Homeಮುಖಪುಟಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ...

ಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ ಆರೋಪ

- Advertisement -
- Advertisement -

ಪ್ರತ್ಯೇಕ ರಾಜ್ಯಗಳಲ್ಲಿ ಇಬ್ಬರು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ದೇಶದಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರ ವಿರುದ್ದ ಹೆಚ್ಚುತ್ತಿರುವ ಹಿಂಸಾಚಾರದ ಭಾಗವಾಗಿ ಇಬ್ಬರನ್ನೂ ಕೊಲ್ಲಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿವೆ.

ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಮರೋಲು ಎಂಬ ಹಳ್ಳಿಯಲ್ಲಿ ಪಶ್ಚಿಮ ಬಂಗಾಳದ ದಕ್ಷಿಣ 24-ಪರಗಣ ಜಿಲ್ಲೆಯ ಉಸ್ಥಿ ನಿವಾಸಿ 32 ವರ್ಷದ ಮಂಜುರ್ ಅಲಂ ಲಸ್ಕರ್ ಅವರನ್ನು ಬಲಪಂಥೀಯ ಹಿಂದುತ್ವ ಗೂಂಡಾಗಳು ಥಳಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಹರಿಶ್ಚಂದ್ರಪುರದ ಮತ್ತೊಬ್ಬ ವಲಸೆ ಕಾರ್ಮಿಕ, 29 ವರ್ಷದ ಅಲಂಗೀರ್ ಮೊಂಡಲ್ ಅವರ ಮೃತದೇಹ ಗುರುವಾರ ಚೆನ್ನೈನ ರೈಲ್ವೆ ಹಳಿಗಳ ಬಳಿ ಪತ್ತೆಯಾಗಿದೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ವರದಿಗಳ ಪ್ರಕಾರ, ಆಲಂ ಲಸ್ಕರ್ ಸುಮಾರು ಒಂದು ದಶಕದಿಂದ ಆಂಧ್ರ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ, ಅವರ ಕುಟುಂಬಕ್ಕೆ 25,000 ರೂ.ಗೆ ಬೇಡಿಕೆ ಇಟ್ಟಿದ್ದ ಕರೆ ಬಂದಿದ್ದು, ಹಣವನ್ನು ಪಾವತಿಸದಿದ್ದರೆ ಆಲಂ ಅವರನ್ನು ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿತ್ತು. ಕುಟುಂಬವು 6,000 ರೂ.ಗಳನ್ನು ವರ್ಗಾಯಿಸಿತ್ತು. ಮರುದಿನ, ಕರೆ ಮಾಡಿದವರು ಆಲಂ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾಗಿ ಟೈಮ್ ಆಫ್ ಇಂಡಿಯಾ ವರದಿ ಮಾಡಿದೆ.

ಆಲಂ ಅವರ ಹಿರಿಯ ಸಹೋದರ, ಸ್ಥಳೀಯ ಪಂಚಾಯತ್ ಉಪಾಧ್ಯಕ್ಷ ಗಿಯಾಸುದ್ದೀನ್ ಲಸ್ಕರ್, ಆಲಂ ಬಂಗಾಳಿ ಮಾತನಾಡುವ ಮುಸ್ಲಿಂ ಆಗಿದ್ದರಿಂದ ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಗುರಿಯಾಗಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಅಲಂಗೀರ್ ಅಲಂ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಸುಮಾರು ಒಂದು ತಿಂಗಳ ಹಿಂದೆ ಚೆನ್ನೈಗೆ ತೆರಳಿದ್ದರು. ಎಂಟು ದಿನಗಳ ಹಿಂದೆ, ಅವರು ಹೈದರಾಬಾದ್‌ನಲ್ಲಿ ಮತ್ತೊಂದು ಕೆಲಸ ಪಡೆದಿದ್ದರು. ಚೆನ್ನೈಗೆ ರೈಲು ಹತ್ತುವ ಮೊದಲು ಜನವರಿ 14 ರಂದು ಅವರು ಕೊನೆಯ ಬಾರಿಗೆ ಪತ್ನಿಯೊಂದಿಗೆ ಮಾತನಾಡಿದ್ದರು. ನಂತರ ಅವರು ನಾಪತ್ತೆಯಾಗಿದ್ದರು. ಬುಧವಾರ, ಅವರ ಶವ ಚೆನ್ನೈನ ನಿಲ್ದಾಣವೊಂದರ ಬಳಿಯ ರೈಲ್ವೆ ಹಳಿಯ ಸಮೀಪ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಅಲಂಗೀರ್ ಅವರನ್ನು ಕೊಂದು ನಂತರ ಶವವನ್ನು ಹಳಿಯ ಪಕ್ಕದಲ್ಲಿ ಎಸೆದು ಹೋಗಿರಬಹುದು ಎಂದು ಅವರ ಕುಟುಂಬ ಶಂಕಿಸಿದೆ.

ಈ ತಿಂಗಳ ಆರಂಭದಲ್ಲಿ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ದನಗಳ ಸಾಗಣೆಗೆ ವಿರೋಧ ವ್ಯಕ್ತಪಡಿಸಿದ ಗುಂಪೊಂದು 35 ವರ್ಷದ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು.

2025ರಲ್ಲಿ ನಾಲ್ವರು ಮುಸ್ಲಿಮರು ಮತ್ತು ಒಬ್ಬ ದಲಿತ ಸೇರಿದಂತೆ ಕನಿಷ್ಠ ಐದು ಜನರನ್ನು ‘ಬಾಂಗ್ಲಾದೇಶಿಗಳು’ ಮತ್ತು ‘ಅಕ್ರಮ ವಲಸಿಗರು’ ಎಂದು ಆರೋಪಿಸಿ ಕೊಲೆ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...