Homeಚಳವಳಿಮಂಡ್ಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ: ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

ಮಂಡ್ಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ: ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

- Advertisement -
- Advertisement -

ಮಂಡ್ಯದಲ್ಲಿ ಮಹಾನ್ ಮಾನವತಾವಾದಿ ಅಂಬೇಡ್ಕರ್ ರವರ 131ನೇ ಜಯಂತಿ ಅಂಗವಾಗಿ 75 ಹೆಚ್ಚು ಜನರು ರಕ್ತದಾನ ಮಾಡುವ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸಿದ್ದಾರೆ.

ಮಿಮ್ಸ್ ನ ಎಸ್ಸಿ ಎಸ್ಟಿ ನೌಕರರು, ರಕ್ತನಿಧಿ ಕೇಂದ್ರ ಮೀಮ್ಸ್, ನೆಲದನಿ ಬಳಗ ಮಂಗಲ ಮಂಡ್ಯ ಇವುರುಗಳ ಸಂಯುಕ್ತಾಶ್ರಯದಲ್ಲಿ ಮಂಡ್ಯದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಭಾಂಗಣದಲ್ಲಿ ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನ ಆಚರಿಸಲಾಯಿತು.

ಮಿಮ್ಸ್ ನಿರ್ದೇಶಕ ಡಾ. ಹರೀಶ್‌ಕುಮಾರ್‌ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಶಿಕ್ಷಣದಿಂದ ಮಾತ್ರವೇ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದು ಇಂದು ಸತ್ಯವಾಗುತ್ತಿದೆ. ಹಾಗಾಗಿ ನಾವು ಶಿಕ್ಷಣಕ್ಕೆ ಹೆಚ್ಚು ಹೆಚ್ಚು ಒತ್ತುಕೊಡಬೇಕು. ಆ ಮೂಲಕ ಸಂವಿಧಾನ ಶಿಲ್ಪಿಯ ಆಶಯ ನೆರವೇರಿಸಲು ಮುಂದಾಗಬೇಕು” ಎಂದು ಕರೆ ನೀಡಿದರು.

ಸುಶಿಕ್ಷಿತರಾದಾಗ ಅಸಮಾನತೆ, ಅಸ್ಪೃಷ್ಯತೆ ಆಚರಣೆ ವಿರುದ್ಧ ಹೋರಾಡಲು ಮತ್ತು ಸಮಸಮಾಜ ನಿರ್ಮಾಣದತ್ತ ಮುನ್ನಡೆಯಬಹುದು. ಶಿಕ್ಷಣದಿಂದ ಮಾತ್ರ ಪ್ರಗತಿಯತ್ತ ಸಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು

ಮಿಮ್ಸ್‌ ಸಿಇಓ ವೆಂಟಕಲಕ್ಷ್ಮಿಯವರು ಮಾತನಾಡಿ, “ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರ ಮೇಲೆ ಆ ಸಮಾಜದ ಪ್ರಗತಿಯನ್ನು ಅಳೆಯುತ್ತೇನೆ ಎಂದು ಅಂಬೇಡ್ಕರ್ ಹೇಳಿದ್ದರು. ಹಾಗಾಗಿ ಮಹಿಳೆರನ್ನು ಸಮಾನತೆಯಿಂದ ಕಾಣುವುದು ಮತ್ತು ಪ್ರಗತಿಯಲ್ಲಿ ಅವರಿಗೂ ಸಮಪಾಲು ನೀಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಮತ್ತು ಕಾನೂನುಗಳ ಮೂಲಕ ಮಹಿಳೆಯರಿಗೆ ಸಮನಾಗಿ ಹಕ್ಕುಗಳನ್ನು ನೀಡಿದ್ದರ ಪ್ರತಿಫಲದಿಂದ ಉದ್ಯೋಗ, ಉದ್ಯಮಗಳಲ್ಲಿ ಪ್ರಗತಿ ಸಾಧಿಸಲು ಸಾದ್ಯವಾಗುತ್ತಿದೆ” ಎಂದರು.

ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್ ಮಾತನಾಡಿ “ನಮ್ಮ ಸಂವಿಧಾನ ಸತ್ತವರ ಬಗ್ಗೆ ಬರೆದಿರುವ ಜೀವನ ಚರಿತ್ರೆಯಲ್ಲ. ಅದು ಜನರ ಬದುಕು ಕಟ್ಟುವ ಮಹಾನ್ ಗ್ರಂಥವಾಗಿದೆ. ಇಂತಹ ಸಂವಿಧಾನ ರಚಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಅವರು ಜೀವನದುದ್ದಕ್ಕೂ ಜಾತೀಯತೆಯ ವಿರುದ್ಧ ಹೋರಾಡಿದವರು. ರಕ್ತಕ್ಕೆ ಯಾವುದೇ ಜಾತಿ ಧರ್ಮವಿಲ್ಲ, ಜೀವ ಉಳಿವಿಗಾಗಿ ರಕ್ತದಾನ ಅತ್ಯವಶ್ಯಕವಿದೆ ಎಂದರು.

ಇದೇ ಸಂದರ್ಭದಲ್ಲಿ ಮಿಮ್ಸ್ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ. ಯೋಗೇಂದ್ರಕುಮಾರ್ ಮತ್ತು ರಕ್ತದಾನಿಗಳಾದ ಪ್ರಕಾಶ್, ರಾಕೇಶ್, ನಂದೀಶ್, ಮನೋಜ್‌ಕುಮಾರ್, ಪದವಿ ಕಾಲೇಜು ವಿದ್ಯಾರ್ಥಿನಿಯರಾದ ದಿವ್ಯ, ಸಹನಾ, ರೇವತಿ, ಆರ್ ಸಹನಾ, ಪ್ರೀತಿ, ವಾಣಿಶ್ರೀ ಸೇರಿದಂತೆ 75ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷ ರವಿಕುಮಾರ್, ಮಿಮ್ಸ್ ಸ್ಥಾನಿಯ ವೈದ್ಯಾಧಿಕಾರಿ ಡಾ.ವೆಂಕಟೇಶ್, ನೇತ್ರತಜ್ಞೆ ಡಾ.ಪೂರ್ಣಿಮಾ, ರೋಗ ಲಕ್ಷಣ ಶಾಸ್ತ್ರ ತಜ್ಞ ಡಾ. ಸಿದ್ದೇಗೌಡ, ಡಾ.ಮುರಳಿಧರಭಟ್, ಪ್ರಗತಿಪರ ಚಿಂತಕ ಪ್ರೊ.ಹುಲ್ಕೆರೆ ಮಹದೇವು, ನೆಲದನಿ ಬಳಗದ ಗೌ. ಅಧ್ಯಕ್ಷೆ ರುಕ್ಮುಣಿ ಡಾ.ಶಂಕರೇಗೌಡ, ರಕ್ತನಿಧಿ ಕೇಂದ್ರ ಡಾ.ಸುಹಾಸಿನಿ, ಶುಶ್ರೂಷಕರಾದ ಪ್ರಸನ್ನ, ರವಿ, ಮೋಹನ್, ತುಳಸಿಯಮ್ಮ, ಶಿವಮ್ಮ, ನೆಲದನಿ ಬಳಗದ ಪದಾಧಿಕಾರಿಗಳಾದ ಕುಮಾರ್‌ಗೌಡ, ನಂಜುಂಡ, ಯೋಗೇಶ್, ಉಮಾಪತಿ, ಪ್ರತಾಪ್, ವಿಜಿ ಮತ್ತಿತರರಿದ್ದರು.


ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....