Homeಕರ್ನಾಟಕಬೆಂಗಳೂರು: IIScನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಪ್ರವೇಶಕ್ಕೆ ಅಡ್ಡಿಪಡಿಸಿದ ಭದ್ರತಾ ಸಿಬ್ಬಂದಿ

ಬೆಂಗಳೂರು: IIScನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಪ್ರವೇಶಕ್ಕೆ ಅಡ್ಡಿಪಡಿಸಿದ ಭದ್ರತಾ ಸಿಬ್ಬಂದಿ

- Advertisement -
- Advertisement -

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್‌ಸಿ) ನಾಗರಿಕ ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಪ್ರವೇಶಕ್ಕೆ ಭದ್ರತಾ ಸಿಬ್ಬಂದಿ ಅಡ್ಡಿಪಡಿಸಿದ ಘಟನೆ ನಡೆದಿದೆ.

“ಕೋಮು ಸೌಹಾರ್ದತೆ ಮತ್ತು ನ್ಯಾಯ” ಎಂಬ ಶೀರ್ಷಿಕೆಯ ಕಾರ್ಯಕ್ರಮ ನಿಗದಿತ ಸಮಯ ಸಂಜೆ 5 ಗಂಟೆಗೆ ಪ್ರಾರಂಭವಾಗಬೇಕಿತ್ತು. ಇದಕ್ಕಾಗಿ ತೀಸ್ತಾ ಅವರು ಕ್ಯಾಂಪಸ್ ಗೆ ಆಗಮಿಸಿದ್ದು, ಅವರಿಗೆ  ಪ್ರವೇಶಾತಿಗೆ ಭದ್ರತಾ ಸಿಬ್ಬಂದಿಗಳು ನಿರಾಕರಿಸಿದ್ದರು ಎನ್ನಲಾಗಿದೆ.

ಮೊದಲು ಇನ್‌ಸ್ಟಿಟ್ಯೂಟ್‌ನ ಗೇಟ್‌ ನಲ್ಲಿದ್ದ ಭದ್ರತಾ ಸಿಬ್ಬಂದಿ ತೀಸ್ತಾ ಸೆಟಲ್ವಾಡ್‌ಗೆ ಪ್ರವೇಶವನ್ನು ನಿರಾಕರಿಸಿದ್ದಾರೆ. ಬಳಿಕ ಅಧ್ಯಾಪಕರು ಮಧ್ಯಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ. ಅನುಮತಿಗೆ ನಿರಾಕರಣ ಬಳಿಕ ಅವರಿಗೆ ಆರಂಭದಲ್ಲಿ ನಿಯೋಜಿಸಲಾಗಿದ್ದ ಸಭಾಂಗಣದ ಬದಲಿಗೆ ಕ್ಯಾಂಪಸ್ ಕ್ಯಾಂಟೀನ್‌ನಲ್ಲಿ ಭಾಷಣಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಕಾರ್ಯಕ್ರಮದಲ್ಲಿ  ಸುಮಾರು 40 ವಿದ್ಯಾರ್ಥಿಗಳು ಮತ್ತು ನಾಲ್ವರು ಅಧ್ಯಾಪಕರು ಭಾಗವಹಿಸಿದ್ದರು, ಸುಮಾರು 5.45pm ಗೆ ಪ್ರಾರಂಭವಾಯಿತು ಮತ್ತು ಸುಮಾರು 8pmವರೆಗೆ ನಡೆದಿದೆ.

ಹೆಚ್ಚುತ್ತಿರುವ ಗಲಭೆ, ಸಾಮರಸ್ಯದ ಸವಾಲುಗಳು, ದ್ವೇಷವನ್ನು ಹರಡಲು ಸಾಮಾಜಿಕ ಮಾಧ್ಯಮಗಳ ಬಳಕೆ ಮುಂತಾದ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಧ್ಯಾಪಕರೊಬ್ಬರು ತಿಳಿಸಿರುವುದಾಗ ಟೆಲಿಗ್ರಾಫ್‌ಗೆ  ವರದಿ ಮಾಡಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಾರ್ಥನಿಲ್ ರಾಯ್ ಎಂಬವರು, ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಕ್ತ ಅಭಿವ್ಯಕ್ತಿಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ನಮ್ಮ ಸಂವಿಧಾನವು ನಮಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನೀಡುತ್ತದೆ. ಶೈಕ್ಷಣಿಕ ಸಂಸ್ಥೆಗಳು ಚರ್ಚೆಗಳನ್ನು ಹತ್ತಿಕ್ಕಲು ಪ್ರಯತ್ನಿಸಬಾರದು ಎಂದು ಹೇಳಿದ್ದಾರೆ.

“ಬ್ರೇಕ್ ದಿ ಸೈಲೆನ್ಸ್” ಎಂಬ ಹೆಸರಿನ ವಿದ್ಯಾರ್ಥಿಗಳ ಗುಂಪು ಈ ಹಿಂದೆ IISc ಆಡಳಿತ ವಿಭಾಗಕ್ಕೆ ತೆರಳಿ ಕಾರ್ಯಕ್ರಮಕ್ಕೆ  ಅನುಮತಿ ನೀಡುವಂತೆ ಕೇಳಿದ್ದರು. ಆದರೆ ಅವರ ಮನವಿಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಕಾರ್ಯಕ್ರಮದ ದಿನದಂದು ವಿದ್ಯಾರ್ಥಿಗಳು  ಕೋರಿದ ಸ್ಥಳದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನು ಓದಿ: ಅಸ್ಸಾಂ: ಬಿಜೆಪಿ ಕಚೇರಿಯಲ್ಲಿ ತಲೆಕೆಳಗಾಗಿ ತ್ರಿವರ್ಣ ಧ್ವಜ ಹಾರಾಟ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...