HomeUncategorized‘Black Lives Matters' ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದಾರೆ. ಕ್ರೀಡಾಂಗಣದ ಹೊರಗೆ ಭಾರತದ ಆಟಗಾರರು ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ ಎಂದಾಗ ಕ್ರೀಡಾಂಗಣದ ಒಳಗಿದ್ದ ರೋಹಿತ್ ಶರ್ಮ ಹಾಗೂ ಕೆ.ಎಲ್‌.ರಾಹುಲ್‌‌ ಮಂಡಿಯೂರಿದರು. ಪಾಕ್‌ ಆಟಗಾರರು ಎದೆಯ ಮೇಲೆ ಕೈಯಿಟ್ಟು ಗೌರವ ಸೂಚಿಸಿದರು.

ಪಂದ್ಯದ ನಂತರ ಈ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, “Black Lives Matters ಚಳಿವಳಿಗೆ ಬೆಂಬಲ ಸೂಚಿಸುವ ಈ ನಿರ್ಧಾರವು ನಮ್ಮ ಮ್ಯಾನೇಜ್‌ಮೆಂಟ್ ಕಡೆಯಿಂದ ಬಂದಿತ್ತು. ಅದಕ್ಕೆ ನಾವು ಒಪ್ಪಿದ ನಂತರ ಪಾಕ್ ತಂಡ ಸಹ ಬೆಂಬಲಿಸುವುದಾಗಿ ತಿಳಿಸಿತು. ಈ ರೀತಿಯಾಗಿ ಗೌರವ ಸಲ್ಲಿಸಿದೆವು” ಎಂದಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಆಫ್ರಿಕನ್‌-ಅಮೆರಿಕನ್‌ ಪ್ರಜೆ, ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್‌ ಅವರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಡೆರೇಕ್‌ ಚೌವಿನ್‌ ಜನಾಂಗೀಯ ನಿಂದನೆ ಮಾಡಿ ಕೊಲೆ ಮಾಡಿದ್ದರು. ಮಂಡಿಯಿಂದ ಪ್ಲಾಯ್ಡ್ ಅವರ ಕತ್ತು ಹಿಸುಕಿ ಕೊಂದ ವಿಡಿಯೋ ವೈರಲ್ ಆಗಿತ್ತು. ಆಗ ಇಡೀ ವಿಶ್ವವೇ ಕಪ್ಪು ವರ್ಣಿಯರ ಪರ ನಿಂತು, ಆ ಕೊಲೆಯನ್ನು ಖಂಡಿಸಿತ್ತು. ಅಲ್ಲಿಂದ ಪಶ್ಚಾತಾಪದ ರೀತಿಯಲ್ಲಿ ಮಂಡಿಯೂರಿ ಕ್ಷಮೆ ಕೋರುವ, ಕಪ್ಪು ಜನರ ಪರ ನಿಲ್ಲುವ ಪದ್ಧತಿ ಜಾಲ್ತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡವು ಮಂಡಿಯೂರಿದ್ದು, ಪ್ರಪಂಚದ ಗಮನ ಸೆಳೆದಿದೆ. ಬಹಳಷ್ಟು ಜನ ಈ ಪ್ರಯತ್ನವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆದರೆ ಬೆಂಬಲದ ಜೊತೆಗೆ ಭಾರತದ ತಂಡದ ಈ ಕ್ರಮಕ್ಕೆ ಟೀಕೆ ಸಹ ಕೇಳಿಬಂದಿದೆ. ಬೇರೆ ದೇಶದಲ್ಲಿನ ಜನಾಂಗೀಯ ತಾರತಮ್ಯವನ್ನು ಖಂಡಿಸುವ ಭಾರತೀಯ ಕ್ರಿಕೆಟ್ ತಂಡ ತಮ್ಮದೇ ದೇಶದಲ್ಲಿ ಇಂದು ದಲಿತರ ಮೇಲೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ತಾರತಮ್ಯಕ್ಕೆ ಕುರುಡಾಗಿದೆ. ಇದು ಅವರ ಹಿಪೋಕ್ರಸಿಯ (ಆಷಾಢಭೂತಿತನ) ಭಾಗವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

