Homeಮುಖಪುಟನಟಿ ಕಂಗನಾ ಮುಂಬೈ ಕಚೇರಿ ನೆಲಸಮಕ್ಕೆ ಮುಂದಾದ ಬಿಎಂಸಿ!: ಹೈಕೋರ್ಟ್‌ ತಡೆಯಾಜ್ಞೆ

ನಟಿ ಕಂಗನಾ ಮುಂಬೈ ಕಚೇರಿ ನೆಲಸಮಕ್ಕೆ ಮುಂದಾದ ಬಿಎಂಸಿ!: ಹೈಕೋರ್ಟ್‌ ತಡೆಯಾಜ್ಞೆ

ನಟಿ ಕಂಗನಾ ರಾಣಾವತ್ ವಕೀಲರು ಕಟ್ಟಡ ಉರುಳಿಸುವಿಕೆಯ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಆಡಳಿತರೂಢ ಶಿವಸೇನಾ ನಡುವೆ ನಡೆಯುತ್ತಿರುವ ಜಗಳ ತಾರಕಕ್ಕೇರಿದ್ದು, ಮುಂಬೈನಲ್ಲಿರುವ ನಟಿಯ ಕಚೇರಿಯನ್ನು ನೆಲಸಮಕ್ಕೆ ಮುಂದಾಗಿತ್ತು. ಸದ್ಯಕ್ಕೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮುಂಬೈನ ಬಾಂದ್ರಾದಲ್ಲಿರುವ ಮಣಿಕರ್ಣಿಕಾ ಫಿಲ್ಮ್ ಪ್ರೈವೆಟ್ ಲಿಮಿಟೆಡ್ ಕಚೇರಿಯಲ್ಲಿ ಹಲವಾರು ಅಕ್ರಮ ನಿರ್ಮಾಣಗಳನ್ನು ಮಾಡಲಾಗಿದೆ ಎಂದು ಆರೋಪಿಸಿರುವ ಬಿಎಂಸಿ(ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೋರೇಷನ್) ನಿನ್ನೆ ಕಚೇರಿಗೆ ನೋಟಿಸ್ ಅಂಟಿಸಿತ್ತು.

ಹಿರಿಯ ಬಿಎಂಸಿ ಅಧಿಕಾರಿಯೊಬ್ಬರು, “ನೋಟಿಸ್‌ಗೆ ಪ್ರತಿಕ್ರಿಯಿಸಲು ನಾವು ಅವರಿಗೆ 24 ಗಂಟೆಗಳ ಕಾಲಾವಕಾಶ ನೀಡಿದ್ದೆವು ಆದರೆ ಅವರು ಉತ್ತರಿಸಿಲ್ಲ” ಎಂದು ಹೇಳಿದ್ದಾರೆ. ಜೊತೆಗೆ ನಟಿಯ ಕಚೇರಿಯೊಳಗೆ ಹಲವಾರು ಅಕ್ರಮ ಮತ್ತು ಅನಧಿಕೃತ ನಿರ್ಮಾಣಗಳಿವೆ ಮತ್ತು ಆದ್ದರಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ ನಂತರ ನಗರಕ್ಕೆ ಮರಳದಂತೆ ಎಚ್ಚರಿಕೆ ನೀಡಿದ ಸೇನಾ ನಾಯಕ ಸಂಜಯ್ ರೌತ್ ಅವರ ಬೆದರಿಕೆಯ ನಂತರ ನಟಿ ಇಂದು ಮುಂಬೈಗೆ ತೆರಳಿದ್ದಾರೆ.

ಬಿಎಂಸಿ ತಂಡವು ಆಸ್ತಿಯನ್ನು ಸಮೀಕ್ಷೆ ಮಾಡಿತ್ತು ಮತ್ತು ಕಚೇರಿಯ ನೆಲ ಮತ್ತು ಮೊದಲ ಮಹಡಿಯಲ್ಲಿ ಅನೇಕ ಅನಧಿಕೃತ ನಿರ್ಮಾಣಗಳನ್ನು ಕಂಡುಹಿಡಿದಿದೆ.

ನಟಿ ಕಟ್ಟಡ ನೆಲಸಮ ಮಾಡುತ್ತಿರುವ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿ ಮುಂಬೈಯನ್ನು ಮತ್ತೆ ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. ಟ್ವೀಟ್ ಒಂದರಲ್ಲಿ “ನಾನು ಮುಂಬೈ ದರ್ಶನಕ್ಕೆ ಸಜ್ಜಾಗಿ ವಿಮಾನ ನಿಲ್ದಾಣಕ್ಕೆ ಹೋಗುವಷ್ಟರಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತು ಅವರ ಗೂಂಡಾಗಳು ನನ್ನ ಆಸ್ತಿಯಲ್ಲಿದ್ದಾರೆ. ಅವರೆಲ್ಲರೂ ಅದನ್ನು ಅಕ್ರಮವಾಗಿ ಒಡೆಯಲು ಸಿದ್ಧರಾಗಿದ್ದಾರೆ. ಮುಂದುವರೆಯಿರಿ! ಮಹಾರಾಷ್ಟ್ರದ ಹೆಮ್ಮೆಗೆ ರಕ್ತ ಕೊಡುವುದಾಗಿ ಭರವಸೆ ನೀಡಿದ್ದೇನೆ. ಇದು ಏನೂ ಅಲ್ಲ. ಎಲ್ಲವನ್ನೂ ತೆಗೆದುಕೊಳ್ಳಿ, ಆದರೆ ನನ್ನ ಸ್ಪೂರ್ತಿ  ಹೆಚ್ಚು ಎತ್ತರಕ್ಕೆ ಏರುತ್ತದೆ” ಎಂದು ಹೇಳಿದ್ದಾರೆ.

ಕಂಗನಾ ಕಟ್ಟಡ ನೆಲಸಮ ಮಾಡಿರುವುದಕ್ಕೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ ನಟಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ನಟಿ ಕಂಗನಾ ರಾಣಾವತ್ ವಕೀಲರು ಕಟ್ಟಡ ಉರುಳಿಸುವಿಕೆಯ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಟ್ಟಡ ಧ್ವಂಸ ಮಾಡದಂತೆ ಬಿಎಂಸಿಗೆ ನ್ಯಾಯಾಲಯ ನಿರ್ದೇಶನ ನೀಡಿದ್ದು, ನಾಳೆ ಮಧ್ಯಾಹ್ನ 3ಗಂಟೆಗೆ ಮತ್ತೆ ವಿಚಾರಣೆ ನಡೆಯಲಿದೆ. ಕಂಗನಾ ರಾಣಾವತ್ ವಿವಾದ ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...