Homeಅಂತರಾಷ್ಟ್ರೀಯಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

- Advertisement -
- Advertisement -

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ.

ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌) ವರದಿ ಮಾಡಿದೆ.

ಇದುವರೆಗೆ ಕೇವಲ 9 ಜನರನ್ನು ಮಾತ್ರ ರಕ್ಷಿಸಲಾಗಿದೆ. ಇವರನ್ನು ಏಪ್ರಿಲ್ 9, 2026ರಂದು ಅಂಡಮಾನ್ ದ್ವೀಪಗಳ ಸಮೀಪ ಸಂಚರಿಸುತ್ತಿದ್ದ ಬಾಂಗ್ಲಾದೇಶದ ಧ್ವಜ ಹೊಂದಿದ್ದ ಹಡಗು ರಕ್ಷಿಸಿದೆ ಎಂದು ವರದಿಗಳು ಹೇಳಿವೆ.

ಅತಿಯಾದ ಜನದಟ್ಟಣೆ (Overcrowding), ಬಲವಾದ ಗಾಳಿ ಮತ್ತು ಸಮುದ್ರದ ಅಲೆಗಳ ಅಬ್ಬರದಿಂದಾಗಿ ದೋಣಿ ಮುಳುಗಿದೆ. ಉತ್ತಮ ಜೀವನದ ಹುಡುಕಾಟದಲ್ಲಿ ಮತ್ತು ಶಿಬಿರಗಳ ಕಷ್ಟಕರ ಜೀವನದಿಂದ ತಪ್ಪಿಸಿಕೊಳ್ಳಲು ನಿರಾಶ್ರಿತರು ಮಲೇಷ್ಯಾಗೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗ್ತಿದೆ.

ದೋಣಿಯು ದಕ್ಷಿಣ ಬಾಂಗ್ಲಾದೇಶದ ಟೆಕ್ನಾಫ್‌ನಿಂದ ಹೊರಟು ಮಲೇಷ್ಯಾ ಕಡೆಗೆ ತೆರಳುತ್ತಿತ್ತು ಎಂದು ವರದಿಯಾಗಿದೆ.

ದೋಣಿಯಲ್ಲಿದ್ದ ಉಳಿದ 240ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆಯಾಗಿದ್ದು, ಅವರು ಮೃತಪಟ್ಟಿರುವ ಆತಂಕ ವ್ಯಕ್ತವಾಗಿದೆ. ಈ ಘಟನೆಯು ರೋಹಿಂಗ್ಯಾ ನಿರಾಶ್ರಿತರು ಎದುರಿಸುತ್ತಿರುವ ಅಪಾಯಕಾರಿ ಪರಿಸ್ಥಿತಿಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

ಮ್ಯಾನ್ಮಾರ್‌ನಲ್ಲಿ ದೀರ್ಘಕಾಲದವರೆಗೆ ಕಿರುಕುಳಕ್ಕೊಳಗಾದ ಸುಮಾರು 7,30,000ಕ್ಕೂ ಹೆಚ್ಚು ರೋಹಿಂಗ್ಯಾಗಳು, 2017ರಲ್ಲಿ ಅಲ್ಲಿನ ಮಿಲಿಟರಿ ನಡೆಸಿದ ಜನಾಂಗೀಯ ಹತ್ಯಾಕಾಂಡದಿಂದ ತಪ್ಪಿಸಿಕೊಂಡು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಬೇಕಾಯಿತು. ಹೀಗೆ ಪ್ರಾಣಭಯದಿಂದ ಓಡಿಬಂದ ಅವರು ನೆರೆಯ ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದರು.

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ದಮನ ಮತ್ತು ಅಂತರ್ಯುದ್ಧ ಹಾಗೂ ಬಾಂಗ್ಲಾದೇಶದ ಕಿಕ್ಕಿರಿದ ಶಿಬಿರಗಳಿಂದ ಪಾರಾಗಲು ಸಾವಿರಾರು ರೋಹಿಂಗ್ಯಾಗಳು ಪ್ರತಿ ವರ್ಷ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಉತ್ತಮ ಜೀವನದ ನಿರೀಕ್ಷೆಯಲ್ಲಿ ನೆರೆಯ ದೇಶಗಳನ್ನು ತಲುಪಲು ಅವರು ಹೆಚ್ಚಾಗಿ ಸುಧಾರಿತ ಅಥವಾ ತಾತ್ಕಾಲಿಕ ದೋಣಿಗಳ ಮೂಲಕ ಅಪಾಯಕಾರಿ ಸಮುದ್ರಯಾನ ಕೈಗೊಳ್ಳುತ್ತಾರೆ.

ಏಪ್ರಿಲ್ 9ರಂದು ಇಂಡೋನೇಷ್ಯಾಕ್ಕೆ ತೆರಳುತ್ತಿದ್ದ ಬಾಂಗ್ಲಾದೇಶ ಕರಾವಳಿ ಕಾವಲು ಪಡೆಯ ಹಡಗು ಮಗುಚಿ ಬಿದ್ದ ದೋಣಿಯಿಂದ ಒಂಬತ್ತು ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬಾಂಗ್ಲಾದೇಶ ಕರಾವಳಿ ಕಾವಲು ಪಡೆಯ ವಕ್ತಾರರಾದ ಲೆಫ್ಟಿನೆಂಟ್ ಕಮಾಂಡರ್ ಸಬ್ಬೀರ್ ಆಲಂ ಸುಜನ್ ಮಾತನಾಡಿ, “ತಮ್ಮ ಹಡಗು ಸಮುದ್ರದ ಆಳವಾದ ನೀರಿನಲ್ಲಿ ಡ್ರಮ್‌ಗಳು ಮತ್ತು ಮರದ ದಿಮ್ಮಿಗಳ ಸಹಾಯದಿಂದ ತೇಲುತ್ತಿದ್ದ ಹಲವಾರು ಜನರನ್ನು ಗುರುತಿಸಿ ಅವರನ್ನು ರಕ್ಷಿಸಿದೆ” ಎಂದು ತಿಳಿಸಿದ್ದಾರೆ.