“ಕಪ್ಪು ವರ್ಣಿಯರ ಮೇಲಿನ ಬಿಳಿ ವರ್ಣಿಯರ (ಜನಾಂಗೀಯ) ದಾಳಿಯನ್ನು ಖಂಡಿಸಿ, ಜಗತ್ತಿನಾದ್ಯಂತ ನಡೆಯುತ್ತಿರುವ #BlackLivesMatter ಚಳವಳಿಗೆ ನಿನ್ನೆ ಭಾರತ ತಂಡ ಮಂಡಿಯೂರಿ ಬೆಂಬಲ ಸೂಚಿಸಿದ್ದು ತುಂಬಾ ಮೆಚ್ಚುವ ನಡೆಯಾಗಿದೆ. ಇದೇ ರೀತಿ ಭಾರತದಲ್ಲಿ ಜಾತಿಯ ಕಾರಣಕ್ಕಾಗಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳನ್ನು ಖಂಡಿಸಿ ದೇಶದಾದ್ಯಂತ ನಡೆಯುವ #DalitLivesMatter ಚಳವಳಿಯನ್ನು ಬೆಂಬಲಿಸಬೇಕೆಂದು ನಮ್ಮ ಭಾರತ ತಂಡವನ್ನು ವಿನಂತಿಸಿಕೊಳ್ಳುತ್ತೇನೆ” ಎಂದು ದಲಿತ ಲೇಖಕ ಪ್ರಜ್ವಲ್ ಶಶಿ ತಗಡೂರು ಅವರು ಎಫ್‌ಬಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮಲ್ಲಿಯೇ ದಲಿತರ ಮೇಲೆ, ಮುಸ್ಲಿಮರ ಮೇಲೆ, ಕೆಳಜಾತಿಯ ಹೆಂಗಸರ ಮೇಲೆ, ಮುಗ್ಧ ದಲಿತ ಪುಟ್ಟ ಹೆಣ್ಮಕ್ಕಳ ಮೇಲೆ ಆ ಪಾಟಿ ಅತ್ಯಾಚಾರ, ಕ್ರೌರ್ಯ, ಚಿತ್ರಹಿಂಸೆ, ಅವಮಾನ, ಮಾಬ್ ಲಿಂಚಿಂಗ್ ನಡೆಯುತ್ತಲೇ ಇರುವಾಗ ಇವರು ಎಲ್ಲಿ ಹೋಗಿದ್ದರು? ಆಗ ಇವರ ಮಂಡಿಗೆ ಏನಾಗಿರುತ್ತದೆ? ನಿಮ್ಮಂತ ಡಬಲ್ ಸ್ಟಾಂಡರ್ಡ್ ಸ್ವಾರ್ಥಿಗಳ ಸಪೋರ್ಟ್ ಕಪ್ಪು ಜನರಿಗೆ ಖಂಡಿತಾ ಬೇಡ…!” ಎಂದು ಆ ಶ್ರೀ ಕ ಪೋಸ್ಟ್‌ ಮಾಡಿದ್ದಾರೆ.

ಇದು ಹಿಪೋಕ್ರಸಿಯ ಪರಮಾವಧಿ ಎಂದು ನೆಟ್ಟಿಗರು ಟೀಕಿಸಿ‌ದ್ದಾರೆ. ಕವಯತ್ರಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ, “ಇದು ಭಾರತದ ಕ್ರಿಕೆಟರ್‌ಗಳ ಹಿಪೋಕ್ರಸಿ. ಇವರು ಒಮ್ಮೆಯೂ #ದಲಿತ್‌ ಲೈವ್ಸ್‌ ಮ್ಯಾಟರ್ಸ್, #ಮುಸ್ಲಿಂಲಿವ್ಸ್‌ಮ್ಯಾಟರ್ಸ್, #ಫಾರ್‍ಮರ್ಸ್‌‌ಲಿವ್ಸ್‌‌ಮ್ಯಾಟರ್ಸ್ ಎನ್ನಲಿಲ್ಲ” ಎಂದು ಆಕ್ಷೇಪ ಎತ್ತಿದ್ದಾರೆ.

“ಲಿಂಚಿಂಗ್‌ ನಡೆದಾಗ ನೀವು ಪ್ರತಿಕ್ರಿಯಿಸಲಿಲ್ಲ. ಹತ್ಯಾಕಾಂಡದ ಸಮಯದಲ್ಲಿ ನೀವು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ರೈತರನ್ನು ಕೊಂದಾಗ ಮಾತನಾಡಲಿಲ್ಲ, ಬೆಲೆ ಏರಿಕೆಯನ್ನು ಅಸಹಜವಾಗಿ ಏರಿಕೆ ಮಾಡಿದಾಗ ನೀವು ಮಾತನಾಡಲಿಲ್ಲ. ಈಗ ನಿಮಗೆ ಬ್ಲಾಕ್‌ಲಿವ್ಸ್‌ಮ್ಯಾಟರ್ಸ್ ಬೇಕೆ?” ಎಂದು ಸಂಗಮೇಶ್‌ ಎಂಬವರು ಪ್ರಶ್ನಿಸಿದ್ದಾರೆ.


 ಇದನ್ನೂ ಓದಿರಿ: ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...