Homeಮುಖಪುಟರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ, ಪ್ರಚಾರಕ್ಕಾಗಿ ಪ್ರತಿಯೊಂದು ಮಾಧ್ಯಮವನ್ನು ಬಳಸಿಕೊಳ್ಳಲು ಯತ್ನಿಸುತ್ತವೆ. ಇತ್ತೀಚೆಗಂತೂ ಮಾಧ್ಯಮಗಳ ಭರಾಟೆ ಜಾಸ್ತಿಯಾಗಿದೆ. ಟಿವಿ ಮಾಧ್ಯಮಗಳು, ಮುದ್ರಣ ಮಾಧ್ಯಮಗಳ ಜೊತೆ ಸಾಮಾಜಿಕ ಜಾಲತಾಣ ಮಾಧ್ಯಮಗಳು ಪೈಪೋಟಿಗೆ ಬಿದ್ದಂತೆ ಕಾಣಿಸುತ್ತವೆ. ಈ ಎಲ್ಲಾ ಮಾಧ್ಯಮಗಳಿಗೂ ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿವೆ. ಇದೆ ರೀತಿ ಈ ಬಾರಿಯ ಚುನಾವಣೆಯಲ್ಲಿ ಸಿನೆಮಾವನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಪ್ರಯತ್ನಿಸಿದ್ದು, ಸಾಕಷ್ಟು ರಾಜಕೀಯ ನಾಯಕರ ‘ಬಯೋಪಿಕ್‘ಗಳು ಈ ಬಾರಿ ತೆರೆಗೆ ಬಂದಿದ್ದು ಇನ್ನೂ ಕೆಲವು ಸಿನೆಮಾಗಳು ಬಿಡುಗಡೆಯ ಹಂತದಲ್ಲಿವೆ.

ಹೆಸರಾಂತ ವ್ಯಕ್ತಿಗಳ ಜೀವನದ ಬಗ್ಗೆ ನಿರ್ಮಿಸುವ ಸಿನೆಮಾಗಳನ್ನು ಬಯೋಪಿಕ್‍ಗಳೆಂದು ಕರೆಯುತ್ತಾರೆ. ಭಾರತೀಯ ಸಿನೆಮಾ ರಂಗದಲ್ಲಿ ಸಾಕಷ್ಟು ಬಯೋಪಿಕ್ ಸಿನೆಮಾಗಳು ತಯಾರಾಗಿವೆ. ಆದರೆ ಈ ರೀತಿಯಾಗಿ ಲಜ್ಜೆಗೆಟ್ಟು ಸಿನೆಮಾ ಮಂದಿ ರಾಜಕಾರಣಿಗಳಿಗೆ ಸ್ಪಂದಿಸಿದ್ದು ಇದೇ ಮೊದಲು ಅನಿಸುತ್ತೆ. ಬಿಜೆಪಿ ಈ ಚುನಾವಣೆಯಲ್ಲಿ ತನ್ನ ವಿಚಾರಗಳನ್ನು ತುರುಕಲು ಸಾಕಷ್ಟು ಸಿನೆಮಾಗಳಿಗೆ ದುಡ್ಡು ಖರ್ಚು ಮಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ರನ್ನ ಒಬ್ಬ ಅಸಮರ್ಥ ಮತ್ತು ಕೈಗೊಂಬೆಯ ರೀತಿಯ ಪ್ರಧಾನಿಯನ್ನಾಗಿ ತೋರಿಸಲು ‘ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಎಂಬ ಸಿನೆಮಾ ಮಾಡಿಸಿದ್ದರು. ಬಿಜೆಪಿಯ ಸದಸ್ಯ ಅನುಪಮ್ ಖೇರ್ ಅದರಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದರು. ಅದು ಚುನಾವಣೆಗೂ ಸಾಕಷ್ಟು ಮುಂಚೆಯೇ ಬಂದರೂ, ಒಂದು ವಾರವು ಸಹ ಯಾವುದೇ ಥೀಯೆಟರ್‍ನಲ್ಲಿ ಓಡಲಿಲ್ಲ. ಇನ್ನು ಸೈನಿಕರ ಹೆಸರಲ್ಲಿ ಓಟು ಕೇಳಿದ ಬಿಜೆಪಿಯ ಪರವಾಗಿ ಸರ್ಜಿಕಲ್ ಸ್ಟ್ರೈಕ್‍ನ ಕಥಾ ಹಂದರವನ್ನು ಇಟ್ಟುಕೊಂಡು ‘ಉರಿ’ ಎಂಬ ಸಿನೆಮಾವನ್ನು ನಿರ್ಮಿಸಿ ಬಿಡುಗಡೆಗೊಳಿಸಿದರು. ಇದರಲ್ಲಿ ರೋಚಕತೆ ಇದ್ದುದರಿಂದ ಜನರ ಗಮನಸೆಳೆಯಿತು. ಅದನ್ನು ಸಂಪೂರ್ಣವಾಗಿ ಪ್ರೊಪಗಾಂಡ ಸಿನೆಮಾ ಎನ್ನಬಹುದಾಗಿದೆ.

