Homeಮುಖಪುಟರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ, ಪ್ರಚಾರಕ್ಕಾಗಿ ಪ್ರತಿಯೊಂದು ಮಾಧ್ಯಮವನ್ನು ಬಳಸಿಕೊಳ್ಳಲು ಯತ್ನಿಸುತ್ತವೆ. ಇತ್ತೀಚೆಗಂತೂ ಮಾಧ್ಯಮಗಳ ಭರಾಟೆ ಜಾಸ್ತಿಯಾಗಿದೆ. ಟಿವಿ ಮಾಧ್ಯಮಗಳು, ಮುದ್ರಣ ಮಾಧ್ಯಮಗಳ ಜೊತೆ ಸಾಮಾಜಿಕ ಜಾಲತಾಣ ಮಾಧ್ಯಮಗಳು ಪೈಪೋಟಿಗೆ ಬಿದ್ದಂತೆ ಕಾಣಿಸುತ್ತವೆ. ಈ ಎಲ್ಲಾ ಮಾಧ್ಯಮಗಳಿಗೂ ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿವೆ. ಇದೆ ರೀತಿ ಈ ಬಾರಿಯ ಚುನಾವಣೆಯಲ್ಲಿ ಸಿನೆಮಾವನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಪ್ರಯತ್ನಿಸಿದ್ದು, ಸಾಕಷ್ಟು ರಾಜಕೀಯ ನಾಯಕರ ‘ಬಯೋಪಿಕ್‘ಗಳು ಈ ಬಾರಿ ತೆರೆಗೆ ಬಂದಿದ್ದು ಇನ್ನೂ ಕೆಲವು ಸಿನೆಮಾಗಳು ಬಿಡುಗಡೆಯ ಹಂತದಲ್ಲಿವೆ.

ಹೆಸರಾಂತ ವ್ಯಕ್ತಿಗಳ ಜೀವನದ ಬಗ್ಗೆ ನಿರ್ಮಿಸುವ ಸಿನೆಮಾಗಳನ್ನು ಬಯೋಪಿಕ್‍ಗಳೆಂದು ಕರೆಯುತ್ತಾರೆ. ಭಾರತೀಯ ಸಿನೆಮಾ ರಂಗದಲ್ಲಿ ಸಾಕಷ್ಟು ಬಯೋಪಿಕ್ ಸಿನೆಮಾಗಳು ತಯಾರಾಗಿವೆ. ಆದರೆ ಈ ರೀತಿಯಾಗಿ ಲಜ್ಜೆಗೆಟ್ಟು ಸಿನೆಮಾ ಮಂದಿ ರಾಜಕಾರಣಿಗಳಿಗೆ ಸ್ಪಂದಿಸಿದ್ದು ಇದೇ ಮೊದಲು ಅನಿಸುತ್ತೆ. ಬಿಜೆಪಿ ಈ ಚುನಾವಣೆಯಲ್ಲಿ ತನ್ನ ವಿಚಾರಗಳನ್ನು ತುರುಕಲು ಸಾಕಷ್ಟು ಸಿನೆಮಾಗಳಿಗೆ ದುಡ್ಡು ಖರ್ಚು ಮಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ರನ್ನ ಒಬ್ಬ ಅಸಮರ್ಥ ಮತ್ತು ಕೈಗೊಂಬೆಯ ರೀತಿಯ ಪ್ರಧಾನಿಯನ್ನಾಗಿ ತೋರಿಸಲು ‘ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಎಂಬ ಸಿನೆಮಾ ಮಾಡಿಸಿದ್ದರು. ಬಿಜೆಪಿಯ ಸದಸ್ಯ ಅನುಪಮ್ ಖೇರ್ ಅದರಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದರು. ಅದು ಚುನಾವಣೆಗೂ ಸಾಕಷ್ಟು ಮುಂಚೆಯೇ ಬಂದರೂ, ಒಂದು ವಾರವು ಸಹ ಯಾವುದೇ ಥೀಯೆಟರ್‍ನಲ್ಲಿ ಓಡಲಿಲ್ಲ. ಇನ್ನು ಸೈನಿಕರ ಹೆಸರಲ್ಲಿ ಓಟು ಕೇಳಿದ ಬಿಜೆಪಿಯ ಪರವಾಗಿ ಸರ್ಜಿಕಲ್ ಸ್ಟ್ರೈಕ್‍ನ ಕಥಾ ಹಂದರವನ್ನು ಇಟ್ಟುಕೊಂಡು ‘ಉರಿ’ ಎಂಬ ಸಿನೆಮಾವನ್ನು ನಿರ್ಮಿಸಿ ಬಿಡುಗಡೆಗೊಳಿಸಿದರು. ಇದರಲ್ಲಿ ರೋಚಕತೆ ಇದ್ದುದರಿಂದ ಜನರ ಗಮನಸೆಳೆಯಿತು. ಅದನ್ನು ಸಂಪೂರ್ಣವಾಗಿ ಪ್ರೊಪಗಾಂಡ ಸಿನೆಮಾ ಎನ್ನಬಹುದಾಗಿದೆ.

ಬಿಜೆಪಿಯು ಮತ್ತೊಮ್ಮೆ ಮೋದಿ ಎಂಬ ಘೋಷವಾಕ್ಯವನ್ನು ಎಲ್ಲ ಕಡೆ ಹೇಳಲು ಶುರು ಮಾಡಿದಂತೆ ಮೋದಿಯ ಜೀವನ ಚರಿತ್ರೆಯನ್ನು ತಯಾರಿಸಿ ಚುನಾವಣೆಗೆ ಮುಂಚೆ ಬಿಡುಗಡೆ ಮಾಡಲು ಯತ್ನಿಸಿತು. ವಿವೇಕ್ ಒಬೆರಾಯ್ (ಇವರ ಕುಟುಂಬವೂ ಬಿಜೆಪಿಯಲ್ಲಿದೆ) ಮೋದಿಯ ಪಾತ್ರವನ್ನು ನಿರ್ವಹಿಸಿದ್ದರು. ಚುನಾವಣೆಯ ಸಂದರ್ಭದಲಲಿ ಈ ಚಿತ್ರ ಬಿಡುಗಡೆಗೆ ಭಾರಿ ವಿರೋಧ ವ್ಯಕ್ತವಾದ ಕಾರಣ ಚುನಾವಣಾ ಆಯೋಗ ತಡೆ ಹಿಡಿದಿದೆ. ಚುನಾವಣಾ ಫಲಿತಾಂಶದ ನಂತರದ ದಿನವೇ ಬಿಡುಗಡೆ ಆಗಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದರ ಟ್ರೈಲರ್ ನೋಡಿದರೆ ದಾಖಲೆಗಳಿಲ್ಲದ ಸುಳ್ಳುಗಳ ಸರಮಾಲೆಯೇ ಇವರ ಸಿನೆಮಾ ಕಥೆಯ ಹಂದರ ಎನಿಸುವಂತಿದೆ. ಹೀಗೆ ತಮ್ಮ ಪಕ್ಷದ ಪ್ರಚಾರಕ್ಕಾಗಿಯೇ ಸಿನೆಮಾಗಳನ್ನ ಮಾಡುತ್ತಿದ್ದಾರೆ. ಇದರಲ್ಲಿ ನಟಿಸುವ ನಟರು ತಮ್ಮನ್ನು ತಾವು ಎಷ್ಟೊಂದು ಮಾರಿಕೊಂಡಿರುತ್ತಾರೆ ಎಂದು ಗಮನಿಸಬೇಕಿದೆ. ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನೆಮಾದಲ್ಲಿ ನಟಿಸಿದ ಒಬ್ಬ ಯುವನಟ ಈಗ ಪಶ್ಚಾತ್ತಾಪ ಪಡುತ್ತಿದ್ದಾನೆ. ಇದು ರಾಷ್ಟ ಮಟ್ಟದ ರಾಜಕೀಯ ಪಕ್ಷಗಳ ಕಥೆಯಾದರೆ ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ಸಿನೆಮಾಗಳು ಬಂದಿವೆ. ಬಾಲಿವುಡ್‍ನಲ್ಲಿ ಶಿವಸೇನೆಯ ಮುಖ್ಯಸ್ಥ ಬಾಳಠಾಕ್ರೆ ಬಗ್ಗೆಯು ಸಿನೆಮಾ ಒಂದು ಬಂದಿದೆ. ಈ ಸಿನೆಮಾವನ್ನು ಅಭಿಜಿತ್ ಫಾನ್ಸೆ ನಿರ್ದೇಶಿಸಿದ್ದು ಠಾಕ್ರೆ ಪಾತ್ರವನ್ನು ನವಜುದ್ದೀನ್ ಸಿದ್ದಿಕಿ ಮಾಡಿದ್ದರು. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತ ಮೇಲೆ ಕೂಡ ಸಿನೆಮಾ ಮಾಡಲಿದ್ದಾರೆ ಎಂಬ ಮಾತುಗಳು ಕಾಲಿವುಡ್‍ನಲ್ಲಿ ಕೇಳಿಸುತ್ತಿವೆ..

ಇದನ್ನು ಓದಿ ; ಮನುಜಮತ ಸಿನೆಮಾ  ಹಬ್ಬ : ಹೊಸ ಕಾಲದ ಸಮುದಾಯ ಕಟ್ಟುವ ನಡೆ 

ಚಂದ್ರಬಾಬು ನಾಯ್ಡುಗೆ ತಲೆನೋವಾದ ಆರ್.ಜಿ.ವಿ
ಆಂಧ್ರ ಮತ್ತು ತೆಲಂಗಾಣದಲ್ಲಿ ಬರಿ ಬಯೋಪಿಕ್‍ಗಳದ್ದೆ ಚರ್ಚೆಯಾಗಿಬಿಟ್ಟಿದೆ. ತೆಲುಗು ದೇಶಂ ಪಾರ್ಟಿಯ ಸಂಸ್ಥಾಪಕರು ಹಾಗೂ ಹೆಸರಾಂತ ನಟರಾದ ದಿವಂಗತ ನಂದಮೂರಿ ತಾರಕ ರಾಮರಾವು (ಎನ್.ಟಿ.ಆರ್)ರವರ ಜೀವನ ಆಧಾರಿತವಾಗಿ ಎರಡು ಚಿತ್ರಗಳು ತೆರೆಗೆ ಬಂದಿವೆ. ಈ ಸಿನೆಮಾವನ್ನು ರಾಧಾಕೃಷ್ಣ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ಸ್ವತಃ ಎನ್.ಟಿ.ರಾಮಾರಾವ್ ರ ಪಾತ್ರವನ್ನ ಅವರ ಮಗ ತೆಲುಗುದೇಶಂ ಶಾಸಕ ನಂದಮೂರಿ ಬಾಲಕೃಷ್ಣ ಮಾಡಿದ್ದಾರೆ. ಇದು ತಕ್ಕಮಟ್ಟಿಗೆ ಯಶಸ್ವಿಯೂ ಆಯಿತು. ಆದರೆ ವಿವಾದಗಳಿಗೆ ಪ್ರಸಿದ್ಧ ಹೊಂದಿರುವ ರಾಂ ಗೋಪಾಲ್ ವರ್ಮ ಲಕ್ಷ್ಮೀಸ್ ಎನ್.ಟಿ.ಆರ್ ಎಂದು ಹೊಸ ಸಿನೆಮಾದ ಟ್ರೈಲರ್ ಬಿಟ್ಟು ಆಂಧ್ರದಲ್ಲಿ ತೆಲುಗುದೇಶಂ ಪಾರ್ಟಿಗೆ ತಲೆನೋವಾಗಿದ್ದರು. ಏಕೆಂದರೆ ಹಾಲಿ ಮುಖ್ಯಮಂತ್ರಿ ಎನ್‍ಟಿಆರ್ ಅಳಿಯ ಚಂದ್ರಬಾಬು ನಾಯ್ಡು ರಾಮರಾವ್ ನಂತರ ಪಾರ್ಟಿಯ ಹಿಡಿತವನ್ನು ಕೈಗೆತ್ತಿಕೊಂಡವರು ಆದರೆ ಲಕ್ಷ್ಮೀ ಪಾರ್ವತಿ ಎನ್.ಟಿ.ಆರ್ ಎರಡನೇ ಹೆಂಡತಿ. ಆಕೆ ಈ ಕುಟುಂಬದಿಂದ ದೂರ ಇದ್ದಾರೆ ಮತ್ತು ಅವರೇ ರಾಮರಾವ್ ಕೊನೆಯ ದಿನಗಳಲ್ಲಿ ಜೊತೆಗಿದ್ದವರು. ಈಕೆಯ ಜೊತೆ ಚಂದ್ರಬಾಬು ನಾಯ್ಡು ಜಗಳಗಳೇ ಎನ್.ಟಿ.ಆರ್ ಸಾವಿಗೆ ಕಾರಣವಾಯಿತು ಮತ್ತು ನಾನು ಲಕ್ಷ್ಮೀ ಪಾರ್ವತಿ ದೃಷ್ಟಿಕೋನದಿಂದ ಸಿನೆಮಾ ತೆಗೆಯುತ್ತೇನೆ ಎಂದು ಆರ್‍ಜಿವಿ ಕೂತುಬಿಟ್ಟರು. ಈ ಸಿನೆಮಾ ಬಂದರೆ ಖಂಡಿತ ಚುನಾವಣೆಯಲ್ಲಿ ತೊಂದರೆಯಾಗುತ್ತೆ ಎಂದು ತೆಲುಗುದೇಶಂ ಕೋರ್ಟ್‍ಗೆ ಹೋಗಿ ಕೇವಲ ತೆಲಂಗಾಣದಲ್ಲಿ ಮಾತ್ರ ಲಕ್ಷ್ಮೀಸ್ ಎನ್.ಟಿ.ಆರ್ ಬಿಡುಗಡೆಯಾಯಿತು. ಈ ಸಿನೆಮಾದ ನಿರ್ಮಾಪಕರು ವೈಎಸ್‍ಆರ್ ಕಾಂಗ್ರೆಸ್‍ನ ಜಗನ್ ಮೋಹನ್ ರೆಡ್ಡಿ ಆಪ್ತರು ಎಂದು ಕೂಡ ಹೇಳಲಾಗುತ್ತಿದೆ.

