Homeಮುಖಪುಟಶಾಲಾ ಶೌಚಾಲಯದಲ್ಲಿ ಸಿಸಿಟಿವಿ ಇಟ್ಟು ಶಿಕ್ಷಕಿಯರಿಗೆ ಬ್ಲಾಕ್‌ಮೇಲ್!

ಶಾಲಾ ಶೌಚಾಲಯದಲ್ಲಿ ಸಿಸಿಟಿವಿ ಇಟ್ಟು ಶಿಕ್ಷಕಿಯರಿಗೆ ಬ್ಲಾಕ್‌ಮೇಲ್!

ಸುಮಾರು 52ಕ್ಕೂ ಹೆಚ್ಚು ಶಿಕ್ಷಕಿಯರನ್ನು ಬ್ಲಾಕ್‌ಮೇಲ್‌ ಮಾಡಿ ಸಂಬಳ ನೀಡದೆ ಹಲವು ತಿಂಗಳು ದುಡಿಸಿಕೊಳ್ಳಲಾಗಿದೆ. ಶಿಕ್ಷಕಿಯರು ಸಂಬಳ ಕೇಳಿದಾಗ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿ, ಸಂಬಳ ಕೊಡದೆ ಶಾಲಾ ಆಡಳಿತ ಮಂಡಳಿಯೇ ಬ್ಲಾಕ್‌ಮೇಲ್‌ ಮಾಡಲಾಗುತ್ತಿತ್ತು.

- Advertisement -
- Advertisement -

ಶಾಲೆಯ ಮಹಿಳಾ ಶೌಚಾಲಯದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಶಿಕ್ಷಕಿಯರ ಖಾಸಗಿ ಚಿತ್ರಗಳನ್ನು ಚಿತ್ರಿಸಿ, ಶಾಲಾ ಆಡಳಿತ ಮಂಡಳಿಯೇ ಬ್ಲಾಕ್‌ಮೇಲ್ ಮಾಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.

ಶಾಲಾ ಮಂಡಳಿ, ಶಾಲೆಯ ಸುಮಾರು 52ಕ್ಕೂ ಹೆಚ್ಚು ಶಿಕ್ಷಕಿಯರನ್ನು ಬ್ಲಾಕ್‌ಮೇಲ್‌ ಮಾಡಿ ಸಂಬಳ ನೀಡದೆ, ಹಲವು ತಿಂಗಳು ದುಡಿಸಿಕೊಂಡಿದೆ. ಶಿಕ್ಷಕಿಯರು ಸಂಬಳ ಕೇಳಿದಾಗ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿ, ಸಂಬಳ ಕೊಡದೆ ಬ್ಲಾಕ್‌ಮೇಲ್‌ ಮಾಡಲಾಗುತ್ತಿತ್ತು.

“ಆಕ್ಷೇಪಾರ್ಹ ವೀಡಿಯೊಗಳು ಮತ್ತು ಚಿತ್ರಗಳೊಂದಿಗೆ ಬೆದರಿಕೆ ಹಾಕಿದ್ದಾರೆ” ಎಂದು ಹಲವು ತಿಂಗಳುಗಳ ಬಳಿಕ ಶಿಕ್ಷಕಿಯರು ಶಾಲಾ ಕಾರ್ಯದರ್ಶಿ ಮತ್ತು ಅವರ ಮಗನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕಾರ್ಯದರ್ಶಿ ಮತ್ತು ಅವರ ಮಗನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಉದ್ದೇಶಪೂರ್ವಕ ಅವಮಾನ), 354 (ಎ) (ಲೈಂಗಿಕ ಕಿರುಕುಳ) ಮತ್ತು 354 (ಸಿ) (ವಾಯ್ಯುರಿಸಮ್) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ಖಾಸಗಿ ಚಿತ್ರಗಳನ್ನು ಚಿತ್ರೀಕರಿಸಿ ಸಂಬಂಳ ಕೊಡದೆ ಬ್ಲಾಕ್‌ಮೇಲ್‌ ಮಾಡಲಾಗುತ್ತಿದೆ. ಮಾನಕ್ಕೆ ಅಂಜಿ ಹಲವು ತಿಂಗಳು ಉಚಿತವಾಗಿ ದುಡಿದಿದ್ದು, ತಮ್ಮ ಬಾಕಿ ಇರುವ ಸಂಬಳ ತಮಗೆ ಸಿಗುವಂತೆ ಸಹಾಯ ಮಾಡಬೇಕು ಎಂದು ಶಿಕ್ಷಕಿಯರು ಪೊಲೀಸರನ್ನು ಕೇಳಿದ್ದಾರೆ.

ಶಾಲಾ ಕಾರ್ಯದರ್ಶಿ ಲೈಂಗಿಕ ಕಿರುಕುಳ ಆರೋಪವನ್ನು ನಿರಾಕರಿಸಿದ್ದಾರೆ. “ಮಹಿಳಾ ಶೌಚಾಲಯದೊಳಗೆ ಯಾವುದೇ ಸಿಸಿಟಿವಿ ಇಲ್ಲ. ಆದರೆ ಅವುಗಳನ್ನು ಪುರುಷರ ಶೌಚಾಲಯದಲ್ಲಿ ಅಳವಡಿಸಲಾಗಿದೆ. ಕೆಲವು ಶಾಲೆಗಳಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಇದನ್ನು ಮಾಡಲಾಗಿದೆ”  ಎಂದಿದ್ದಾರೆ.

ಜೊತೆಗೆ ಕಳೆದ ಕೆಲವು ತಿಂಗಳುಗಳಿಂದ ಕೊರೊನಾ ಕಾರಣದಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆ ಶಾಲೆಯು ಶಿಕ್ಷಕರಿಗೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಯದರ್ಶಿ ಒಪ್ಪಿಕೊಂಡರು.

ಸದ್ಯ ಕಾರ್ಯದರ್ಶಿ ಮತ್ತು ಅವರ ಮಗನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಪೊಲೀಸರಿಗೆ ನೆರವು ನೀಡಲು ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳ ತಂಡವನ್ನು ರೂಪಿಸಲಾಗಿದೆ ಎಂದು ಸದರ್ ಬಜಾರ್ ಪೊಲೀಸ್ ಠಾಣೆ ಎಸ್‌ಎಚ್‌ಒ ವಿಜಯ್ ಗುಪ್ತಾ ತಿಳಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿ ಮಲಗಿದ್ದ ನಿರ್ಗತಿಕ ಮಹಿಳೆಯ ಹತ್ಯೆ, ಅತ್ಯಾಚಾರ: ಹಾಸನದಲ್ಲೊಂದು ಅಮಾನುಷ ಕೃತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...