HomeUncategorized‘Black Lives Matters' ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದಾರೆ. ಕ್ರೀಡಾಂಗಣದ ಹೊರಗೆ ಭಾರತದ ಆಟಗಾರರು ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ ಎಂದಾಗ ಕ್ರೀಡಾಂಗಣದ ಒಳಗಿದ್ದ ರೋಹಿತ್ ಶರ್ಮ ಹಾಗೂ ಕೆ.ಎಲ್‌.ರಾಹುಲ್‌‌ ಮಂಡಿಯೂರಿದರು. ಪಾಕ್‌ ಆಟಗಾರರು ಎದೆಯ ಮೇಲೆ ಕೈಯಿಟ್ಟು ಗೌರವ ಸೂಚಿಸಿದರು.

ಪಂದ್ಯದ ನಂತರ ಈ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, “Black Lives Matters ಚಳಿವಳಿಗೆ ಬೆಂಬಲ ಸೂಚಿಸುವ ಈ ನಿರ್ಧಾರವು ನಮ್ಮ ಮ್ಯಾನೇಜ್‌ಮೆಂಟ್ ಕಡೆಯಿಂದ ಬಂದಿತ್ತು. ಅದಕ್ಕೆ ನಾವು ಒಪ್ಪಿದ ನಂತರ ಪಾಕ್ ತಂಡ ಸಹ ಬೆಂಬಲಿಸುವುದಾಗಿ ತಿಳಿಸಿತು. ಈ ರೀತಿಯಾಗಿ ಗೌರವ ಸಲ್ಲಿಸಿದೆವು” ಎಂದಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಆಫ್ರಿಕನ್‌-ಅಮೆರಿಕನ್‌ ಪ್ರಜೆ, ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್‌ ಅವರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಡೆರೇಕ್‌ ಚೌವಿನ್‌ ಜನಾಂಗೀಯ ನಿಂದನೆ ಮಾಡಿ ಕೊಲೆ ಮಾಡಿದ್ದರು. ಮಂಡಿಯಿಂದ ಪ್ಲಾಯ್ಡ್ ಅವರ ಕತ್ತು ಹಿಸುಕಿ ಕೊಂದ ವಿಡಿಯೋ ವೈರಲ್ ಆಗಿತ್ತು. ಆಗ ಇಡೀ ವಿಶ್ವವೇ ಕಪ್ಪು ವರ್ಣಿಯರ ಪರ ನಿಂತು, ಆ ಕೊಲೆಯನ್ನು ಖಂಡಿಸಿತ್ತು. ಅಲ್ಲಿಂದ ಪಶ್ಚಾತಾಪದ ರೀತಿಯಲ್ಲಿ ಮಂಡಿಯೂರಿ ಕ್ಷಮೆ ಕೋರುವ, ಕಪ್ಪು ಜನರ ಪರ ನಿಲ್ಲುವ ಪದ್ಧತಿ ಜಾಲ್ತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡವು ಮಂಡಿಯೂರಿದ್ದು, ಪ್ರಪಂಚದ ಗಮನ ಸೆಳೆದಿದೆ. ಬಹಳಷ್ಟು ಜನ ಈ ಪ್ರಯತ್ನವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆದರೆ ಬೆಂಬಲದ ಜೊತೆಗೆ ಭಾರತದ ತಂಡದ ಈ ಕ್ರಮಕ್ಕೆ ಟೀಕೆ ಸಹ ಕೇಳಿಬಂದಿದೆ. ಬೇರೆ ದೇಶದಲ್ಲಿನ ಜನಾಂಗೀಯ ತಾರತಮ್ಯವನ್ನು ಖಂಡಿಸುವ ಭಾರತೀಯ ಕ್ರಿಕೆಟ್ ತಂಡ ತಮ್ಮದೇ ದೇಶದಲ್ಲಿ ಇಂದು ದಲಿತರ ಮೇಲೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ತಾರತಮ್ಯಕ್ಕೆ ಕುರುಡಾಗಿದೆ. ಇದು ಅವರ ಹಿಪೋಕ್ರಸಿಯ (ಆಷಾಢಭೂತಿತನ) ಭಾಗವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

