Homeಮುಖಪುಟದೆಹಲಿ ಗಲಭೆ ಕುರಿತ ಪುಸ್ತಕ: ಪ್ರಕಟಣೆ ಹಿಂಪಡೆದ ಬ್ಲೂಮ್ಸರಿ ಇಂಡಿಯಾ

ದೆಹಲಿ ಗಲಭೆ ಕುರಿತ ಪುಸ್ತಕ: ಪ್ರಕಟಣೆ ಹಿಂಪಡೆದ ಬ್ಲೂಮ್ಸರಿ ಇಂಡಿಯಾ

ಮೋನಿಕಾ ಅರೋರಾ, ಸೋನಾಲಿ ಚಿತಲ್ಕರ್ ಮತ್ತು ಪ್ರೇರ್ನಾ ಮಲ್ಹೋತ್ರಾ ಬರೆದಿರುವ ದೆಹಲಿ ರಿಯೋಟ್ಸ್ 2020: ದಿ ಅನ್ಟೋಲ್ಡ್ ಸ್ಟೋರಿ ಪುಸ್ತಕವನ್ನು‌ ಬ್ಲೂಮ್ಸರಿ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಬೇಕಿತ್ತು.

- Advertisement -
- Advertisement -

ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಕೋಮು ಗಲಭೆ  ಪುಸ್ತಕ ಪ್ರಕಟಣೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಬ್ಲೂಮ್ಸ್ಬರಿ ಇಂಡಿಯಾ ಶನಿವಾರ ಪ್ರಕಟಿಸಿದೆ.

ಮೋನಿಕಾ ಅರೋರಾ, ಸೋನಾಲಿ ಚಿತಲ್ಕರ್ ಮತ್ತು ಪ್ರೇರ್ನಾ ಮಲ್ಹೋತ್ರಾ ಬರೆದಿರುವ ದೆಹಲಿ ರಿಯೋಟ್ಸ್ 2020: ದಿ ಅನ್ಟೋಲ್ಡ್ ಸ್ಟೋರಿ ಪುಸ್ತಕವನ್ನು‌ ಬ್ಲೂಮ್ಸರಿ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಬೇಕಿತ್ತು.

ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಪುಸ್ತಕ ಬಿಡುಗಡೆಯ ಕುರಿತು ಹಲವಾರು ಟ್ವಿಟ್ಟರ್ ಬಳಕೆದಾರರು ನೋಟಿಸ್ ಹಂಚಿಕೊಂಡ ನಂತರ ಶುಕ್ರವಾರ ವಿವಾದ ಪ್ರಾರಂಭವಾಯಿತು.

ಫೆಬ್ರವರಿ 23 ರಂದು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಡೆಯುವ ಮೊದಲು ಮಿಶ್ರಾ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಜನರನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದರು.

ಶುಕ್ರವಾರ, ಪ್ರಕಾಶಕರು ಪುಸ್ತಕ ಬಿಡುಗಡೆಯನ್ನು ಆಯೋಜಿಸಿದ್ದಾರೆ ಎಂಬ ಹಕ್ಕುಗಳನ್ನು ನಿರಾಕರಿಸಿದರು. ಈ ಕಾರ್ಯಕ್ರಮಕ್ಕೆ ಆಹ್ವಾನಿತರಾದವರಲ್ಲಿ ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮತ್ತು ಒಪಿಇಂಡಿಯಾ ಸಂಪಾದಕ ನೂಪುರ್ ಶರ್ಮಾ ಇದ್ದರು.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಜಾಹೀರಾತು ತಿಳಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗಳನ್ನು ಎದುರಿಸಿದ ನಂತರ, ಯಾವುದೇ ಕಾರ್ಯಕ್ರಮ ನಡೆಸದೇ  ಪುಸ್ತಕವನ್ನು ಪ್ರಕಟಿಸುವುದಾಗಿ ಬ್ಲೂಮ್ಸ್ಬರಿ ಇಂಡಿಯಾ ಹೇಳಿದೆ.

