Homeಮುಖಪುಟಶಾಲಾ ಶೌಚಾಲಯದಲ್ಲಿ ಸಿಸಿಟಿವಿ ಇಟ್ಟು ಶಿಕ್ಷಕಿಯರಿಗೆ ಬ್ಲಾಕ್‌ಮೇಲ್!

ಶಾಲಾ ಶೌಚಾಲಯದಲ್ಲಿ ಸಿಸಿಟಿವಿ ಇಟ್ಟು ಶಿಕ್ಷಕಿಯರಿಗೆ ಬ್ಲಾಕ್‌ಮೇಲ್!

ಸುಮಾರು 52ಕ್ಕೂ ಹೆಚ್ಚು ಶಿಕ್ಷಕಿಯರನ್ನು ಬ್ಲಾಕ್‌ಮೇಲ್‌ ಮಾಡಿ ಸಂಬಳ ನೀಡದೆ ಹಲವು ತಿಂಗಳು ದುಡಿಸಿಕೊಳ್ಳಲಾಗಿದೆ. ಶಿಕ್ಷಕಿಯರು ಸಂಬಳ ಕೇಳಿದಾಗ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿ, ಸಂಬಳ ಕೊಡದೆ ಶಾಲಾ ಆಡಳಿತ ಮಂಡಳಿಯೇ ಬ್ಲಾಕ್‌ಮೇಲ್‌ ಮಾಡಲಾಗುತ್ತಿತ್ತು.

- Advertisement -
- Advertisement -

ಶಾಲೆಯ ಮಹಿಳಾ ಶೌಚಾಲಯದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಶಿಕ್ಷಕಿಯರ ಖಾಸಗಿ ಚಿತ್ರಗಳನ್ನು ಚಿತ್ರಿಸಿ, ಶಾಲಾ ಆಡಳಿತ ಮಂಡಳಿಯೇ ಬ್ಲಾಕ್‌ಮೇಲ್ ಮಾಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.

ಶಾಲಾ ಮಂಡಳಿ, ಶಾಲೆಯ ಸುಮಾರು 52ಕ್ಕೂ ಹೆಚ್ಚು ಶಿಕ್ಷಕಿಯರನ್ನು ಬ್ಲಾಕ್‌ಮೇಲ್‌ ಮಾಡಿ ಸಂಬಳ ನೀಡದೆ, ಹಲವು ತಿಂಗಳು ದುಡಿಸಿಕೊಂಡಿದೆ. ಶಿಕ್ಷಕಿಯರು ಸಂಬಳ ಕೇಳಿದಾಗ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿ, ಸಂಬಳ ಕೊಡದೆ ಬ್ಲಾಕ್‌ಮೇಲ್‌ ಮಾಡಲಾಗುತ್ತಿತ್ತು.

“ಆಕ್ಷೇಪಾರ್ಹ ವೀಡಿಯೊಗಳು ಮತ್ತು ಚಿತ್ರಗಳೊಂದಿಗೆ ಬೆದರಿಕೆ ಹಾಕಿದ್ದಾರೆ” ಎಂದು ಹಲವು ತಿಂಗಳುಗಳ ಬಳಿಕ ಶಿಕ್ಷಕಿಯರು ಶಾಲಾ ಕಾರ್ಯದರ್ಶಿ ಮತ್ತು ಅವರ ಮಗನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕಾರ್ಯದರ್ಶಿ ಮತ್ತು ಅವರ ಮಗನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಉದ್ದೇಶಪೂರ್ವಕ ಅವಮಾನ), 354 (ಎ) (ಲೈಂಗಿಕ ಕಿರುಕುಳ) ಮತ್ತು 354 (ಸಿ) (ವಾಯ್ಯುರಿಸಮ್) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ಖಾಸಗಿ ಚಿತ್ರಗಳನ್ನು ಚಿತ್ರೀಕರಿಸಿ ಸಂಬಂಳ ಕೊಡದೆ ಬ್ಲಾಕ್‌ಮೇಲ್‌ ಮಾಡಲಾಗುತ್ತಿದೆ. ಮಾನಕ್ಕೆ ಅಂಜಿ ಹಲವು ತಿಂಗಳು ಉಚಿತವಾಗಿ ದುಡಿದಿದ್ದು, ತಮ್ಮ ಬಾಕಿ ಇರುವ ಸಂಬಳ ತಮಗೆ ಸಿಗುವಂತೆ ಸಹಾಯ ಮಾಡಬೇಕು ಎಂದು ಶಿಕ್ಷಕಿಯರು ಪೊಲೀಸರನ್ನು ಕೇಳಿದ್ದಾರೆ.

ಶಾಲಾ ಕಾರ್ಯದರ್ಶಿ ಲೈಂಗಿಕ ಕಿರುಕುಳ ಆರೋಪವನ್ನು ನಿರಾಕರಿಸಿದ್ದಾರೆ. “ಮಹಿಳಾ ಶೌಚಾಲಯದೊಳಗೆ ಯಾವುದೇ ಸಿಸಿಟಿವಿ ಇಲ್ಲ. ಆದರೆ ಅವುಗಳನ್ನು ಪುರುಷರ ಶೌಚಾಲಯದಲ್ಲಿ ಅಳವಡಿಸಲಾಗಿದೆ. ಕೆಲವು ಶಾಲೆಗಳಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಇದನ್ನು ಮಾಡಲಾಗಿದೆ”  ಎಂದಿದ್ದಾರೆ.

ಜೊತೆಗೆ ಕಳೆದ ಕೆಲವು ತಿಂಗಳುಗಳಿಂದ ಕೊರೊನಾ ಕಾರಣದಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆ ಶಾಲೆಯು ಶಿಕ್ಷಕರಿಗೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಯದರ್ಶಿ ಒಪ್ಪಿಕೊಂಡರು.

ಸದ್ಯ ಕಾರ್ಯದರ್ಶಿ ಮತ್ತು ಅವರ ಮಗನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಪೊಲೀಸರಿಗೆ ನೆರವು ನೀಡಲು ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳ ತಂಡವನ್ನು ರೂಪಿಸಲಾಗಿದೆ ಎಂದು ಸದರ್ ಬಜಾರ್ ಪೊಲೀಸ್ ಠಾಣೆ ಎಸ್‌ಎಚ್‌ಒ ವಿಜಯ್ ಗುಪ್ತಾ ತಿಳಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿ ಮಲಗಿದ್ದ ನಿರ್ಗತಿಕ ಮಹಿಳೆಯ ಹತ್ಯೆ, ಅತ್ಯಾಚಾರ: ಹಾಸನದಲ್ಲೊಂದು ಅಮಾನುಷ ಕೃತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...