Homeಮುಖಪುಟರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ, ಪ್ರಚಾರಕ್ಕಾಗಿ ಪ್ರತಿಯೊಂದು ಮಾಧ್ಯಮವನ್ನು ಬಳಸಿಕೊಳ್ಳಲು ಯತ್ನಿಸುತ್ತವೆ. ಇತ್ತೀಚೆಗಂತೂ ಮಾಧ್ಯಮಗಳ ಭರಾಟೆ ಜಾಸ್ತಿಯಾಗಿದೆ. ಟಿವಿ ಮಾಧ್ಯಮಗಳು, ಮುದ್ರಣ ಮಾಧ್ಯಮಗಳ ಜೊತೆ ಸಾಮಾಜಿಕ ಜಾಲತಾಣ ಮಾಧ್ಯಮಗಳು ಪೈಪೋಟಿಗೆ ಬಿದ್ದಂತೆ ಕಾಣಿಸುತ್ತವೆ. ಈ ಎಲ್ಲಾ ಮಾಧ್ಯಮಗಳಿಗೂ ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿವೆ. ಇದೆ ರೀತಿ ಈ ಬಾರಿಯ ಚುನಾವಣೆಯಲ್ಲಿ ಸಿನೆಮಾವನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಪ್ರಯತ್ನಿಸಿದ್ದು, ಸಾಕಷ್ಟು ರಾಜಕೀಯ ನಾಯಕರ ‘ಬಯೋಪಿಕ್‘ಗಳು ಈ ಬಾರಿ ತೆರೆಗೆ ಬಂದಿದ್ದು ಇನ್ನೂ ಕೆಲವು ಸಿನೆಮಾಗಳು ಬಿಡುಗಡೆಯ ಹಂತದಲ್ಲಿವೆ.

ಹೆಸರಾಂತ ವ್ಯಕ್ತಿಗಳ ಜೀವನದ ಬಗ್ಗೆ ನಿರ್ಮಿಸುವ ಸಿನೆಮಾಗಳನ್ನು ಬಯೋಪಿಕ್‍ಗಳೆಂದು ಕರೆಯುತ್ತಾರೆ. ಭಾರತೀಯ ಸಿನೆಮಾ ರಂಗದಲ್ಲಿ ಸಾಕಷ್ಟು ಬಯೋಪಿಕ್ ಸಿನೆಮಾಗಳು ತಯಾರಾಗಿವೆ. ಆದರೆ ಈ ರೀತಿಯಾಗಿ ಲಜ್ಜೆಗೆಟ್ಟು ಸಿನೆಮಾ ಮಂದಿ ರಾಜಕಾರಣಿಗಳಿಗೆ ಸ್ಪಂದಿಸಿದ್ದು ಇದೇ ಮೊದಲು ಅನಿಸುತ್ತೆ. ಬಿಜೆಪಿ ಈ ಚುನಾವಣೆಯಲ್ಲಿ ತನ್ನ ವಿಚಾರಗಳನ್ನು ತುರುಕಲು ಸಾಕಷ್ಟು ಸಿನೆಮಾಗಳಿಗೆ ದುಡ್ಡು ಖರ್ಚು ಮಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ರನ್ನ ಒಬ್ಬ ಅಸಮರ್ಥ ಮತ್ತು ಕೈಗೊಂಬೆಯ ರೀತಿಯ ಪ್ರಧಾನಿಯನ್ನಾಗಿ ತೋರಿಸಲು ‘ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಎಂಬ ಸಿನೆಮಾ ಮಾಡಿಸಿದ್ದರು. ಬಿಜೆಪಿಯ ಸದಸ್ಯ ಅನುಪಮ್ ಖೇರ್ ಅದರಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದರು. ಅದು ಚುನಾವಣೆಗೂ ಸಾಕಷ್ಟು ಮುಂಚೆಯೇ ಬಂದರೂ, ಒಂದು ವಾರವು ಸಹ ಯಾವುದೇ ಥೀಯೆಟರ್‍ನಲ್ಲಿ ಓಡಲಿಲ್ಲ. ಇನ್ನು ಸೈನಿಕರ ಹೆಸರಲ್ಲಿ ಓಟು ಕೇಳಿದ ಬಿಜೆಪಿಯ ಪರವಾಗಿ ಸರ್ಜಿಕಲ್ ಸ್ಟ್ರೈಕ್‍ನ ಕಥಾ ಹಂದರವನ್ನು ಇಟ್ಟುಕೊಂಡು ‘ಉರಿ’ ಎಂಬ ಸಿನೆಮಾವನ್ನು ನಿರ್ಮಿಸಿ ಬಿಡುಗಡೆಗೊಳಿಸಿದರು. ಇದರಲ್ಲಿ ರೋಚಕತೆ ಇದ್ದುದರಿಂದ ಜನರ ಗಮನಸೆಳೆಯಿತು. ಅದನ್ನು ಸಂಪೂರ್ಣವಾಗಿ ಪ್ರೊಪಗಾಂಡ ಸಿನೆಮಾ ಎನ್ನಬಹುದಾಗಿದೆ.

