Homeಚಳವಳಿಮಂಡ್ಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ: ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

ಮಂಡ್ಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ: ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

- Advertisement -
- Advertisement -

ಮಂಡ್ಯದಲ್ಲಿ ಮಹಾನ್ ಮಾನವತಾವಾದಿ ಅಂಬೇಡ್ಕರ್ ರವರ 131ನೇ ಜಯಂತಿ ಅಂಗವಾಗಿ 75 ಹೆಚ್ಚು ಜನರು ರಕ್ತದಾನ ಮಾಡುವ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸಿದ್ದಾರೆ.

ಮಿಮ್ಸ್ ನ ಎಸ್ಸಿ ಎಸ್ಟಿ ನೌಕರರು, ರಕ್ತನಿಧಿ ಕೇಂದ್ರ ಮೀಮ್ಸ್, ನೆಲದನಿ ಬಳಗ ಮಂಗಲ ಮಂಡ್ಯ ಇವುರುಗಳ ಸಂಯುಕ್ತಾಶ್ರಯದಲ್ಲಿ ಮಂಡ್ಯದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಭಾಂಗಣದಲ್ಲಿ ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನ ಆಚರಿಸಲಾಯಿತು.

ಮಿಮ್ಸ್ ನಿರ್ದೇಶಕ ಡಾ. ಹರೀಶ್‌ಕುಮಾರ್‌ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಶಿಕ್ಷಣದಿಂದ ಮಾತ್ರವೇ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದು ಇಂದು ಸತ್ಯವಾಗುತ್ತಿದೆ. ಹಾಗಾಗಿ ನಾವು ಶಿಕ್ಷಣಕ್ಕೆ ಹೆಚ್ಚು ಹೆಚ್ಚು ಒತ್ತುಕೊಡಬೇಕು. ಆ ಮೂಲಕ ಸಂವಿಧಾನ ಶಿಲ್ಪಿಯ ಆಶಯ ನೆರವೇರಿಸಲು ಮುಂದಾಗಬೇಕು” ಎಂದು ಕರೆ ನೀಡಿದರು.

ಸುಶಿಕ್ಷಿತರಾದಾಗ ಅಸಮಾನತೆ, ಅಸ್ಪೃಷ್ಯತೆ ಆಚರಣೆ ವಿರುದ್ಧ ಹೋರಾಡಲು ಮತ್ತು ಸಮಸಮಾಜ ನಿರ್ಮಾಣದತ್ತ ಮುನ್ನಡೆಯಬಹುದು. ಶಿಕ್ಷಣದಿಂದ ಮಾತ್ರ ಪ್ರಗತಿಯತ್ತ ಸಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು

ಮಿಮ್ಸ್‌ ಸಿಇಓ ವೆಂಟಕಲಕ್ಷ್ಮಿಯವರು ಮಾತನಾಡಿ, “ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರ ಮೇಲೆ ಆ ಸಮಾಜದ ಪ್ರಗತಿಯನ್ನು ಅಳೆಯುತ್ತೇನೆ ಎಂದು ಅಂಬೇಡ್ಕರ್ ಹೇಳಿದ್ದರು. ಹಾಗಾಗಿ ಮಹಿಳೆರನ್ನು ಸಮಾನತೆಯಿಂದ ಕಾಣುವುದು ಮತ್ತು ಪ್ರಗತಿಯಲ್ಲಿ ಅವರಿಗೂ ಸಮಪಾಲು ನೀಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಮತ್ತು ಕಾನೂನುಗಳ ಮೂಲಕ ಮಹಿಳೆಯರಿಗೆ ಸಮನಾಗಿ ಹಕ್ಕುಗಳನ್ನು ನೀಡಿದ್ದರ ಪ್ರತಿಫಲದಿಂದ ಉದ್ಯೋಗ, ಉದ್ಯಮಗಳಲ್ಲಿ ಪ್ರಗತಿ ಸಾಧಿಸಲು ಸಾದ್ಯವಾಗುತ್ತಿದೆ” ಎಂದರು.

ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್ ಮಾತನಾಡಿ “ನಮ್ಮ ಸಂವಿಧಾನ ಸತ್ತವರ ಬಗ್ಗೆ ಬರೆದಿರುವ ಜೀವನ ಚರಿತ್ರೆಯಲ್ಲ. ಅದು ಜನರ ಬದುಕು ಕಟ್ಟುವ ಮಹಾನ್ ಗ್ರಂಥವಾಗಿದೆ. ಇಂತಹ ಸಂವಿಧಾನ ರಚಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಅವರು ಜೀವನದುದ್ದಕ್ಕೂ ಜಾತೀಯತೆಯ ವಿರುದ್ಧ ಹೋರಾಡಿದವರು. ರಕ್ತಕ್ಕೆ ಯಾವುದೇ ಜಾತಿ ಧರ್ಮವಿಲ್ಲ, ಜೀವ ಉಳಿವಿಗಾಗಿ ರಕ್ತದಾನ ಅತ್ಯವಶ್ಯಕವಿದೆ ಎಂದರು.

ಇದೇ ಸಂದರ್ಭದಲ್ಲಿ ಮಿಮ್ಸ್ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ. ಯೋಗೇಂದ್ರಕುಮಾರ್ ಮತ್ತು ರಕ್ತದಾನಿಗಳಾದ ಪ್ರಕಾಶ್, ರಾಕೇಶ್, ನಂದೀಶ್, ಮನೋಜ್‌ಕುಮಾರ್, ಪದವಿ ಕಾಲೇಜು ವಿದ್ಯಾರ್ಥಿನಿಯರಾದ ದಿವ್ಯ, ಸಹನಾ, ರೇವತಿ, ಆರ್ ಸಹನಾ, ಪ್ರೀತಿ, ವಾಣಿಶ್ರೀ ಸೇರಿದಂತೆ 75ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷ ರವಿಕುಮಾರ್, ಮಿಮ್ಸ್ ಸ್ಥಾನಿಯ ವೈದ್ಯಾಧಿಕಾರಿ ಡಾ.ವೆಂಕಟೇಶ್, ನೇತ್ರತಜ್ಞೆ ಡಾ.ಪೂರ್ಣಿಮಾ, ರೋಗ ಲಕ್ಷಣ ಶಾಸ್ತ್ರ ತಜ್ಞ ಡಾ. ಸಿದ್ದೇಗೌಡ, ಡಾ.ಮುರಳಿಧರಭಟ್, ಪ್ರಗತಿಪರ ಚಿಂತಕ ಪ್ರೊ.ಹುಲ್ಕೆರೆ ಮಹದೇವು, ನೆಲದನಿ ಬಳಗದ ಗೌ. ಅಧ್ಯಕ್ಷೆ ರುಕ್ಮುಣಿ ಡಾ.ಶಂಕರೇಗೌಡ, ರಕ್ತನಿಧಿ ಕೇಂದ್ರ ಡಾ.ಸುಹಾಸಿನಿ, ಶುಶ್ರೂಷಕರಾದ ಪ್ರಸನ್ನ, ರವಿ, ಮೋಹನ್, ತುಳಸಿಯಮ್ಮ, ಶಿವಮ್ಮ, ನೆಲದನಿ ಬಳಗದ ಪದಾಧಿಕಾರಿಗಳಾದ ಕುಮಾರ್‌ಗೌಡ, ನಂಜುಂಡ, ಯೋಗೇಶ್, ಉಮಾಪತಿ, ಪ್ರತಾಪ್, ವಿಜಿ ಮತ್ತಿತರರಿದ್ದರು.


ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...