HomeUncategorized‘Black Lives Matters' ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದಾರೆ. ಕ್ರೀಡಾಂಗಣದ ಹೊರಗೆ ಭಾರತದ ಆಟಗಾರರು ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ ಎಂದಾಗ ಕ್ರೀಡಾಂಗಣದ ಒಳಗಿದ್ದ ರೋಹಿತ್ ಶರ್ಮ ಹಾಗೂ ಕೆ.ಎಲ್‌.ರಾಹುಲ್‌‌ ಮಂಡಿಯೂರಿದರು. ಪಾಕ್‌ ಆಟಗಾರರು ಎದೆಯ ಮೇಲೆ ಕೈಯಿಟ್ಟು ಗೌರವ ಸೂಚಿಸಿದರು.

ಪಂದ್ಯದ ನಂತರ ಈ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, “Black Lives Matters ಚಳಿವಳಿಗೆ ಬೆಂಬಲ ಸೂಚಿಸುವ ಈ ನಿರ್ಧಾರವು ನಮ್ಮ ಮ್ಯಾನೇಜ್‌ಮೆಂಟ್ ಕಡೆಯಿಂದ ಬಂದಿತ್ತು. ಅದಕ್ಕೆ ನಾವು ಒಪ್ಪಿದ ನಂತರ ಪಾಕ್ ತಂಡ ಸಹ ಬೆಂಬಲಿಸುವುದಾಗಿ ತಿಳಿಸಿತು. ಈ ರೀತಿಯಾಗಿ ಗೌರವ ಸಲ್ಲಿಸಿದೆವು” ಎಂದಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಆಫ್ರಿಕನ್‌-ಅಮೆರಿಕನ್‌ ಪ್ರಜೆ, ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್‌ ಅವರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಡೆರೇಕ್‌ ಚೌವಿನ್‌ ಜನಾಂಗೀಯ ನಿಂದನೆ ಮಾಡಿ ಕೊಲೆ ಮಾಡಿದ್ದರು. ಮಂಡಿಯಿಂದ ಪ್ಲಾಯ್ಡ್ ಅವರ ಕತ್ತು ಹಿಸುಕಿ ಕೊಂದ ವಿಡಿಯೋ ವೈರಲ್ ಆಗಿತ್ತು. ಆಗ ಇಡೀ ವಿಶ್ವವೇ ಕಪ್ಪು ವರ್ಣಿಯರ ಪರ ನಿಂತು, ಆ ಕೊಲೆಯನ್ನು ಖಂಡಿಸಿತ್ತು. ಅಲ್ಲಿಂದ ಪಶ್ಚಾತಾಪದ ರೀತಿಯಲ್ಲಿ ಮಂಡಿಯೂರಿ ಕ್ಷಮೆ ಕೋರುವ, ಕಪ್ಪು ಜನರ ಪರ ನಿಲ್ಲುವ ಪದ್ಧತಿ ಜಾಲ್ತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡವು ಮಂಡಿಯೂರಿದ್ದು, ಪ್ರಪಂಚದ ಗಮನ ಸೆಳೆದಿದೆ. ಬಹಳಷ್ಟು ಜನ ಈ ಪ್ರಯತ್ನವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆದರೆ ಬೆಂಬಲದ ಜೊತೆಗೆ ಭಾರತದ ತಂಡದ ಈ ಕ್ರಮಕ್ಕೆ ಟೀಕೆ ಸಹ ಕೇಳಿಬಂದಿದೆ. ಬೇರೆ ದೇಶದಲ್ಲಿನ ಜನಾಂಗೀಯ ತಾರತಮ್ಯವನ್ನು ಖಂಡಿಸುವ ಭಾರತೀಯ ಕ್ರಿಕೆಟ್ ತಂಡ ತಮ್ಮದೇ ದೇಶದಲ್ಲಿ ಇಂದು ದಲಿತರ ಮೇಲೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ತಾರತಮ್ಯಕ್ಕೆ ಕುರುಡಾಗಿದೆ. ಇದು ಅವರ ಹಿಪೋಕ್ರಸಿಯ (ಆಷಾಢಭೂತಿತನ) ಭಾಗವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

