Homeಮುಖಪುಟರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ, ಪ್ರಚಾರಕ್ಕಾಗಿ ಪ್ರತಿಯೊಂದು ಮಾಧ್ಯಮವನ್ನು ಬಳಸಿಕೊಳ್ಳಲು ಯತ್ನಿಸುತ್ತವೆ. ಇತ್ತೀಚೆಗಂತೂ ಮಾಧ್ಯಮಗಳ ಭರಾಟೆ ಜಾಸ್ತಿಯಾಗಿದೆ. ಟಿವಿ ಮಾಧ್ಯಮಗಳು, ಮುದ್ರಣ ಮಾಧ್ಯಮಗಳ ಜೊತೆ ಸಾಮಾಜಿಕ ಜಾಲತಾಣ ಮಾಧ್ಯಮಗಳು ಪೈಪೋಟಿಗೆ ಬಿದ್ದಂತೆ ಕಾಣಿಸುತ್ತವೆ. ಈ ಎಲ್ಲಾ ಮಾಧ್ಯಮಗಳಿಗೂ ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿವೆ. ಇದೆ ರೀತಿ ಈ ಬಾರಿಯ ಚುನಾವಣೆಯಲ್ಲಿ ಸಿನೆಮಾವನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಪ್ರಯತ್ನಿಸಿದ್ದು, ಸಾಕಷ್ಟು ರಾಜಕೀಯ ನಾಯಕರ ‘ಬಯೋಪಿಕ್‘ಗಳು ಈ ಬಾರಿ ತೆರೆಗೆ ಬಂದಿದ್ದು ಇನ್ನೂ ಕೆಲವು ಸಿನೆಮಾಗಳು ಬಿಡುಗಡೆಯ ಹಂತದಲ್ಲಿವೆ.

ಹೆಸರಾಂತ ವ್ಯಕ್ತಿಗಳ ಜೀವನದ ಬಗ್ಗೆ ನಿರ್ಮಿಸುವ ಸಿನೆಮಾಗಳನ್ನು ಬಯೋಪಿಕ್‍ಗಳೆಂದು ಕರೆಯುತ್ತಾರೆ. ಭಾರತೀಯ ಸಿನೆಮಾ ರಂಗದಲ್ಲಿ ಸಾಕಷ್ಟು ಬಯೋಪಿಕ್ ಸಿನೆಮಾಗಳು ತಯಾರಾಗಿವೆ. ಆದರೆ ಈ ರೀತಿಯಾಗಿ ಲಜ್ಜೆಗೆಟ್ಟು ಸಿನೆಮಾ ಮಂದಿ ರಾಜಕಾರಣಿಗಳಿಗೆ ಸ್ಪಂದಿಸಿದ್ದು ಇದೇ ಮೊದಲು ಅನಿಸುತ್ತೆ. ಬಿಜೆಪಿ ಈ ಚುನಾವಣೆಯಲ್ಲಿ ತನ್ನ ವಿಚಾರಗಳನ್ನು ತುರುಕಲು ಸಾಕಷ್ಟು ಸಿನೆಮಾಗಳಿಗೆ ದುಡ್ಡು ಖರ್ಚು ಮಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ರನ್ನ ಒಬ್ಬ ಅಸಮರ್ಥ ಮತ್ತು ಕೈಗೊಂಬೆಯ ರೀತಿಯ ಪ್ರಧಾನಿಯನ್ನಾಗಿ ತೋರಿಸಲು ‘ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಎಂಬ ಸಿನೆಮಾ ಮಾಡಿಸಿದ್ದರು. ಬಿಜೆಪಿಯ ಸದಸ್ಯ ಅನುಪಮ್ ಖೇರ್ ಅದರಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದರು. ಅದು ಚುನಾವಣೆಗೂ ಸಾಕಷ್ಟು ಮುಂಚೆಯೇ ಬಂದರೂ, ಒಂದು ವಾರವು ಸಹ ಯಾವುದೇ ಥೀಯೆಟರ್‍ನಲ್ಲಿ ಓಡಲಿಲ್ಲ. ಇನ್ನು ಸೈನಿಕರ ಹೆಸರಲ್ಲಿ ಓಟು ಕೇಳಿದ ಬಿಜೆಪಿಯ ಪರವಾಗಿ ಸರ್ಜಿಕಲ್ ಸ್ಟ್ರೈಕ್‍ನ ಕಥಾ ಹಂದರವನ್ನು ಇಟ್ಟುಕೊಂಡು ‘ಉರಿ’ ಎಂಬ ಸಿನೆಮಾವನ್ನು ನಿರ್ಮಿಸಿ ಬಿಡುಗಡೆಗೊಳಿಸಿದರು. ಇದರಲ್ಲಿ ರೋಚಕತೆ ಇದ್ದುದರಿಂದ ಜನರ ಗಮನಸೆಳೆಯಿತು. ಅದನ್ನು ಸಂಪೂರ್ಣವಾಗಿ ಪ್ರೊಪಗಾಂಡ ಸಿನೆಮಾ ಎನ್ನಬಹುದಾಗಿದೆ.