ಬಿಜೆಪಿಯು ಮತ್ತೊಮ್ಮೆ ಮೋದಿ ಎಂಬ ಘೋಷವಾಕ್ಯವನ್ನು ಎಲ್ಲ ಕಡೆ ಹೇಳಲು ಶುರು ಮಾಡಿದಂತೆ ಮೋದಿಯ ಜೀವನ ಚರಿತ್ರೆಯನ್ನು ತಯಾರಿಸಿ ಚುನಾವಣೆಗೆ ಮುಂಚೆ ಬಿಡುಗಡೆ ಮಾಡಲು ಯತ್ನಿಸಿತು. ವಿವೇಕ್ ಒಬೆರಾಯ್ (ಇವರ ಕುಟುಂಬವೂ ಬಿಜೆಪಿಯಲ್ಲಿದೆ) ಮೋದಿಯ ಪಾತ್ರವನ್ನು ನಿರ್ವಹಿಸಿದ್ದರು. ಚುನಾವಣೆಯ ಸಂದರ್ಭದಲಲಿ ಈ ಚಿತ್ರ ಬಿಡುಗಡೆಗೆ ಭಾರಿ ವಿರೋಧ ವ್ಯಕ್ತವಾದ ಕಾರಣ ಚುನಾವಣಾ ಆಯೋಗ ತಡೆ ಹಿಡಿದಿದೆ. ಚುನಾವಣಾ ಫಲಿತಾಂಶದ ನಂತರದ ದಿನವೇ ಬಿಡುಗಡೆ ಆಗಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದರ ಟ್ರೈಲರ್ ನೋಡಿದರೆ ದಾಖಲೆಗಳಿಲ್ಲದ ಸುಳ್ಳುಗಳ ಸರಮಾಲೆಯೇ ಇವರ ಸಿನೆಮಾ ಕಥೆಯ ಹಂದರ ಎನಿಸುವಂತಿದೆ. ಹೀಗೆ ತಮ್ಮ ಪಕ್ಷದ ಪ್ರಚಾರಕ್ಕಾಗಿಯೇ ಸಿನೆಮಾಗಳನ್ನ ಮಾಡುತ್ತಿದ್ದಾರೆ. ಇದರಲ್ಲಿ ನಟಿಸುವ ನಟರು ತಮ್ಮನ್ನು ತಾವು ಎಷ್ಟೊಂದು ಮಾರಿಕೊಂಡಿರುತ್ತಾರೆ ಎಂದು ಗಮನಿಸಬೇಕಿದೆ. ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನೆಮಾದಲ್ಲಿ ನಟಿಸಿದ ಒಬ್ಬ ಯುವನಟ ಈಗ ಪಶ್ಚಾತ್ತಾಪ ಪಡುತ್ತಿದ್ದಾನೆ. ಇದು ರಾಷ್ಟ ಮಟ್ಟದ ರಾಜಕೀಯ ಪಕ್ಷಗಳ ಕಥೆಯಾದರೆ ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ಸಿನೆಮಾಗಳು ಬಂದಿವೆ. ಬಾಲಿವುಡ್‍ನಲ್ಲಿ ಶಿವಸೇನೆಯ ಮುಖ್ಯಸ್ಥ ಬಾಳಠಾಕ್ರೆ ಬಗ್ಗೆಯು ಸಿನೆಮಾ ಒಂದು ಬಂದಿದೆ. ಈ ಸಿನೆಮಾವನ್ನು ಅಭಿಜಿತ್ ಫಾನ್ಸೆ ನಿರ್ದೇಶಿಸಿದ್ದು ಠಾಕ್ರೆ ಪಾತ್ರವನ್ನು ನವಜುದ್ದೀನ್ ಸಿದ್ದಿಕಿ ಮಾಡಿದ್ದರು. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತ ಮೇಲೆ ಕೂಡ ಸಿನೆಮಾ ಮಾಡಲಿದ್ದಾರೆ ಎಂಬ ಮಾತುಗಳು ಕಾಲಿವುಡ್‍ನಲ್ಲಿ ಕೇಳಿಸುತ್ತಿವೆ..

