Homeಅಂತರಾಷ್ಟ್ರೀಯಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

- Advertisement -
- Advertisement -

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ.

ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌) ವರದಿ ಮಾಡಿದೆ.

ಇದುವರೆಗೆ ಕೇವಲ 9 ಜನರನ್ನು ಮಾತ್ರ ರಕ್ಷಿಸಲಾಗಿದೆ. ಇವರನ್ನು ಏಪ್ರಿಲ್ 9, 2026ರಂದು ಅಂಡಮಾನ್ ದ್ವೀಪಗಳ ಸಮೀಪ ಸಂಚರಿಸುತ್ತಿದ್ದ ಬಾಂಗ್ಲಾದೇಶದ ಧ್ವಜ ಹೊಂದಿದ್ದ ಹಡಗು ರಕ್ಷಿಸಿದೆ ಎಂದು ವರದಿಗಳು ಹೇಳಿವೆ.

ಅತಿಯಾದ ಜನದಟ್ಟಣೆ (Overcrowding), ಬಲವಾದ ಗಾಳಿ ಮತ್ತು ಸಮುದ್ರದ ಅಲೆಗಳ ಅಬ್ಬರದಿಂದಾಗಿ ದೋಣಿ ಮುಳುಗಿದೆ. ಉತ್ತಮ ಜೀವನದ ಹುಡುಕಾಟದಲ್ಲಿ ಮತ್ತು ಶಿಬಿರಗಳ ಕಷ್ಟಕರ ಜೀವನದಿಂದ ತಪ್ಪಿಸಿಕೊಳ್ಳಲು ನಿರಾಶ್ರಿತರು ಮಲೇಷ್ಯಾಗೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗ್ತಿದೆ.

ದೋಣಿಯು ದಕ್ಷಿಣ ಬಾಂಗ್ಲಾದೇಶದ ಟೆಕ್ನಾಫ್‌ನಿಂದ ಹೊರಟು ಮಲೇಷ್ಯಾ ಕಡೆಗೆ ತೆರಳುತ್ತಿತ್ತು ಎಂದು ವರದಿಯಾಗಿದೆ.

ದೋಣಿಯಲ್ಲಿದ್ದ ಉಳಿದ 240ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆಯಾಗಿದ್ದು, ಅವರು ಮೃತಪಟ್ಟಿರುವ ಆತಂಕ ವ್ಯಕ್ತವಾಗಿದೆ. ಈ ಘಟನೆಯು ರೋಹಿಂಗ್ಯಾ ನಿರಾಶ್ರಿತರು ಎದುರಿಸುತ್ತಿರುವ ಅಪಾಯಕಾರಿ ಪರಿಸ್ಥಿತಿಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

ಮ್ಯಾನ್ಮಾರ್‌ನಲ್ಲಿ ದೀರ್ಘಕಾಲದವರೆಗೆ ಕಿರುಕುಳಕ್ಕೊಳಗಾದ ಸುಮಾರು 7,30,000ಕ್ಕೂ ಹೆಚ್ಚು ರೋಹಿಂಗ್ಯಾಗಳು, 2017ರಲ್ಲಿ ಅಲ್ಲಿನ ಮಿಲಿಟರಿ ನಡೆಸಿದ ಜನಾಂಗೀಯ ಹತ್ಯಾಕಾಂಡದಿಂದ ತಪ್ಪಿಸಿಕೊಂಡು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಬೇಕಾಯಿತು. ಹೀಗೆ ಪ್ರಾಣಭಯದಿಂದ ಓಡಿಬಂದ ಅವರು ನೆರೆಯ ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದರು.

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ದಮನ ಮತ್ತು ಅಂತರ್ಯುದ್ಧ ಹಾಗೂ ಬಾಂಗ್ಲಾದೇಶದ ಕಿಕ್ಕಿರಿದ ಶಿಬಿರಗಳಿಂದ ಪಾರಾಗಲು ಸಾವಿರಾರು ರೋಹಿಂಗ್ಯಾಗಳು ಪ್ರತಿ ವರ್ಷ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಉತ್ತಮ ಜೀವನದ ನಿರೀಕ್ಷೆಯಲ್ಲಿ ನೆರೆಯ ದೇಶಗಳನ್ನು ತಲುಪಲು ಅವರು ಹೆಚ್ಚಾಗಿ ಸುಧಾರಿತ ಅಥವಾ ತಾತ್ಕಾಲಿಕ ದೋಣಿಗಳ ಮೂಲಕ ಅಪಾಯಕಾರಿ ಸಮುದ್ರಯಾನ ಕೈಗೊಳ್ಳುತ್ತಾರೆ.

ಏಪ್ರಿಲ್ 9ರಂದು ಇಂಡೋನೇಷ್ಯಾಕ್ಕೆ ತೆರಳುತ್ತಿದ್ದ ಬಾಂಗ್ಲಾದೇಶ ಕರಾವಳಿ ಕಾವಲು ಪಡೆಯ ಹಡಗು ಮಗುಚಿ ಬಿದ್ದ ದೋಣಿಯಿಂದ ಒಂಬತ್ತು ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬಾಂಗ್ಲಾದೇಶ ಕರಾವಳಿ ಕಾವಲು ಪಡೆಯ ವಕ್ತಾರರಾದ ಲೆಫ್ಟಿನೆಂಟ್ ಕಮಾಂಡರ್ ಸಬ್ಬೀರ್ ಆಲಂ ಸುಜನ್ ಮಾತನಾಡಿ, “ತಮ್ಮ ಹಡಗು ಸಮುದ್ರದ ಆಳವಾದ ನೀರಿನಲ್ಲಿ ಡ್ರಮ್‌ಗಳು ಮತ್ತು ಮರದ ದಿಮ್ಮಿಗಳ ಸಹಾಯದಿಂದ ತೇಲುತ್ತಿದ್ದ ಹಲವಾರು ಜನರನ್ನು ಗುರುತಿಸಿ ಅವರನ್ನು ರಕ್ಷಿಸಿದೆ” ಎಂದು ತಿಳಿಸಿದ್ದಾರೆ.