ಬಿಜೆಪಿಯು ಮತ್ತೊಮ್ಮೆ ಮೋದಿ ಎಂಬ ಘೋಷವಾಕ್ಯವನ್ನು ಎಲ್ಲ ಕಡೆ ಹೇಳಲು ಶುರು ಮಾಡಿದಂತೆ ಮೋದಿಯ ಜೀವನ ಚರಿತ್ರೆಯನ್ನು ತಯಾರಿಸಿ ಚುನಾವಣೆಗೆ ಮುಂಚೆ ಬಿಡುಗಡೆ ಮಾಡಲು ಯತ್ನಿಸಿತು. ವಿವೇಕ್ ಒಬೆರಾಯ್ (ಇವರ ಕುಟುಂಬವೂ ಬಿಜೆಪಿಯಲ್ಲಿದೆ) ಮೋದಿಯ ಪಾತ್ರವನ್ನು ನಿರ್ವಹಿಸಿದ್ದರು. ಚುನಾವಣೆಯ ಸಂದರ್ಭದಲಲಿ ಈ ಚಿತ್ರ ಬಿಡುಗಡೆಗೆ ಭಾರಿ ವಿರೋಧ ವ್ಯಕ್ತವಾದ ಕಾರಣ ಚುನಾವಣಾ ಆಯೋಗ ತಡೆ ಹಿಡಿದಿದೆ. ಚುನಾವಣಾ ಫಲಿತಾಂಶದ ನಂತರದ ದಿನವೇ ಬಿಡುಗಡೆ ಆಗಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದರ ಟ್ರೈಲರ್ ನೋಡಿದರೆ ದಾಖಲೆಗಳಿಲ್ಲದ ಸುಳ್ಳುಗಳ ಸರಮಾಲೆಯೇ ಇವರ ಸಿನೆಮಾ ಕಥೆಯ ಹಂದರ ಎನಿಸುವಂತಿದೆ. ಹೀಗೆ ತಮ್ಮ ಪಕ್ಷದ ಪ್ರಚಾರಕ್ಕಾಗಿಯೇ ಸಿನೆಮಾಗಳನ್ನ ಮಾಡುತ್ತಿದ್ದಾರೆ. ಇದರಲ್ಲಿ ನಟಿಸುವ ನಟರು ತಮ್ಮನ್ನು ತಾವು ಎಷ್ಟೊಂದು ಮಾರಿಕೊಂಡಿರುತ್ತಾರೆ ಎಂದು ಗಮನಿಸಬೇಕಿದೆ. ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನೆಮಾದಲ್ಲಿ ನಟಿಸಿದ ಒಬ್ಬ ಯುವನಟ ಈಗ ಪಶ್ಚಾತ್ತಾಪ ಪಡುತ್ತಿದ್ದಾನೆ. ಇದು ರಾಷ್ಟ ಮಟ್ಟದ ರಾಜಕೀಯ ಪಕ್ಷಗಳ ಕಥೆಯಾದರೆ ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ಸಿನೆಮಾಗಳು ಬಂದಿವೆ. ಬಾಲಿವುಡ್‍ನಲ್ಲಿ ಶಿವಸೇನೆಯ ಮುಖ್ಯಸ್ಥ ಬಾಳಠಾಕ್ರೆ ಬಗ್ಗೆಯು ಸಿನೆಮಾ ಒಂದು ಬಂದಿದೆ. ಈ ಸಿನೆಮಾವನ್ನು ಅಭಿಜಿತ್ ಫಾನ್ಸೆ ನಿರ್ದೇಶಿಸಿದ್ದು ಠಾಕ್ರೆ ಪಾತ್ರವನ್ನು ನವಜುದ್ದೀನ್ ಸಿದ್ದಿಕಿ ಮಾಡಿದ್ದರು. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತ ಮೇಲೆ ಕೂಡ ಸಿನೆಮಾ ಮಾಡಲಿದ್ದಾರೆ ಎಂಬ ಮಾತುಗಳು ಕಾಲಿವುಡ್‍ನಲ್ಲಿ ಕೇಳಿಸುತ್ತಿವೆ..

