Homeಚಳವಳಿರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಆಗ್ರಹಿಸಿ ದೆಹಲಿಯ ಗಡಿಭಾಗಗಳಲ್ಲಿ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಮೃತದೇಹವನ್ನು ಕಟ್ಟಲಾಗಿದೆ ಎಂದು ವರದಿಯಾಗಿದೆ.

ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿಯ ಸಿಂಘು ಗಡಿಯಲ್ಲಿರುವ ವೇದಿಕೆಯ ಸಮೀಪದ ತಾತ್ಕಾಲಿಕ ಗುರುದ್ವಾರದಲ್ಲಿ ಇರಿಸಲಾಗಿರುವ ಗುರು ಗ್ರಂಥ ಸಾಹಿಬ್‌ಗೆ ಮೃತ ವ್ಯಕ್ತಿ ಅಗೌರವ ತೋರಿದ್ದಾನೆ. ಹೀಗಾಗಿ ಈ ಕೃತ್ಯದಲ್ಲಿ ನಿಹಾಂಗ್‌ಗಳ ಕೈವಾಡವಿದೆ ಎಂದು ಶಂಕಿಸಲಾಗಿದೆ. ಆದರೆ ಪೊಲೀಸರು ಇದನ್ನು ದೃಢಪಡಿಸಿಲ್ಲ.

ಬೆಳಿಗ್ಗೆ 5: 30 ರ ಸುಮಾರಿಗೆ ಹತ್ಯೆಯ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಬ್ಯಾರಿಕೇಡ್‌ನಲ್ಲಿ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

“ಇಂದು ಮುಂಜಾನೆ 5 ಗಂಟೆಗೆ, ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಕೈಗಳು, ಕಾಲುಗಳನ್ನು ಕತ್ತರಿಸಿದ  ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರು ಕಾರಣ ಎಂಬ ಬಗ್ಗೆ ಮಾಹಿತಿಯಿಲ್ಲ. ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವೈರಲ್ ಆಗಿರುವ ವಿಡಿಯೊ ತನಿಖೆಯ ಭಾಗವಾಗಿದೆ. ವದಂತಿಗಳು ಕಾಲಹರಣ ಮಾಡಿಸುತ್ತವೆ ಅಷ್ಟೇ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹಂಸರಾಜ್ ಹೇಳಿಕೆಯನ್ನು  ಸುದ್ದಿ ಸಂಸ್ಥೆ ಎಎನ್ಐ ಉಲ್ಲೇಖಿಸಿದೆ.

ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ ಆರೋಪದಲ್ಲಿ ನಿಹಾಂಗ್ಸ್ ಯುವಕನನ್ನು ಹೊಡೆದಿದ್ದಾರೆ ಎಂದು ವರದಿಗಳು ಹೇಳಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಡಿಯೊಗಳು ವೈರಲ್ ಆಗಿವೆ.

ಶಾಂತಿಯುತವಾಗಿ ಸಾಗುತ್ತಿರುವ ರೈತರ ಪ್ರತಿಭಟನೆಗೆ ಅಪಖ್ಯಾತಿ ತರುವ ಪ್ರಯತ್ನ ಇದು ಎಂದು ಹಲವು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: 2024ಕ್ಕೆ ರಾವಣನನ್ನು ಸಂಪೂರ್ಣವಾಗಿ ಸುಡುತ್ತೇವೆ: ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....