ಬಿಜೆಪಿಯು ಮತ್ತೊಮ್ಮೆ ಮೋದಿ ಎಂಬ ಘೋಷವಾಕ್ಯವನ್ನು ಎಲ್ಲ ಕಡೆ ಹೇಳಲು ಶುರು ಮಾಡಿದಂತೆ ಮೋದಿಯ ಜೀವನ ಚರಿತ್ರೆಯನ್ನು ತಯಾರಿಸಿ ಚುನಾವಣೆಗೆ ಮುಂಚೆ ಬಿಡುಗಡೆ ಮಾಡಲು ಯತ್ನಿಸಿತು. ವಿವೇಕ್ ಒಬೆರಾಯ್ (ಇವರ ಕುಟುಂಬವೂ ಬಿಜೆಪಿಯಲ್ಲಿದೆ) ಮೋದಿಯ ಪಾತ್ರವನ್ನು ನಿರ್ವಹಿಸಿದ್ದರು. ಚುನಾವಣೆಯ ಸಂದರ್ಭದಲಲಿ ಈ ಚಿತ್ರ ಬಿಡುಗಡೆಗೆ ಭಾರಿ ವಿರೋಧ ವ್ಯಕ್ತವಾದ ಕಾರಣ ಚುನಾವಣಾ ಆಯೋಗ ತಡೆ ಹಿಡಿದಿದೆ. ಚುನಾವಣಾ ಫಲಿತಾಂಶದ ನಂತರದ ದಿನವೇ ಬಿಡುಗಡೆ ಆಗಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದರ ಟ್ರೈಲರ್ ನೋಡಿದರೆ ದಾಖಲೆಗಳಿಲ್ಲದ ಸುಳ್ಳುಗಳ ಸರಮಾಲೆಯೇ ಇವರ ಸಿನೆಮಾ ಕಥೆಯ ಹಂದರ ಎನಿಸುವಂತಿದೆ. ಹೀಗೆ ತಮ್ಮ ಪಕ್ಷದ ಪ್ರಚಾರಕ್ಕಾಗಿಯೇ ಸಿನೆಮಾಗಳನ್ನ ಮಾಡುತ್ತಿದ್ದಾರೆ. ಇದರಲ್ಲಿ ನಟಿಸುವ ನಟರು ತಮ್ಮನ್ನು ತಾವು ಎಷ್ಟೊಂದು ಮಾರಿಕೊಂಡಿರುತ್ತಾರೆ ಎಂದು ಗಮನಿಸಬೇಕಿದೆ. ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನೆಮಾದಲ್ಲಿ ನಟಿಸಿದ ಒಬ್ಬ ಯುವನಟ ಈಗ ಪಶ್ಚಾತ್ತಾಪ ಪಡುತ್ತಿದ್ದಾನೆ. ಇದು ರಾಷ್ಟ ಮಟ್ಟದ ರಾಜಕೀಯ ಪಕ್ಷಗಳ ಕಥೆಯಾದರೆ ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ಸಿನೆಮಾಗಳು ಬಂದಿವೆ. ಬಾಲಿವುಡ್‍ನಲ್ಲಿ ಶಿವಸೇನೆಯ ಮುಖ್ಯಸ್ಥ ಬಾಳಠಾಕ್ರೆ ಬಗ್ಗೆಯು ಸಿನೆಮಾ ಒಂದು ಬಂದಿದೆ. ಈ ಸಿನೆಮಾವನ್ನು ಅಭಿಜಿತ್ ಫಾನ್ಸೆ ನಿರ್ದೇಶಿಸಿದ್ದು ಠಾಕ್ರೆ ಪಾತ್ರವನ್ನು ನವಜುದ್ದೀನ್ ಸಿದ್ದಿಕಿ ಮಾಡಿದ್ದರು. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತ ಮೇಲೆ ಕೂಡ ಸಿನೆಮಾ ಮಾಡಲಿದ್ದಾರೆ ಎಂಬ ಮಾತುಗಳು ಕಾಲಿವುಡ್‍ನಲ್ಲಿ ಕೇಳಿಸುತ್ತಿವೆ..

