Homeಕರ್ನಾಟಕಬೆಂಗಳೂರು: IIScನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಪ್ರವೇಶಕ್ಕೆ ಅಡ್ಡಿಪಡಿಸಿದ ಭದ್ರತಾ ಸಿಬ್ಬಂದಿ

ಬೆಂಗಳೂರು: IIScನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಪ್ರವೇಶಕ್ಕೆ ಅಡ್ಡಿಪಡಿಸಿದ ಭದ್ರತಾ ಸಿಬ್ಬಂದಿ

- Advertisement -
- Advertisement -

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್‌ಸಿ) ನಾಗರಿಕ ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಪ್ರವೇಶಕ್ಕೆ ಭದ್ರತಾ ಸಿಬ್ಬಂದಿ ಅಡ್ಡಿಪಡಿಸಿದ ಘಟನೆ ನಡೆದಿದೆ.

“ಕೋಮು ಸೌಹಾರ್ದತೆ ಮತ್ತು ನ್ಯಾಯ” ಎಂಬ ಶೀರ್ಷಿಕೆಯ ಕಾರ್ಯಕ್ರಮ ನಿಗದಿತ ಸಮಯ ಸಂಜೆ 5 ಗಂಟೆಗೆ ಪ್ರಾರಂಭವಾಗಬೇಕಿತ್ತು. ಇದಕ್ಕಾಗಿ ತೀಸ್ತಾ ಅವರು ಕ್ಯಾಂಪಸ್ ಗೆ ಆಗಮಿಸಿದ್ದು, ಅವರಿಗೆ  ಪ್ರವೇಶಾತಿಗೆ ಭದ್ರತಾ ಸಿಬ್ಬಂದಿಗಳು ನಿರಾಕರಿಸಿದ್ದರು ಎನ್ನಲಾಗಿದೆ.

ಮೊದಲು ಇನ್‌ಸ್ಟಿಟ್ಯೂಟ್‌ನ ಗೇಟ್‌ ನಲ್ಲಿದ್ದ ಭದ್ರತಾ ಸಿಬ್ಬಂದಿ ತೀಸ್ತಾ ಸೆಟಲ್ವಾಡ್‌ಗೆ ಪ್ರವೇಶವನ್ನು ನಿರಾಕರಿಸಿದ್ದಾರೆ. ಬಳಿಕ ಅಧ್ಯಾಪಕರು ಮಧ್ಯಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ. ಅನುಮತಿಗೆ ನಿರಾಕರಣ ಬಳಿಕ ಅವರಿಗೆ ಆರಂಭದಲ್ಲಿ ನಿಯೋಜಿಸಲಾಗಿದ್ದ ಸಭಾಂಗಣದ ಬದಲಿಗೆ ಕ್ಯಾಂಪಸ್ ಕ್ಯಾಂಟೀನ್‌ನಲ್ಲಿ ಭಾಷಣಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಕಾರ್ಯಕ್ರಮದಲ್ಲಿ  ಸುಮಾರು 40 ವಿದ್ಯಾರ್ಥಿಗಳು ಮತ್ತು ನಾಲ್ವರು ಅಧ್ಯಾಪಕರು ಭಾಗವಹಿಸಿದ್ದರು, ಸುಮಾರು 5.45pm ಗೆ ಪ್ರಾರಂಭವಾಯಿತು ಮತ್ತು ಸುಮಾರು 8pmವರೆಗೆ ನಡೆದಿದೆ.

ಹೆಚ್ಚುತ್ತಿರುವ ಗಲಭೆ, ಸಾಮರಸ್ಯದ ಸವಾಲುಗಳು, ದ್ವೇಷವನ್ನು ಹರಡಲು ಸಾಮಾಜಿಕ ಮಾಧ್ಯಮಗಳ ಬಳಕೆ ಮುಂತಾದ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಧ್ಯಾಪಕರೊಬ್ಬರು ತಿಳಿಸಿರುವುದಾಗ ಟೆಲಿಗ್ರಾಫ್‌ಗೆ  ವರದಿ ಮಾಡಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಾರ್ಥನಿಲ್ ರಾಯ್ ಎಂಬವರು, ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಕ್ತ ಅಭಿವ್ಯಕ್ತಿಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ನಮ್ಮ ಸಂವಿಧಾನವು ನಮಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನೀಡುತ್ತದೆ. ಶೈಕ್ಷಣಿಕ ಸಂಸ್ಥೆಗಳು ಚರ್ಚೆಗಳನ್ನು ಹತ್ತಿಕ್ಕಲು ಪ್ರಯತ್ನಿಸಬಾರದು ಎಂದು ಹೇಳಿದ್ದಾರೆ.

“ಬ್ರೇಕ್ ದಿ ಸೈಲೆನ್ಸ್” ಎಂಬ ಹೆಸರಿನ ವಿದ್ಯಾರ್ಥಿಗಳ ಗುಂಪು ಈ ಹಿಂದೆ IISc ಆಡಳಿತ ವಿಭಾಗಕ್ಕೆ ತೆರಳಿ ಕಾರ್ಯಕ್ರಮಕ್ಕೆ  ಅನುಮತಿ ನೀಡುವಂತೆ ಕೇಳಿದ್ದರು. ಆದರೆ ಅವರ ಮನವಿಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಕಾರ್ಯಕ್ರಮದ ದಿನದಂದು ವಿದ್ಯಾರ್ಥಿಗಳು  ಕೋರಿದ ಸ್ಥಳದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನು ಓದಿ: ಅಸ್ಸಾಂ: ಬಿಜೆಪಿ ಕಚೇರಿಯಲ್ಲಿ ತಲೆಕೆಳಗಾಗಿ ತ್ರಿವರ್ಣ ಧ್ವಜ ಹಾರಾಟ: ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆರ್‌ಟಿಐ ಕಾರ್ಯಕರ್ತ ಅಮಿತ್ ಜೇತ್ವಾ ಹತ್ಯೆ ಪ್ರಕರಣ: ಬಿಜೆಪಿಯ ಮಾಜಿ ಸಂಸದ ಸೇರಿ ಎಲ್ಲಾ...

0
ಆರ್‌ಟಿಐ ಕಾರ್ಯಕರ್ತ ಮತ್ತು ಪರಿಸರವಾದಿ ಅಮಿತ್ ಜೇತ್ವಾ ಹತ್ಯೆ ಪ್ರಕರಣದಲ್ಲಿ ಜುನಾಗಡದ ಬಿಜೆಪಿಯ ಮಾಜಿ ಸಂಸದ ದಿನು ಬೋಘಾ ಸೋಲಂಕಿ ಮತ್ತು ಇತರ ಆರು ಜನರನ್ನು ಗುಜರಾತ್ ಹೈಕೋರ್ಟ್‌ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ...