Homeಮುಖಪುಟಜ್ಞಾನವಾಪಿ ಮಸೀದಿ ವಿವಾದ: ಪ್ರಕರಣಗಳಿಂದ ಹಿಂದೆ ಸರಿದ ಹಿಂದೂ ದಾವೆದಾರ, ಆತನ ಕುಟುಂಬ

ಜ್ಞಾನವಾಪಿ ಮಸೀದಿ ವಿವಾದ: ಪ್ರಕರಣಗಳಿಂದ ಹಿಂದೆ ಸರಿದ ಹಿಂದೂ ದಾವೆದಾರ, ಆತನ ಕುಟುಂಬ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ವಿವಾದದಲ್ಲಿ ಹಿಂದೂ ದಾವೆದಾರರೊಬ್ಬರು ಮತ್ತು ಅವರ ಕುಟುಂಬವು ಈ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಿಂದ ಶನಿವಾರ ಹಿಂದೆ ಸರಿಯುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ದಾವೆದಾರ ಜಿತೇಂದ್ರ ಸಿಂಗ್ ವಿಸೇನ್ ಮತ್ತು ಅವರ ಕುಟುಂಬ [ಪತ್ನಿ ಕಿರಣ್ ಸಿಂಗ್ ಮತ್ತು ಸೊಸೆ ರಾಖಿ ಸಿಂಗ್] ಎಲ್ಲಾ ಪ್ರಕರಣಗಳಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಜಿತೇಂದ್ರ ಸಿಂಗ್ ವಿಸೇನ್ ಅವರು, ”ನಾನು ಮತ್ತು ನನ್ನ ಕುಟುಂಬ ದೇಶ ಮತ್ತು ಧರ್ಮದ ಹಿತದೃಷ್ಟಿಯಿಂದ ನಾವು ವಿವಿಧ ನ್ಯಾಯಾಲಯಗಳಲ್ಲಿ ಸಲ್ಲಿಸಿದ ಎಲ್ಲಾ ಜ್ಞಾನವಾಪಿ ಸಂಬಂಧಿತ ಪ್ರಕರಣಗಳಿಂದ ಹಿಂದೆ ಸರಿಯುತ್ತಿದ್ದೇವೆ” ಎಂದು ಹೇಳಿದ್ದಾರೆ.

”ತಾನು ಮತ್ತು ತನ್ನ ಕುಟುಂಬವು ಕೆಲವು ಹಿಂದೂ ಧರ್ಮಿಯರಿಂದ ಮತ್ತು ಹಲವು ಕಡೆಗಳಿಂದ ಕಿರುಕುಳವನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಸೀಮಿತ ಶಕ್ತಿ ಮತ್ತು ಸಂಪನ್ಮೂಲಗಳ ಕಾರಣದಿಂದಾಗಿ ನಾನು ಇನ್ನು ಮುಂದೆ ‘ಧರ್ಮ’ [ಸದಾಚಾರ]ಕ್ಕಾಗಿ ಈ ಯುದ್ಧವನ್ನು ಹೋರಾಡಲು ಸಾಧ್ಯವಿಲ್ಲ ಮತ್ತು ಅದಕ್ಕಾಗಿಯೇ ನಾನು ಎಲ್ಲ ಪ್ರಕರಣಗಳಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

”ಬಹುಶಃ ನನ್ನ ಜೀವನದಲ್ಲಿ ನಾನು ಮಾಡಿದ ದೊಡ್ಡ ತಪ್ಪು ಈ ‘ಧರ್ಮಯುದ್ಧ’ [ಪವಿತ್ರ ಯುದ್ಧ] ಆರಂಭಿಸಿದ್ದು. ಧರ್ಮದ ಹೆಸರಿನಲ್ಲಿ ಗಿಮಿಕ್ ಆಡುವವರ ಜೊತೆ ಮಾತ್ರ ಈ ಸಮಾಜ ನಿಲ್ಲುತ್ತದೆ, ನನ್ನಂತವರ ಜೊತೆ ನಿಲ್ಲುವುದಿಲ್ಲ” ಎಂದು ಹೇಳಿದ್ದಾರೆ.

ಮಸೀದಿಯ ಆವರಣದೊಳಗೆ ಪೂಜೆ ಸಲ್ಲಿಸುವ ಹಕ್ಕು ಕೋರಿ ಅರ್ಜಿ ಸಲ್ಲಿಸಿದ ಐವರು ಹಿಂದೂ ಮಹಿಳೆಯರಲ್ಲಿ ರಾಖಿ ಸಿಂಗ್ ಕೂಡ ಸೇರಿದ್ದಾರೆ. ಮಸೀದಿಯಲ್ಲಿ ಹಿಂದೂ ದೇವತೆ ಶೃಂಗಾರ್ ಗೌರಿಯ ಚಿತ್ರವಿದೆ ಎಂದು ಅವರು ಹೇಳಿಕೊಂಡಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮಿತಿಯ ಅರ್ಜಿ ವಜಾ; ಅಲಹಾಬಾದ್ ಹೈಕೋರ್ಟ್ ತೀರ್ಪು

ಕಳೆದ ವರ್ಷ ಮೇ ತಿಂಗಳಲ್ಲಿ ವಾರಣಾಸಿ ಸಿವಿಲ್ ಕೋರ್ಟ್ ಆದೇಶದ ಮೇರೆಗೆ ಮಸೀದಿ ಆವರಣದ ಸಮೀಕ್ಷೆ ವೇಳೆ ಅಂಡಾಕಾರದ ವಸ್ತುವೊಂದು ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಹಿಂದೂ ದಾವೆದಾರರು ಆ ವಸ್ತುವು ಶಿವಲಿಂಗವಾಗಿದೆ – ಇದು ಹಿಂದೂ ದೇವತೆ ಶಿವನ ಪ್ರಾತಿನಿಧ್ಯ ಎಂದು ಪ್ರತಿಪಾದಿಸಿದರು. ಆದಾಗ್ಯೂ, ಮಸೀದಿಯ ಉಸ್ತುವಾರಿ ಸಮಿತಿಯು ವಸ್ತುವು ವಾಜು ಖಾನಾ ಅಥವಾ ಕಾರಂಜಿ ಎಂದು ಪ್ರತಿಪಾದಿಸಿತ್ತು.

ವಿಸೇನ್ ಅವರು ವಿಶ್ವ ವೈದಿಕ ಸನಾತನ ಸಂಘ ಎಂಬ ಸಂಘಟನೆಯ ಅಧ್ಯಕ್ಷರಾಗಿದ್ದಾರೆ ಮತ್ತು ಅವರ ಪತ್ನಿ ಕಿರಣ್ ಸಿಂಗ್ ಅದರ ಅಂತರರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...