HomeUncategorized‘Black Lives Matters' ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದಾರೆ. ಕ್ರೀಡಾಂಗಣದ ಹೊರಗೆ ಭಾರತದ ಆಟಗಾರರು ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ ಎಂದಾಗ ಕ್ರೀಡಾಂಗಣದ ಒಳಗಿದ್ದ ರೋಹಿತ್ ಶರ್ಮ ಹಾಗೂ ಕೆ.ಎಲ್‌.ರಾಹುಲ್‌‌ ಮಂಡಿಯೂರಿದರು. ಪಾಕ್‌ ಆಟಗಾರರು ಎದೆಯ ಮೇಲೆ ಕೈಯಿಟ್ಟು ಗೌರವ ಸೂಚಿಸಿದರು.

ಪಂದ್ಯದ ನಂತರ ಈ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, “Black Lives Matters ಚಳಿವಳಿಗೆ ಬೆಂಬಲ ಸೂಚಿಸುವ ಈ ನಿರ್ಧಾರವು ನಮ್ಮ ಮ್ಯಾನೇಜ್‌ಮೆಂಟ್ ಕಡೆಯಿಂದ ಬಂದಿತ್ತು. ಅದಕ್ಕೆ ನಾವು ಒಪ್ಪಿದ ನಂತರ ಪಾಕ್ ತಂಡ ಸಹ ಬೆಂಬಲಿಸುವುದಾಗಿ ತಿಳಿಸಿತು. ಈ ರೀತಿಯಾಗಿ ಗೌರವ ಸಲ್ಲಿಸಿದೆವು” ಎಂದಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಆಫ್ರಿಕನ್‌-ಅಮೆರಿಕನ್‌ ಪ್ರಜೆ, ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್‌ ಅವರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಡೆರೇಕ್‌ ಚೌವಿನ್‌ ಜನಾಂಗೀಯ ನಿಂದನೆ ಮಾಡಿ ಕೊಲೆ ಮಾಡಿದ್ದರು. ಮಂಡಿಯಿಂದ ಪ್ಲಾಯ್ಡ್ ಅವರ ಕತ್ತು ಹಿಸುಕಿ ಕೊಂದ ವಿಡಿಯೋ ವೈರಲ್ ಆಗಿತ್ತು. ಆಗ ಇಡೀ ವಿಶ್ವವೇ ಕಪ್ಪು ವರ್ಣಿಯರ ಪರ ನಿಂತು, ಆ ಕೊಲೆಯನ್ನು ಖಂಡಿಸಿತ್ತು. ಅಲ್ಲಿಂದ ಪಶ್ಚಾತಾಪದ ರೀತಿಯಲ್ಲಿ ಮಂಡಿಯೂರಿ ಕ್ಷಮೆ ಕೋರುವ, ಕಪ್ಪು ಜನರ ಪರ ನಿಲ್ಲುವ ಪದ್ಧತಿ ಜಾಲ್ತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡವು ಮಂಡಿಯೂರಿದ್ದು, ಪ್ರಪಂಚದ ಗಮನ ಸೆಳೆದಿದೆ. ಬಹಳಷ್ಟು ಜನ ಈ ಪ್ರಯತ್ನವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆದರೆ ಬೆಂಬಲದ ಜೊತೆಗೆ ಭಾರತದ ತಂಡದ ಈ ಕ್ರಮಕ್ಕೆ ಟೀಕೆ ಸಹ ಕೇಳಿಬಂದಿದೆ. ಬೇರೆ ದೇಶದಲ್ಲಿನ ಜನಾಂಗೀಯ ತಾರತಮ್ಯವನ್ನು ಖಂಡಿಸುವ ಭಾರತೀಯ ಕ್ರಿಕೆಟ್ ತಂಡ ತಮ್ಮದೇ ದೇಶದಲ್ಲಿ ಇಂದು ದಲಿತರ ಮೇಲೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ತಾರತಮ್ಯಕ್ಕೆ ಕುರುಡಾಗಿದೆ. ಇದು ಅವರ ಹಿಪೋಕ್ರಸಿಯ (ಆಷಾಢಭೂತಿತನ) ಭಾಗವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