ಟರ್ಕಿಯ ಅನಡೋಲು ಸುದ್ದಿ ಸಂಸ್ಥೆಯ ಪ್ರಕಾರ, ರಕ್ಷಿಸಲಾದ ಒಂಬತ್ತು ಜನರಲ್ಲಿ ಆರು ಮಂದಿ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ. ಪೊಲೀಸರ ಪ್ರಕಾರ, ಅವರನ್ನು ಬಂಧಿಸಲಾಗಿದೆ.

ಬದುಕುಳಿದವರಲ್ಲಿ ಒಬ್ಬರಾದ ರಫೀಕುಲ್ ಇಸ್ಲಾಂ, ಮಲೇಷ್ಯಾದಲ್ಲಿ ಉದ್ಯೋಗದ ಭರವಸೆ ನೀಡಿ ಕಳ್ಳಸಾಗಣೆದಾರರು ತಮ್ಮನ್ನು ದೋಣಿಗೆ ಹತ್ತಿಸಿ ಕರೆದೊಯ್ದಿದ್ದರು ಎಂದು ಹೇಳಿರುವುದಾಗಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನಮ್ಮಲ್ಲಿ ಅನೇಕರನ್ನು ಟ್ರಾಲರ್‌ನ (ದೋಣಿಯ) ಕೆಳಭಾಗದ ಸಣ್ಣ ಕೋಣೆಯಲ್ಲಿ ಇರಿಸಲಾಗಿತ್ತು; ಅಲ್ಲಿಯೇ ಕೆಲವರು ಮೃತಪಟ್ಟರು. ಟ್ರಾಲರ್‌ನಿಂದ ಸೋರಿಕೆಯಾದ ಎಣ್ಣೆಯಿಂದ ನನ್ನ ಮೈ ಸುಟ್ಟುಹೋಯಿತು,” ಎಂದು ರಫೀಕುಲ್ ಇಸ್ಲಾಂ ವಿವರಿಸಿದ್ದಾರೆ. ದೋಣಿ ಮುಳುಗಡೆಯಾಗುವ ಮೊದಲು ನಾಲ್ಕು ದಿನಗಳ ಕಾಲ ಪ್ರಯಾಣಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

“ಬಾಂಗ್ಲಾದೇಶದ ನೌಕೆಯು ನಮ್ಮನ್ನು ಆಳವಾದ ನೀರಿನಿಂದ ರಕ್ಷಿಸುವ ಮೊದಲು ನಾವು ಸುಮಾರು 36 ಗಂಟೆಗಳ ಕಾಲ ಸಮುದ್ರದಲ್ಲಿ ತೇಲುತ್ತಿದ್ದೆವು” ಎಂದು ರಫೀಕುಲ್ ಇಸ್ಲಾಂ ತಿಳಿಸಿದ್ದಾರೆ. ಅಲ್ಲದೆ, ಈ ಸಮುದ್ರಯಾನದ ಸಮಯದಲ್ಲಿ ಉಸಿರುಗಟ್ಟುವಿಕೆ ಮತ್ತು ಅತಿಯಾದ ಜನದಟ್ಟಣೆಯಿಂದಾಗಿ 25ರಿಂದ 30 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಂಡಮಾನ್ ಸಮುದ್ರವು ಮ್ಯಾನ್ಮಾರ್, ಥೈಲ್ಯಾಂಡ್ ಮತ್ತು ಮಲಯ ಪರ್ಯಾಯ ದ್ವೀಪದ ಪಶ್ಚಿಮ ತೀರಗಳಲ್ಲಿ ವ್ಯಾಪಿಸಿದೆ. ಮಲೇಷ್ಯಾ ರೋಹಿಂಗ್ಯಾಗಳಿಗೆ ನೆಚ್ಚಿನ ತಾಣವಾಗಿದೆ. ಏಕೆಂದರೆ, ಅದು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದು, ಗಣನೀಯ ಸಂಖ್ಯೆಯ ರೋಹಿಂಗ್ಯಾ ವಲಸೆಗಾರರನ್ನು ಹೊಂದಿದೆ.

ಕಳೆದ ವರ್ಷ, ಮೇ ತಿಂಗಳಲ್ಲಿ ಮ್ಯಾನ್ಮಾರ್ ಕರಾವಳಿಯಲ್ಲಿ ಸಂಭವಿಸಿದ ಎರಡು ದೋಣಿ ದುರಂತಗಳಲ್ಲಿ 427 ರೋಹಿಂಗ್ಯಾಗಳು ಸಮುದ್ರದಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುಎನ್‌ಹೆಚ್‌ಸಿಆರ್ ಹೇಳಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...