ಇದನ್ನು ಓದಿ ; ಮನುಜಮತ ಸಿನೆಮಾ  ಹಬ್ಬ : ಹೊಸ ಕಾಲದ ಸಮುದಾಯ ಕಟ್ಟುವ ನಡೆ 

ಚಂದ್ರಬಾಬು ನಾಯ್ಡುಗೆ ತಲೆನೋವಾದ ಆರ್.ಜಿ.ವಿ
ಆಂಧ್ರ ಮತ್ತು ತೆಲಂಗಾಣದಲ್ಲಿ ಬರಿ ಬಯೋಪಿಕ್‍ಗಳದ್ದೆ ಚರ್ಚೆಯಾಗಿಬಿಟ್ಟಿದೆ. ತೆಲುಗು ದೇಶಂ ಪಾರ್ಟಿಯ ಸಂಸ್ಥಾಪಕರು ಹಾಗೂ ಹೆಸರಾಂತ ನಟರಾದ ದಿವಂಗತ ನಂದಮೂರಿ ತಾರಕ ರಾಮರಾವು (ಎನ್.ಟಿ.ಆರ್)ರವರ ಜೀವನ ಆಧಾರಿತವಾಗಿ ಎರಡು ಚಿತ್ರಗಳು ತೆರೆಗೆ ಬಂದಿವೆ. ಈ ಸಿನೆಮಾವನ್ನು ರಾಧಾಕೃಷ್ಣ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ಸ್ವತಃ ಎನ್.ಟಿ.ರಾಮಾರಾವ್ ರ ಪಾತ್ರವನ್ನ ಅವರ ಮಗ ತೆಲುಗುದೇಶಂ ಶಾಸಕ ನಂದಮೂರಿ ಬಾಲಕೃಷ್ಣ ಮಾಡಿದ್ದಾರೆ. ಇದು ತಕ್ಕಮಟ್ಟಿಗೆ ಯಶಸ್ವಿಯೂ ಆಯಿತು. ಆದರೆ ವಿವಾದಗಳಿಗೆ ಪ್ರಸಿದ್ಧ ಹೊಂದಿರುವ ರಾಂ ಗೋಪಾಲ್ ವರ್ಮ ಲಕ್ಷ್ಮೀಸ್ ಎನ್.ಟಿ.ಆರ್ ಎಂದು ಹೊಸ ಸಿನೆಮಾದ ಟ್ರೈಲರ್ ಬಿಟ್ಟು ಆಂಧ್ರದಲ್ಲಿ ತೆಲುಗುದೇಶಂ ಪಾರ್ಟಿಗೆ ತಲೆನೋವಾಗಿದ್ದರು. ಏಕೆಂದರೆ ಹಾಲಿ ಮುಖ್ಯಮಂತ್ರಿ ಎನ್‍ಟಿಆರ್ ಅಳಿಯ ಚಂದ್ರಬಾಬು ನಾಯ್ಡು ರಾಮರಾವ್ ನಂತರ ಪಾರ್ಟಿಯ ಹಿಡಿತವನ್ನು ಕೈಗೆತ್ತಿಕೊಂಡವರು ಆದರೆ ಲಕ್ಷ್ಮೀ ಪಾರ್ವತಿ ಎನ್.ಟಿ.ಆರ್ ಎರಡನೇ ಹೆಂಡತಿ. ಆಕೆ ಈ ಕುಟುಂಬದಿಂದ ದೂರ ಇದ್ದಾರೆ ಮತ್ತು ಅವರೇ ರಾಮರಾವ್ ಕೊನೆಯ ದಿನಗಳಲ್ಲಿ ಜೊತೆಗಿದ್ದವರು. ಈಕೆಯ ಜೊತೆ ಚಂದ್ರಬಾಬು ನಾಯ್ಡು ಜಗಳಗಳೇ ಎನ್.ಟಿ.ಆರ್ ಸಾವಿಗೆ ಕಾರಣವಾಯಿತು ಮತ್ತು ನಾನು ಲಕ್ಷ್ಮೀ ಪಾರ್ವತಿ ದೃಷ್ಟಿಕೋನದಿಂದ ಸಿನೆಮಾ ತೆಗೆಯುತ್ತೇನೆ ಎಂದು ಆರ್‍ಜಿವಿ ಕೂತುಬಿಟ್ಟರು. ಈ ಸಿನೆಮಾ ಬಂದರೆ ಖಂಡಿತ ಚುನಾವಣೆಯಲ್ಲಿ ತೊಂದರೆಯಾಗುತ್ತೆ ಎಂದು ತೆಲುಗುದೇಶಂ ಕೋರ್ಟ್‍ಗೆ ಹೋಗಿ ಕೇವಲ ತೆಲಂಗಾಣದಲ್ಲಿ ಮಾತ್ರ ಲಕ್ಷ್ಮೀಸ್ ಎನ್.ಟಿ.ಆರ್ ಬಿಡುಗಡೆಯಾಯಿತು. ಈ ಸಿನೆಮಾದ ನಿರ್ಮಾಪಕರು ವೈಎಸ್‍ಆರ್ ಕಾಂಗ್ರೆಸ್‍ನ ಜಗನ್ ಮೋಹನ್ ರೆಡ್ಡಿ ಆಪ್ತರು ಎಂದು ಕೂಡ ಹೇಳಲಾಗುತ್ತಿದೆ.

