Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

- Advertisement -
- Advertisement -

ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಹಲವಾರು ದೇಶಗಳು ಮಾನವೀಯ ಆಧಾರದ ಮೇಲೆ ಕಳವಳ ವ್ಯಕ್ತಪಡಿಸುವುದರ ಜೊತೆಗೆ ಇಸ್ರೇಲ್‌ ಜೊತೆಗಿನ ತಮ್ಮ ರಾಜತಾಂತ್ರಿ ಸಂಬಂಧವನ್ನು ಕಡಿತಗೊಳಿಸಲು ಮುಂದಾಗಿದೆ.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್, ಜರ್ಮನಿ ಯುಕೆ ಮತ್ತು ಭಾರತದಂತಹ ಪ್ರಭಾವಶಾಲಿ ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ನಿಂತಿದೆ ಮತ್ತು ಈ ದೇಶಗಳು ಹಮಾಸ್‌ನ ದಾಳಿಯನ್ನು ಭಯೋತ್ಪಾದನಾ ದಾಳಿ ಎಂದು ಕರೆದು ಇಸ್ರೇಲ್‌ ದಾಳಿಯನ್ನು ಬೆಂಬಲಿಸಿದೆ.

ಆದರೆ ಯುಎನ್‌ ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಶನಲ್, UNRWA (ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ), OHCHR (ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ) ಇಸ್ರೇಲ್‌ನಿಂದ ನಡೆದ ನರಮೇದ ಮತ್ತು ನಾಗರಿಕರ ಮೇಲಿನ ದಾಳಿ ಮತ್ತು ಮಾನವೀಯ ನೆರವಿನ ತಡೆ ಬಗ್ಗೆ ಗಮನಿಸಿದೆ.

ಬೊಲಿವಿಯಾವು ಇಸ್ರೇಲ್‌ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಮುಚ್ಚಿದ ಮೊದಲ ದೇಶವಾಗಿದ್ದು,  ಅ.31ರಂದು ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಸಂದೇಶವನ್ನು ಕಳುಹಿಸಿದೆ.

ಗಾಝಾ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್‌ ಮಿಲಿಟರಿ ಆಕ್ರಮಣವನ್ನು ಖಂಡಿಸಿ ಬೊಲಿವಿಯಾ ಇಸ್ರೇಲ್‌ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿಯಲು ನಿರ್ಧರಿಸಿದೆ ಎಂದು ಉಪ ವಿದೇಶಾಂಗ ಸಚಿವ ಫ್ರೆಡ್ಡಿ ಮಾಮಾನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬೊಲಿವಿಯಾ ಸಚಿವೆ ಮಾರಿಯಾ ನೆಲಾ ಪ್ರದಾ ಅವರು, ಗಾಝಾಕ್ಕೆ ಮಾನವೀಯ ನೆರವು ಕಳುಹಿಸುವುದಾಗಿ ಘೋಷಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇದುವರೆಗೆ ಸಾವಿರಾರು ನಾಗರಿಕರ ಸಾವುಗಳು ಮತ್ತು ಪ್ಯಾಲೆಸ್ತೀನ್ ಜನರ ಬಲವಂತದ ಸ್ಥಳಾಂತರಕ್ಕೆ ಕಾರಣವಾದ ದಾಳಿಗಳನ್ನು ಕೊನೆಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನೆರೆಯ ಕೊಲಂಬಿಯಾ ಮತ್ತು ಚಿಲಿ ಕೂಡ ಗಾಜಾದಲ್ಲಿ ನಾಗರಿಕರ ಸಾವುಗಳನ್ನು ಖಂಡಿಸಿದೆ ಮತ್ತು ಕದನ ವಿರಾಮಕ್ಕೆ ಕರೆ ನೀಡಿ ತಮ್ಮ ರಾಯಭಾರಿಗಳನ್ನು ಇಸ್ರೇಲ್‌ನಿಂದ ವಾಪಾಸ್ಸು ಕರೆಸಿಕೊಂಡಿದೆ. ಲ್ಯಾಟಿನ್ ಅಮೆರಿಕದ ಎಡ-ಒಲವುಳ್ಳ ದೇಶಗಳು ಪ್ಯಾಲೆಸ್ತೀನ್ ಬಗ್ಗೆ ಸಹಾನುಭೂತಿ ಹೊಂದಿದೆ.

ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಸಾಮಾಜಿಕ ಮಾಧ್ಯಮ ಸೈಟ್ X ನಲ್ಲಿ ಬರೆಯುತ್ತಾ, ಇಸ್ರೇಲ್ ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಉಲ್ಲಂಘನೆ ಮಾಡಿದೆ. ಗಾಝಾದ ಜನರಿಗೆ ಸಾಮೂಹಿಕ ಶಿಕ್ಷೆ ನೀಡಲಾಗುತ್ತಿದೆ. ಇದರಿಂದಾಗಿ ತಮ್ಮ ರಾಯಭಾರಿ ಜಾರ್ಜ್ ಕಾರ್ವಾಜಾಲ್ ಅವರನ್ನು ಇಸ್ರೇಲ್‌ನಿಂದ ದೇಶಕ್ಕೆ ವಾಪಾಸ್ಸು ಕರೆಸಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಜೋರ್ಡಾನ್ ದೇಶವು ಕೂಡ ಇದೇ ರೀತಿಯ ನಿಲುವನ್ನು ಹೊಂದಿದೆ.  ಜೋರ್ಡನ್‌ ಈ ಮೊದಲು ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಗಾಝಾ ಕುರಿತು ನಿರ್ಣಯವನ್ನು ಮಂಡಿಸಿತ್ತು.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಇಸ್ರೇಲ್‌ನಲ್ಲಿರುವ ಕೊಲಂಬಿಯಾದ ರಾಯಭಾರಿಯನ್ನು ಮರಳಿ ಕರೆದಿದ್ದಾರೆ. ಅವರು ಗಾಝಾದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರು ಇಸ್ರೇಲ್‌ ದಾಳಿಯನ್ನು ಪ್ಯಾಲೆಸ್ತೀನ್ ಜನರ ಹತ್ಯಾಕಾಂಡ ಎಂದು ಕರೆದಿದ್ದಾರೆ.

ಇಸ್ರೇಲ್‌ ಮಿಲಿಟರಿ ಪಡೆಗಳು ಗಾಝಾ ಮೇಲೆ ನಡೆಸಿದ ದಾಳಿಯನ್ನು ಕೊಲಂಬಿಯಾ ಖಂಡಿಸಿದೆ ಮತ್ತು ಕದನ ವಿರಾಮದ ತುರ್ತು ಮತ್ತು ಇಸ್ರೇಲ್‌ನ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಪಾಲಿಸಬೇಕಾದ ಬಾಧ್ಯತೆಯನ್ನು ಪುನರುಚ್ಚರಿಸಿದೆ.

ಇದನ್ನು ಓದಿ: ಕೇರಳ: ಸಿಎಂ ಪಿಣರಾಯ್‌ ವಿಜಯನ್‌ಗೆ ಬೆದರಿಕೆ ಕರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...