HomeಮುಖಪುಟBLOCKED by CEC | ಆಳಂದ ಮತಗಳ್ಳತನ ಕುರಿತ ಚು.ಆಯೋಗದ ಪೋಸ್ಟ್‌ಗೆ ರಾಹುಲ್ ಗಾಂಧಿ ತಿರುಗೇಟು

BLOCKED by CEC | ಆಳಂದ ಮತಗಳ್ಳತನ ಕುರಿತ ಚು.ಆಯೋಗದ ಪೋಸ್ಟ್‌ಗೆ ರಾಹುಲ್ ಗಾಂಧಿ ತಿರುಗೇಟು

- Advertisement -
- Advertisement -

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಕುರಿತ ರಾಹುಲ್ ಗಾಂಧಿಯ ಆರೋಪಗಳನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ. ಇದಕ್ಕೆ ರಾಹುಲ್ ಗಾಂಧಿ ತಿರುಗೇಟು ಕೊಟ್ಟಿದ್ದಾರೆ.

ರಾಹುಲ್ ಗಾಂಧಿ ಇಂದು (ಸೆ.18) ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ‘ತಪ್ಪು’ ಮತ್ತು ‘ಆಧಾರರಹಿತ’ ಎಂದು ಚುನಾವಣಾ ಆಯೋಗ ಹೇಳಿತ್ತು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಸಂಬಂಧಿತ ವ್ಯಕ್ತಿಗೆ ಮಾಹಿತಿ ನೀಡದೆ ಯಾವುದೇ ಅಳಿಸುವಿಕೆ ಸಾಧ್ಯವಿಲ್ಲ ಎಂದಿತ್ತು.

ಅಲ್ಲದೆ, ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರ ಹೆಸರನ್ನು ಅಳಿಸಲು ವಿಫಲ ಪ್ರಯತ್ನಗಳು ನಡೆದಿತ್ತು. ಈ ಸಂಬಂಧ ತನಿಖೆಗಾಗಿ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ಹೇಳಿತ್ತು.

ಚುನಾವಣಾ ಆಯೋಗದ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ರಾಹುಲ್ ಗಾಂಧಿ, ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ತನಿಖೆಗೆ ತಡೆಯೊಡ್ಡಿದ್ದಾರೆ ಎಂದಿದ್ದಾರೆ.

  • ನಮ್ಮ ಅಳಂದ ಅಭ್ಯರ್ಥಿ ವಂಚನೆಯನ್ನು ಬಹಿರಂಗಪಡಿಸಿದ ನಂತರ, ಸ್ಥಳೀಯ ಚುನಾವಣಾ ಅಧಿಕಾರಿ ಎಫ್‌ಐಆರ್ ದಾಖಲಿಸಿದರು, ಆದರೆ ಸಿಐಡಿ ತನಿಖೆಗೆ ಸಿಇಸಿ ತಡೆಯೊಡ್ಡಿದ್ದಾರೆ.
  • ಕರ್ನಾಟಕ ಸಿಐಡಿ 18 ತಿಂಗಳಲ್ಲಿ 18 ಪತ್ರಗಳನ್ನು ಬರೆದು ಎಲ್ಲಾ ಅಪರಾಧ ಸಾಕ್ಷ್ಯಗಳನ್ನು ಕೋರಿದೆ. ಆದರೆ ಸಿಇಸಿ ತಡೆಯೊಡ್ಡಿದ್ದಾರೆ. 
  • ತನಿಖೆಗೆ ಸಹಕರಿಸಲು ಕರ್ನಾಟಕ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ಹಲವು ಬಾರಿ ವಿನಂತಿಸಿದೆ. ಆದರೆ, ಸಿಇಸಿ ತಡೆಯೊಡ್ಡಿದ್ದಾರೆ. 
  • ಡೆಸ್ಟಿನೇಶನ್ ಐಪಿ, ಡಿವೈಸ್ ಪೋರ್ಟ್‌ ಮತ್ತು ಒಟಿಪಿ ಟ್ರೇಲ್‌ ವಿವರಗಳನ್ನು ತಡೆಹಿಡಿಯಲಾಗಿದೆ- ಸಿಇಸಿ ತಡೆಯೊಡ್ಡಿದ್ದಾರೆ. 
  • ಈ ಮತಗಳ್ಳತನವನ್ನು ಬಯಲು ಮಾಡಿರದಿದ್ದರೆ, 6,018 ಮತಗಳನ್ನು ಅಳಿಸಿದ್ದರೆ, ನಮ್ಮ ಅಭ್ಯರ್ಥಿ ಚುನಾವಣೆಯಲ್ಲಿ ಸೋಲಬಹುದಿತ್ತು.
  • ಸಿಇಸಿ ಜ್ಞಾನೇಶ್ ಕುಮಾರ್ – ನೆಪಗಳನ್ನು ಹೇಳುವುದನ್ನು ನಿಲ್ಲಿಸಿ. ಈಗಲೇ ಕರ್ನಾಟಕ ಸಿಐಡಿಗೆ ಸಾಕ್ಷ್ಯಗಳನ್ನು ಬಿಡುಗಡೆ ಮಾಡಿ. 

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...