆ ಭಾರತ ತಂಡ ಮಂಡಿಯೂರಿ ಬೆಂಬಲ ಸೂಚಿಸಿದ್ದು ತುಂಬಾ ಮೆಚ್ಚುವ ನಡೆಯಾಗಿದೆ. ಇದೇ ರೀತಿ ಭಾರತದಲ್ಲಿ ಜಾತಿಯ ಕಾರಣಕ್ಕಾಗಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳನ್ನು ಖಂಡಿಸಿ ದೇಶದಾದ್ಯಂತ ನಡೆಯುವ #DalitLivesMatter ಚಳವಳಿಯನ್ನು ಬೆಂಬಲಿಸಬೇಕೆಂದು ನಮ್ಮ ಭಾರತ ತಂಡವನ್ನು ವಿನಂತಿಸಿಕೊಳ್ಳುತ್ತೇನೆ” ಎಂದು ದಲಿತ ಲೇಖಕ ಪ್ರಜ್ವಲ್ ಶಶಿ ತಗಡೂರು ಅವರು ಎಫ್‌ಬಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮಲ್ಲಿಯೇ ದಲಿತರ ಮೇಲೆ, ಮುಸ್ಲಿಮರ ಮೇಲೆ, ಕೆಳಜಾತಿಯ ಹೆಂಗಸರ ಮೇಲೆ, ಮುಗ್ಧ ದಲಿತ ಪುಟ್ಟ ಹೆಣ್ಮಕ್ಕಳ ಮೇಲೆ ಆ ಪಾಟಿ ಅತ್ಯಾಚಾರ, ಕ್ರೌರ್ಯ, ಚಿತ್ರಹಿಂಸೆ, ಅವಮಾನ, ಮಾಬ್ ಲಿಂಚಿಂಗ್ ನಡೆಯುತ್ತಲೇ ಇರುವಾಗ ಇವರು ಎಲ್ಲಿ ಹೋಗಿದ್ದರು? ಆಗ ಇವರ ಮಂಡಿಗೆ ಏನಾಗಿರುತ್ತದೆ? ನಿಮ್ಮಂತ ಡಬಲ್ ಸ್ಟಾಂಡರ್ಡ್ ಸ್ವಾರ್ಥಿಗಳ ಸಪೋರ್ಟ್ ಕಪ್ಪು ಜನರಿಗೆ ಖಂಡಿತಾ ಬೇಡ…!” ಎಂದು ಆ ಶ್ರೀ ಕ ಪೋಸ್ಟ್‌ ಮಾಡಿದ್ದಾರೆ.

ಇದು ಹಿಪೋಕ್ರಸಿಯ ಪರಮಾವಧಿ ಎಂದು ನೆಟ್ಟಿಗರು ಟೀಕಿಸಿ‌ದ್ದಾರೆ. ಕವಯತ್ರಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ, “ಇದು ಭಾರತದ ಕ್ರಿಕೆಟರ್‌ಗಳ ಹಿಪೋಕ್ರಸಿ. ಇವರು ಒಮ್ಮೆಯೂ #ದಲಿತ್‌ ಲೈವ್ಸ್‌ ಮ್ಯಾಟರ್ಸ್, #ಮುಸ್ಲಿಂಲಿವ್ಸ್‌ಮ್ಯಾಟರ್ಸ್, #ಫಾರ್‍ಮರ್ಸ್‌‌ಲಿವ್ಸ್‌‌ಮ್ಯಾಟರ್ಸ್ ಎನ್ನಲಿಲ್ಲ” ಎಂದು ಆಕ್ಷೇಪ ಎತ್ತಿದ್ದಾರೆ.

“ಲಿಂಚಿಂಗ್‌ ನಡೆದಾಗ ನೀವು ಪ್ರತಿಕ್ರಿಯಿಸಲಿಲ್ಲ. ಹತ್ಯಾಕಾಂಡದ ಸಮಯದಲ್ಲಿ ನೀವು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ರೈತರನ್ನು ಕೊಂದಾಗ ಮಾತನಾಡಲಿಲ್ಲ, ಬೆಲೆ ಏರಿಕೆಯನ್ನು ಅಸಹಜವಾಗಿ ಏರಿಕೆ ಮಾಡಿದಾಗ ನೀವು ಮಾತನಾಡಲಿಲ್ಲ. ಈಗ ನಿಮಗೆ ಬ್ಲಾಕ್‌ಲಿವ್ಸ್‌ಮ್ಯಾಟರ್ಸ್ ಬೇಕೆ?” ಎಂದು ಸಂಗಮೇಶ್‌ ಎಂಬವರು ಪ್ರಶ್ನಿಸಿದ್ದಾರೆ.


 ಇದನ್ನೂ ಓದಿರಿ: ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...