Homeಮುಖಪುಟರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ, ಪ್ರಚಾರಕ್ಕಾಗಿ ಪ್ರತಿಯೊಂದು ಮಾಧ್ಯಮವನ್ನು ಬಳಸಿಕೊಳ್ಳಲು ಯತ್ನಿಸುತ್ತವೆ. ಇತ್ತೀಚೆಗಂತೂ ಮಾಧ್ಯಮಗಳ ಭರಾಟೆ ಜಾಸ್ತಿಯಾಗಿದೆ. ಟಿವಿ ಮಾಧ್ಯಮಗಳು, ಮುದ್ರಣ ಮಾಧ್ಯಮಗಳ ಜೊತೆ ಸಾಮಾಜಿಕ ಜಾಲತಾಣ ಮಾಧ್ಯಮಗಳು ಪೈಪೋಟಿಗೆ ಬಿದ್ದಂತೆ ಕಾಣಿಸುತ್ತವೆ. ಈ ಎಲ್ಲಾ ಮಾಧ್ಯಮಗಳಿಗೂ ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿವೆ. ಇದೆ ರೀತಿ ಈ ಬಾರಿಯ ಚುನಾವಣೆಯಲ್ಲಿ ಸಿನೆಮಾವನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಪ್ರಯತ್ನಿಸಿದ್ದು, ಸಾಕಷ್ಟು ರಾಜಕೀಯ ನಾಯಕರ ‘ಬಯೋಪಿಕ್‘ಗಳು ಈ ಬಾರಿ ತೆರೆಗೆ ಬಂದಿದ್ದು ಇನ್ನೂ ಕೆಲವು ಸಿನೆಮಾಗಳು ಬಿಡುಗಡೆಯ ಹಂತದಲ್ಲಿವೆ.

ಹೆಸರಾಂತ ವ್ಯಕ್ತಿಗಳ ಜೀವನದ ಬಗ್ಗೆ ನಿರ್ಮಿಸುವ ಸಿನೆಮಾಗಳನ್ನು ಬಯೋಪಿಕ್‍ಗಳೆಂದು ಕರೆಯುತ್ತಾರೆ. ಭಾರತೀಯ ಸಿನೆಮಾ ರಂಗದಲ್ಲಿ ಸಾಕಷ್ಟು ಬಯೋಪಿಕ್ ಸಿನೆಮಾಗಳು ತಯಾರಾಗಿವೆ. ಆದರೆ ಈ ರೀತಿಯಾಗಿ ಲಜ್ಜೆಗೆಟ್ಟು ಸಿನೆಮಾ ಮಂದಿ ರಾಜಕಾರಣಿಗಳಿಗೆ ಸ್ಪಂದಿಸಿದ್ದು ಇದೇ ಮೊದಲು ಅನಿಸುತ್ತೆ. ಬಿಜೆಪಿ ಈ ಚುನಾವಣೆಯಲ್ಲಿ ತನ್ನ ವಿಚಾರಗಳನ್ನು ತುರುಕಲು ಸಾಕಷ್ಟು ಸಿನೆಮಾಗಳಿಗೆ ದುಡ್ಡು ಖರ್ಚು ಮಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ರನ್ನ ಒಬ್ಬ ಅಸಮರ್ಥ ಮತ್ತು ಕೈಗೊಂಬೆಯ ರೀತಿಯ ಪ್ರಧಾನಿಯನ್ನಾಗಿ ತೋರಿಸಲು ‘ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಎಂಬ ಸಿನೆಮಾ ಮಾಡಿಸಿದ್ದರು. ಬಿಜೆಪಿಯ ಸದಸ್ಯ ಅನುಪಮ್ ಖೇರ್ ಅದರಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದರು. ಅದು ಚುನಾವಣೆಗೂ ಸಾಕಷ್ಟು ಮುಂಚೆಯೇ ಬಂದರೂ, ಒಂದು ವಾರವು ಸಹ ಯಾವುದೇ ಥೀಯೆಟರ್‍ನಲ್ಲಿ ಓಡಲಿಲ್ಲ. ಇನ್ನು ಸೈನಿಕರ ಹೆಸರಲ್ಲಿ ಓಟು ಕೇಳಿದ ಬಿಜೆಪಿಯ ಪರವಾಗಿ ಸರ್ಜಿಕಲ್ ಸ್ಟ್ರೈಕ್‍ನ ಕಥಾ ಹಂದರವನ್ನು ಇಟ್ಟುಕೊಂಡು ‘ಉರಿ’ ಎಂಬ ಸಿನೆಮಾವನ್ನು ನಿರ್ಮಿಸಿ ಬಿಡುಗಡೆಗೊಳಿಸಿದರು. ಇದರಲ್ಲಿ ರೋಚಕತೆ ಇದ್ದುದರಿಂದ ಜನರ ಗಮನಸೆಳೆಯಿತು. ಅದನ್ನು ಸಂಪೂರ್ಣವಾಗಿ ಪ್ರೊಪಗಾಂಡ ಸಿನೆಮಾ ಎನ್ನಬಹುದಾಗಿದೆ.

