Homeಕರ್ನಾಟಕಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ವಿವಿಧ ನಿಗಮಗಳ ಅಡಿಯಲ್ಲಿ ನೌಕರರಾಗಿ ದುಡಿಯುತ್ತಿರುವ ಸಾವಿರಾರು ಜನರು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಒತ್ತಾಯಿಸಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದ್ದಕ್ಕಾಗಿ ನಿನ್ನೆ ಸಾರಿಗೆ ನೌಕರರನ್ನು ಬಂಧಿಸಲಾಗಿತ್ತು.

- Advertisement -
- Advertisement -

ಇಂದು ಬೆಂಗಳೂರು ನಗರ ಸಾರಿಗೆ ಸಂಸ್ಥೆ (BMTC)ಯ ನೌಕರರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿದ್ದು, ನಿನ್ನೆಯ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಇಂದು BMTC ಬಸ್‌ಗಳು ರಸ್ತೆಗಿಳಿದಿಲ್ಲ. ಪ್ರತಿಭಟನೆ ನಡೆಸಿದ್ದಕ್ಕಾಗಿ ನಿನ್ನೆ ಸಾರಿಗೆ ನೌಕರರನ್ನು ಬಂಧಿಸಲಾಗಿತ್ತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಬೆಂಗಳೂರು ನಗರ ಸಾರಿಗೆ ಸಂಸ್ಥೆ (BMTC) ಸೇರಿದಂತೆ ವಿವಿಧ ನಿಗಮಗಳ ಅಡಿಯಲ್ಲಿ ನೌಕರರಾಗಿ ದುಡಿಯುತ್ತಿರುವ ಸಾವಿರಾರು ಜನರು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಒತ್ತಾಯಿಸಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಮತ್ತು ಕೊರೊನಾ ಸಮಯದಲ್ಲಿ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ ಕೊರೊನಾ ವಾರಿಯರ್ಸ್ ಜೀವವಿಮೆ ಮೊತ್ತ ನೀಡಬೇಕೆಂದು ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ನಡೆಸಿದರು.

ಈಗ ನಾವು ಸರ್ಕಾರಿ ನೌಕರರೂ ಅಲ್ಲ, ಖಾಸಗಿ ನೌಕರರು ಅಲ್ಲ. ಮಧ್ಯದಲ್ಲಿ ನಿಗಮ, ಸಂಸ್ಥೆಗಳ ಅಡಿಯಲ್ಲಿ ದುಡಿಯುತ್ತಿದ್ದು ಹೆಚ್ಚಿನ ಸೌಲಭ್ಯಗಳು ದೊರಕುತ್ತಿಲ್ಲ. ಸಂಸ್ಥೆಗೆ ನಷ್ಟವಾದರೆ ನಮಗೆ ಸಂಬಳವನ್ನು ಸಕಾಲಕ್ಕೆ ನೀಡುವುದಿಲ್ಲ. ಹಾಗಾಗಿ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ವಿವಿಧ ರಾಜ್ಯಗಳಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಗಣಿಸಲಾಗಿದೆ. ಇತ್ತೀಚೆಗೆ ಆಂದ್ರ ಪ್ರದೇಶ ಸರ್ಕಾರವೂ ಈ ತೀರ್ಮಾನ ತೆಗೆದುಕೊಂಡಿದೆ. ಅದು ಕರ್ನಾಟಕದಲ್ಲಿಯೂ ಜಾರಿಯಾಗಬೇಕೆಂದು ಸಾರಿಗೆ ನೌಕರರು ಒತ್ತಾಯಿಸಿದರು.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಸಾರಿಗೆ ನೌಕರರು ಸರ್ಕಾರಿ ನೌಕರರಾಗುವ ಹೋರಾಟದ ಒಕ್ಕೂಟ ಬ್ಯಾನರ್‌ನಡಿ ಒಂದುಗೂಡಿದ ಸಾವಿರಾರು ನೌಕರರು, ಅವರ ಕುಟಂಬ ಸದಸ್ಯರು ‘ಸರ್ಕಾರಿ ನೌಕರರಾಗುವುದು ಬೇಡಿಕೆಯಲ್ಲ, ಅದು ನಮ್ಮ ಹಕ್ಕು; ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ, ಆಶ್ವಾಸನೆ ಸಾಕು -ಘೋಷಣೆ ಬೇಕು ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಕೊರೊನಾ ಸಂಕಷ್ಟದಲ್ಲಿಯೂ ಸಾರಿಗೆ ನೌಕರರು ಕೆಲಸ ನಿರ್ವಹಿಸಿದ್ದಾರೆ. ಸುಮಾರು 50 ಮಂದಿ ಸೋಂಕಿಗೆ ಒಳಪಟ್ಟು ಮೃತಪಟ್ಟಿದ್ದಾರೆ. ಇಂದು ಬಹಳಷ್ಟು ಜನ ದುಡಿಯದೆ ಸರ್ಕಾರಿ ನೌಕರರೆನಿಸಿಕೊಳ್ಳುತ್ತಿದ್ದಾರೆ. ಆದರೆ ನಾವು ಕಷ್ಟಪಟ್ಟು ದುಡಿದರೂ ಸರ್ಕಾರಿ ನೌಕರರಾಗಿಲ್ಲ ಎಂದು ಅಳಲು ವ್ಯಕ್ತಪಡಿಸಿದರು.


ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...