ಇತ್ತಿಚಿಗೆ ಚುನಾವಣೆಯ ನಂತರ ಚಿತ್ರ ಬಿಡುಗಡೆ ಮಾಡಲು ಸುದ್ದಿಗೋಷ್ಟಿ ಮಾಡಿದ ರಾಮ್ ಗೋಪಾಲ ವರ್ಮರನ್ನ ವಿಜಯವಾಡದಲ್ಲಿ ಅರೆಸ್ಟ್ ಮಾಡಲಾಗಿತ್ತು. ಇತ್ತಕಡೆ ತೆಲಂಗಾಣದ ಹಾಲಿ ಮುಖ್ಯಮಂತ್ರಿ ಕೆ.ಸಿ.ಆರ್‍ರ ಜೀವನ ಚರಿತ್ರೆಯ ಒಂದು ಸಿನೆಮಾ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಮತ್ತೆ ರಾಂ ಗೋಪಾಲ್ ವರ್ಮ ನಿರ್ದೇಶನದಲ್ಲಿ ಕೆಸಿಆರ್ ಕುರಿತು ಟೈಗರ್ ಹೆಸರಿನ ಸಿನೆಮಾ ತಯಾರಾಗುತ್ತಿದೆ. ಚುನಾವಣೆಗಿಂತ ಮುಂಚೆ ಜಗನ್ ಮೋಹನ್ ರೆಡ್ಡಿಯ ತಂದೆ ವೈಎಸ್ ರಾಜಶೇಖರ್ ರೆಡ್ಡಿಯ ಕುರಿತು ಯಾತ್ರ ಸಿನೆಮಾ ಬಿಡುಗಡೆಯಾಗಿತ್ತು. ಇದು ವೈಎಸ್‍ಆರ್ ಇಡೀ ಆಂದ್ರಪ್ರದೇಶದಲ್ಲಿ ಪಾದಯಾತ್ರೆ ಮಾಡಿ ಮುಖ್ಯಮಂತ್ರಿಯಾದ ಕಥೆಯ ಹಂದರವನ್ನು ಒಳಗೊಂಡಿತ್ತು ಅದೇ ದಾರಿಯಲ್ಲಿ ಜಗನ್ ಕೂಡ ಪಾದಯಾತ್ರೆ ಮಾಡಿ ಅದು ಕೊನೆಗೊಳ್ಳುವ ಸಮಯದಲ್ಲಿ ಸಿನೆಮಾ ಬಿಡುಗಡೆಯಾಗಿತ್ತು. ಹೀಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಯೋಪಿಕ್‍ಗಳ ಕ್ರೇಜ್ ಇನ್ನೂ ಮುಗಿದಿಲ್ಲ.

ಆದರೆ ಸಾಕಷ್ಷು ಬಯೋಪಿಕ್‍ಗಳು ಚುನಾವಣೆಯನ್ನೆ ಉದ್ದೇಶಿಸಿ ಬಂದದ್ದರಿಂದ ಇವು ಕೇವಲ ತಮ್ಮ ನಾಯಕರನ್ನು ವಿಜೃಂಭಿಸುವ ಮತ್ತು ಮತ ಬೇಟೆಯ ದೃಷ್ಟಿಯಿಂದ ಮಾತ್ರ ಸಿನೆಮಾ ತಯಾರಾಗಿವೆ. ಹಾಗಾಗಿ ಇವು ವಾಸ್ತವ ಜೀವನ ಚರಿತ್ರೆಗಿಂತ ಸುಳ್ಳುಗಳನ್ನೇ ವಿಜೃಂಭಿಸುವ ಸಾಧ್ಯತೆ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...