Homeಕರ್ನಾಟಕವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ಕಳೆದ ಡಿಸೆಂಬರ್‌ನಲ್ಲಿ ನಿಗಮದ ನೌಕರರು, ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಹಾಗೂ ಇನ್ನೂ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದ್ದರು.

- Advertisement -
- Advertisement -

ವೇತನ ಪಾವತಿ ವಿಳಂಬದ ಬಗ್ಗೆ ಸಿಐಟಿಯು ಸೇರಿದಂತೆ ಸಾರಿಗೆ ಸಂಘಗಳು ಬುಧವಾರ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಿವೆ. ಆದರೆ, ಪ್ರತಿಭಟನೆ ವೇಳೆ ಬಸ್ ಸೇವೆಗಳಿಗೆ ತೊಂದರೆಯಾಗುವುದಿಲ್ಲ ಎಂದು ಸಾರಿಗೆ ನಿಗಮ ತಿಳಿಸಿದೆ.

“ಕೆಲವು ಒಕ್ಕೂಟಗಳು ಕೇಂದ್ರ ಕಚೇರಿಗೆ ಭೇಟಿ ನೀಡಿ ಬಿಎಂಟಿಸಿ ಆಡಳಿತ ಮಂಡಳಿಗೆ ಮನವಿ ಪತ್ರವನ್ನು ಸಲ್ಲಿಸಲಿವೆ. ಬಿಎಂಟಿಸಿ ಬಸ್ ಕಾರ್ಯಾಚರಣೆ ಎಂದಿನಂತೆ ಬುಧವಾರವು ಇರಲಿದೆ”ಎಂದು ಬಸ್ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಬಿಎಂಟಿಸಿ ಸಾರ್ವಜನಿಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್‌‌ ಮತ್ತು ಜನವರಿಯಲ್ಲಿ ಸಾರಿಗೆ ಉದ್ಯೋಗಿಗಳಿಗೆ ಕೇವಲ ಅರ್ಧದಷ್ಟು ವೇತನವನ್ನು ಮಾತ್ರ ನೀಡಲಾಗಿದೆ ಎಂದು ಕಾರ್ಮಿಕ ಸಂಘದ ಸದಸ್ಯರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಪ್ರತಿಭಟನೆಯು ಕೇವಲ ಸಂಬಳದ ವಿಳಂಬದ ಬಗ್ಗೆ ಮಾತ್ರವಲ್ಲ. ಅದರ ಹೊರತಾಗಿ, ಯಾವುದೇ ಷರತ್ತುಗಳಿಲ್ಲದೆ ಸಾಪ್ತಾಹಿಕ ರಜೆ ನೀಡುವುದು, ಬಿಎಂಟಿಸಿಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸಕ್ಕೆ ಆದ್ಯತೆ ನೀಡುವುದು ಮತ್ತು ನೌಕರರ ಕುಂದುಕೊರತೆ ಸಮಿತಿಯನ್ನು ರಚಿಸುವುದು ಸೇರಿದಂತೆ ಹಲವು ಬೇಡಿಕೆಗಳು ಸೇರಿವೆ ಎಂದು ಕಾರ್ಮಿಕ ಸಂಘದ ಸದಸ್ಯರು ಹೇಳಿದ್ದಾರೆ.

“ಕೊರೊನಾದ ಪ್ರಭಾವದಿಂದಾಗಿ ಸಂಬಳದ ವಿಳಂಬವಾಗಿದೆ. ಸರ್ಕಾರದ ಆರ್ಥಿಕ ವಾಸ್ತವತೆಗಳನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಕಾರ್ಮಿಕರಿಗೆ ಮನವಿ ಮಾಡುತ್ತೇನೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ, ಎರಡು ದಿನಗಳಲ್ಲಿ ಎಲ್ಲಾ ಚಾಲಕರು ಮತ್ತು ಕಂಡಕ್ಟರ್‌ಗಳ ವೇತನವನ್ನು ನೀಡಲಾಗುವುದು” ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ಡಿಸೆಂಬರ್‌ನಲ್ಲಿ ನಿಗಮದ ನೌಕರರು, ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಹಾಗು ಇನ್ನೂ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...