“ಕಪ್ಪು ವರ್ಣಿಯರ ಮೇಲಿನ ಬಿಳಿ ವರ್ಣಿಯರ (ಜನಾಂಗೀಯ) ದಾಳಿಯನ್ನು ಖಂಡಿಸಿ, ಜಗತ್ತಿನಾದ್ಯಂತ ನಡೆಯುತ್ತಿರುವ #BlackLivesMatter ಚಳವಳಿಗೆ ನಿನ್ನೆ ಭಾರತ ತಂಡ ಮಂಡಿಯೂರಿ ಬೆಂಬಲ ಸೂಚಿಸಿದ್ದು ತುಂಬಾ ಮೆಚ್ಚುವ ನಡೆಯಾಗಿದೆ. ಇದೇ ರೀತಿ ಭಾರತದಲ್ಲಿ ಜಾತಿಯ ಕಾರಣಕ್ಕಾಗಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳನ್ನು ಖಂಡಿಸಿ ದೇಶದಾದ್ಯಂತ ನಡೆಯುವ #DalitLivesMatter ಚಳವಳಿಯನ್ನು ಬೆಂಬಲಿಸಬೇಕೆಂದು ನಮ್ಮ ಭಾರತ ತಂಡವನ್ನು ವಿನಂತಿಸಿಕೊಳ್ಳುತ್ತೇನೆ” ಎಂದು ದಲಿತ ಲೇಖಕ ಪ್ರಜ್ವಲ್ ಶಶಿ ತಗಡೂರು ಅವರು ಎಫ್‌ಬಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮಲ್ಲಿಯೇ ದಲಿತರ ಮೇಲೆ, ಮುಸ್ಲಿಮರ ಮೇಲೆ, ಕೆಳಜಾತಿಯ ಹೆಂಗಸರ ಮೇಲೆ, ಮುಗ್ಧ ದಲಿತ ಪುಟ್ಟ ಹೆಣ್ಮಕ್ಕಳ ಮೇಲೆ ಆ ಪಾಟಿ ಅತ್ಯಾಚಾರ, ಕ್ರೌರ್ಯ, ಚಿತ್ರಹಿಂಸೆ, ಅವಮಾನ, ಮಾಬ್ ಲಿಂಚಿಂಗ್ ನಡೆಯುತ್ತಲೇ ಇರುವಾಗ ಇವರು ಎಲ್ಲಿ ಹೋಗಿದ್ದರು? ಆಗ ಇವರ ಮಂಡಿಗೆ ಏನಾಗಿರುತ್ತದೆ? ನಿಮ್ಮಂತ ಡಬಲ್ ಸ್ಟಾಂಡರ್ಡ್ ಸ್ವಾರ್ಥಿಗಳ ಸಪೋರ್ಟ್ ಕಪ್ಪು ಜನರಿಗೆ ಖಂಡಿತಾ ಬೇಡ…!” ಎಂದು ಆ ಶ್ರೀ ಕ ಪೋಸ್ಟ್‌ ಮಾಡಿದ್ದಾರೆ.

ಇದು ಹಿಪೋಕ್ರಸಿಯ ಪರಮಾವಧಿ ಎಂದು ನೆಟ್ಟಿಗರು ಟೀಕಿಸಿ‌ದ್ದಾರೆ. ಕವಯತ್ರಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ, “ಇದು ಭಾರತದ ಕ್ರಿಕೆಟರ್‌ಗಳ ಹಿಪೋಕ್ರಸಿ. ಇವರು ಒಮ್ಮೆಯೂ #ದಲಿತ್‌ ಲೈವ್ಸ್‌ ಮ್ಯಾಟರ್ಸ್, #ಮುಸ್ಲಿಂಲಿವ್ಸ್‌ಮ್ಯಾಟರ್ಸ್, #ಫಾರ್‍ಮರ್ಸ್‌‌ಲಿವ್ಸ್‌‌ಮ್ಯಾಟರ್ಸ್ ಎನ್ನಲಿಲ್ಲ” ಎಂದು ಆಕ್ಷೇಪ ಎತ್ತಿದ್ದಾರೆ.

“ಲಿಂಚಿಂಗ್‌ ನಡೆದಾಗ ನೀವು ಪ್ರತಿಕ್ರಿಯಿಸಲಿಲ್ಲ. ಹತ್ಯಾಕಾಂಡದ ಸಮಯದಲ್ಲಿ ನೀವು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ರೈತರನ್ನು ಕೊಂದಾಗ ಮಾತನಾಡಲಿಲ್ಲ, ಬೆಲೆ ಏರಿಕೆಯನ್ನು ಅಸಹಜವಾಗಿ ಏರಿಕೆ ಮಾಡಿದಾಗ ನೀವು ಮಾತನಾಡಲಿಲ್ಲ. ಈಗ ನಿಮಗೆ ಬ್ಲಾಕ್‌ಲಿವ್ಸ್‌ಮ್ಯಾಟರ್ಸ್ ಬೇಕೆ?” ಎಂದು ಸಂಗಮೇಶ್‌ ಎಂಬವರು ಪ್ರಶ್ನಿಸಿದ್ದಾರೆ.


 ಇದನ್ನೂ ಓದಿರಿ: ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...