Homeಮುಖಪುಟಸತತ ಹೋರಾಟದ ನಂತರವೂ ದಕ್ಕದ ಲ್ಯಾಪ್‌ಟಾಪ್‌: ಅನಿರ್ದಿಷ್ಟ ಹೋರಾಟಕ್ಕೆ ಮುಂದಾದ ಅಂಧ ವಿದ್ಯಾರ್ಥಿಗಳು

ಸತತ ಹೋರಾಟದ ನಂತರವೂ ದಕ್ಕದ ಲ್ಯಾಪ್‌ಟಾಪ್‌: ಅನಿರ್ದಿಷ್ಟ ಹೋರಾಟಕ್ಕೆ ಮುಂದಾದ ಅಂಧ ವಿದ್ಯಾರ್ಥಿಗಳು

- Advertisement -
- Advertisement -

482 ಅಂಧ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್‌ಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ಪದೇ ಪದೇ ವಿಫಲವಾಗುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಅಂಧರ ಒಕ್ಕೂಟದ ಯುವ ವಿಭಾಗವು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

2015 ರಿಂದ 2017ರವರೆಗೆ ಅಂಧ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್‌ ವಿತರಿಸಲಾಗಿದೆ. ಆದರೆ ಆನಂತರ ನಿಂತುಹೋಗಿದೆ ಎಂದು ಯುವ ವಿಭಾಗವು ಆರೋಪಿಸಿದ್ದು ಮಾರ್ಚ್‌ 04ರಿಂದ ಬೆಂಗಳೂರಿನ ಮೌರ್ಯ ಸರ್ಕಲ್‌‌ನಲ್ಲಿನ ಗಾಂಧಿ ಪ್ರತಿಮೆಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.

ಈ ಮೊಲದು ಫೆಬ್ರವರಿ 11 ರಂದು ನಾವು ವಿಶ್ವೇಶ್ವರಯ್ಯ ಗೋಪುರದ ಎದುರು ಪ್ರತಿಭಟನೆ ನಡೆಸಿದೆವು. ಆಗ ಪೊಲೀಸರು ನಮ್ಮನ್ನ ವಶಕ್ಕೆ ಪಡೆದರು. ಆ ಸಂದರ್ಭದಲ್ಲಿ ’ಅಂಗವೈಕಲ್ಯ ಮತ್ತು ಸಶಕ್ತ ನಾಗರಿಕ ಸಬಲೀಕರಣ ನಿರ್ದೇಶನಾಲ”ವು ಫೆಬ್ರವರಿ 29ರೊಳಗೆ ಲ್ಯಾಪ್‌ಟಾಪ್‌ಗಳನ್ನು ಒದಗಿಸುವ ಭರವಸೆ ನೀಡಿದ್ದರು. ಹಾಗಾಗಿ ನಮ್ಮ ಪ್ರತಿಭಟನೆಯನ್ನು ಕೈಬಿಟ್ಟಿದ್ದೆವು. ಆದರೆ ಒಂದು ತಿಂಗಳಾಗುತ್ತಾ ಬಂದಿದ್ದರೂ ಅವರು ಕೊಟ್ಟ ಮಾತಿಗೆ ತಪ್ಪಿಗೆ ತಪ್ಪಿದ್ದಾರೆ ಎಂದು ಒಕ್ಕೂಟದ ವೀರೇಶ್‌ ದೂರಿದ್ದಾರೆ.

ಫೆ.11 ರಂದು ಪ್ರತಿಭಟನೆ ನಡೆಸಿದ್ದು.

ಅಂಧರಾದ ಕಾರಣಕ್ಕಾಗಿ ಪರೀಕ್ಷೆಗಳಿಗೆ ತಯಾರಿ ನಡೆಸಲು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಮ್ಮದೇ ಲಿಪಿಯನ್ನು ಒಳಗೊಂಡಿರುವ ಲ್ಯಾಪ್‌ಟಾಪ್‌ಗಳು ಅಗತ್ಯವಾಗಿವೆ. ಆದರೆ ಸರ್ಕಾರ ಈ ವಿಚಾರದಲ್ಲಿ ಮೀನಾಮೇಷ ಎಣಿಸುತ್ತಿರುವುದಿರಂದ ತೀವ್ರ ತೊಂದರೆಯಲ್ಲಿದ್ದೇವೆ ಎಂದು ಅಂಧ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಪ್ರತಿ ಬಾರಿ ನಾವು ಪ್ರತಿಭಟನೆ ಮಾಡಿದಾಗಲೂ ಸರ್ಕಾರ ಕೇವಲ ಭರವಸೆ ಕೊಟ್ಟು ಕೈತೊಳೆದುಕೊಳ್ಳುತ್ತಿದೆ. 2018-19ರ ಹಣಕಾಸು ವರ್ಷದಲ್ಲಿ ಹಿಂದಿನ ನಿರ್ದೇಶಕ ಜೈ ವೈಭವ್ ಸ್ವಾಮಿ ಆ ವರ್ಷದ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿತರಣೆಗಾಗಿ 484 ಲ್ಯಾಪ್‌ಟಾಪ್‌ಗಳನ್ನು ಖರೀದಿಸಲು ಕೆಲವು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದರು. ಆದರೆ ಆರಂಭದಲ್ಲಿ ಆಡಳಿತಾತ್ಮಕ ನಿರ್ಬಂಧಗಳು ಮತ್ತು ಕಾರ್ಯವಿಧಾನದ ತೊಡಕುಗಳ ಕಾರಣದಿಂದಾಗಿ ಖರೀದಿಗೆ ಟೆಂಡರ್ ಸಿಗಲಿಲ್ಲ. ನಂತರ 2019ರ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಿದ ಕಾರಣ ಖರೀದಿಯ ಕಾರ್ಯವಿಧಾನವನ್ನು ನಿಲ್ಲಿಸಲಾಯಿತು.

ಸಾರ್ವತ್ರಿಕ ಚುನಾವಣೆ ಮುಗಿದ ಕೂಡಲೇ ಮುಂಬರುವ ಹಣಕಾಸು ವರ್ಷದ ಆರಂಭದಲ್ಲಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಭರವಸೆ ನೀಡಲಾಯಿತು. ಆದರೆ ಇದುವರೆಗೂ ಜಾರಿಯಾಗಿಲ್ಲ ಹಾಗಾಗಿ ಅನಿರ್ಧಿಷ್ಟಾವದಿ ಹೋರಾಟಕ್ಕಿಳಿಯುವುದು ಅನಿವಾರ್ಯವಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...