Homeಮುಖಪುಟಸತತ ಹೋರಾಟದ ನಂತರವೂ ದಕ್ಕದ ಲ್ಯಾಪ್‌ಟಾಪ್‌: ಅನಿರ್ದಿಷ್ಟ ಹೋರಾಟಕ್ಕೆ ಮುಂದಾದ ಅಂಧ ವಿದ್ಯಾರ್ಥಿಗಳು

ಸತತ ಹೋರಾಟದ ನಂತರವೂ ದಕ್ಕದ ಲ್ಯಾಪ್‌ಟಾಪ್‌: ಅನಿರ್ದಿಷ್ಟ ಹೋರಾಟಕ್ಕೆ ಮುಂದಾದ ಅಂಧ ವಿದ್ಯಾರ್ಥಿಗಳು

- Advertisement -
- Advertisement -

482 ಅಂಧ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್‌ಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ಪದೇ ಪದೇ ವಿಫಲವಾಗುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಅಂಧರ ಒಕ್ಕೂಟದ ಯುವ ವಿಭಾಗವು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

2015 ರಿಂದ 2017ರವರೆಗೆ ಅಂಧ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್‌ ವಿತರಿಸಲಾಗಿದೆ. ಆದರೆ ಆನಂತರ ನಿಂತುಹೋಗಿದೆ ಎಂದು ಯುವ ವಿಭಾಗವು ಆರೋಪಿಸಿದ್ದು ಮಾರ್ಚ್‌ 04ರಿಂದ ಬೆಂಗಳೂರಿನ ಮೌರ್ಯ ಸರ್ಕಲ್‌‌ನಲ್ಲಿನ ಗಾಂಧಿ ಪ್ರತಿಮೆಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.

ಈ ಮೊಲದು ಫೆಬ್ರವರಿ 11 ರಂದು ನಾವು ವಿಶ್ವೇಶ್ವರಯ್ಯ ಗೋಪುರದ ಎದುರು ಪ್ರತಿಭಟನೆ ನಡೆಸಿದೆವು. ಆಗ ಪೊಲೀಸರು ನಮ್ಮನ್ನ ವಶಕ್ಕೆ ಪಡೆದರು. ಆ ಸಂದರ್ಭದಲ್ಲಿ ’ಅಂಗವೈಕಲ್ಯ ಮತ್ತು ಸಶಕ್ತ ನಾಗರಿಕ ಸಬಲೀಕರಣ ನಿರ್ದೇಶನಾಲ”ವು ಫೆಬ್ರವರಿ 29ರೊಳಗೆ ಲ್ಯಾಪ್‌ಟಾಪ್‌ಗಳನ್ನು ಒದಗಿಸುವ ಭರವಸೆ ನೀಡಿದ್ದರು. ಹಾಗಾಗಿ ನಮ್ಮ ಪ್ರತಿಭಟನೆಯನ್ನು ಕೈಬಿಟ್ಟಿದ್ದೆವು. ಆದರೆ ಒಂದು ತಿಂಗಳಾಗುತ್ತಾ ಬಂದಿದ್ದರೂ ಅವರು ಕೊಟ್ಟ ಮಾತಿಗೆ ತಪ್ಪಿಗೆ ತಪ್ಪಿದ್ದಾರೆ ಎಂದು ಒಕ್ಕೂಟದ ವೀರೇಶ್‌ ದೂರಿದ್ದಾರೆ.

ಫೆ.11 ರಂದು ಪ್ರತಿಭಟನೆ ನಡೆಸಿದ್ದು.

ಅಂಧರಾದ ಕಾರಣಕ್ಕಾಗಿ ಪರೀಕ್ಷೆಗಳಿಗೆ ತಯಾರಿ ನಡೆಸಲು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಮ್ಮದೇ ಲಿಪಿಯನ್ನು ಒಳಗೊಂಡಿರುವ ಲ್ಯಾಪ್‌ಟಾಪ್‌ಗಳು ಅಗತ್ಯವಾಗಿವೆ. ಆದರೆ ಸರ್ಕಾರ ಈ ವಿಚಾರದಲ್ಲಿ ಮೀನಾಮೇಷ ಎಣಿಸುತ್ತಿರುವುದಿರಂದ ತೀವ್ರ ತೊಂದರೆಯಲ್ಲಿದ್ದೇವೆ ಎಂದು ಅಂಧ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಪ್ರತಿ ಬಾರಿ ನಾವು ಪ್ರತಿಭಟನೆ ಮಾಡಿದಾಗಲೂ ಸರ್ಕಾರ ಕೇವಲ ಭರವಸೆ ಕೊಟ್ಟು ಕೈತೊಳೆದುಕೊಳ್ಳುತ್ತಿದೆ. 2018-19ರ ಹಣಕಾಸು ವರ್ಷದಲ್ಲಿ ಹಿಂದಿನ ನಿರ್ದೇಶಕ ಜೈ ವೈಭವ್ ಸ್ವಾಮಿ ಆ ವರ್ಷದ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿತರಣೆಗಾಗಿ 484 ಲ್ಯಾಪ್‌ಟಾಪ್‌ಗಳನ್ನು ಖರೀದಿಸಲು ಕೆಲವು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದರು. ಆದರೆ ಆರಂಭದಲ್ಲಿ ಆಡಳಿತಾತ್ಮಕ ನಿರ್ಬಂಧಗಳು ಮತ್ತು ಕಾರ್ಯವಿಧಾನದ ತೊಡಕುಗಳ ಕಾರಣದಿಂದಾಗಿ ಖರೀದಿಗೆ ಟೆಂಡರ್ ಸಿಗಲಿಲ್ಲ. ನಂತರ 2019ರ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಿದ ಕಾರಣ ಖರೀದಿಯ ಕಾರ್ಯವಿಧಾನವನ್ನು ನಿಲ್ಲಿಸಲಾಯಿತು.

ಸಾರ್ವತ್ರಿಕ ಚುನಾವಣೆ ಮುಗಿದ ಕೂಡಲೇ ಮುಂಬರುವ ಹಣಕಾಸು ವರ್ಷದ ಆರಂಭದಲ್ಲಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಭರವಸೆ ನೀಡಲಾಯಿತು. ಆದರೆ ಇದುವರೆಗೂ ಜಾರಿಯಾಗಿಲ್ಲ ಹಾಗಾಗಿ ಅನಿರ್ಧಿಷ್ಟಾವದಿ ಹೋರಾಟಕ್ಕಿಳಿಯುವುದು ಅನಿವಾರ್ಯವಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...