ಬಿಜೆಪಿಯು ಮತ್ತೊಮ್ಮೆ ಮೋದಿ ಎಂಬ ಘೋಷವಾಕ್ಯವನ್ನು ಎಲ್ಲ ಕಡೆ ಹೇಳಲು ಶುರು ಮಾಡಿದಂತೆ ಮೋದಿಯ ಜೀವನ ಚರಿತ್ರೆಯನ್ನು ತಯಾರಿಸಿ ಚುನಾವಣೆಗೆ ಮುಂಚೆ ಬಿಡುಗಡೆ ಮಾಡಲು ಯತ್ನಿಸಿತು. ವಿವೇಕ್ ಒಬೆರಾಯ್ (ಇವರ ಕುಟುಂಬವೂ ಬಿಜೆಪಿಯಲ್ಲಿದೆ) ಮೋದಿಯ ಪಾತ್ರವನ್ನು ನಿರ್ವಹಿಸಿದ್ದರು. ಚುನಾವಣೆಯ ಸಂದರ್ಭದಲಲಿ ಈ ಚಿತ್ರ ಬಿಡುಗಡೆಗೆ ಭಾರಿ ವಿರೋಧ ವ್ಯಕ್ತವಾದ ಕಾರಣ ಚುನಾವಣಾ ಆಯೋಗ ತಡೆ ಹಿಡಿದಿದೆ. ಚುನಾವಣಾ ಫಲಿತಾಂಶದ ನಂತರದ ದಿನವೇ ಬಿಡುಗಡೆ ಆಗಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದರ ಟ್ರೈಲರ್ ನೋಡಿದರೆ ದಾಖಲೆಗಳಿಲ್ಲದ ಸುಳ್ಳುಗಳ ಸರಮಾಲೆಯೇ ಇವರ ಸಿನೆಮಾ ಕಥೆಯ ಹಂದರ ಎನಿಸುವಂತಿದೆ. ಹೀಗೆ ತಮ್ಮ ಪಕ್ಷದ ಪ್ರಚಾರಕ್ಕಾಗಿಯೇ ಸಿನೆಮಾಗಳನ್ನ ಮಾಡುತ್ತಿದ್ದಾರೆ. ಇದರಲ್ಲಿ ನಟಿಸುವ ನಟರು ತಮ್ಮನ್ನು ತಾವು ಎಷ್ಟೊಂದು ಮಾರಿಕೊಂಡಿರುತ್ತಾರೆ ಎಂದು ಗಮನಿಸಬೇಕಿದೆ. ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನೆಮಾದಲ್ಲಿ ನಟಿಸಿದ ಒಬ್ಬ ಯುವನಟ ಈಗ ಪಶ್ಚಾತ್ತಾಪ ಪಡುತ್ತಿದ್ದಾನೆ. ಇದು ರಾಷ್ಟ ಮಟ್ಟದ ರಾಜಕೀಯ ಪಕ್ಷಗಳ ಕಥೆಯಾದರೆ ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ಸಿನೆಮಾಗಳು ಬಂದಿವೆ. ಬಾಲಿವುಡ್‍ನಲ್ಲಿ ಶಿವಸೇನೆಯ ಮುಖ್ಯಸ್ಥ ಬಾಳಠಾಕ್ರೆ ಬಗ್ಗೆಯು ಸಿನೆಮಾ ಒಂದು ಬಂದಿದೆ. ಈ ಸಿನೆಮಾವನ್ನು ಅಭಿಜಿತ್ ಫಾನ್ಸೆ ನಿರ್ದೇಶಿಸಿದ್ದು ಠಾಕ್ರೆ ಪಾತ್ರವನ್ನು ನವಜುದ್ದೀನ್ ಸಿದ್ದಿಕಿ ಮಾಡಿದ್ದರು. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತ ಮೇಲೆ ಕೂಡ ಸಿನೆಮಾ ಮಾಡಲಿದ್ದಾರೆ ಎಂಬ ಮಾತುಗಳು ಕಾಲಿವುಡ್‍ನಲ್ಲಿ ಕೇಳಿಸುತ್ತಿವೆ..