ಇದನ್ನು ಓದಿ ; ಮನುಜಮತ ಸಿನೆಮಾ  ಹಬ್ಬ : ಹೊಸ ಕಾಲದ ಸಮುದಾಯ ಕಟ್ಟುವ ನಡೆ 

ಚಂದ್ರಬಾಬು ನಾಯ್ಡುಗೆ ತಲೆನೋವಾದ ಆರ್.ಜಿ.ವಿ
ಆಂಧ್ರ ಮತ್ತು ತೆಲಂಗಾಣದಲ್ಲಿ ಬರಿ ಬಯೋಪಿಕ್‍ಗಳದ್ದೆ ಚರ್ಚೆಯಾಗಿಬಿಟ್ಟಿದೆ. ತೆಲುಗು ದೇಶಂ ಪಾರ್ಟಿಯ ಸಂಸ್ಥಾಪಕರು ಹಾಗೂ ಹೆಸರಾಂತ ನಟರಾದ ದಿವಂಗತ ನಂದಮೂರಿ ತಾರಕ ರಾಮರಾವು (ಎನ್.ಟಿ.ಆರ್)ರವರ ಜೀವನ ಆಧಾರಿತವಾಗಿ ಎರಡು ಚಿತ್ರಗಳು ತೆರೆಗೆ ಬಂದಿವೆ. ಈ ಸಿನೆಮಾವನ್ನು ರಾಧಾಕೃಷ್ಣ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ಸ್ವತಃ ಎನ್.ಟಿ.ರಾಮಾರಾವ್ ರ ಪಾತ್ರವನ್ನ ಅವರ ಮಗ ತೆಲುಗುದೇಶಂ ಶಾಸಕ ನಂದಮೂರಿ ಬಾಲಕೃಷ್ಣ ಮಾಡಿದ್ದಾರೆ. ಇದು ತಕ್ಕಮಟ್ಟಿಗೆ ಯಶಸ್ವಿಯೂ ಆಯಿತು. ಆದರೆ ವಿವಾದಗಳಿಗೆ ಪ್ರಸಿದ್ಧ ಹೊಂದಿರುವ ರಾಂ ಗೋಪಾಲ್ ವರ್ಮ ಲಕ್ಷ್ಮೀಸ್ ಎನ್.ಟಿ.ಆರ್ ಎಂದು ಹೊಸ ಸಿನೆಮಾದ ಟ್ರೈಲರ್ ಬಿಟ್ಟು ಆಂಧ್ರದಲ್ಲಿ ತೆಲುಗುದೇಶಂ ಪಾರ್ಟಿಗೆ ತಲೆನೋವಾಗಿದ್ದರು. ಏಕೆಂದರೆ ಹಾಲಿ ಮುಖ್ಯಮಂತ್ರಿ ಎನ್‍ಟಿಆರ್ ಅಳಿಯ ಚಂದ್ರಬಾಬು ನಾಯ್ಡು ರಾಮರಾವ್ ನಂತರ ಪಾರ್ಟಿಯ ಹಿಡಿತವನ್ನು ಕೈಗೆತ್ತಿಕೊಂಡವರು ಆದರೆ ಲಕ್ಷ್ಮೀ ಪಾರ್ವತಿ ಎನ್.ಟಿ.ಆರ್ ಎರಡನೇ ಹೆಂಡತಿ. ಆಕೆ ಈ ಕುಟುಂಬದಿಂದ ದೂರ ಇದ್ದಾರೆ ಮತ್ತು ಅವರೇ ರಾಮರಾವ್ ಕೊನೆಯ ದಿನಗಳಲ್ಲಿ ಜೊತೆಗಿದ್ದವರು. ಈಕೆಯ ಜೊತೆ ಚಂದ್ರಬಾಬು ನಾಯ್ಡು ಜಗಳಗಳೇ ಎನ್.ಟಿ.ಆರ್ ಸಾವಿಗೆ ಕಾರಣವಾಯಿತು ಮತ್ತು ನಾನು ಲಕ್ಷ್ಮೀ ಪಾರ್ವತಿ ದೃಷ್ಟಿಕೋನದಿಂದ ಸಿನೆಮಾ ತೆಗೆಯುತ್ತೇನೆ ಎಂದು ಆರ್‍ಜಿವಿ ಕೂತುಬಿಟ್ಟರು. ಈ ಸಿನೆಮಾ ಬಂದರೆ ಖಂಡಿತ ಚುನಾವಣೆಯಲ್ಲಿ ತೊಂದರೆಯಾಗುತ್ತೆ ಎಂದು ತೆಲುಗುದೇಶಂ ಕೋರ್ಟ್‍ಗೆ ಹೋಗಿ ಕೇವಲ ತೆಲಂಗಾಣದಲ್ಲಿ ಮಾತ್ರ ಲಕ್ಷ್ಮೀಸ್ ಎನ್.ಟಿ.ಆರ್ ಬಿಡುಗಡೆಯಾಯಿತು. ಈ ಸಿನೆಮಾದ ನಿರ್ಮಾಪಕರು ವೈಎಸ್‍ಆರ್ ಕಾಂಗ್ರೆಸ್‍ನ ಜಗನ್ ಮೋಹನ್ ರೆಡ್ಡಿ ಆಪ್ತರು ಎಂದು ಕೂಡ ಹೇಳಲಾಗುತ್ತಿದೆ.