ಇದನ್ನು ಓದಿ ; ಮನುಜಮತ ಸಿನೆಮಾ  ಹಬ್ಬ : ಹೊಸ ಕಾಲದ ಸಮುದಾಯ ಕಟ್ಟುವ ನಡೆ 

ಚಂದ್ರಬಾಬು ನಾಯ್ಡುಗೆ ತಲೆನೋವಾದ ಆರ್.ಜಿ.ವಿ
ಆಂಧ್ರ ಮತ್ತು ತೆಲಂಗಾಣದಲ್ಲಿ ಬರಿ ಬಯೋಪಿಕ್‍ಗಳದ್ದೆ ಚರ್ಚೆಯಾಗಿಬಿಟ್ಟಿದೆ. ತೆಲುಗು ದೇಶಂ ಪಾರ್ಟಿಯ ಸಂಸ್ಥಾಪಕರು ಹಾಗೂ ಹೆಸರಾಂತ ನಟರಾದ ದಿವಂಗತ ನಂದಮೂರಿ ತಾರಕ ರಾಮರಾವು (ಎನ್.ಟಿ.ಆರ್)ರವರ ಜೀವನ ಆಧಾರಿತವಾಗಿ ಎರಡು ಚಿತ್ರಗಳು ತೆರೆಗೆ ಬಂದಿವೆ. ಈ ಸಿನೆಮಾವನ್ನು ರಾಧಾಕೃಷ್ಣ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ಸ್ವತಃ ಎನ್.ಟಿ.ರಾಮಾರಾವ್ ರ ಪಾತ್ರವನ್ನ ಅವರ ಮಗ ತೆಲುಗುದೇಶಂ ಶಾಸಕ ನಂದಮೂರಿ ಬಾಲಕೃಷ್ಣ ಮಾಡಿದ್ದಾರೆ. ಇದು ತಕ್ಕಮಟ್ಟಿಗೆ ಯಶಸ್ವಿಯೂ ಆಯಿತು. ಆದರೆ ವಿವಾದಗಳಿಗೆ ಪ್ರಸಿದ್ಧ ಹೊಂದಿರುವ ರಾಂ ಗೋಪಾಲ್ ವರ್ಮ ಲಕ್ಷ್ಮೀಸ್ ಎನ್.ಟಿ.ಆರ್ ಎಂದು ಹೊಸ ಸಿನೆಮಾದ ಟ್ರೈಲರ್ ಬಿಟ್ಟು ಆಂಧ್ರದಲ್ಲಿ ತೆಲುಗುದೇಶಂ ಪಾರ್ಟಿಗೆ ತಲೆನೋವಾಗಿದ್ದರು. ಏಕೆಂದರೆ ಹಾಲಿ ಮುಖ್ಯಮಂತ್ರಿ ಎನ್‍ಟಿಆರ್ ಅಳಿಯ ಚಂದ್ರಬಾಬು ನಾಯ್ಡು ರಾಮರಾವ್ ನಂತರ ಪಾರ್ಟಿಯ ಹಿಡಿತವನ್ನು ಕೈಗೆತ್ತಿಕೊಂಡವರು ಆದರೆ ಲಕ್ಷ್ಮೀ ಪಾರ್ವತಿ ಎನ್.ಟಿ.ಆರ್ ಎರಡನೇ ಹೆಂಡತಿ. ಆಕೆ ಈ ಕುಟುಂಬದಿಂದ ದೂರ ಇದ್ದಾರೆ ಮತ್ತು ಅವರೇ ರಾಮರಾವ್ ಕೊನೆಯ ದಿನಗಳಲ್ಲಿ ಜೊತೆಗಿದ್ದವರು. ಈಕೆಯ ಜೊತೆ ಚಂದ್ರಬಾಬು ನಾಯ್ಡು ಜಗಳಗಳೇ ಎನ್.ಟಿ.ಆರ್ ಸಾವಿಗೆ ಕಾರಣವಾಯಿತು ಮತ್ತು ನಾನು ಲಕ್ಷ್ಮೀ ಪಾರ್ವತಿ ದೃಷ್ಟಿಕೋನದಿಂದ ಸಿನೆಮಾ ತೆಗೆಯುತ್ತೇನೆ ಎಂದು ಆರ್‍ಜಿವಿ ಕೂತುಬಿಟ್ಟರು. ಈ ಸಿನೆಮಾ ಬಂದರೆ ಖಂಡಿತ ಚುನಾವಣೆಯಲ್ಲಿ ತೊಂದರೆಯಾಗುತ್ತೆ ಎಂದು ತೆಲುಗುದೇಶಂ ಕೋರ್ಟ್‍ಗೆ ಹೋಗಿ ಕೇವಲ ತೆಲಂಗಾಣದಲ್ಲಿ ಮಾತ್ರ ಲಕ್ಷ್ಮೀಸ್ ಎನ್.ಟಿ.ಆರ್ ಬಿಡುಗಡೆಯಾಯಿತು. ಈ ಸಿನೆಮಾದ ನಿರ್ಮಾಪಕರು ವೈಎಸ್‍ಆರ್ ಕಾಂಗ್ರೆಸ್‍ನ ಜಗನ್ ಮೋಹನ್ ರೆಡ್ಡಿ ಆಪ್ತರು ಎಂದು ಕೂಡ ಹೇಳಲಾಗುತ್ತಿದೆ.