ಶನಿವಾರ, ಕಂಪನಿಯು ಪ್ರಕಟಣೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿತು. “ಬ್ಲೂಮ್ಸ್ಬರಿ ಇಂಡಿಯಾ ದೆಹಲಿ ರಿಯೋಟ್ಸ್ 2020: ದಿ ಅನ್ಟೋಲ್ಡ್ ಸ್ಟೋರಿ ಅನ್ನು ಸೆಪ್ಟೆಂಬರ್ನಲ್ಲಿ ಬಿಡುಗಡೆ ಮಾಡಲು ಯೋಜಿಸಿತ್ತು, ಇದು ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿನ ಗಲಭೆ ಬಗ್ಗೆ ವಾಸ್ತವಿಕ ವರದಿಯನ್ನು ನೀಡುವ ಪುಸ್ತಕವಾಗಿದೆ. ಇದು ಲೇಖಕರು ನಡೆಸಿದ ತನಿಖೆ ಮತ್ತು ಸಂದರ್ಶನಗಳ ಆಧಾರದ ಮೇಲೆ ಬರೆಯಲಾಗಿದೆ” ಎಂದು ಪ್ರಕಾಶನ ಸಂಸ್ಥೆಯು ಹೇಳಿದೆ.

ಆದಾಗ್ಯೂ, ಲೇಖಕರು ನಮ್ಮ ಅರಿವಿಗೆ ಬಾರದೇ ಆಯೋಜಿಸಲಾದ ವರ್ಚುವಲ್ ಪೂರ್ವ-ಪ್ರಕಟಣೆ ಬಿಡುಗಡೆ ಸೇರಿದಂತೆ ಇತ್ತೀಚಿನ ಘಟನೆಗಳ ದೃಷ್ಟಿಯಿಂದ, ನಾವು ಪುಸ್ತಕದ ಪ್ರಕಟಣೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಬ್ಲೂಮ್ಸ್ಬರಿ ಇಂಡಿಯಾ ವಾಕ್ ಸ್ವಾತಂತ್ರ್ಯವನ್ನು ಬಲವಾಗಿ ಬೆಂಬಲಿಸುತ್ತದೆ ಎಂದು ಹೇಳಿದೆ.

ಮುಸ್ಲಿಂ ಸಮುದಾಯದಕ್ಕೆ ವಿರುದ್ಧವಾಗಿರುವ ಪುಸ್ತಕ ಎಂದು, ಹಲವಾರು ಪತ್ರಕರ್ತರು ಮತ್ತು ಬರಹಗಾರರು ಶುಕ್ರವಾರ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ, ಮಿಶ್ರಾ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ಪ್ರಕಾಶನ ಸಂಸ್ಥೆಯ ನಿರ್ಧಾರವನ್ನು ವಿರೋಧಿಸಿದರು.

ಇದರ ನಡುವೆ, ಪುಸ್ತಕವನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ ಎಂದು ಮಿಶ್ರಾ ಟ್ವೀಟ್ ಮಾಡಿದ್ದಾರೆ. “ಭಾರತ ಮತ್ತು ಜಗತ್ತು ಇದನ್ನು ಓದಿ, ಹಿಂದೂ ವಿರೋಧಿ ಗಲಭೆಯ ಸತ್ಯವನ್ನು ತಿಳಿದುಕೊಳ್ಳುತ್ತದೆ” ಎಂದು ಅವರು ಹೇಳಿದರು.

“ಯಾವುದೇ ದ್ವೇಷ ಅಭಿಯಾನ ಮತ್ತು ಪ್ರಚಾರ ಯಂತ್ರೋಪಕರಣಗಳು ಸತ್ಯವನ್ನು ಹೊರಬರದಂತೆ ತಡೆಯಲು ಸಾಧ್ಯವಿಲ್ಲ” ಎಂದು ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...