ಟರ್ಕಿಯ ಅನಡೋಲು ಸುದ್ದಿ ಸಂಸ್ಥೆಯ ಪ್ರಕಾರ, ರಕ್ಷಿಸಲಾದ ಒಂಬತ್ತು ಜನರಲ್ಲಿ ಆರು ಮಂದಿ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ. ಪೊಲೀಸರ ಪ್ರಕಾರ, ಅವರನ್ನು ಬಂಧಿಸಲಾಗಿದೆ.

ಬದುಕುಳಿದವರಲ್ಲಿ ಒಬ್ಬರಾದ ರಫೀಕುಲ್ ಇಸ್ಲಾಂ, ಮಲೇಷ್ಯಾದಲ್ಲಿ ಉದ್ಯೋಗದ ಭರವಸೆ ನೀಡಿ ಕಳ್ಳಸಾಗಣೆದಾರರು ತಮ್ಮನ್ನು ದೋಣಿಗೆ ಹತ್ತಿಸಿ ಕರೆದೊಯ್ದಿದ್ದರು ಎಂದು ಹೇಳಿರುವುದಾಗಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನಮ್ಮಲ್ಲಿ ಅನೇಕರನ್ನು ಟ್ರಾಲರ್‌ನ (ದೋಣಿಯ) ಕೆಳಭಾಗದ ಸಣ್ಣ ಕೋಣೆಯಲ್ಲಿ ಇರಿಸಲಾಗಿತ್ತು; ಅಲ್ಲಿಯೇ ಕೆಲವರು ಮೃತಪಟ್ಟರು. ಟ್ರಾಲರ್‌ನಿಂದ ಸೋರಿಕೆಯಾದ ಎಣ್ಣೆಯಿಂದ ನನ್ನ ಮೈ ಸುಟ್ಟುಹೋಯಿತು,” ಎಂದು ರಫೀಕುಲ್ ಇಸ್ಲಾಂ ವಿವರಿಸಿದ್ದಾರೆ. ದೋಣಿ ಮುಳುಗಡೆಯಾಗುವ ಮೊದಲು ನಾಲ್ಕು ದಿನಗಳ ಕಾಲ ಪ್ರಯಾಣಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

“ಬಾಂಗ್ಲಾದೇಶದ ನೌಕೆಯು ನಮ್ಮನ್ನು ಆಳವಾದ ನೀರಿನಿಂದ ರಕ್ಷಿಸುವ ಮೊದಲು ನಾವು ಸುಮಾರು 36 ಗಂಟೆಗಳ ಕಾಲ ಸಮುದ್ರದಲ್ಲಿ ತೇಲುತ್ತಿದ್ದೆವು” ಎಂದು ರಫೀಕುಲ್ ಇಸ್ಲಾಂ ತಿಳಿಸಿದ್ದಾರೆ. ಅಲ್ಲದೆ, ಈ ಸಮುದ್ರಯಾನದ ಸಮಯದಲ್ಲಿ ಉಸಿರುಗಟ್ಟುವಿಕೆ ಮತ್ತು ಅತಿಯಾದ ಜನದಟ್ಟಣೆಯಿಂದಾಗಿ 25ರಿಂದ 30 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಂಡಮಾನ್ ಸಮುದ್ರವು ಮ್ಯಾನ್ಮಾರ್, ಥೈಲ್ಯಾಂಡ್ ಮತ್ತು ಮಲಯ ಪರ್ಯಾಯ ದ್ವೀಪದ ಪಶ್ಚಿಮ ತೀರಗಳಲ್ಲಿ ವ್ಯಾಪಿಸಿದೆ. ಮಲೇಷ್ಯಾ ರೋಹಿಂಗ್ಯಾಗಳಿಗೆ ನೆಚ್ಚಿನ ತಾಣವಾಗಿದೆ. ಏಕೆಂದರೆ, ಅದು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದು, ಗಣನೀಯ ಸಂಖ್ಯೆಯ ರೋಹಿಂಗ್ಯಾ ವಲಸೆಗಾರರನ್ನು ಹೊಂದಿದೆ.

ಕಳೆದ ವರ್ಷ, ಮೇ ತಿಂಗಳಲ್ಲಿ ಮ್ಯಾನ್ಮಾರ್ ಕರಾವಳಿಯಲ್ಲಿ ಸಂಭವಿಸಿದ ಎರಡು ದೋಣಿ ದುರಂತಗಳಲ್ಲಿ 427 ರೋಹಿಂಗ್ಯಾಗಳು ಸಮುದ್ರದಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುಎನ್‌ಹೆಚ್‌ಸಿಆರ್ ಹೇಳಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...