ಇತ್ತಿಚಿಗೆ ಚುನಾವಣೆಯ ನಂತರ ಚಿತ್ರ ಬಿಡುಗಡೆ ಮಾಡಲು ಸುದ್ದಿಗೋಷ್ಟಿ ಮಾಡಿದ ರಾಮ್ ಗೋಪಾಲ ವರ್ಮರನ್ನ ವಿಜಯವಾಡದಲ್ಲಿ ಅರೆಸ್ಟ್ ಮಾಡಲಾಗಿತ್ತು. ಇತ್ತಕಡೆ ತೆಲಂಗಾಣದ ಹಾಲಿ ಮುಖ್ಯಮಂತ್ರಿ ಕೆ.ಸಿ.ಆರ್‍ರ ಜೀವನ ಚರಿತ್ರೆಯ ಒಂದು ಸಿನೆಮಾ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಮತ್ತೆ ರಾಂ ಗೋಪಾಲ್ ವರ್ಮ ನಿರ್ದೇಶನದಲ್ಲಿ ಕೆಸಿಆರ್ ಕುರಿತು ಟೈಗರ್ ಹೆಸರಿನ ಸಿನೆಮಾ ತಯಾರಾಗುತ್ತಿದೆ. ಚುನಾವಣೆಗಿಂತ ಮುಂಚೆ ಜಗನ್ ಮೋಹನ್ ರೆಡ್ಡಿಯ ತಂದೆ ವೈಎಸ್ ರಾಜಶೇಖರ್ ರೆಡ್ಡಿಯ ಕುರಿತು ಯಾತ್ರ ಸಿನೆಮಾ ಬಿಡುಗಡೆಯಾಗಿತ್ತು. ಇದು ವೈಎಸ್‍ಆರ್ ಇಡೀ ಆಂದ್ರಪ್ರದೇಶದಲ್ಲಿ ಪಾದಯಾತ್ರೆ ಮಾಡಿ ಮುಖ್ಯಮಂತ್ರಿಯಾದ ಕಥೆಯ ಹಂದರವನ್ನು ಒಳಗೊಂಡಿತ್ತು ಅದೇ ದಾರಿಯಲ್ಲಿ ಜಗನ್ ಕೂಡ ಪಾದಯಾತ್ರೆ ಮಾಡಿ ಅದು ಕೊನೆಗೊಳ್ಳುವ ಸಮಯದಲ್ಲಿ ಸಿನೆಮಾ ಬಿಡುಗಡೆಯಾಗಿತ್ತು. ಹೀಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಯೋಪಿಕ್‍ಗಳ ಕ್ರೇಜ್ ಇನ್ನೂ ಮುಗಿದಿಲ್ಲ.

ಆದರೆ ಸಾಕಷ್ಷು ಬಯೋಪಿಕ್‍ಗಳು ಚುನಾವಣೆಯನ್ನೆ ಉದ್ದೇಶಿಸಿ ಬಂದದ್ದರಿಂದ ಇವು ಕೇವಲ ತಮ್ಮ ನಾಯಕರನ್ನು ವಿಜೃಂಭಿಸುವ ಮತ್ತು ಮತ ಬೇಟೆಯ ದೃಷ್ಟಿಯಿಂದ ಮಾತ್ರ ಸಿನೆಮಾ ತಯಾರಾಗಿವೆ. ಹಾಗಾಗಿ ಇವು ವಾಸ್ತವ ಜೀವನ ಚರಿತ್ರೆಗಿಂತ ಸುಳ್ಳುಗಳನ್ನೇ ವಿಜೃಂಭಿಸುವ ಸಾಧ್ಯತೆ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...