Homeಮುಖಪುಟರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

- Advertisement -
- Advertisement -

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್ ಗುರುವಾರ (ಸೆ.3) ನೀಡಿರುವ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆಯ ಕಲಂ 31ರಡಿ ಬಿಎಲ್‌ಎಗಳು ಮತದಾರರ ಭಾವಚಿತ್ರದಂತಹ ಪರಿಶೀಲಿಸಬಹುದಾದ ಮಾಹಿತಿಗೆ ಮಾತ್ರ ಹೊಣೆಗಾರರಾಗಿರುತ್ತಾರೆ ಎಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಹೇಳಿದ್ದಾರೆ.

ಕಾಯ್ದೆಯ ಕಲಂ 31ರ ಪ್ರಕಾರ, ಚುನಾವಣಾ ಪಟ್ಟಿಗಳ ಸಿದ್ಧತೆ, ಪರಿಷ್ಕರಣೆ ಅಥವಾ ತಿದ್ದುಪಡಿಗೆ ಸಂಬಂಧಿಸಿದಂತೆ ತಪ್ಪು ಘೋಷಣೆಗಳನ್ನು ನೀಡುವುದು ಅಪರಾಧವಾಗಿದ್ದು, ಒಂದು ವರ್ಷದವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.

ಹಾಗಾಗಿ, ಗಣತಿ ನಮೂನೆಗಳ ಎಲ್ಲಾ ಮಾಹಿತಿಗಳಿಗೂ ಬಿಎಲ್‌ಎಗಳನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಏಕೆಂದರೆ ಆ ಎಲ್ಲಾ ಮಾಹಿತಿಯನ್ನು ಪರಿಶೀಲಿಸುವ ಸ್ಥಿತಿಯಲ್ಲಿ ಬಿಎಲ್‌ಎ ಇರುವುದಿಲ್ಲ. ಅಂತಹ ಮಾಹಿತಿಯು ಕೇವಲ ಸಂಬಂಧಪಟ್ಟ ಮತದಾರನಿಗೆ ಮಾತ್ರ ಪ್ರತ್ಯೇಕವಾಗಿ ತಿಳಿದಿರುತ್ತದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ಚುನಾವಣಾ ಆಯೋಗ (ಇಸಿಐ) ತನ್ನ ಪ್ರತಿ ಅಫಿಡವಿಟ್‌ನಲ್ಲಿ, ಮತದಾರರ ಪಟ್ಟಿಗೆ ಹೆಸರು ಸೇರಿಸುವ ಅಥವಾ ಕೈಬಿಡುವ ಯಾವುದೇ ಶಾಸನಬದ್ಧ ಪರಿಶೀಲನೆ ಅಥವಾ ಇತರ ಶಾಸನಬದ್ಧ ಪ್ರಕ್ರಿಯೆಗಳಲ್ಲಿ ಬಿಎಲ್‌ಎಗಳು ಭಾಗವಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವುದನ್ನು ನ್ಯಾಯಾಲಯವು ಗಮನಿಸಿದೆ. ಮಾಹಿತಿಯನ್ನು ಪರಿಶೀಲಿಸುವುದು ಕೇವಲ ಬಿಎಲ್‌ಒ ಅವರ ಕೆಲಸವಾಗಿದೆ ಮತ್ತು ಅವರೇ ಮನೆ ಮನೆಗೆ ಭೇಟಿ ನೀಡಿ ಈ ಪರಿಶೀಲನೆ ನಡೆಸುತ್ತಾರೆ ಎಂದು ನ್ಯಾಯಾಲಯ ತಿಳಿಸಿದೆ.

ಪರಿಶೀಲನೆ ಮತ್ತು ದೃಢೀಕರಣದ ಜವಾಬ್ದಾರಿಯನ್ನು ಬಿಎಲ್‌ಒಗಳಿಗೆ ವಹಿಸಿದ ನಂತರ, ಗಣತಿ ನಮೂನೆ ವಿವರಗಳ ನಿಖರತೆಯನ್ನು ಪ್ರಮಾಣೀಕರಿಸುವ ವೈಯಕ್ತಿಕ ಮುಚ್ಚಳಿಕೆಯನ್ನು ನೀಡುವಂತೆ ಬಿಎಲ್‌ಎಗಳಿಗೆ ಒತ್ತಾಯಿಸಲು ಯಾವುದೇ ಸಮರ್ಥನೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದ್ದರಿಂದ, ಈ ನಮೂನೆಯಲ್ಲಿರುವ ಮಾಹಿತಿಯ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಬಿಎಲ್‌ಎ ಮುಚ್ಚಳಿಕೆಯನ್ನು ನೀಡಬೇಕೆಂಬ ಅಗತ್ಯತೆಯು ಅನಿಯಂತ್ರಿತ ಮತ್ತು ಅಸಮಂಜಸವಾಗಿದೆ. ಬಿಎಲ್‌ಎ ಹೆಚ್ಚೆಂದರೆ, ಈ ನಮೂನೆಯನ್ನು ಸಲ್ಲಿಸುವ ವ್ಯಕ್ತಿಯ ಗುರುತನ್ನು ಮತ್ತು ನಮೂನೆಯಲ್ಲಿ ಅಂಟಿಸಲಾದ ಭಾವಚಿತ್ರವು ಅದೇ ವ್ಯಕ್ತಿಯದ್ದೇ ಎಂಬುದನ್ನು ಮಾತ್ರ ಪರಿಶೀಲಿಸಿ ಮುಚ್ಚಳಿಕೆ ನೀಡಬಹುದು ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಭಾರತೀಯ ಚುನಾವಣಾ ಆಯೋಗವು (ಇಸಿಐ) ಹೊರಡಿಸಿದ್ದ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ನಿರ್ಧಾರದ ಸಂದರ್ಭದಲ್ಲಿ ನ್ಯಾಯಾಲಯ ಈ ತೀರ್ಪನ್ನು ನೀಡಿದೆ. ಆ ಮಾರ್ಗಸೂಚಿಗಳಲ್ಲಿ, ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಬಿಎಲ್‌ಎಗಳು ತಾವು ಗಣತಿ ನಮೂನೆಯಲ್ಲಿರುವ ಎಲ್ಲಾ ವಿವರಗಳನ್ನು ವೈಯಕ್ತಿಕವಾಗಿ ಪರಿಶೀಲಿಸಿದ್ದೇವೆ ಎಂದು ಪ್ರಮಾಣೀಕರಿಸುವ ವೈಯಕ್ತಿಕ ಮುಚ್ಚಳಿಕೆಯನ್ನು ನೀಡುವುದನ್ನು ಕಡ್ಡಾಯಗೊಳಿಸಲಾಗಿತ್ತು.