ಇದನ್ನು ಓದಿ ; ಮನುಜಮತ ಸಿನೆಮಾ  ಹಬ್ಬ : ಹೊಸ ಕಾಲದ ಸಮುದಾಯ ಕಟ್ಟುವ ನಡೆ 

ಚಂದ್ರಬಾಬು ನಾಯ್ಡುಗೆ ತಲೆನೋವಾದ ಆರ್.ಜಿ.ವಿ
ಆಂಧ್ರ ಮತ್ತು ತೆಲಂಗಾಣದಲ್ಲಿ ಬರಿ ಬಯೋಪಿಕ್‍ಗಳದ್ದೆ ಚರ್ಚೆಯಾಗಿಬಿಟ್ಟಿದೆ. ತೆಲುಗು ದೇಶಂ ಪಾರ್ಟಿಯ ಸಂಸ್ಥಾಪಕರು ಹಾಗೂ ಹೆಸರಾಂತ ನಟರಾದ ದಿವಂಗತ ನಂದಮೂರಿ ತಾರಕ ರಾಮರಾವು (ಎನ್.ಟಿ.ಆರ್)ರವರ ಜೀವನ ಆಧಾರಿತವಾಗಿ ಎರಡು ಚಿತ್ರಗಳು ತೆರೆಗೆ ಬಂದಿವೆ. ಈ ಸಿನೆಮಾವನ್ನು ರಾಧಾಕೃಷ್ಣ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ಸ್ವತಃ ಎನ್.ಟಿ.ರಾಮಾರಾವ್ ರ ಪಾತ್ರವನ್ನ ಅವರ ಮಗ ತೆಲುಗುದೇಶಂ ಶಾಸಕ ನಂದಮೂರಿ ಬಾಲಕೃಷ್ಣ ಮಾಡಿದ್ದಾರೆ. ಇದು ತಕ್ಕಮಟ್ಟಿಗೆ ಯಶಸ್ವಿಯೂ ಆಯಿತು. ಆದರೆ ವಿವಾದಗಳಿಗೆ ಪ್ರಸಿದ್ಧ ಹೊಂದಿರುವ ರಾಂ ಗೋಪಾಲ್ ವರ್ಮ ಲಕ್ಷ್ಮೀಸ್ ಎನ್.ಟಿ.ಆರ್ ಎಂದು ಹೊಸ ಸಿನೆಮಾದ ಟ್ರೈಲರ್ ಬಿಟ್ಟು ಆಂಧ್ರದಲ್ಲಿ ತೆಲುಗುದೇಶಂ ಪಾರ್ಟಿಗೆ ತಲೆನೋವಾಗಿದ್ದರು. ಏಕೆಂದರೆ ಹಾಲಿ ಮುಖ್ಯಮಂತ್ರಿ ಎನ್‍ಟಿಆರ್ ಅಳಿಯ ಚಂದ್ರಬಾಬು ನಾಯ್ಡು ರಾಮರಾವ್ ನಂತರ ಪಾರ್ಟಿಯ ಹಿಡಿತವನ್ನು ಕೈಗೆತ್ತಿಕೊಂಡವರು ಆದರೆ ಲಕ್ಷ್ಮೀ ಪಾರ್ವತಿ ಎನ್.ಟಿ.ಆರ್ ಎರಡನೇ ಹೆಂಡತಿ. ಆಕೆ ಈ ಕುಟುಂಬದಿಂದ ದೂರ ಇದ್ದಾರೆ ಮತ್ತು ಅವರೇ ರಾಮರಾವ್ ಕೊನೆಯ ದಿನಗಳಲ್ಲಿ ಜೊತೆಗಿದ್ದವರು. ಈಕೆಯ ಜೊತೆ ಚಂದ್ರಬಾಬು ನಾಯ್ಡು ಜಗಳಗಳೇ ಎನ್.ಟಿ.ಆರ್ ಸಾವಿಗೆ ಕಾರಣವಾಯಿತು ಮತ್ತು ನಾನು ಲಕ್ಷ್ಮೀ ಪಾರ್ವತಿ ದೃಷ್ಟಿಕೋನದಿಂದ ಸಿನೆಮಾ ತೆಗೆಯುತ್ತೇನೆ ಎಂದು ಆರ್‍ಜಿವಿ ಕೂತುಬಿಟ್ಟರು. ಈ ಸಿನೆಮಾ ಬಂದರೆ ಖಂಡಿತ ಚುನಾವಣೆಯಲ್ಲಿ ತೊಂದರೆಯಾಗುತ್ತೆ ಎಂದು ತೆಲುಗುದೇಶಂ ಕೋರ್ಟ್‍ಗೆ ಹೋಗಿ ಕೇವಲ ತೆಲಂಗಾಣದಲ್ಲಿ ಮಾತ್ರ ಲಕ್ಷ್ಮೀಸ್ ಎನ್.ಟಿ.ಆರ್ ಬಿಡುಗಡೆಯಾಯಿತು. ಈ ಸಿನೆಮಾದ ನಿರ್ಮಾಪಕರು ವೈಎಸ್‍ಆರ್ ಕಾಂಗ್ರೆಸ್‍ನ ಜಗನ್ ಮೋಹನ್ ರೆಡ್ಡಿ ಆಪ್ತರು ಎಂದು ಕೂಡ ಹೇಳಲಾಗುತ್ತಿದೆ.

