Homeಮುಖಪುಟಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ರಿಪಬ್ಲಿಕ್, ಟೈಮ್ಸ್‌ ನೌ ಚಾನೆಲ್ ಮೇಲೆ ಮೊಕದ್ದಮೆ!

ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ರಿಪಬ್ಲಿಕ್, ಟೈಮ್ಸ್‌ ನೌ ಚಾನೆಲ್ ಮೇಲೆ ಮೊಕದ್ದಮೆ!

4 ಚಲನಚಿತ್ರೋದ್ಯಮ ಸಂಘಗಳು ಮತ್ತು 34 ನಿರ್ಮಾಪಕರು ಇದರಲ್ಲಿ ದೂರುದಾರರಾಗಿದ್ದಾರೆ. ಕರಣ್ ಜೋಹರ್, ಯಶ್ ರಾಜ್, ಅಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ನಿರ್ಮಾಣ ಕಂಪನಿಗಳು ಈ ದೂರಿನ ಭಾಗವಾಗಿದ್ದಾರೆ.

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾಧ್ಯಮ ಸಂಸ್ಥೆಗಳು ಮಾಡಿದ ಬೇಜವಾಬ್ದಾರಿಯುತ ವರದಿ ಮತ್ತು ಬಾಲಿವುಡ್ ಅನ್ನು‌ ಅವಹೇಳಹನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ ಹಲವರು ಸೇರಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್‌ ನೌ- ಎರಡು ಚಾನೆಲ್‌ಗಳ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ, ಪ್ರದೀಪ್ ಭಂಡಾರಿ, ರಾಹುಲ್ ಶಿವಶಂಕರ್ ಮತ್ತು ನವಿಕಾ ಕುಮಾರ್ ವಿರುದ್ಧ 4 ಚಲನಚಿತ್ರೋದ್ಯಮ ಸಂಘಗಳು ಮತ್ತು 34 ನಿರ್ಮಾಪಕರು ಇದರಲ್ಲಿ ದೂರುದಾರರಾಗಿದ್ದಾರೆ. ಕರಣ್ ಜೋಹರ್, ಯಶ್ ರಾಜ್, ಅಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ನಿರ್ಮಾಣ ಕಂಪನಿಗಳು ಈ ಪ್ರಕರಣದ ಒಂದು ಭಾಗವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

“ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಬಾಲಿವುಡ್ ಮತ್ತು ಅದರ ಸದಸ್ಯರ ವಿರುದ್ಧ ಬೇಜವಾಬ್ದಾರಿಯುತ, ಅವಹೇಳನಕಾರಿ ಮತ್ತು ಮಾನಹಾನಿಕರವಾದ ಹೇಳಿಕೆ ನೀಡುವುದನ್ನು ತಡೆಯಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

ಚಾನೆಲ್‌ಗಳು 1994 ರ ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರಬೇಕು ಮತ್ತು ಬಾಲಿವುಡ್ ವಿರುದ್ಧ ಪ್ರಕಟಿಸಿದ ಎಲ್ಲಾ ಮಾನಹಾನಿಕರ ವಿಷಯವನ್ನು ಹಿಂತೆಗೆದುಕೊಳ್ಳಿ ಅಥವಾ ತೆಗೆದುಹಾಕಿ” ಎಂದು ಚಲನಚಿತ್ರ ನಿರ್ಮಾಪಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಈ ಮಾಧ್ಯಮ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಇದೇ ಮೊದಲಲ್ಲ. ಮಾನಹಾನಿಕರ, ಆಧಾರರಹಿತ ಮತ್ತು ತಪ್ಪಾದ ಸುದ್ದಿಗಳನ್ನು ಪ್ರಸಾರ ಮಾಡಿದ ತಪ್ಪಿತಸ್ಥರೆಂದು ಕಂಡುಬಂದಿದ್ದು, ಮೊದಲಿನಿಂದಲೂ ಅವರನ್ನು ಖಂಡಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

“ಬಾಲಿವುಡ್ ಎನ್ನುವುದು ಲಕ್ಷಾಂತರ ಜನರಿಗೆ ಬದುಕು ಕಲ್ಪಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೂ ಲಾಭವುಂಟಾಗಿದೆ. ಯಾವುದೋ ಒಂದು ಪ್ರಕರಣವನ್ನಿಟ್ಟುಕೊಂಡು ಇಡೀ ಉದ್ಯಮವನ್ನು ದೂರುವುದು ಸರಿಯಲ್ಲ. ಮಾಧ್ಯಮ ಸಂಸ್ಥೆಗಳು ಬಳಸುತ್ತಿದ್ದ ಅಸಂವಿಧಾನಿಕ ಪದಗಳಂತೂ ಖಂಡನೀಯ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಭಾರತವನ್ನು ಪ್ರಪಾತಕ್ಕೆ ತಳ್ಳಿದೆ, ಮಾಧ್ಯಮಗಳು ’ಸಬ್‌ ಚಂಗಾಸಿ’ ಎನ್ನುತ್ತಿವೆ: ರಾಹುಲ್

ಸುಶಾಂತ್ ಸಿಂಗ್ ಅಸಹಜ ಸಾವಿನ ಆರಂಭದಿಂದ ಇಲ್ಲಿಯವರೆಗೂ ಮಾಧ್ಯಮಗಳನ್ನು ನಿಯಂತ್ರಿಸಲು ನ್ಯಾಯಾಲಯ ಮತ್ತು ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದಾಗ್ಯೂ ಅವುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಸುಶಾಂತ್ ಪ್ರಕರಣವನ್ನು ಸಿಬಿಐ ವಹಿಸಿಕೊಳ್ಳುವುದಕ್ಕೂ ಮೊದಲು ಮತ್ತು ನಂತರ ತಮ್ಮದೇ ಆದ ಊಹಾಪೂಹದ ತನಿಖಾ ವರದಿಗಳನ್ನು ಈ ಸುದ್ಧಿ ಸಂಸ್ಥೆಗಳು ಪ್ರಸಾರ ಮಾಡುತ್ತಿದ್ದವು. ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಮುಖಂಡರು ಸೇರಿದಂತೆ ಅರ್ನಾಬ್ ಗೋಸ್ವಾಮಿ ಮೇಲೆ ಪ್ರಕರಣ ದಾಖಲಿಸಿದ್ದರು. ಸಿಬಿಐ ಕೂಡ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಹೇಳಿಕೆ ನೀಡಿ, ನಾವು ತನಿಖೆಯ ಯಾವುದೇ ಅಂಶಗಳನ್ನು ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿತ್ತು.

ಇನ್ನು ಸುಶಾಂತ್ ಸಿಂಗ್ ಸಾವನ್ನು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಈ ಮಾಧ್ಯಮ ಸಂಸ್ಥೆಗಳು ಕೂಗಾಡುತ್ತಿದ್ದವು. ಆದರೆ ವೈದ್ಯಕೀಯ ಸಂಸ್ಥೆ ಏಮ್ಸ್ ನೀಡಿದ ಆತ್ಮಹತ್ಯೆ ವರದಿಯ ನಂತರ ಈಗ ಸುಮ್ಮನಾಗಿವೆ. ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ರಿಪಬ್ಲಿಕ್ ಟಿವಿಯ ಟಿಆರ್‌ಪಿ ಹಗರಣ ಬಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆಯೂ ವಿಚಾರಣೆಯನ್ನು ಎದುರಿಸುತ್ತಿದೆ. ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳು ಈ ರೀತಿಯ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಘೋಷಿಸಿವೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...