Homeಮುಖಪುಟ’ಸಾಫ್ಟ್‌ ಪೋರ್ನ್ ಸ್ಟಾರ್’ ಹೇಳಿಕೆ; ಕಂಗನಾರನ್ನು ಖಂಡಿಸಿ ಊರ್ಮಿಳಾ ಬೆಂಬಲಕ್ಕೆ ನಿಂತ ಬಾಲಿವುಡ್

’ಸಾಫ್ಟ್‌ ಪೋರ್ನ್ ಸ್ಟಾರ್’ ಹೇಳಿಕೆ; ಕಂಗನಾರನ್ನು ಖಂಡಿಸಿ ಊರ್ಮಿಳಾ ಬೆಂಬಲಕ್ಕೆ ನಿಂತ ಬಾಲಿವುಡ್

- Advertisement -
- Advertisement -

ನಟಿ ಕಂಗನಾ ರಾಣಾವತ್, “ಸತ್ಯ” ಸಿನೆಮಾ ಖ್ಯಾತಿಯ ತಾರೆ ಊರ್ಮಿಳಾ ಮಾತೋಂಡ್ಕರ್‌ ಅವರನ್ನು “ಸಾಫ್ಟ್ ಪೋರ್ನ್ ಸ್ಟಾರ್”(ಅರೆ ಅಶ್ಲೀಲ ನಟಿ) ಎಂದಿದ್ದು, ರಾಮ್ ಗೋಪಾಲ್ ವರ್ಮಾ, ಸ್ವರ ಭಾಸ್ಕರ್ ಮತ್ತು ಪೂಜಾ ಭಟ್ ಸೇರಿದಂತೆ ಬಾಲಿವುಡ್ ಚಿತ್ರೋದ್ಯಮದ ಅನೇಕ ನಟರು ಮತ್ತು ಚಲನಚಿತ್ರ ನಿರ್ಮಾಪಕರು ಊರ್ಮಿಳಾ ಮಾತೋಂಡ್ಕರ್ ಅವರನ್ನು ಬೆಂಬಲಿಸಿದ್ದಾರೆ.

ಬಾಲಿವುಡ್‌ನಲ್ಲಿ‌ ಸ್ವಜನಪಕ್ಷಪಾತ ಮತ್ತು ಮಾದಕದ್ರವ್ಯ ಮಾಫಿಯ ನಡೆಯುತ್ತಿದೆ ಎಂದಿದ್ದ ಕಂಗನಾ ರಾಣಾವತ್ ಪ್ರಸ್ತುತ ಚರ್ಚೆಯಲ್ಲಿದ್ದಾರೆ. ಬುಧವಾರ ರಾತ್ರಿ ಟೈಮ್ಸ್ ನೌಗೆ ನೀಡಿದ್ದ ಸಂದರ್ಶನದಲ್ಲಿ ಕಂಗನಾ ಊರ್ಮಿಳಾ‌ ಅವರನ್ನು “ಸಾಫ್ಟ್ ಪೋರ್ನ್ ಸ್ಟಾರ್” ಎಂದು ಕರೆದಿದ್ದರು.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಈ ಹೇಳಿಕೆಗೆ ಬಾಲಿವುಡ್‌ನಲ್ಲಿ ಭಾರಿ ಟೀಕೆಗಳು ವ್ಯಕ್ತವಾಗಿದ್ದು, ಊರ್ಮಿಳಾ ಅವರ 25 ವರ್ಷಗಳ ವೃತ್ತಿಜೀವನದ ಘನತೆಯನ್ನು ಪ್ರಶಂಸಿಸಿದೆ.

“ರಂಗೀಲಾ”, “ಸತ್ಯ” ಮತ್ತು “ಭೂತ್” ನಂತಹ ಅನೇಕ ಜನಪ್ರಿಯ ಚಿತ್ರಗಳಲ್ಲಿ ಊರ್ಮಿಳಾ ಅವರೊಂದಿಗೆ ಕೆಲಸ ಮಾಡಿದ್ದ ನಿರ್ದೇಶಕ ರಾಮ್‌ ಗೋಪಾಲ ವರ್ಮಾ, ನಟಿಯು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿ ತಮ್ಮ ಬಹುಮುಖ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ನಟಿ ಸ್ವರ ಭಾಸ್ಕರ್‌, “ಆತ್ಮೀಯ ಊರ್ಮಿಲಾ ಮಾತೊಂಡ್ಕರ್, ಮಸೂಮ್, ಚಮತ್ಕಾರ್, ರಂಗೀಲಾ, ಜುಡೈ,  ದೌಡ್, ಸತ್ಯ, ಭೂತ್, ಕೌನ್, ಜಂಗಲ್, ಪ್ಯಾರ್ ತೂನೆ ಕ್ಯಾ ಕಿಯಾ, ತೆಹ್ಜೀಬ್, ಪಿಂಜಾರ್, ಏಕ್ ಹಸೀನಾ ಥಿ ಮುಂತಾದ ಚಿತ್ರಗಳಲ್ಲಿ ನಿಮ್ಮ ನಟನಾ ಸಾಮರ್ಥ್ಯ ಮತ್ತು ಅದ್ಭುತ ನೃತ್ಯವನ್ನು ನೋಡಿ ಆಶ್ಚರ್ಯಪಟ್ಟಿದ್ದೇನೆ! ಲವ್ ಯು” ಎಂದು ಟ್ವೀಟ್ ಮಾಡಿದ್ದಾರೆ.

 

ಚಿತ್ರ ನಿರ್ದೇಶಕ ಅನುವವ್ ಸಿನ್ಹಾ, ಊರ್ಮಿಳಾ ಸುಂದರ, ಸೊಗಸಾದ, ಎದ್ದುಕಾಣುವ, ಅಭಿವ್ಯಕ್ತಿಶೀಲ ನಟಿಯರಲ್ಲಿ ಒಬ್ಬರು ಎಂದು ಬರೆದಿದ್ದಾರೆ.

ನಟಿ ಪೂಜಾ ಭಟ್, “ಊರ್ಮಿಳಾ ನೀವು ದಂತಕತೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...