Homeಮುಖಪುಟಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

ಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಈ ವೇಳೆ ವಿಶ್ವ ಹಿಂದೂ ಪರಿಷತ್ ನಾಯಕನ ಮೇಲೆ ಬಿಜೆಪಿ ಸದಸ್ಯನೊಬ್ಬ ಗುಂಡು ಹಾರಿಸಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆರೋಪಿ ರಜತ್ ಶರ್ಮಾ ಭಾರತೀಯ ಜನತಾ ಪಕ್ಷದ ಸದಸ್ಯ ಎಂದು ವರದಿಯಾಗಿದೆ. ಫೆಬ್ರವರಿ 8ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶರ್ಮಾ ಅವರು ಭಾಗವಹಿಸಿದ್ದರು ಈ ವೇಳೆ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು.

ಶರ್ಮಾ ಅವರು RSS ನಾಯಕರ ವಿರುದ್ಧ ಮಾತನಾಡಿದ್ದಾರೆ. ಹಾಗಾಗಿ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ವಿಎಚ್‌ಪಿ ಮುಖಂಡ ಸಂತೋಷ್ ಪಂಡಿತ್ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಶನಿವಾರ ಸಂಜೆ ಪಂಡಿತ್ ಮತ್ತು ಶರ್ಮಾ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ವಿಎಚ್‌ಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.

ಇದನ್ನೂ ಓದಿ: ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

”ಗುಂಡೇಟು ತಿಂದಿರುವ ವಿಎಚ್‌ಪಿ ಮುಖಂಡ ಸಂತೋಷ್ ಪಂಡಿತ್ ಅವರು, ತಮ್ಮ ಮೇಲೆ ಗುಂಡು ಹಾರಿಸಿದ್ದು ರಜತ್ ಶರ್ಮಾ ಎಂದು ಹೇಳಿಕೆಯನ್ನು ನೀಡಿದ್ದಾರೆ. ಶರ್ಮಾ ಮತ್ತು ಪಂಡಿತ್ ಇಬ್ಬರೂ ಒಬ್ಬರಿಗೊಬ್ಬರು ಪರಿಚಿತರಾಗಿದ್ದು, ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಆ ಬಳಿಕ ಈ ಹಲ್ಲೆ ನಡೆದಿದೆ. ಶರ್ಮಾ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ” ಎಂದು ಹಿರಿಯ ಮೊರಾದಾಬಾದ್ ಪೊಲೀಸ್ ಅಧೀಕ್ಷಕ ಹೇಮರಾಜ್ ಮೀನಾ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಫೆಬ್ರವರಿ 5 ರಂದು ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಅವರು, ”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಹಾಗಾಗಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸಂಘಟನೆಯು ಭಾಗವತ್ ವಿರುದ್ಧ ಪ್ರತಿಭಟನೆ ನಡೆಸಿದೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

”ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಈ ಹೇಳಿಕೆಗಳು ಟೀಕೆಗೆ ಗುರಿಯಾಗುತ್ತಿದ್ದಂತೆ, ಆರ್‌ಎಸ್‌ಎಸ್‌ನ ಪ್ರಚಾರ ಮುಖ್ಯಸ್ಥ ಸುನಿಲ್ ಅಂಬೇಕರ್ ಫೆಬ್ರವರಿ 6 ರಂದು ಭಾಗವತ್ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಪಂಡಿತರು ಅವರು ವಿದ್ವಾನ್ ಅಥವಾ ಬುದ್ಧಿಜೀವಿಗಳನ್ನು ಅರ್ಥೈಸಿದ್ದಾರೆ ಎಂದು ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿತ್ತುಬ ಆದರೆ,

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸಂಘಟನೆಯು ಮೋಹನ್ ಭಾಗವತ್ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...