HomeUncategorized‘Black Lives Matters' ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದಾರೆ. ಕ್ರೀಡಾಂಗಣದ ಹೊರಗೆ ಭಾರತದ ಆಟಗಾರರು ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ ಎಂದಾಗ ಕ್ರೀಡಾಂಗಣದ ಒಳಗಿದ್ದ ರೋಹಿತ್ ಶರ್ಮ ಹಾಗೂ ಕೆ.ಎಲ್‌.ರಾಹುಲ್‌‌ ಮಂಡಿಯೂರಿದರು. ಪಾಕ್‌ ಆಟಗಾರರು ಎದೆಯ ಮೇಲೆ ಕೈಯಿಟ್ಟು ಗೌರವ ಸೂಚಿಸಿದರು.

ಪಂದ್ಯದ ನಂತರ ಈ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, “Black Lives Matters ಚಳಿವಳಿಗೆ ಬೆಂಬಲ ಸೂಚಿಸುವ ಈ ನಿರ್ಧಾರವು ನಮ್ಮ ಮ್ಯಾನೇಜ್‌ಮೆಂಟ್ ಕಡೆಯಿಂದ ಬಂದಿತ್ತು. ಅದಕ್ಕೆ ನಾವು ಒಪ್ಪಿದ ನಂತರ ಪಾಕ್ ತಂಡ ಸಹ ಬೆಂಬಲಿಸುವುದಾಗಿ ತಿಳಿಸಿತು. ಈ ರೀತಿಯಾಗಿ ಗೌರವ ಸಲ್ಲಿಸಿದೆವು” ಎಂದಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಆಫ್ರಿಕನ್‌-ಅಮೆರಿಕನ್‌ ಪ್ರಜೆ, ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್‌ ಅವರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಡೆರೇಕ್‌ ಚೌವಿನ್‌ ಜನಾಂಗೀಯ ನಿಂದನೆ ಮಾಡಿ ಕೊಲೆ ಮಾಡಿದ್ದರು. ಮಂಡಿಯಿಂದ ಪ್ಲಾಯ್ಡ್ ಅವರ ಕತ್ತು ಹಿಸುಕಿ ಕೊಂದ ವಿಡಿಯೋ ವೈರಲ್ ಆಗಿತ್ತು. ಆಗ ಇಡೀ ವಿಶ್ವವೇ ಕಪ್ಪು ವರ್ಣಿಯರ ಪರ ನಿಂತು, ಆ ಕೊಲೆಯನ್ನು ಖಂಡಿಸಿತ್ತು. ಅಲ್ಲಿಂದ ಪಶ್ಚಾತಾಪದ ರೀತಿಯಲ್ಲಿ ಮಂಡಿಯೂರಿ ಕ್ಷಮೆ ಕೋರುವ, ಕಪ್ಪು ಜನರ ಪರ ನಿಲ್ಲುವ ಪದ್ಧತಿ ಜಾಲ್ತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡವು ಮಂಡಿಯೂರಿದ್ದು, ಪ್ರಪಂಚದ ಗಮನ ಸೆಳೆದಿದೆ. ಬಹಳಷ್ಟು ಜನ ಈ ಪ್ರಯತ್ನವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆದರೆ ಬೆಂಬಲದ ಜೊತೆಗೆ ಭಾರತದ ತಂಡದ ಈ ಕ್ರಮಕ್ಕೆ ಟೀಕೆ ಸಹ ಕೇಳಿಬಂದಿದೆ. ಬೇರೆ ದೇಶದಲ್ಲಿನ ಜನಾಂಗೀಯ ತಾರತಮ್ಯವನ್ನು ಖಂಡಿಸುವ ಭಾರತೀಯ ಕ್ರಿಕೆಟ್ ತಂಡ ತಮ್ಮದೇ ದೇಶದಲ್ಲಿ ಇಂದು ದಲಿತರ ಮೇಲೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ತಾರತಮ್ಯಕ್ಕೆ ಕುರುಡಾಗಿದೆ. ಇದು ಅವರ ಹಿಪೋಕ್ರಸಿಯ (ಆಷಾಢಭೂತಿತನ) ಭಾಗವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

