Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

- Advertisement -
- Advertisement -

ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಹಲವಾರು ದೇಶಗಳು ಮಾನವೀಯ ಆಧಾರದ ಮೇಲೆ ಕಳವಳ ವ್ಯಕ್ತಪಡಿಸುವುದರ ಜೊತೆಗೆ ಇಸ್ರೇಲ್‌ ಜೊತೆಗಿನ ತಮ್ಮ ರಾಜತಾಂತ್ರಿ ಸಂಬಂಧವನ್ನು ಕಡಿತಗೊಳಿಸಲು ಮುಂದಾಗಿದೆ.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್, ಜರ್ಮನಿ ಯುಕೆ ಮತ್ತು ಭಾರತದಂತಹ ಪ್ರಭಾವಶಾಲಿ ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ನಿಂತಿದೆ ಮತ್ತು ಈ ದೇಶಗಳು ಹಮಾಸ್‌ನ ದಾಳಿಯನ್ನು ಭಯೋತ್ಪಾದನಾ ದಾಳಿ ಎಂದು ಕರೆದು ಇಸ್ರೇಲ್‌ ದಾಳಿಯನ್ನು ಬೆಂಬಲಿಸಿದೆ.

ಆದರೆ ಯುಎನ್‌ ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಶನಲ್, UNRWA (ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ), OHCHR (ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ) ಇಸ್ರೇಲ್‌ನಿಂದ ನಡೆದ ನರಮೇದ ಮತ್ತು ನಾಗರಿಕರ ಮೇಲಿನ ದಾಳಿ ಮತ್ತು ಮಾನವೀಯ ನೆರವಿನ ತಡೆ ಬಗ್ಗೆ ಗಮನಿಸಿದೆ.

ಬೊಲಿವಿಯಾವು ಇಸ್ರೇಲ್‌ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಮುಚ್ಚಿದ ಮೊದಲ ದೇಶವಾಗಿದ್ದು,  ಅ.31ರಂದು ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಸಂದೇಶವನ್ನು ಕಳುಹಿಸಿದೆ.

ಗಾಝಾ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್‌ ಮಿಲಿಟರಿ ಆಕ್ರಮಣವನ್ನು ಖಂಡಿಸಿ ಬೊಲಿವಿಯಾ ಇಸ್ರೇಲ್‌ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿಯಲು ನಿರ್ಧರಿಸಿದೆ ಎಂದು ಉಪ ವಿದೇಶಾಂಗ ಸಚಿವ ಫ್ರೆಡ್ಡಿ ಮಾಮಾನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬೊಲಿವಿಯಾ ಸಚಿವೆ ಮಾರಿಯಾ ನೆಲಾ ಪ್ರದಾ ಅವರು, ಗಾಝಾಕ್ಕೆ ಮಾನವೀಯ ನೆರವು ಕಳುಹಿಸುವುದಾಗಿ ಘೋಷಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇದುವರೆಗೆ ಸಾವಿರಾರು ನಾಗರಿಕರ ಸಾವುಗಳು ಮತ್ತು ಪ್ಯಾಲೆಸ್ತೀನ್ ಜನರ ಬಲವಂತದ ಸ್ಥಳಾಂತರಕ್ಕೆ ಕಾರಣವಾದ ದಾಳಿಗಳನ್ನು ಕೊನೆಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನೆರೆಯ ಕೊಲಂಬಿಯಾ ಮತ್ತು ಚಿಲಿ ಕೂಡ ಗಾಜಾದಲ್ಲಿ ನಾಗರಿಕರ ಸಾವುಗಳನ್ನು ಖಂಡಿಸಿದೆ ಮತ್ತು ಕದನ ವಿರಾಮಕ್ಕೆ ಕರೆ ನೀಡಿ ತಮ್ಮ ರಾಯಭಾರಿಗಳನ್ನು ಇಸ್ರೇಲ್‌ನಿಂದ ವಾಪಾಸ್ಸು ಕರೆಸಿಕೊಂಡಿದೆ. ಲ್ಯಾಟಿನ್ ಅಮೆರಿಕದ ಎಡ-ಒಲವುಳ್ಳ ದೇಶಗಳು ಪ್ಯಾಲೆಸ್ತೀನ್ ಬಗ್ಗೆ ಸಹಾನುಭೂತಿ ಹೊಂದಿದೆ.

ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಸಾಮಾಜಿಕ ಮಾಧ್ಯಮ ಸೈಟ್ X ನಲ್ಲಿ ಬರೆಯುತ್ತಾ, ಇಸ್ರೇಲ್ ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಉಲ್ಲಂಘನೆ ಮಾಡಿದೆ. ಗಾಝಾದ ಜನರಿಗೆ ಸಾಮೂಹಿಕ ಶಿಕ್ಷೆ ನೀಡಲಾಗುತ್ತಿದೆ. ಇದರಿಂದಾಗಿ ತಮ್ಮ ರಾಯಭಾರಿ ಜಾರ್ಜ್ ಕಾರ್ವಾಜಾಲ್ ಅವರನ್ನು ಇಸ್ರೇಲ್‌ನಿಂದ ದೇಶಕ್ಕೆ ವಾಪಾಸ್ಸು ಕರೆಸಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಜೋರ್ಡಾನ್ ದೇಶವು ಕೂಡ ಇದೇ ರೀತಿಯ ನಿಲುವನ್ನು ಹೊಂದಿದೆ.  ಜೋರ್ಡನ್‌ ಈ ಮೊದಲು ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಗಾಝಾ ಕುರಿತು ನಿರ್ಣಯವನ್ನು ಮಂಡಿಸಿತ್ತು.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಇಸ್ರೇಲ್‌ನಲ್ಲಿರುವ ಕೊಲಂಬಿಯಾದ ರಾಯಭಾರಿಯನ್ನು ಮರಳಿ ಕರೆದಿದ್ದಾರೆ. ಅವರು ಗಾಝಾದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರು ಇಸ್ರೇಲ್‌ ದಾಳಿಯನ್ನು ಪ್ಯಾಲೆಸ್ತೀನ್ ಜನರ ಹತ್ಯಾಕಾಂಡ ಎಂದು ಕರೆದಿದ್ದಾರೆ.

ಇಸ್ರೇಲ್‌ ಮಿಲಿಟರಿ ಪಡೆಗಳು ಗಾಝಾ ಮೇಲೆ ನಡೆಸಿದ ದಾಳಿಯನ್ನು ಕೊಲಂಬಿಯಾ ಖಂಡಿಸಿದೆ ಮತ್ತು ಕದನ ವಿರಾಮದ ತುರ್ತು ಮತ್ತು ಇಸ್ರೇಲ್‌ನ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಪಾಲಿಸಬೇಕಾದ ಬಾಧ್ಯತೆಯನ್ನು ಪುನರುಚ್ಚರಿಸಿದೆ.

ಇದನ್ನು ಓದಿ: ಕೇರಳ: ಸಿಎಂ ಪಿಣರಾಯ್‌ ವಿಜಯನ್‌ಗೆ ಬೆದರಿಕೆ ಕರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...