Homeಮುಖಪುಟಉತ್ತರ ಪ್ರದೇಶ| ಅತ್ಯಾಚಾರ ಸಂತ್ರಸ್ತೆಯ ತಂದೆಯ ಮೃತದೇಹ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉತ್ತರ ಪ್ರದೇಶ| ಅತ್ಯಾಚಾರ ಸಂತ್ರಸ್ತೆಯ ತಂದೆಯ ಮೃತದೇಹ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಅತ್ಯಾಚಾರ ಸಂತ್ರಸ್ತೆಯ ಮೃತದೇಹ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ಆಕೆಯ ತಂದೆಯ ಮೃತದೇಹ ಪತ್ತೆ

- Advertisement -
- Advertisement -

ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಕಾನ್ಪುರ ಬಳಿ ಇಬ್ಬರು ಬಾಲಕಿಯರ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಾಲಕಿಯರ ಸಾವಿಗೂ ಮುನ್ನ ಅವರ ಮೇಲೆ ಅತ್ಯಾಚಾರ ನಡೆದ ಆರೋಪ ಕೇಳಿ ಬಂದಿತ್ತು. ಇದೀಗ ಇಬ್ಬರು ಬಾಲಕಿಯರ ಪೈಕಿ ಒಬ್ಬಳ ತಂದೆಯ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

“ಸುಮಾರು 50 ವರ್ಷದ ವ್ಯಕ್ತಿಯ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಂಬಂಧ ನಮಗೆ ಯಾವುದೇ ಡೆತ್ ನೋಟ್ ದೊರೆತಿಲ್ಲ. ಮೃತ ವ್ಯಕ್ತಿ ಇತ್ತೀಚೆಗೆ ಕಾನ್ಪುರ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿಯೊಬ್ಬಳ ತಂದೆ ಎಂಬುವುದು ಗೊತ್ತಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಹಮೀರ್‌ಪುರ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಾ ಶರ್ಮಾ ತಿಳಿಸಿದ್ದಾರೆ.

ಫೆ.29ರಂದು ಕಾನ್ಪುರ ಬಳಿಯ ಘಟಮ್ಪುರದಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಮರವೊಂದರಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಾಲಕಿಯರು ಕೆಲಸ ಮಾಡುತ್ತಿದ್ದ ಇಟ್ಟಿಗೆ ಕಾರ್ಖಾನೆ ಸಮೀಪದ ಹೊಲದಲ್ಲಿರುವ ಮರದಲ್ಲಿ ಮೃತದೇಹಗಳು ಕಂಡು ಬಂದಿತ್ತು. ಬಾಲಕಿಯರ ಮೇಲೆ ಅತ್ಯಾಚಾರ ನಡೆದ ಆರೋಪ ಕೇಳಿ ಬಂದ ಬೆನ್ನಲ್ಲೇ ಅವರ ಮೃತದೇಹ ಕಾಣಿಸಿಕೊಂಡಿತ್ತು.

ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ 14 ಮತ್ತು 16 ವರ್ಷದ ಬಾಲಕಿಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇವರ ಮೇಲೆ ಇಟ್ಟಿಗೆ ಕಾರ್ಖಾನೆಯ ಗುತ್ತಿಗೆದಾರ ರಾಮರೂಪ್ ನಿಶಾದ್ (48), ಆತನ ಮಗ ರಾಜು (18) ಮತ್ತು ಸೋದರಳಿಯ ಸಂಜಯ್ (19) ಅತ್ಯಾಚಾರವೆಸಗಿದ್ದಾರೆ ಕುಟುಂಬಸ್ಥರು ಆರೋಪಿಸಿದ್ದರು. ಪೊಲೀಸರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ.

ಈ ಘಟನೆ ನಡೆದು 10 ದಿನಗಳ ಬಳಿಕ, ಒಬ್ಬಳು ಬಾಲಕಿಯ ತಂದೆಯ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಹಮೀರ್‌ಪುರ ಬಳಿ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸಂಸದ ಸಾಕೇತ್ ಗೋಖಲೆ ಪತ್ರ:  

ಘಟನೆ ಸಂಬಂಧ ಕಾನ್ಪುರ ಹೆಚ್ಚುವರಿ ಪೊಲೀಸ್ ಆಯುಕ್ತ ಹರೀಶ್ ಚಂದರ್ ಅವರಿಗೆ ಪತ್ರ ಬರೆದಿರುವ ಟಿಎಂಸಿಯ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, ಬಾಲಕಿಯರ ಕುಟುಂಬಕ್ಕೆ ತಕ್ಷಣ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.

“ಬಾಲಕಿಯರ ಅತ್ಯಾಚಾರ ಮತ್ತು ಸಾವಿನ ಕುರಿತು ಮೌನ ತಾಳಿರುವ ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಮಕ್ಕಳ ಹಕ್ಕುಗಳ ಆಯೋಗದ ವಿರುದ್ದ ಸಾಕೇತ್ ಗೋಖಲೆ ಕಿಡಿಕಾರಿದ್ದು, ಅತ್ಯಾಚಾರದ ಬಳಿಕ ಇಬ್ಬರು ಬಾಲಕಿಯರ ಸಾವು, ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವು ನಡೆದರೂ ನೀವು ಮೌನ ತಾಳಿರುವುದು ಯಾಕೆ? ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತ ಇದೆ ಎಂದು ಸುಮ್ಮನ್ನಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ.

“ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರಿಗೆ ಪ್ರಶ್ನೆಗಳನ್ನು ಎತ್ತಿರುವ ಸಾಕೇತ್ ಗೋಖಲೆ, “ಪ್ರಕರಣ ಸಂಬಂಧ ನೀವು ಮೌನ ತಾಳಿರುವುದು ಯಾಕೆ? ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಇದೆ ಎಂದು ಸುಮ್ಮನಿದ್ದೀರಾ? ಇದರಿಂದ ಭಾರತಕ್ಕೆ ಮಾನ ಹಾನಿಯಾಗುವುದಿಲ್ಲವೇ?” ಎಂದು ಕೇಳಿದ್ದಾರೆ.

“ಇದೇನಾ ಮೋದಿಯವರ ನಾರಿಶಕ್ತಿ? ಸತ್ಯಶೋಧನಾ ತಂಡ ಇನ್ನೂ ಯಾಕೆ ಕಾನ್ಪುರಕ್ಕೆ ಹೋಗಿಲ್ಲ? ಸತ್ಯ ಶೋಧನಾ ತಂಡ ಪಶ್ಚಿಮ ಬಂಗಾಳಕ್ಕೆ ಮಾತ್ರನಾ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

“ಇವತ್ತು ಅಂತಾರಾಷ್ಟ್ರೀಯ ಮಹಿಳಾ ದಿನ. ಇಂತಹ ಘಟನೆ (ಅತ್ಯಾಚಾರ, ಸಾವು) ನಡೆದಿರುವುದು ಮಾತ್ರವಲ್ಲದೆ, ಅದನ್ನು ಬುಡಮೇಲು ಮಾಡಿ ಹೂತು ಹಾಕುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹ ಪತ್ತೆ; ಸಾಮೂಹಿಕ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...