“ಕಪ್ಪು ವರ್ಣಿಯರ ಮೇಲಿನ ಬಿಳಿ ವರ್ಣಿಯರ (ಜನಾಂಗೀಯ) ದಾಳಿಯನ್ನು ಖಂಡಿಸಿ, ಜಗತ್ತಿನಾದ್ಯಂತ ನಡೆಯುತ್ತಿರುವ #BlackLivesMatter ಚಳವಳಿಗೆ ನಿನ್ನೆ ಭಾರತ ತಂಡ ಮಂಡಿಯೂರಿ ಬೆಂಬಲ ಸೂಚಿಸಿದ್ದು ತುಂಬಾ ಮೆಚ್ಚುವ ನಡೆಯಾಗಿದೆ. ಇದೇ ರೀತಿ ಭಾರತದಲ್ಲಿ ಜಾತಿಯ ಕಾರಣಕ್ಕಾಗಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳನ್ನು ಖಂಡಿಸಿ ದೇಶದಾದ್ಯಂತ ನಡೆಯುವ #DalitLivesMatter ಚಳವಳಿಯನ್ನು ಬೆಂಬಲಿಸಬೇಕೆಂದು ನಮ್ಮ ಭಾರತ ತಂಡವನ್ನು ವಿನಂತಿಸಿಕೊಳ್ಳುತ್ತೇನೆ” ಎಂದು ದಲಿತ ಲೇಖಕ ಪ್ರಜ್ವಲ್ ಶಶಿ ತಗಡೂರು ಅವರು ಎಫ್‌ಬಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮಲ್ಲಿಯೇ ದಲಿತರ ಮೇಲೆ, ಮುಸ್ಲಿಮರ ಮೇಲೆ, ಕೆಳಜಾತಿಯ ಹೆಂಗಸರ ಮೇಲೆ, ಮುಗ್ಧ ದಲಿತ ಪುಟ್ಟ ಹೆಣ್ಮಕ್ಕಳ ಮೇಲೆ ಆ ಪಾಟಿ ಅತ್ಯಾಚಾರ, ಕ್ರೌರ್ಯ, ಚಿತ್ರಹಿಂಸೆ, ಅವಮಾನ, ಮಾಬ್ ಲಿಂಚಿಂಗ್ ನಡೆಯುತ್ತಲೇ ಇರುವಾಗ ಇವರು ಎಲ್ಲಿ ಹೋಗಿದ್ದರು? ಆಗ ಇವರ ಮಂಡಿಗೆ ಏನಾಗಿರುತ್ತದೆ? ನಿಮ್ಮಂತ ಡಬಲ್ ಸ್ಟಾಂಡರ್ಡ್ ಸ್ವಾರ್ಥಿಗಳ ಸಪೋರ್ಟ್ ಕಪ್ಪು ಜನರಿಗೆ ಖಂಡಿತಾ ಬೇಡ…!” ಎಂದು ಆ ಶ್ರೀ ಕ ಪೋಸ್ಟ್‌ ಮಾಡಿದ್ದಾರೆ.

ಇದು ಹಿಪೋಕ್ರಸಿಯ ಪರಮಾವಧಿ ಎಂದು ನೆಟ್ಟಿಗರು ಟೀಕಿಸಿ‌ದ್ದಾರೆ. ಕವಯತ್ರಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ, “ಇದು ಭಾರತದ ಕ್ರಿಕೆಟರ್‌ಗಳ ಹಿಪೋಕ್ರಸಿ. ಇವರು ಒಮ್ಮೆಯೂ #ದಲಿತ್‌ ಲೈವ್ಸ್‌ ಮ್ಯಾಟರ್ಸ್, #ಮುಸ್ಲಿಂಲಿವ್ಸ್‌ಮ್ಯಾಟರ್ಸ್, #ಫಾರ್‍ಮರ್ಸ್‌‌ಲಿವ್ಸ್‌‌ಮ್ಯಾಟರ್ಸ್ ಎನ್ನಲಿಲ್ಲ” ಎಂದು ಆಕ್ಷೇಪ ಎತ್ತಿದ್ದಾರೆ.

“ಲಿಂಚಿಂಗ್‌ ನಡೆದಾಗ ನೀವು ಪ್ರತಿಕ್ರಿಯಿಸಲಿಲ್ಲ. ಹತ್ಯಾಕಾಂಡದ ಸಮಯದಲ್ಲಿ ನೀವು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ರೈತರನ್ನು ಕೊಂದಾಗ ಮಾತನಾಡಲಿಲ್ಲ, ಬೆಲೆ ಏರಿಕೆಯನ್ನು ಅಸಹಜವಾಗಿ ಏರಿಕೆ ಮಾಡಿದಾಗ ನೀವು ಮಾತನಾಡಲಿಲ್ಲ. ಈಗ ನಿಮಗೆ ಬ್ಲಾಕ್‌ಲಿವ್ಸ್‌ಮ್ಯಾಟರ್ಸ್ ಬೇಕೆ?” ಎಂದು ಸಂಗಮೇಶ್‌ ಎಂಬವರು ಪ್ರಶ್ನಿಸಿದ್ದಾರೆ.


 ಇದನ್ನೂ ಓದಿರಿ: ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...