Homeಮುಖಪುಟದೆಹಲಿ ಗಲಭೆ ಕುರಿತ ಪುಸ್ತಕ: ಪ್ರಕಟಣೆ ಹಿಂಪಡೆದ ಬ್ಲೂಮ್ಸರಿ ಇಂಡಿಯಾ

ದೆಹಲಿ ಗಲಭೆ ಕುರಿತ ಪುಸ್ತಕ: ಪ್ರಕಟಣೆ ಹಿಂಪಡೆದ ಬ್ಲೂಮ್ಸರಿ ಇಂಡಿಯಾ

ಮೋನಿಕಾ ಅರೋರಾ, ಸೋನಾಲಿ ಚಿತಲ್ಕರ್ ಮತ್ತು ಪ್ರೇರ್ನಾ ಮಲ್ಹೋತ್ರಾ ಬರೆದಿರುವ ದೆಹಲಿ ರಿಯೋಟ್ಸ್ 2020: ದಿ ಅನ್ಟೋಲ್ಡ್ ಸ್ಟೋರಿ ಪುಸ್ತಕವನ್ನು‌ ಬ್ಲೂಮ್ಸರಿ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಬೇಕಿತ್ತು.

- Advertisement -
- Advertisement -

ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಕೋಮು ಗಲಭೆ  ಪುಸ್ತಕ ಪ್ರಕಟಣೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಬ್ಲೂಮ್ಸ್ಬರಿ ಇಂಡಿಯಾ ಶನಿವಾರ ಪ್ರಕಟಿಸಿದೆ.

ಮೋನಿಕಾ ಅರೋರಾ, ಸೋನಾಲಿ ಚಿತಲ್ಕರ್ ಮತ್ತು ಪ್ರೇರ್ನಾ ಮಲ್ಹೋತ್ರಾ ಬರೆದಿರುವ ದೆಹಲಿ ರಿಯೋಟ್ಸ್ 2020: ದಿ ಅನ್ಟೋಲ್ಡ್ ಸ್ಟೋರಿ ಪುಸ್ತಕವನ್ನು‌ ಬ್ಲೂಮ್ಸರಿ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಬೇಕಿತ್ತು.

ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಪುಸ್ತಕ ಬಿಡುಗಡೆಯ ಕುರಿತು ಹಲವಾರು ಟ್ವಿಟ್ಟರ್ ಬಳಕೆದಾರರು ನೋಟಿಸ್ ಹಂಚಿಕೊಂಡ ನಂತರ ಶುಕ್ರವಾರ ವಿವಾದ ಪ್ರಾರಂಭವಾಯಿತು.

ಫೆಬ್ರವರಿ 23 ರಂದು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಡೆಯುವ ಮೊದಲು ಮಿಶ್ರಾ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಜನರನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದರು.

ಶುಕ್ರವಾರ, ಪ್ರಕಾಶಕರು ಪುಸ್ತಕ ಬಿಡುಗಡೆಯನ್ನು ಆಯೋಜಿಸಿದ್ದಾರೆ ಎಂಬ ಹಕ್ಕುಗಳನ್ನು ನಿರಾಕರಿಸಿದರು. ಈ ಕಾರ್ಯಕ್ರಮಕ್ಕೆ ಆಹ್ವಾನಿತರಾದವರಲ್ಲಿ ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮತ್ತು ಒಪಿಇಂಡಿಯಾ ಸಂಪಾದಕ ನೂಪುರ್ ಶರ್ಮಾ ಇದ್ದರು.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಜಾಹೀರಾತು ತಿಳಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗಳನ್ನು ಎದುರಿಸಿದ ನಂತರ, ಯಾವುದೇ ಕಾರ್ಯಕ್ರಮ ನಡೆಸದೇ  ಪುಸ್ತಕವನ್ನು ಪ್ರಕಟಿಸುವುದಾಗಿ ಬ್ಲೂಮ್ಸ್ಬರಿ ಇಂಡಿಯಾ ಹೇಳಿದೆ.