ಇತ್ತಿಚಿಗೆ ಚುನಾವಣೆಯ ನಂತರ ಚಿತ್ರ ಬಿಡುಗಡೆ ಮಾಡಲು ಸುದ್ದಿಗೋಷ್ಟಿ ಮಾಡಿದ ರಾಮ್ ಗೋಪಾಲ ವರ್ಮರನ್ನ ವಿಜಯವಾಡದಲ್ಲಿ ಅರೆಸ್ಟ್ ಮಾಡಲಾಗಿತ್ತು. ಇತ್ತಕಡೆ ತೆಲಂಗಾಣದ ಹಾಲಿ ಮುಖ್ಯಮಂತ್ರಿ ಕೆ.ಸಿ.ಆರ್‍ರ ಜೀವನ ಚರಿತ್ರೆಯ ಒಂದು ಸಿನೆಮಾ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಮತ್ತೆ ರಾಂ ಗೋಪಾಲ್ ವರ್ಮ ನಿರ್ದೇಶನದಲ್ಲಿ ಕೆಸಿಆರ್ ಕುರಿತು ಟೈಗರ್ ಹೆಸರಿನ ಸಿನೆಮಾ ತಯಾರಾಗುತ್ತಿದೆ. ಚುನಾವಣೆಗಿಂತ ಮುಂಚೆ ಜಗನ್ ಮೋಹನ್ ರೆಡ್ಡಿಯ ತಂದೆ ವೈಎಸ್ ರಾಜಶೇಖರ್ ರೆಡ್ಡಿಯ ಕುರಿತು ಯಾತ್ರ ಸಿನೆಮಾ ಬಿಡುಗಡೆಯಾಗಿತ್ತು. ಇದು ವೈಎಸ್‍ಆರ್ ಇಡೀ ಆಂದ್ರಪ್ರದೇಶದಲ್ಲಿ ಪಾದಯಾತ್ರೆ ಮಾಡಿ ಮುಖ್ಯಮಂತ್ರಿಯಾದ ಕಥೆಯ ಹಂದರವನ್ನು ಒಳಗೊಂಡಿತ್ತು ಅದೇ ದಾರಿಯಲ್ಲಿ ಜಗನ್ ಕೂಡ ಪಾದಯಾತ್ರೆ ಮಾಡಿ ಅದು ಕೊನೆಗೊಳ್ಳುವ ಸಮಯದಲ್ಲಿ ಸಿನೆಮಾ ಬಿಡುಗಡೆಯಾಗಿತ್ತು. ಹೀಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಯೋಪಿಕ್‍ಗಳ ಕ್ರೇಜ್ ಇನ್ನೂ ಮುಗಿದಿಲ್ಲ.

ಆದರೆ ಸಾಕಷ್ಷು ಬಯೋಪಿಕ್‍ಗಳು ಚುನಾವಣೆಯನ್ನೆ ಉದ್ದೇಶಿಸಿ ಬಂದದ್ದರಿಂದ ಇವು ಕೇವಲ ತಮ್ಮ ನಾಯಕರನ್ನು ವಿಜೃಂಭಿಸುವ ಮತ್ತು ಮತ ಬೇಟೆಯ ದೃಷ್ಟಿಯಿಂದ ಮಾತ್ರ ಸಿನೆಮಾ ತಯಾರಾಗಿವೆ. ಹಾಗಾಗಿ ಇವು ವಾಸ್ತವ ಜೀವನ ಚರಿತ್ರೆಗಿಂತ ಸುಳ್ಳುಗಳನ್ನೇ ವಿಜೃಂಭಿಸುವ ಸಾಧ್ಯತೆ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....