“ಕಪ್ಪು ವರ್ಣಿಯರ ಮೇಲಿನ ಬಿಳಿ ವರ್ಣಿಯರ (ಜನಾಂಗೀಯ) ದಾಳಿಯನ್ನು ಖಂಡಿಸಿ, ಜಗತ್ತಿನಾದ್ಯಂತ ನಡೆಯುತ್ತಿರುವ #BlackLivesMatter ಚಳವಳಿಗೆ ನಿನ್ನೆ ಭಾರತ ತಂಡ ಮಂಡಿಯೂರಿ ಬೆಂಬಲ ಸೂಚಿಸಿದ್ದು ತುಂಬಾ ಮೆಚ್ಚುವ ನಡೆಯಾಗಿದೆ. ಇದೇ ರೀತಿ ಭಾರತದಲ್ಲಿ ಜಾತಿಯ ಕಾರಣಕ್ಕಾಗಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳನ್ನು ಖಂಡಿಸಿ ದೇಶದಾದ್ಯಂತ ನಡೆಯುವ #DalitLivesMatter ಚಳವಳಿಯನ್ನು ಬೆಂಬಲಿಸಬೇಕೆಂದು ನಮ್ಮ ಭಾರತ ತಂಡವನ್ನು ವಿನಂತಿಸಿಕೊಳ್ಳುತ್ತೇನೆ” ಎಂದು ದಲಿತ ಲೇಖಕ ಪ್ರಜ್ವಲ್ ಶಶಿ ತಗಡೂರು ಅವರು ಎಫ್‌ಬಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮಲ್ಲಿಯೇ ದಲಿತರ ಮೇಲೆ, ಮುಸ್ಲಿಮರ ಮೇಲೆ, ಕೆಳಜಾತಿಯ ಹೆಂಗಸರ ಮೇಲೆ, ಮುಗ್ಧ ದಲಿತ ಪುಟ್ಟ ಹೆಣ್ಮಕ್ಕಳ ಮೇಲೆ ಆ ಪಾಟಿ ಅತ್ಯಾಚಾರ, ಕ್ರೌರ್ಯ, ಚಿತ್ರಹಿಂಸೆ, ಅವಮಾನ, ಮಾಬ್ ಲಿಂಚಿಂಗ್ ನಡೆಯುತ್ತಲೇ ಇರುವಾಗ ಇವರು ಎಲ್ಲಿ ಹೋಗಿದ್ದರು? ಆಗ ಇವರ ಮಂಡಿಗೆ ಏನಾಗಿರುತ್ತದೆ? ನಿಮ್ಮಂತ ಡಬಲ್ ಸ್ಟಾಂಡರ್ಡ್ ಸ್ವಾರ್ಥಿಗಳ ಸಪೋರ್ಟ್ ಕಪ್ಪು ಜನರಿಗೆ ಖಂಡಿತಾ ಬೇಡ…!” ಎಂದು ಆ ಶ್ರೀ ಕ ಪೋಸ್ಟ್‌ ಮಾಡಿದ್ದಾರೆ.

ಇದು ಹಿಪೋಕ್ರಸಿಯ ಪರಮಾವಧಿ ಎಂದು ನೆಟ್ಟಿಗರು ಟೀಕಿಸಿ‌ದ್ದಾರೆ. ಕವಯತ್ರಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ, “ಇದು ಭಾರತದ ಕ್ರಿಕೆಟರ್‌ಗಳ ಹಿಪೋಕ್ರಸಿ. ಇವರು ಒಮ್ಮೆಯೂ #ದಲಿತ್‌ ಲೈವ್ಸ್‌ ಮ್ಯಾಟರ್ಸ್, #ಮುಸ್ಲಿಂಲಿವ್ಸ್‌ಮ್ಯಾಟರ್ಸ್, #ಫಾರ್‍ಮರ್ಸ್‌‌ಲಿವ್ಸ್‌‌ಮ್ಯಾಟರ್ಸ್ ಎನ್ನಲಿಲ್ಲ” ಎಂದು ಆಕ್ಷೇಪ ಎತ್ತಿದ್ದಾರೆ.

“ಲಿಂಚಿಂಗ್‌ ನಡೆದಾಗ ನೀವು ಪ್ರತಿಕ್ರಿಯಿಸಲಿಲ್ಲ. ಹತ್ಯಾಕಾಂಡದ ಸಮಯದಲ್ಲಿ ನೀವು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ರೈತರನ್ನು ಕೊಂದಾಗ ಮಾತನಾಡಲಿಲ್ಲ, ಬೆಲೆ ಏರಿಕೆಯನ್ನು ಅಸಹಜವಾಗಿ ಏರಿಕೆ ಮಾಡಿದಾಗ ನೀವು ಮಾತನಾಡಲಿಲ್ಲ. ಈಗ ನಿಮಗೆ ಬ್ಲಾಕ್‌ಲಿವ್ಸ್‌ಮ್ಯಾಟರ್ಸ್ ಬೇಕೆ?” ಎಂದು ಸಂಗಮೇಶ್‌ ಎಂಬವರು ಪ್ರಶ್ನಿಸಿದ್ದಾರೆ.


 ಇದನ್ನೂ ಓದಿರಿ: ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...