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಡಿಪಿಸಿಸಿ) ಅಧ್ಯಕ್ಷ ದೇವೇಂದರ್ ಯಾದವ್ ಮತ್ತು ಇನ್ನೊಬ್ಬರು ವ್ಯಕ್ತಿ ಈ ಅರ್ಜಿ ಸಲ್ಲಿಸಿದ್ದರು.

ಜನತಾ ಪ್ರಾತಿನಿಧ್ಯ ಕಾಯ್ದೆ ಅಥವಾ ಮತದಾರರ ನೊಂದಣಿ ನಿಯಮಗಳು—ಇವೆರಡರಲ್ಲೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಇಂತಹ ಮುಚ್ಚಳಿಕೆಯನ್ನು ಕೇಳಲು ಚುನಾವಣಾ ಆಯೋಗಕ್ಕೆ ಅಧಿಕಾರ ನೀಡುವ ಯಾವುದೇ ನಿಬಂಧನೆಗಳಿಲ್ಲ ಎಂಬುದು ಯಾದವ್ ಅವರ ವಾದವಾಗಿತ್ತು.

ಜನತಾ ಪ್ರಾತಿನಿಧ್ಯ ಕಾಯ್ದೆ 1950ರ ಸೆಕ್ಷನ್ 23ರ ಅಡಿಯಲ್ಲಿ ಸೂಚಿಸಲಾದ ಶಾಸನಬದ್ಧ ಪರಿಶೀಲನಾ ವ್ಯವಸ್ಥೆಗೆ ಬಿಎಲ್‌ಎಗಳಿಂದ ವೈಯಕ್ತಿಕ ಮುಚ್ಚಳಿಕೆಯನ್ನು ಕೇಳುವುದು ನೇರ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು. ಈ ಕಾಯ್ದೆಯ ಪ್ರಕಾರ, ಮತದಾರರ ಪಟ್ಟಿಗೆ ಯಾವುದೇ ಹೆಸರನ್ನು ಸೇರಿಸುವ ಮೊದಲು ಚುನಾವಣಾ ನೋಂದಣಿ ಅಧಿಕಾರಿಯು ನಿಗದಿತ ನಿಯಮಗಳ ಪ್ರಕಾರ ಸತ್ಯಾಸತ್ಯತೆಗಳ ಸೂಕ್ತ ಪರಿಶೀಲನೆ ನಡೆಸುವುದನ್ನು ಕಡ್ಡಾಯಗೊಳಿಸಲಾಗಿದೆ.

ನಿಯಮಗಳ ಪ್ರಕಾರ ನಿಗದಿತ ಪರಿಶೀಲನಾ ವಿಧಾನವನ್ನು ಶಾಸನಬದ್ಧ ಅಧಿಕಾರಿಗಳು ನಿರ್ವಹಿಸಬೇಕೇ ಹೊರತು, ಖಾಸಗಿ ವ್ಯಕ್ತಿಗಳು ಅಥವಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು. ಬಿಎಲ್‌ಎಗಳ ಮೇಲೆ ವೈಯಕ್ತಿಕ ಪರಿಶೀಲನೆಯ ಮುಚ್ಚಳಿಕೆಯನ್ನು ಹೇರುವುದು ಶಾಸನಬದ್ಧ ಕಾರ್ಯವನ್ನು ಖಾಸಗಿ ವ್ಯಕ್ತಿಗಳಿಗೆ ಕಾನೂನುಬಾಹಿರವಾಗಿ ನಿಯೋಜಿಸಿದಂತಾಗುತ್ತದೆ ಎಂದು ಹೇಳಲಾಗಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಜಾರಿಗೊಳಿಸುವ ಮುನ್ನ, ಅರ್ಜಿದಾರರ ಬಿಎಲ್‌ಎಗಳು ಈ ಪ್ರಕ್ರಿಯೆಯಲ್ಲಿ ಪರಿಣಾಮಕಾರಿಯಾಗಿ ಸಹಾಯ ಮಾಡಲು ಅನುಕೂಲವಾಗುವಂತೆ, 2002ರ ಮತದಾರರ ಪಟ್ಟಿಯ ಮುದ್ರಿತ ಮತ್ತು ಸಾಫ್ಟ್‌ ಪ್ರತಿಗಳನ್ನು ಹಾಗೂ ‘ಫ್ರೋಜನ್ ಫೋಟೋ ಮತದಾರರ ಪಟ್ಟಿ’ಯನ್ನು ತಮಗೆ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಮತ್ತು ಎಸ್‌ಐಆರ್ ಮಾರ್ಗಸೂಚಿಗಳನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

Courtesy : livelaw.in








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...