“ಕಪ್ಪು ವರ್ಣಿಯರ ಮೇಲಿನ ಬಿಳಿ ವರ್ಣಿಯರ (ಜನಾಂಗೀಯ) ದಾಳಿಯನ್ನು ಖಂಡಿಸಿ, ಜಗತ್ತಿನಾದ್ಯಂತ ನಡೆಯುತ್ತಿರುವ #BlackLivesMatter ಚಳವಳಿಗೆ ನಿನ್ನೆ ಭಾರತ ತಂಡ ಮಂಡಿಯೂರಿ ಬೆಂಬಲ ಸೂಚಿಸಿದ್ದು ತುಂಬಾ ಮೆಚ್ಚುವ ನಡೆಯಾಗಿದೆ. ಇದೇ ರೀತಿ ಭಾರತದಲ್ಲಿ ಜಾತಿಯ ಕಾರಣಕ್ಕಾಗಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳನ್ನು ಖಂಡಿಸಿ ದೇಶದಾದ್ಯಂತ ನಡೆಯುವ #DalitLivesMatter ಚಳವಳಿಯನ್ನು ಬೆಂಬಲಿಸಬೇಕೆಂದು ನಮ್ಮ ಭಾರತ ತಂಡವನ್ನು ವಿನಂತಿಸಿಕೊಳ್ಳುತ್ತೇನೆ” ಎಂದು ದಲಿತ ಲೇಖಕ ಪ್ರಜ್ವಲ್ ಶಶಿ ತಗಡೂರು ಅವರು ಎಫ್‌ಬಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮಲ್ಲಿಯೇ ದಲಿತರ ಮೇಲೆ, ಮುಸ್ಲಿಮರ ಮೇಲೆ, ಕೆಳಜಾತಿಯ ಹೆಂಗಸರ ಮೇಲೆ, ಮುಗ್ಧ ದಲಿತ ಪುಟ್ಟ ಹೆಣ್ಮಕ್ಕಳ ಮೇಲೆ ಆ ಪಾಟಿ ಅತ್ಯಾಚಾರ, ಕ್ರೌರ್ಯ, ಚಿತ್ರಹಿಂಸೆ, ಅವಮಾನ, ಮಾಬ್ ಲಿಂಚಿಂಗ್ ನಡೆಯುತ್ತಲೇ ಇರುವಾಗ ಇವರು ಎಲ್ಲಿ ಹೋಗಿದ್ದರು? ಆಗ ಇವರ ಮಂಡಿಗೆ ಏನಾಗಿರುತ್ತದೆ? ನಿಮ್ಮಂತ ಡಬಲ್ ಸ್ಟಾಂಡರ್ಡ್ ಸ್ವಾರ್ಥಿಗಳ ಸಪೋರ್ಟ್ ಕಪ್ಪು ಜನರಿಗೆ ಖಂಡಿತಾ ಬೇಡ…!” ಎಂದು ಆ ಶ್ರೀ ಕ ಪೋಸ್ಟ್‌ ಮಾಡಿದ್ದಾರೆ.

ಇದು ಹಿಪೋಕ್ರಸಿಯ ಪರಮಾವಧಿ ಎಂದು ನೆಟ್ಟಿಗರು ಟೀಕಿಸಿ‌ದ್ದಾರೆ. ಕವಯತ್ರಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ, “ಇದು ಭಾರತದ ಕ್ರಿಕೆಟರ್‌ಗಳ ಹಿಪೋಕ್ರಸಿ. ಇವರು ಒಮ್ಮೆಯೂ #ದಲಿತ್‌ ಲೈವ್ಸ್‌ ಮ್ಯಾಟರ್ಸ್, #ಮುಸ್ಲಿಂಲಿವ್ಸ್‌ಮ್ಯಾಟರ್ಸ್, #ಫಾರ್‍ಮರ್ಸ್‌‌ಲಿವ್ಸ್‌‌ಮ್ಯಾಟರ್ಸ್ ಎನ್ನಲಿಲ್ಲ” ಎಂದು ಆಕ್ಷೇಪ ಎತ್ತಿದ್ದಾರೆ.

“ಲಿಂಚಿಂಗ್‌ ನಡೆದಾಗ ನೀವು ಪ್ರತಿಕ್ರಿಯಿಸಲಿಲ್ಲ. ಹತ್ಯಾಕಾಂಡದ ಸಮಯದಲ್ಲಿ ನೀವು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ರೈತರನ್ನು ಕೊಂದಾಗ ಮಾತನಾಡಲಿಲ್ಲ, ಬೆಲೆ ಏರಿಕೆಯನ್ನು ಅಸಹಜವಾಗಿ ಏರಿಕೆ ಮಾಡಿದಾಗ ನೀವು ಮಾತನಾಡಲಿಲ್ಲ. ಈಗ ನಿಮಗೆ ಬ್ಲಾಕ್‌ಲಿವ್ಸ್‌ಮ್ಯಾಟರ್ಸ್ ಬೇಕೆ?” ಎಂದು ಸಂಗಮೇಶ್‌ ಎಂಬವರು ಪ್ರಶ್ನಿಸಿದ್ದಾರೆ.


 ಇದನ್ನೂ ಓದಿರಿ: ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...