Homeಮುಖಪುಟಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

- Advertisement -
- Advertisement -

ಭಾರತದ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳನ್ನು ಅಪರಾಧೀಕರಿಸುವ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 152 ಅನ್ನು ಕಾನೂನುಬದ್ಧ ಭಿನ್ನಾಭಿಪ್ರಾಯದ ವಿರುದ್ಧ ಅಸ್ತ್ರವಾಗಿ ಬಳಸಬಾರದು ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.

ಬಿಎನ್‌ಎಸ್‌ ಸೆಕ್ಷನ್‌ನ ಮೂಲ ದೇಶದ್ರೋಹವನ್ನು ಅಪರಾಧೀಕರಿಸುವ ಬ್ರಿಟಿಷರು ಜಾರಿಗೆ ತಂದಿದ್ದ ಐಪಿಸಿ ಸೆಕ್ಷನ್‌ 124ಎರಲ್ಲಿ ಇದೆ ಎಂದು ನ್ಯಾ. ಅರುಣ್‌ ಮೋಂಗಾ ತಿಳಿಸಿದ್ದಾರೆ.

ತಮ್ಮ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 152 ಮತ್ತು ಸೆಕ್ಷನ್‌ 197(1)(ಸಿ) (ಆರೋಪಗಳು, ರಾಷ್ಟ್ರೀಯ ಏಕೀಕರಣಕ್ಕೆ ಪ್ರತಿಕೂಲವಾದ ಸಮರ್ಥನೆಗಳು) ಅಡಿ ದಾಖಲಿಸಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಸಿಖ್‌ ಬೋಧಕ ತೇಜೇಂದರ್ ಪಾಲ್ ಸಿಂಗ್ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅವಲೋಕನ ಮಾಡಿದೆ.

ಖಲಿಸ್ತಾನ ಪರ ನಾಯಕ ಮತ್ತು ಸಂಸದ ಅಮೃತಪಾಲ್ ಸಿಂಗ್ ಅವರಿಗೆ ಸಹಾನುಭೂತಿ ತೋರಿದ್ದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ತೇಜೇಂದರ್‌ ಅವರ ವಿರುದ್ದ ಕಳೆದ ಜುಲೈನಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದುರುದ್ದೇಶದಿಂದ ಮಾಡುವ ಕೃತ್ಯಗಳ ಮಾತ್ರವೇ ಬಿಎನ್‌ಎಸ್‌ ಸೆಕ್ಷನ್ 152ರ ವ್ಯಾಪ್ತಿಯಲ್ಲಿ ಬರುತ್ತವೆ. ಬಿಎನ್‌ಎಸ್‌ ಸೆಕ್ಷನ್ 152ಕ್ಕೆ ಇರುವ ವಿವರಣೆಯು ಸರ್ಕಾರದ ನೀತಿಗಳ ನ್ಯಾಯಸಮ್ಮತ ಟೀಕೆಗೆ ವಿನಾಯಿತಿ ನೀಡುವ ಮೂಲಕ ಅಗತ್ಯವಾದ ಸುರಕ್ಷತೆಯನ್ನು ಒದಗಿಸುತ್ತದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗೆ ಅನುಗುಣವಾಗಿ ಬಿಎನ್‌ಎಸ್‌ ಸೆಕ್ಷನ್ 152ನ್ನು ಎಚ್ಚರಿಕೆಯಿಂದ ಅನ್ವಯಿಸುವಂತೆ ನ್ಯಾಯಾಲಯ ಸೂಚಿಸಿದೆ. ರಚನಾತ್ಮಕ ಸಂವಾದ ಅಥವಾ ರಾಜಕೀಯ ಅಭಿಪ್ರಾಯ ಭೇದವನ್ನು ಹತ್ತಿಕ್ಕುವುದನ್ನು ತಪ್ಪಿಸುವುದಕ್ಕಾಗಿ ಕಾನೂನು ಜಾರಿ ಅಧಿಕಾರಿಗಳು ಸಂಯಮ ಮತ್ತು ವಿವೇಚನೆಯನ್ನು ಬಳಸಬೇಕು ಎಂದು ಪೀಠ ಕಿವಿಮಾತು ಹೇಳಿದೆ.

ಝುಬೈರ್ ವಿರುದ್ದ ಸೆಕ್ಷನ್ 152 ಅಡಿ ಆರೋಪ ಹೊರಿಸಿರುವ ಯುಪಿ ಪೊಲೀಸರು

ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ಅವರು ಯತಿ ನರಸಿಂಗಾನದ ಅವರ ಪ್ರಚೋದನಕಾರಿ ಭಾಷಣದ ವಿಡಿಯೋ ಹಂಚಿಕೊಂಡಿದ್ದಕ್ಕೆ ಉತ್ತರ ಪ್ರದೇಶ ಪೊಲೀಸರು ಬಿಎನ್‌ಎಸ್‌ ಸೆಕ್ಷನ್ 152 ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಸೇರಿದಂತೆ ಪತ್ರಿಕಾ ಸಂಸ್ಥೆಗಳು, “ಈ ಸೆಕ್ಷನ್‌ ಸ್ವತಂತ್ರ ಚಿಂತಕರು ಮತ್ತು ಮಾಧ್ಯಮಗಳನ್ನು ಮೌನಗೊಳಿಸುವ ಸಾಮರ್ಥ್ಯ ಹೊಂದಿರುವುದರಿಂದ ಎಲ್ಲಾ ವಿವೇಕಯುತ ಮನಸ್ಸುಗಳು ಇದನ್ನು ವಿರೋಧಿಸುತ್ತಿವೆ. ದೇಶದ್ರೋಹದ ಕಾನೂನನ್ನು ದುರುಪಯೋಗಪಡಿಸಿಕೊಂಡ ಹಲವಾರು ಪ್ರಕರಣಗಳನ್ನು ನಾವು ಈ ಹಿಂದೆ ನೋಡಿದ್ದೇವೆ. ಬಿಎನ್ಎಸ್‌ ಸೆಕ್ಷನ್‌ 152ಕೂಡ ಅದೇ, ಆದರೆ ಹೊಸ ಅವತಾರದಲ್ಲಿದೆ ಎಂದು ನವೆಂಬರ್ 29ರಂದು ಹೊರಡಿಸಿದ್ದ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ : ಚುನಾವಣಾ ಆಯೋಗದ ಸಾಂಸ್ಥಿಕ ಸಮಗ್ರತೆ ನಾಶಪಡಿಸುವುದು ಮೋದಿ ಸರ್ಕಾರದ ಪಿತೂರಿಯ ಭಾಗ: ಖರ್ಗೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...