HomeUncategorizedಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಸಾಮಾಜಿಕ ಜಾಲತಾಣಗಳಲ್ಲಿ ಮನರಂಜನಾ ಕ್ಷೇತ್ರವನ್ನು ಗುರಿಮಾಡಿಕೊಂಡು ಕಟುವಾಗಿ ದಾಳಿ ಮಾಡಲಾಗುತ್ತಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರ ಸಿನಿಮಾ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು- ಜಯಾ ಬಚ್ಚನ್

- Advertisement -
- Advertisement -

ಸಂಸತ್ತಿನಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದಲ್ಲಿ ಜಯಾ ಬಚ್ಚನ್, ಬಾಲಿವುಡ್ ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಅನ್ನು ಟೀಕಿಸುವವರ ವಿರುದ್ಧ ಮಂಗಳವಾರದ ಅಧಿವೇಶನದಲ್ಲಿ ಅವರು ಕಿಡಿಕಾರಿದ್ದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಜಯಾ ಬಚ್ಚನ್ ಅವರ ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾದ ವಿರೋಧ ವ್ಯಕ್ತವಾಗಿದ್ದು, #JayaBachchanShamlessLady ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಟ್ರೆಂಡಿಂಗ್‌ನಲ್ಲಿ 2ನೇ ಸ್ಥಾನದಲ್ಲಿದೆ. ಈ ವರದಿ ಬರೆಯುವ ವೇಳೆಗೆ ಸುಮಾರು 59 ಸಾವಿರ ಟ್ವೀಟ್‌ಗಳನ್ನು ಮಾಡಲಾಗಿದೆ.

 

ಜಯಾ ಬಚ್ಚನ್ ಅವರ ಈ ಹೇಳಿಕೆಯನ್ನು ಕಂಗನಾ ರಣಾವತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ. “ಜಯಾ ಜೀ, ನನ್ನ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ, ಆಗಲೂ ನಿಮ್ಮ ಅಭಿಪ್ರಾಯ ಇದೇ ಆಗಿರುತ್ತಿತ್ತೇ? ಅವಳು ಹದಿಹರೆಯದವಳಾಗಿದ್ದು, ಮದಕ ವ್ಯಸನಿಯಾಗಿ ಕಿರುಕುಳಕ್ಕೆ ಒಳಗಾಗಿದ್ದರೆ, ಅಭಿಷೇಕ್ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳದ ಬಗ್ಗೆ ಆರೋಪಿಸಿದ್ದರೆ? ಹಾಗೂ ಹಿಂದಿನ ದಿನ ನೇಣುಬಿಗಿದುಕೊಂಡಿದ್ದರೆ? ನೀವು ಆಗಲೂ ಇದೇ ಮಾತುಗಳನ್ನು ಹೇಳುವಿರಾ?” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಅಷ್ಟೇ ಜನರು ಜಯಾ ಅವರನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ. ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಜಯಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡು, “ನಮ್ಮ ಸಿನಿಮಾ ಕ್ಷೇತ್ರದಿಂದ ಮತ್ತೊಬ್ಬ ಮಹಿಳೆ ದನಿಯೆತ್ತಿರುವುದಕ್ಕೆ ಶ್ಲಾಘಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

“ಜಯಾ ಅವರು ಸರಿಯಾಗಿಯೇ ಮಾತನಾಡಿದ್ದು, ಕೇವಲ ಒಂದೆರಡು ಪ್ರಕರಣಗಳನ್ನಿಟ್ಟುಕೊಂಡು ಇಡೀ ಉದ್ಯಮವನ್ನೇ ದೂರುವುದು ಸರಿಯಲ್ಲ” ಎಂಬ ಅಭಿಪ್ರಾಯವನ್ನು ಹೇಮಾ ಮಾಲಿನಿ, Producers Guild of India ಸೇರಿದಂತೆ ಬಾಲಿವುಡ್‌ನ ಹಲವರು ಜಯಾ ಬಚ್ಚನ್ ಅವರ ಪರವಾಗಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಕಡೆ, ಬಾಲಿವುಡ್ ಮೇಲೆ ನಡೆಯುತ್ತಿರುವ ಕಟುವಾದ ಟೀಕೆಗಳನ್ನು ಎದುರಿಸಿ, ಉದ್ಯಮದ ಪರವಾಗಿ ಅದರ ರಕ್ಷಣೆಗೆ ನಿಂತಿರುವುದು ಕೇವಲ ಮಹಿಳೆಯರು ಮಾತ್ರ! ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೀಗೆ ದನಿಯೆತ್ತುವವರ ವಿರುದ್ಧ ಕಾಣದ ಕೈಗಳು ಕೆಲಸ ಮಾಡಿ, ಸಾಮಾಜಿಕ ಮಾದ್ಯಮಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಆ ಮೂಲಕ ಅವರ ಎಂದು ಹಲವರು ಆರೋಪಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...