HomeUncategorizedಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಸಾಮಾಜಿಕ ಜಾಲತಾಣಗಳಲ್ಲಿ ಮನರಂಜನಾ ಕ್ಷೇತ್ರವನ್ನು ಗುರಿಮಾಡಿಕೊಂಡು ಕಟುವಾಗಿ ದಾಳಿ ಮಾಡಲಾಗುತ್ತಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರ ಸಿನಿಮಾ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು- ಜಯಾ ಬಚ್ಚನ್

- Advertisement -
- Advertisement -

ಸಂಸತ್ತಿನಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದಲ್ಲಿ ಜಯಾ ಬಚ್ಚನ್, ಬಾಲಿವುಡ್ ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಅನ್ನು ಟೀಕಿಸುವವರ ವಿರುದ್ಧ ಮಂಗಳವಾರದ ಅಧಿವೇಶನದಲ್ಲಿ ಅವರು ಕಿಡಿಕಾರಿದ್ದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಜಯಾ ಬಚ್ಚನ್ ಅವರ ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾದ ವಿರೋಧ ವ್ಯಕ್ತವಾಗಿದ್ದು, #JayaBachchanShamlessLady ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಟ್ರೆಂಡಿಂಗ್‌ನಲ್ಲಿ 2ನೇ ಸ್ಥಾನದಲ್ಲಿದೆ. ಈ ವರದಿ ಬರೆಯುವ ವೇಳೆಗೆ ಸುಮಾರು 59 ಸಾವಿರ ಟ್ವೀಟ್‌ಗಳನ್ನು ಮಾಡಲಾಗಿದೆ.

 

ಜಯಾ ಬಚ್ಚನ್ ಅವರ ಈ ಹೇಳಿಕೆಯನ್ನು ಕಂಗನಾ ರಣಾವತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ. “ಜಯಾ ಜೀ, ನನ್ನ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ, ಆಗಲೂ ನಿಮ್ಮ ಅಭಿಪ್ರಾಯ ಇದೇ ಆಗಿರುತ್ತಿತ್ತೇ? ಅವಳು ಹದಿಹರೆಯದವಳಾಗಿದ್ದು, ಮದಕ ವ್ಯಸನಿಯಾಗಿ ಕಿರುಕುಳಕ್ಕೆ ಒಳಗಾಗಿದ್ದರೆ, ಅಭಿಷೇಕ್ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳದ ಬಗ್ಗೆ ಆರೋಪಿಸಿದ್ದರೆ? ಹಾಗೂ ಹಿಂದಿನ ದಿನ ನೇಣುಬಿಗಿದುಕೊಂಡಿದ್ದರೆ? ನೀವು ಆಗಲೂ ಇದೇ ಮಾತುಗಳನ್ನು ಹೇಳುವಿರಾ?” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಅಷ್ಟೇ ಜನರು ಜಯಾ ಅವರನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ. ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಜಯಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡು, “ನಮ್ಮ ಸಿನಿಮಾ ಕ್ಷೇತ್ರದಿಂದ ಮತ್ತೊಬ್ಬ ಮಹಿಳೆ ದನಿಯೆತ್ತಿರುವುದಕ್ಕೆ ಶ್ಲಾಘಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

“ಜಯಾ ಅವರು ಸರಿಯಾಗಿಯೇ ಮಾತನಾಡಿದ್ದು, ಕೇವಲ ಒಂದೆರಡು ಪ್ರಕರಣಗಳನ್ನಿಟ್ಟುಕೊಂಡು ಇಡೀ ಉದ್ಯಮವನ್ನೇ ದೂರುವುದು ಸರಿಯಲ್ಲ” ಎಂಬ ಅಭಿಪ್ರಾಯವನ್ನು ಹೇಮಾ ಮಾಲಿನಿ, Producers Guild of India ಸೇರಿದಂತೆ ಬಾಲಿವುಡ್‌ನ ಹಲವರು ಜಯಾ ಬಚ್ಚನ್ ಅವರ ಪರವಾಗಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಕಡೆ, ಬಾಲಿವುಡ್ ಮೇಲೆ ನಡೆಯುತ್ತಿರುವ ಕಟುವಾದ ಟೀಕೆಗಳನ್ನು ಎದುರಿಸಿ, ಉದ್ಯಮದ ಪರವಾಗಿ ಅದರ ರಕ್ಷಣೆಗೆ ನಿಂತಿರುವುದು ಕೇವಲ ಮಹಿಳೆಯರು ಮಾತ್ರ! ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೀಗೆ ದನಿಯೆತ್ತುವವರ ವಿರುದ್ಧ ಕಾಣದ ಕೈಗಳು ಕೆಲಸ ಮಾಡಿ, ಸಾಮಾಜಿಕ ಮಾದ್ಯಮಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಆ ಮೂಲಕ ಅವರ ಎಂದು ಹಲವರು ಆರೋಪಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...