Homeಕರ್ನಾಟಕಹನಿಟ್ರ್ಯಾಪ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್: ಮುನಿರತ್ನ ವಿರುದ್ಧ ಮಾಜಿ ಕಾರ್ಪೋರೇಟರ್ ಗಂಭೀರ ಆರೋಪ

ಹನಿಟ್ರ್ಯಾಪ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್: ಮುನಿರತ್ನ ವಿರುದ್ಧ ಮಾಜಿ ಕಾರ್ಪೋರೇಟರ್ ಗಂಭೀರ ಆರೋಪ

- Advertisement -
- Advertisement -

ಹನಿಟ್ರ್ಯಾಪ್ ಹೆಸರಿನಲ್ಲಿ ಮಾಜಿ ಸಚಿವ ಎನ್. ಮುನಿರತ್ನ ಅವರು ಬ್ಲ್ಯಾಕ್ ಮೇಲ್ ಮಾಡುತ್ತಾರೆ ಎಂದು ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ.

”ಈ ಹಿಂದೆ ಮುನಿರತ್ನ ಅವರು ಅಧಿಕಾರಿಗಳ ಮೇಲೆ ಹನಿಟ್ರ್ಯಾಪ್ ಮಾಡಿದ್ದರು. ಮುಖಗವಸು ಹಾಕಿಕೊಂಡು ಮುನಿರತ್ನ ವಿರುದ್ಧ ಆರೋಪ ಮಾಡಿದ ಸಂತ್ರಸ್ಥೆ ಯಾರೆಂದು ಗೊತ್ತಿಲ್ಲ. ಒಂದೊಮ್ಮೆ ಗೊತ್ತಾದರೆ ಅವರ ಪರ ನಿಲ್ಲುತ್ತೇನೆ” ಎಂದು ವೇಲು ನಾಯ್ಕರ್ ಹೇಳಿದ್ದಾರೆ.

”ಈ ಹಿಂದೆ ಮುನಿರತ್ನ ಅವರು ಎಫ್​​ಎಸ್​ಎಲ್​ ಅಧಿಕಾರಿ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದರು. ಸದ್ಯ ಮುಖಗವಸು ಹಾಕಿಕೊಂಡು ಮುನಿರತ್ನ ವಿರುದ್ಧ ಆರೋಪ ಮಾಡಿದ ಸಂತ್ರಸ್ಥೆ ಯಾರೆಂದು ಗೊತ್ತಿಲ್ಲ. ಅವರ ಸ್ವರ ಕೇಳಿದ ರೀತಿ ಅನಿಸುತ್ತಿದೆ. ಅವರು ಮುಖಗವಸು ಇಲ್ಲದೆ ಮುಂದೆ ಬಂದರೆ ಯಾರಂತ ಗೊತ್ತಾಗಲಿದೆ. ಅವರು ನನ್ನ ಬಳಿ ಬಂದು ಸಹಾಯ ಕೇಳಿದರೆ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದರು.

”ಯಾರೇ ಸಂತ್ರಸ್ಥರು ಬಂದು ನನ್ನ ಬೆಂಬಲ ಕೇಳಿದರು ನೆರವಿಗೆ ದಾವಿಸುತ್ತೇನೆ. ಮುನಿರತ್ನ ಅವರು, ತಾವು ಅಕ್ರಮ ಎಸಗಿಲ್ಲ ಎನ್ನುತ್ತಾರೆ, ಡಿಕೆ ಶಿವಕುಮಾರ್, ಡಿಕೆ ಸುರೇಶ್ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ.. ಆರ್ ಆರ್ ನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಹೇಳುತ್ತಾರೆ. ಆದರೆ 9 ವಾರ್ಡ್​ಗೆ ಅನುದಾನ ತಡೆ ಹಿಡಿದಿರುವುದು ಸ್ವತಃ ಮುನಿರತ್ನ ಅವರೇ.. ಹಾಗಾಗಿ ಈ ಕುರಿತು ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.

”ಮಾಜಿ ಸಚಿವರಾಗಿರುವ ಮುನಿರತ್ನ ಸಣ್ಣ ಮರಿ. ಬಿಜೆಪಿ ನಾಯಕರಾಗಿ ನೀವು ಏನು ಮಾಡುತ್ತಿದ್ದೀರಿ? ಕುಮಾರಸ್ವಾಮಿಯವರನ್ನು ವೆಲ್ ಕಮ್‌ ಮಾಡಲು ನೀನು ಯಾಕೆ ಹೋದೆ? ಮುನಿರತ್ನ ಎಲ್ಲಿ ಕಾಲಿಟ್ಟಿದ್ದಾರೋ ಅಲ್ಲಿ ಸರ್ವ ನಾಶವಾಗಿದೆ. ಬಿಜೆಪಿ ಸೇರಿದರು, ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿತು.. ಪಕ್ಷ ಸೋತು ಸುಣ್ಣವಾಯಿತು. ನಿಖಿಲ್ ಕುಮಾರಸ್ವಾಮಿ ರಾಜಕೀಯವಾಗಿ ಬೆಳೆಯಬೇಕು ಆದರೆ ಮುನಿರತ್ನ ಅವರದ್ದು ಐರನ್ ಲೆಗ್, ಅವರ ಜೊತೆ ಇರಬೇಡಿ” ಎಂದು ವೇಲು ನಾಯ್ಕರ್ ಮನವಿ ಮಾಡಿದರು.

ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...