HomeUncategorizedಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಸಾಮಾಜಿಕ ಜಾಲತಾಣಗಳಲ್ಲಿ ಮನರಂಜನಾ ಕ್ಷೇತ್ರವನ್ನು ಗುರಿಮಾಡಿಕೊಂಡು ಕಟುವಾಗಿ ದಾಳಿ ಮಾಡಲಾಗುತ್ತಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರ ಸಿನಿಮಾ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು- ಜಯಾ ಬಚ್ಚನ್

- Advertisement -
- Advertisement -

ಸಂಸತ್ತಿನಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದಲ್ಲಿ ಜಯಾ ಬಚ್ಚನ್, ಬಾಲಿವುಡ್ ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಅನ್ನು ಟೀಕಿಸುವವರ ವಿರುದ್ಧ ಮಂಗಳವಾರದ ಅಧಿವೇಶನದಲ್ಲಿ ಅವರು ಕಿಡಿಕಾರಿದ್ದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಜಯಾ ಬಚ್ಚನ್ ಅವರ ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾದ ವಿರೋಧ ವ್ಯಕ್ತವಾಗಿದ್ದು, #JayaBachchanShamlessLady ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಟ್ರೆಂಡಿಂಗ್‌ನಲ್ಲಿ 2ನೇ ಸ್ಥಾನದಲ್ಲಿದೆ. ಈ ವರದಿ ಬರೆಯುವ ವೇಳೆಗೆ ಸುಮಾರು 59 ಸಾವಿರ ಟ್ವೀಟ್‌ಗಳನ್ನು ಮಾಡಲಾಗಿದೆ.

 

ಜಯಾ ಬಚ್ಚನ್ ಅವರ ಈ ಹೇಳಿಕೆಯನ್ನು ಕಂಗನಾ ರಣಾವತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ. “ಜಯಾ ಜೀ, ನನ್ನ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ, ಆಗಲೂ ನಿಮ್ಮ ಅಭಿಪ್ರಾಯ ಇದೇ ಆಗಿರುತ್ತಿತ್ತೇ? ಅವಳು ಹದಿಹರೆಯದವಳಾಗಿದ್ದು, ಮದಕ ವ್ಯಸನಿಯಾಗಿ ಕಿರುಕುಳಕ್ಕೆ ಒಳಗಾಗಿದ್ದರೆ, ಅಭಿಷೇಕ್ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳದ ಬಗ್ಗೆ ಆರೋಪಿಸಿದ್ದರೆ? ಹಾಗೂ ಹಿಂದಿನ ದಿನ ನೇಣುಬಿಗಿದುಕೊಂಡಿದ್ದರೆ? ನೀವು ಆಗಲೂ ಇದೇ ಮಾತುಗಳನ್ನು ಹೇಳುವಿರಾ?” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಅಷ್ಟೇ ಜನರು ಜಯಾ ಅವರನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ. ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಜಯಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡು, “ನಮ್ಮ ಸಿನಿಮಾ ಕ್ಷೇತ್ರದಿಂದ ಮತ್ತೊಬ್ಬ ಮಹಿಳೆ ದನಿಯೆತ್ತಿರುವುದಕ್ಕೆ ಶ್ಲಾಘಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

“ಜಯಾ ಅವರು ಸರಿಯಾಗಿಯೇ ಮಾತನಾಡಿದ್ದು, ಕೇವಲ ಒಂದೆರಡು ಪ್ರಕರಣಗಳನ್ನಿಟ್ಟುಕೊಂಡು ಇಡೀ ಉದ್ಯಮವನ್ನೇ ದೂರುವುದು ಸರಿಯಲ್ಲ” ಎಂಬ ಅಭಿಪ್ರಾಯವನ್ನು ಹೇಮಾ ಮಾಲಿನಿ, Producers Guild of India ಸೇರಿದಂತೆ ಬಾಲಿವುಡ್‌ನ ಹಲವರು ಜಯಾ ಬಚ್ಚನ್ ಅವರ ಪರವಾಗಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಕಡೆ, ಬಾಲಿವುಡ್ ಮೇಲೆ ನಡೆಯುತ್ತಿರುವ ಕಟುವಾದ ಟೀಕೆಗಳನ್ನು ಎದುರಿಸಿ, ಉದ್ಯಮದ ಪರವಾಗಿ ಅದರ ರಕ್ಷಣೆಗೆ ನಿಂತಿರುವುದು ಕೇವಲ ಮಹಿಳೆಯರು ಮಾತ್ರ! ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೀಗೆ ದನಿಯೆತ್ತುವವರ ವಿರುದ್ಧ ಕಾಣದ ಕೈಗಳು ಕೆಲಸ ಮಾಡಿ, ಸಾಮಾಜಿಕ ಮಾದ್ಯಮಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಆ ಮೂಲಕ ಅವರ ಎಂದು ಹಲವರು ಆರೋಪಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...