ಇತ್ತಿಚಿಗೆ ಚುನಾವಣೆಯ ನಂತರ ಚಿತ್ರ ಬಿಡುಗಡೆ ಮಾಡಲು ಸುದ್ದಿಗೋಷ್ಟಿ ಮಾಡಿದ ರಾಮ್ ಗೋಪಾಲ ವರ್ಮರನ್ನ ವಿಜಯವಾಡದಲ್ಲಿ ಅರೆಸ್ಟ್ ಮಾಡಲಾಗಿತ್ತು. ಇತ್ತಕಡೆ ತೆಲಂಗಾಣದ ಹಾಲಿ ಮುಖ್ಯಮಂತ್ರಿ ಕೆ.ಸಿ.ಆರ್‍ರ ಜೀವನ ಚರಿತ್ರೆಯ ಒಂದು ಸಿನೆಮಾ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಮತ್ತೆ ರಾಂ ಗೋಪಾಲ್ ವರ್ಮ ನಿರ್ದೇಶನದಲ್ಲಿ ಕೆಸಿಆರ್ ಕುರಿತು ಟೈಗರ್ ಹೆಸರಿನ ಸಿನೆಮಾ ತಯಾರಾಗುತ್ತಿದೆ. ಚುನಾವಣೆಗಿಂತ ಮುಂಚೆ ಜಗನ್ ಮೋಹನ್ ರೆಡ್ಡಿಯ ತಂದೆ ವೈಎಸ್ ರಾಜಶೇಖರ್ ರೆಡ್ಡಿಯ ಕುರಿತು ಯಾತ್ರ ಸಿನೆಮಾ ಬಿಡುಗಡೆಯಾಗಿತ್ತು. ಇದು ವೈಎಸ್‍ಆರ್ ಇಡೀ ಆಂದ್ರಪ್ರದೇಶದಲ್ಲಿ ಪಾದಯಾತ್ರೆ ಮಾಡಿ ಮುಖ್ಯಮಂತ್ರಿಯಾದ ಕಥೆಯ ಹಂದರವನ್ನು ಒಳಗೊಂಡಿತ್ತು ಅದೇ ದಾರಿಯಲ್ಲಿ ಜಗನ್ ಕೂಡ ಪಾದಯಾತ್ರೆ ಮಾಡಿ ಅದು ಕೊನೆಗೊಳ್ಳುವ ಸಮಯದಲ್ಲಿ ಸಿನೆಮಾ ಬಿಡುಗಡೆಯಾಗಿತ್ತು. ಹೀಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಯೋಪಿಕ್‍ಗಳ ಕ್ರೇಜ್ ಇನ್ನೂ ಮುಗಿದಿಲ್ಲ.

ಆದರೆ ಸಾಕಷ್ಷು ಬಯೋಪಿಕ್‍ಗಳು ಚುನಾವಣೆಯನ್ನೆ ಉದ್ದೇಶಿಸಿ ಬಂದದ್ದರಿಂದ ಇವು ಕೇವಲ ತಮ್ಮ ನಾಯಕರನ್ನು ವಿಜೃಂಭಿಸುವ ಮತ್ತು ಮತ ಬೇಟೆಯ ದೃಷ್ಟಿಯಿಂದ ಮಾತ್ರ ಸಿನೆಮಾ ತಯಾರಾಗಿವೆ. ಹಾಗಾಗಿ ಇವು ವಾಸ್ತವ ಜೀವನ ಚರಿತ್ರೆಗಿಂತ ಸುಳ್ಳುಗಳನ್ನೇ ವಿಜೃಂಭಿಸುವ ಸಾಧ್ಯತೆ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...