ಶನಿವಾರ, ಕಂಪನಿಯು ಪ್ರಕಟಣೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿತು. “ಬ್ಲೂಮ್ಸ್ಬರಿ ಇಂಡಿಯಾ ದೆಹಲಿ ರಿಯೋಟ್ಸ್ 2020: ದಿ ಅನ್ಟೋಲ್ಡ್ ಸ್ಟೋರಿ ಅನ್ನು ಸೆಪ್ಟೆಂಬರ್ನಲ್ಲಿ ಬಿಡುಗಡೆ ಮಾಡಲು ಯೋಜಿಸಿತ್ತು, ಇದು ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿನ ಗಲಭೆ ಬಗ್ಗೆ ವಾಸ್ತವಿಕ ವರದಿಯನ್ನು ನೀಡುವ ಪುಸ್ತಕವಾಗಿದೆ. ಇದು ಲೇಖಕರು ನಡೆಸಿದ ತನಿಖೆ ಮತ್ತು ಸಂದರ್ಶನಗಳ ಆಧಾರದ ಮೇಲೆ ಬರೆಯಲಾಗಿದೆ” ಎಂದು ಪ್ರಕಾಶನ ಸಂಸ್ಥೆಯು ಹೇಳಿದೆ.

ಆದಾಗ್ಯೂ, ಲೇಖಕರು ನಮ್ಮ ಅರಿವಿಗೆ ಬಾರದೇ ಆಯೋಜಿಸಲಾದ ವರ್ಚುವಲ್ ಪೂರ್ವ-ಪ್ರಕಟಣೆ ಬಿಡುಗಡೆ ಸೇರಿದಂತೆ ಇತ್ತೀಚಿನ ಘಟನೆಗಳ ದೃಷ್ಟಿಯಿಂದ, ನಾವು ಪುಸ್ತಕದ ಪ್ರಕಟಣೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಬ್ಲೂಮ್ಸ್ಬರಿ ಇಂಡಿಯಾ ವಾಕ್ ಸ್ವಾತಂತ್ರ್ಯವನ್ನು ಬಲವಾಗಿ ಬೆಂಬಲಿಸುತ್ತದೆ ಎಂದು ಹೇಳಿದೆ.

ಮುಸ್ಲಿಂ ಸಮುದಾಯದಕ್ಕೆ ವಿರುದ್ಧವಾಗಿರುವ ಪುಸ್ತಕ ಎಂದು, ಹಲವಾರು ಪತ್ರಕರ್ತರು ಮತ್ತು ಬರಹಗಾರರು ಶುಕ್ರವಾರ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ, ಮಿಶ್ರಾ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ಪ್ರಕಾಶನ ಸಂಸ್ಥೆಯ ನಿರ್ಧಾರವನ್ನು ವಿರೋಧಿಸಿದರು.

ಇದರ ನಡುವೆ, ಪುಸ್ತಕವನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ ಎಂದು ಮಿಶ್ರಾ ಟ್ವೀಟ್ ಮಾಡಿದ್ದಾರೆ. “ಭಾರತ ಮತ್ತು ಜಗತ್ತು ಇದನ್ನು ಓದಿ, ಹಿಂದೂ ವಿರೋಧಿ ಗಲಭೆಯ ಸತ್ಯವನ್ನು ತಿಳಿದುಕೊಳ್ಳುತ್ತದೆ” ಎಂದು ಅವರು ಹೇಳಿದರು.

“ಯಾವುದೇ ದ್ವೇಷ ಅಭಿಯಾನ ಮತ್ತು ಪ್ರಚಾರ ಯಂತ್ರೋಪಕರಣಗಳು ಸತ್ಯವನ್ನು ಹೊರಬರದಂತೆ ತಡೆಯಲು ಸಾಧ್ಯವಿಲ್ಲ” ಎಂದು ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...