ಇತ್ತಿಚಿಗೆ ಚುನಾವಣೆಯ ನಂತರ ಚಿತ್ರ ಬಿಡುಗಡೆ ಮಾಡಲು ಸುದ್ದಿಗೋಷ್ಟಿ ಮಾಡಿದ ರಾಮ್ ಗೋಪಾಲ ವರ್ಮರನ್ನ ವಿಜಯವಾಡದಲ್ಲಿ ಅರೆಸ್ಟ್ ಮಾಡಲಾಗಿತ್ತು. ಇತ್ತಕಡೆ ತೆಲಂಗಾಣದ ಹಾಲಿ ಮುಖ್ಯಮಂತ್ರಿ ಕೆ.ಸಿ.ಆರ್‍ರ ಜೀವನ ಚರಿತ್ರೆಯ ಒಂದು ಸಿನೆಮಾ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಮತ್ತೆ ರಾಂ ಗೋಪಾಲ್ ವರ್ಮ ನಿರ್ದೇಶನದಲ್ಲಿ ಕೆಸಿಆರ್ ಕುರಿತು ಟೈಗರ್ ಹೆಸರಿನ ಸಿನೆಮಾ ತಯಾರಾಗುತ್ತಿದೆ. ಚುನಾವಣೆಗಿಂತ ಮುಂಚೆ ಜಗನ್ ಮೋಹನ್ ರೆಡ್ಡಿಯ ತಂದೆ ವೈಎಸ್ ರಾಜಶೇಖರ್ ರೆಡ್ಡಿಯ ಕುರಿತು ಯಾತ್ರ ಸಿನೆಮಾ ಬಿಡುಗಡೆಯಾಗಿತ್ತು. ಇದು ವೈಎಸ್‍ಆರ್ ಇಡೀ ಆಂದ್ರಪ್ರದೇಶದಲ್ಲಿ ಪಾದಯಾತ್ರೆ ಮಾಡಿ ಮುಖ್ಯಮಂತ್ರಿಯಾದ ಕಥೆಯ ಹಂದರವನ್ನು ಒಳಗೊಂಡಿತ್ತು ಅದೇ ದಾರಿಯಲ್ಲಿ ಜಗನ್ ಕೂಡ ಪಾದಯಾತ್ರೆ ಮಾಡಿ ಅದು ಕೊನೆಗೊಳ್ಳುವ ಸಮಯದಲ್ಲಿ ಸಿನೆಮಾ ಬಿಡುಗಡೆಯಾಗಿತ್ತು. ಹೀಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಯೋಪಿಕ್‍ಗಳ ಕ್ರೇಜ್ ಇನ್ನೂ ಮುಗಿದಿಲ್ಲ.

ಆದರೆ ಸಾಕಷ್ಷು ಬಯೋಪಿಕ್‍ಗಳು ಚುನಾವಣೆಯನ್ನೆ ಉದ್ದೇಶಿಸಿ ಬಂದದ್ದರಿಂದ ಇವು ಕೇವಲ ತಮ್ಮ ನಾಯಕರನ್ನು ವಿಜೃಂಭಿಸುವ ಮತ್ತು ಮತ ಬೇಟೆಯ ದೃಷ್ಟಿಯಿಂದ ಮಾತ್ರ ಸಿನೆಮಾ ತಯಾರಾಗಿವೆ. ಹಾಗಾಗಿ ಇವು ವಾಸ್ತವ ಜೀವನ ಚರಿತ್ರೆಗಿಂತ ಸುಳ್ಳುಗಳನ್ನೇ ವಿಜೃಂಭಿಸುವ ಸಾಧ್ಯತೆ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...