Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

- Advertisement -
- Advertisement -

ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಹಲವಾರು ದೇಶಗಳು ಮಾನವೀಯ ಆಧಾರದ ಮೇಲೆ ಕಳವಳ ವ್ಯಕ್ತಪಡಿಸುವುದರ ಜೊತೆಗೆ ಇಸ್ರೇಲ್‌ ಜೊತೆಗಿನ ತಮ್ಮ ರಾಜತಾಂತ್ರಿ ಸಂಬಂಧವನ್ನು ಕಡಿತಗೊಳಿಸಲು ಮುಂದಾಗಿದೆ.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್, ಜರ್ಮನಿ ಯುಕೆ ಮತ್ತು ಭಾರತದಂತಹ ಪ್ರಭಾವಶಾಲಿ ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ನಿಂತಿದೆ ಮತ್ತು ಈ ದೇಶಗಳು ಹಮಾಸ್‌ನ ದಾಳಿಯನ್ನು ಭಯೋತ್ಪಾದನಾ ದಾಳಿ ಎಂದು ಕರೆದು ಇಸ್ರೇಲ್‌ ದಾಳಿಯನ್ನು ಬೆಂಬಲಿಸಿದೆ.

ಆದರೆ ಯುಎನ್‌ ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಶನಲ್, UNRWA (ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ), OHCHR (ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ) ಇಸ್ರೇಲ್‌ನಿಂದ ನಡೆದ ನರಮೇದ ಮತ್ತು ನಾಗರಿಕರ ಮೇಲಿನ ದಾಳಿ ಮತ್ತು ಮಾನವೀಯ ನೆರವಿನ ತಡೆ ಬಗ್ಗೆ ಗಮನಿಸಿದೆ.

ಬೊಲಿವಿಯಾವು ಇಸ್ರೇಲ್‌ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಮುಚ್ಚಿದ ಮೊದಲ ದೇಶವಾಗಿದ್ದು,  ಅ.31ರಂದು ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಸಂದೇಶವನ್ನು ಕಳುಹಿಸಿದೆ.

ಗಾಝಾ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್‌ ಮಿಲಿಟರಿ ಆಕ್ರಮಣವನ್ನು ಖಂಡಿಸಿ ಬೊಲಿವಿಯಾ ಇಸ್ರೇಲ್‌ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿಯಲು ನಿರ್ಧರಿಸಿದೆ ಎಂದು ಉಪ ವಿದೇಶಾಂಗ ಸಚಿವ ಫ್ರೆಡ್ಡಿ ಮಾಮಾನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬೊಲಿವಿಯಾ ಸಚಿವೆ ಮಾರಿಯಾ ನೆಲಾ ಪ್ರದಾ ಅವರು, ಗಾಝಾಕ್ಕೆ ಮಾನವೀಯ ನೆರವು ಕಳುಹಿಸುವುದಾಗಿ ಘೋಷಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇದುವರೆಗೆ ಸಾವಿರಾರು ನಾಗರಿಕರ ಸಾವುಗಳು ಮತ್ತು ಪ್ಯಾಲೆಸ್ತೀನ್ ಜನರ ಬಲವಂತದ ಸ್ಥಳಾಂತರಕ್ಕೆ ಕಾರಣವಾದ ದಾಳಿಗಳನ್ನು ಕೊನೆಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನೆರೆಯ ಕೊಲಂಬಿಯಾ ಮತ್ತು ಚಿಲಿ ಕೂಡ ಗಾಜಾದಲ್ಲಿ ನಾಗರಿಕರ ಸಾವುಗಳನ್ನು ಖಂಡಿಸಿದೆ ಮತ್ತು ಕದನ ವಿರಾಮಕ್ಕೆ ಕರೆ ನೀಡಿ ತಮ್ಮ ರಾಯಭಾರಿಗಳನ್ನು ಇಸ್ರೇಲ್‌ನಿಂದ ವಾಪಾಸ್ಸು ಕರೆಸಿಕೊಂಡಿದೆ. ಲ್ಯಾಟಿನ್ ಅಮೆರಿಕದ ಎಡ-ಒಲವುಳ್ಳ ದೇಶಗಳು ಪ್ಯಾಲೆಸ್ತೀನ್ ಬಗ್ಗೆ ಸಹಾನುಭೂತಿ ಹೊಂದಿದೆ.

ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಸಾಮಾಜಿಕ ಮಾಧ್ಯಮ ಸೈಟ್ X ನಲ್ಲಿ ಬರೆಯುತ್ತಾ, ಇಸ್ರೇಲ್ ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಉಲ್ಲಂಘನೆ ಮಾಡಿದೆ. ಗಾಝಾದ ಜನರಿಗೆ ಸಾಮೂಹಿಕ ಶಿಕ್ಷೆ ನೀಡಲಾಗುತ್ತಿದೆ. ಇದರಿಂದಾಗಿ ತಮ್ಮ ರಾಯಭಾರಿ ಜಾರ್ಜ್ ಕಾರ್ವಾಜಾಲ್ ಅವರನ್ನು ಇಸ್ರೇಲ್‌ನಿಂದ ದೇಶಕ್ಕೆ ವಾಪಾಸ್ಸು ಕರೆಸಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಜೋರ್ಡಾನ್ ದೇಶವು ಕೂಡ ಇದೇ ರೀತಿಯ ನಿಲುವನ್ನು ಹೊಂದಿದೆ.  ಜೋರ್ಡನ್‌ ಈ ಮೊದಲು ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಗಾಝಾ ಕುರಿತು ನಿರ್ಣಯವನ್ನು ಮಂಡಿಸಿತ್ತು.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಇಸ್ರೇಲ್‌ನಲ್ಲಿರುವ ಕೊಲಂಬಿಯಾದ ರಾಯಭಾರಿಯನ್ನು ಮರಳಿ ಕರೆದಿದ್ದಾರೆ. ಅವರು ಗಾಝಾದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರು ಇಸ್ರೇಲ್‌ ದಾಳಿಯನ್ನು ಪ್ಯಾಲೆಸ್ತೀನ್ ಜನರ ಹತ್ಯಾಕಾಂಡ ಎಂದು ಕರೆದಿದ್ದಾರೆ.

ಇಸ್ರೇಲ್‌ ಮಿಲಿಟರಿ ಪಡೆಗಳು ಗಾಝಾ ಮೇಲೆ ನಡೆಸಿದ ದಾಳಿಯನ್ನು ಕೊಲಂಬಿಯಾ ಖಂಡಿಸಿದೆ ಮತ್ತು ಕದನ ವಿರಾಮದ ತುರ್ತು ಮತ್ತು ಇಸ್ರೇಲ್‌ನ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಪಾಲಿಸಬೇಕಾದ ಬಾಧ್ಯತೆಯನ್ನು ಪುನರುಚ್ಚರಿಸಿದೆ.

ಇದನ್ನು ಓದಿ: ಕೇರಳ: ಸಿಎಂ ಪಿಣರಾಯ್‌ ವಿಜಯನ್‌ಗೆ ಬೆದರಿಕೆ ಕರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...