Homeಮುಖಪುಟನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

ನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

- Advertisement -
- Advertisement -

ಆಶ್ಚರ್ಯವಾದರೂ ನಂಬಲೇಬೇಕಾದ ವಿಷಯವಿದು. ಬಾಲಿವುಡ್ ಸ್ಟಾರ್ ದೀಪಿಕಾ ಪಡುಕೋಣೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನರೇಗಾ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಅವರ ಛಾಯಾಚಿತ್ರವನ್ನು ಹೊಂದಿರುವ ಉದ್ಯೋಗಖಾತ್ರಿ ಯೋಜನೆಯ (MNREGA) ಜಾಬ್ ಕಾರ್ಡ್‌ಗಳು ಆನ್‌ಲೈನ್‌ನಲ್ಲಿ ಪತ್ತೆಯಾಗಿವೆ.

ಮಧ್ಯಪ್ರದೇಶ ಸರಕಾರದ ನರೇಗಾ ದಾಖಲೆಗಳಲ್ಲಿ ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ ಹಾಗೂ ಜಾಕ್ವೆಲಿನ್ ಫರ್ನಾಂಡಿಸ್ ಅವರ ಭಾವ ಚಿತ್ರಗಳು ಸೇರಿಕೊಂಡಿವೆ. ಈ ದಾಖಲೆಗಳ ಪ್ರಕಾರ ಖಾರ್ಗೋನ್ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (MNREGA) ಕೆಲಸ ಮಾಡುತ್ತಿದ್ದು ಜೂನ್ ಮತ್ತು ಜುಲೈ ತಿಂಗಳ ವೇತನ ಕೂಡ ಅವರಿಗೆ ಸಂದಾಯವಾಗಿದೆ ಎಂದು ದಾಖಲೆಗಳು ಹೇಳುತ್ತವೆ.

ಇದನ್ನೂ ಓದಿ: ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ಝಿರ್ನಿಯಾ ಪಂಚಾಯತ್‌ನ ಕುಗ್ರಾಮವಾದ ಪೀರ್ಪಖೇಡಾ ನಾಕ ಎಂಬಲ್ಲಿ ಕನಿಷ್ಠ 11 ನರೇಗಾ ಫಲಾನುಭವಿಗಳ ಉದ್ಯೋಗ ಕಾರ್ಡ್‌ಗಳಲ್ಲಿ ಬಾಲಿವುಡ್ ನಟಿಯರ ಚಿತ್ರಗಳಿದ್ದು, ಇವು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಕೂಡ ಆಗಿವೆ. ಮಹಿಳೆಯರ ಉದ್ಯೋಗ ಕಾರ್ಡ್ ಮಾತ್ರವಲ್ಲದೆ, ಪುರುಷರ ಉದ್ಯೋಗ ಕಾರ್ಡ್ ಗಳಲ್ಲಿ ದೀಪಿಕಾ ಮತ್ತು ಜಾಕ್ವೆಲಿನ್ ಅವರ ಚಿತ್ರಗಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕಾರ್ಡ್‌ಗಳನ್ನು ಹೇಗೆ ಮುದ್ರಿಸಲಾಗಿದೆ ಮತ್ತು ಹೇಗೆ ವೇತನವನ್ನು ಬಿಡುಗಡೆ ಮಾಡಲಾಗಿದೆ ಎಂಬ ಬಗ್ಗೆ ತನಿಖೆ ಮಾಡಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಗೌರವ್ ಬನಾಲ್ ಹೇಳಿದ್ದಾರೆ.

ಹೀಗೆ ನೂರಾರು ಜನರ ಹೆಸರಿನಲ್ಲಿ ಸುಳ್ಳು ಜಾಬ್‌ಕಾರ್ಡ್‌ಗಳನ್ನು ಮಾಡಿ, ಅವರ ಹೆಸರಿನಲ್ಲಿ ವೇತನವೂ ಪಾವತಿಯಾಗಿದೆ. ಮೇಲು ನೋಟಕ್ಕೆ ಇದು ತಮಾಶೆಯಾಗಿ ಕಂಡುಬಂದರೂ ಇದರ ಹಿಂದೆ ದೊಡ್ಡ ಹಗರಣವೊಂದಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

ಇತ್ತೀಚೆಗೆ ಗುಜರಾತ್‌ನಲ್ಲಿಯೂ ಇಂತಹ ಹಗರಣವನ್ನು ಜಿಗ್ನೇಶ್ ಮೇವಾನಿ ಬಯಲಿಗೆಳೆದಿದ್ದರು.


ಇದನ್ನೂ ಓದಿ: ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...